Homeಮುಖಪುಟವಿದ್ಯಾರ್ಥಿಗಳನ್ನು ಟ್ಯೂಷನ್‌ಗೆ ಸೆಳೆಯಲು ISRO ವಿಜ್ಞಾನಿಯೆಂದು ಹೇಳಿಕೊಂಡಿದ್ದ ಗುಜರಾತ್‌ನ ಶಿಕ್ಷಕ ಅರೆಸ್ಟ್

ವಿದ್ಯಾರ್ಥಿಗಳನ್ನು ಟ್ಯೂಷನ್‌ಗೆ ಸೆಳೆಯಲು ISRO ವಿಜ್ಞಾನಿಯೆಂದು ಹೇಳಿಕೊಂಡಿದ್ದ ಗುಜರಾತ್‌ನ ಶಿಕ್ಷಕ ಅರೆಸ್ಟ್

- Advertisement -
- Advertisement -

ವಿದ್ಯಾರ್ಥಿಗಳನ್ನು ತನ್ನ ಟ್ಯೂಷನ್‌ಗೆ ಸೆಳೆಯಲು ಗುಜರಾತ್‌ನ ಖಾಸಗಿ ಶಿಕ್ಷಕನೊಬ್ಬ ತಾನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಯೆಂದು ಹೇಳಿಕೊಂಡಿದ್ದಾನೆ ಎಂಬ ಆರೋಪದ ಮೇಲೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮಿಥುಲ್ ತ್ರಿವೇದಿ ಎನ್ನುವವರೇ ಈ ನಕಲಿ ವಿಜ್ಞಾನಿ. ಅವರು ಚಂದ್ರಯಾನ-3 ಚಂದ್ರನ ಮಿಷನ್‌ಗಾಗಿ ಲ್ಯಾಂಡರ್ ಮಾಡ್ಯೂಲ್‌ನ್ನು ವಿನ್ಯಾಸಗೊಳಿಸಿರುವುದಾಗಿ ಮಾಧ್ಯಮಗಳಿಗೆ ಸಂದರ್ಶನಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

”ತ್ರಿವೇದಿ ಅವರು ಇಸ್ರೋದ ”ಪ್ರಾಚೀನ ವಿಜ್ಞಾನ ಅಪ್ಲಿಕೇಶನ್ ವಿಭಾಗದ ಸಹಾಯಕ ಮುಖ್ಯಸ್ಥರ” ಎಂದು ಹೇಳಿಕೊಂಡಿದ್ದಾರೆ ಮತ್ತು ಅದಕ್ಕಾಗಿ ಅವರು ನಕಲಿ ನೇಮಕಾತಿ ಪತ್ರವನ್ನು ತಯಾರಿಸಿದ್ದಾರೆ. ಇಸ್ರೋದ ಮುಂದಿನ ಯೋಜನೆಗೆ ”ಬಾಹ್ಯಾಕಾಶದಲ್ಲಿ ಪಾದರಸ ಬಲ” ಎಂಬ ಬಾಹ್ಯಾಕಾಶ ಸಂಶೋಧನೆಗೆ ಸದಸ್ಯನಾಗಿದ್ದೇನೆ ಎಂದು ನಕಲಿ ಪತ್ರವನ್ನು ಸಹ ಅವರು ತಯಾರಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಸೂರತ್ ಪೊಲೀಸರ ಅಪರಾಧ ವಿಭಾಗವು ತ್ರಿವೇದಿ ವಿರುದ್ಧ ಐಪಿಸಿ ಸೆಕ್ಷನ್ 419 (ಸೋಗು ಹಾಕುವ ಮೂಲಕ ವಂಚನೆ), 465 (ನಕಲಿ), 468 (ಮೋಸ ಮಾಡುವ ಉದ್ದೇಶಕ್ಕಾಗಿ ನಕಲಿ) ಮತ್ತು 471 (ನಕಲಿ ದಾಖಲೆಯನ್ನು ಬಳಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಈಬಗ್ಗೆ ಮಾಹಿತಿ ನೀಡಿದ ಹೆಚ್ಚುವರಿ ಪೊಲೀಸ್ ಕಮಿಷನರ್ ಶರದ್ ಸಿಂಘಾಲ್, ”ನಾವು ಇಸ್ರೋವನ್ನು ಸಂಪರ್ಕಿಸಿದ್ದೇವೆ, ಆದರೆ ಅದು, ಆರೋಪಿ ತೋರಿಸಿದ ನೇಮಕಾತಿ ಪತ್ರವನ್ನು ತಾವು ನೀಡಿದ್ದಲ್ಲ ಎಂದು ಹೇಳಿದೆ. ಬಾಹ್ಯಾಕಾಶ ಸಂಸ್ಥೆಯು ಶೀಘ್ರದಲ್ಲೇ ನಮಗೆ ವಿವರವಾದ ಉತ್ತರವನ್ನು ಕಳುಹಿಸುತ್ತದೆ” ಎಂದು ಹೇಳಿದ್ದಾರೆ.

ಭಾರತದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದ ಬಳಿ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಇತಿಹಾಸವನ್ನು ನಿರ್ಮಿಸಿತು. ಆರ್ಬಿಟರ್, ಲ್ಯಾಂಡರ್ ಮತ್ತು ರೋವರ್ ಹೊಂದಿರುವ ಬಾಹ್ಯಾಕಾಶ ನೌಕೆಯನ್ನು ಜುಲೈ 14ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು. ಇದಕ್ಕೂ ಮೊದಲು, ಕೇವಲ ಮೂರು ರಾಷ್ಟ್ರಗಳು – ಸಮರತಿಕ, ಸೋವಿಯತ್ ಒಕ್ಕೂಟ ಮತ್ತು ಚೀನಾ – ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯನ್ನು ಇಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...