Homeಮುಖಪುಟಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

ಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

- Advertisement -
- Advertisement -

ಗುಜರಾತ್‍ನ ಸೂರತ್‍ನ ಕೋಚಿಂಗ್ ಸೆಂಟರ್‍ನಲ್ಲಿ ಬೆಂಕಿ ಅವಘಡದಿಂದಾಗಿ 23 ಜನ ಮುಗ್ಧ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆಗೆ ಇಡೀ ಭಾರತವೇ ಮರುಗಿದೆ. ಬಹಳಷ್ಟು ಜನರು ಮುಗ್ಧ ಮಕ್ಕಳ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಘಟನೆ ಮಾಸುವ ಮುನ್ನವೇ, ಎರಡು ದಿನದಲ್ಲಿ ಗುಜರಾತಿನಲ್ಲಿ ಇದೇ ಸ್ಥಿತಿಯಲ್ಲಿರುವ 9395 ಅನ್‍ಸೇಫ್ ಕಟ್ಟಡಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಸೂರತ್ ಅವಘಡ ನಡೆದ ನಂತರ ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳು, ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಕಟ್ಟಡಗಳ ತನಿಖೆಗೆ ಆದೇಶಿಸಿದ ಎರಡೇ ದಿನದಲ್ಲಿ 9395 ಕಟ್ಟಡಗಳು ಸಿಕ್ಕಿಬಿದ್ದಿವೆ. ಇವುಗಳಲ್ಲಿ ಶಾಲೆಗಳು, ಕೋಚಿಂಗ್ ಸೆಂಟರ್‍ಗಳು, ಮಾಲ್‍ಗಳು, ಹೋಟೆಲ್‍ಗಳು ಸೇರಿದ್ದು ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳಾದ ಜಗದೀಪ್ ನಾರಾಯಣ್ ಸಿಂಗ್ ರವರ ಆದೇಶದ ಮೇರೆಗೆ 9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

ಒಟ್ಟು 2055 ಅಧಿಕಾರಿಗಳು 713 ತಂಡಗಳಾಗಿ ತಪಾಸಣಾ ಕೆಲಸ ಮಾಡಿದ್ದು ಗುಜರಾತ್‍ನ ತುಂಬೆಲ್ಲಾ ಓಡಾಡಿದ್ದು 162 ನಗರಸಭೆ/ಪಾಲಿಕೆಗಳನ್ನು ತಪಾಸಣೆ ನಡೆಸಿದೆ. ಲೋಪವೆಸಗಿರುವ ಕಟ್ಟಡಗಳ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಿದ್ದು ಮೂರು ದಿನದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಕಟ್ಟಡಗಳನ್ನು ಮುಚ್ಚಬೇಕಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿಗಳು ಎಚ್ಚರಿಕೆ ನೀಡಿದ್ದಾರೆ.

ಗುಜರಾತ್ ಮಾದರಿ ಎಂದು ದೇಶದಲ್ಲೆಡೆ ಹಲವು ಫೇಕ್ ಫೋಟೊಗಳನ್ನು ಪೋಸ್ಟ್ ಮಾಡುವ ಮೂಲಕ ಬಿಜೆಪಿ ದೇಶಾದ್ಯಂತ ಪ್ರಚಾರ ನಡೆಸಿತ್ತು. ಗುಜರಾತ್ ವೇಗವಾಗಿ ಅಭಿವೃದ್ದಿ ಹೊಂದಿರುವ ರಾಜ್ಯವೆಂದು, ಇದೇ ಮಾದರಿಯಲ್ಲಿ ದೇಶದ ಅಭಿವೃದ್ದಿ ಮಾಡಿವುದಾಗಿ ಘೋಷಿಸಿ, ನರೇಂದ್ರ ಮೋದಿಯವರು 2014ರಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದರು.

ಈಗ ನೋಡಿದರೆ ಕನಿಷ್ಟ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದ 9000 ಕ್ಕೂ ಹೆಚ್ಚು ಕಟ್ಟಡಗಳಿರುವುದು ಯಾವ ಥರದ ಅಭಿವೃದ್ದಿ ಎಂಬ ಪ್ರಶ್ನೆ ಎದ್ದಿದೆ.

ಗುಜರಾತ್ ಮಾಡೆಲ್ ಅಂತೆ!!
ಸೂರತ್ ನಗರದ ಬೆಂಕಿ ಅನಾಹುತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ನೆಹರು ಸ್ಥಾಪಿತ ಅಖಿಲ ಭಾರತ ವೈದ್ಯಕೀಯ ಮಹಾವಿಜ್ಞಾನ ಸಂಸ್ಥೆಗೆ ತೆಗೆದುಕೊಂಡು ಹೋಗಲು ಮೋದಿ ಆದೇಶಿಸಿದ್ದಾರೆ. 15 ವರುಷ ಗುಜರಾತ್ ಆಡಳಿತ ನಡೆಸಿ ಫಕೀರರು ಅಲ್ಲಿ ಒಂದು ಒಳ್ಳೆಯ ಆಸ್ಪತ್ರೆ ಸ್ಥಾಪಿಸಲು ಆಗಲಿಲ್ಲವೇ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಸೂರತ್ ನಂತಹ ದೊಡ್ಡ ವ್ಯವಹಾರಿಕ ನಗರದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ವಾಹನದಲ್ಲಿ ಮಕ್ಕಳನ್ನು ಉಳಿಸಲು 22 ಅಡಿಯ ಎಣಿಯು ಇರಲಿಲ್ಲ ಅಂದರೆ ಅದೆಂಥ ಡಬ್ಬಾ ಗುಜರಿ ಗಾಡಿಗಳು? ಗುಜರಾತ್ ಮಾಡೆಲ್ ಅನ್ನುತ್ತಾ ಸುಳ್ಳುಗಳ ಸರಮಾಲೆಗಳ ಅಡಿಯಲ್ಲಿ ಗೆದ್ದು ಜನರಿಗೆ ಮಂಕುಬೂದಿ ಎರಚಿದ ಪ್ರಧಾನಿ ಇವರಲ್ಲವೇ ಎಂದು ಸಹ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...