Homeಕರ್ನಾಟಕಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

ಸುರತ್ಕಲ್ ಅನಧಿಕೃತ ಟೋಲ್‌ ವಿರೋಧಿ ಹೋರಾಟ | ಪೊಲೀಸರಿಂದ ಬಂಧನ; ಬಿಡುಗಡೆಗೆ ಡಿವೈಎಫ್‌ಐ ಒತ್ತಾಯ

- Advertisement -
- Advertisement -

ಮಂಗಳೂರಿನ ಸುರತ್ಕಲ್‌ನ ಅನಧಿಕೃತ ಟೋಲ್ ತೆರವಿಗೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಮಂಗಳವಾರ ಬಂಧಿಸಿದ್ದಾರೆ. ಬಂಧನವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿವೈಎಫ್ಐ) ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದ್ದು ಬಿಜೆಪಿ ಸರಕಾರ ಕೂಡಲೇ ಟೋಲ್ ಗೇಟ್ ತೆರವುಗೊಳಿಸಿ, ಬಂಧಿತ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದೆ.

ಟೋಲ್ ವಿರೋಧಿ ಸಮಿತಿ ಸಂಚಾಲಕ, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ನಾಯಕ ಬಿಕೆ ಇಂತಿಯಾಝ್‌, ಕಾಂಗ್ರೆಸ್ ನಾಯಕ ಮಿಥುನ್ ರೈ, ಕಾರ್ಮಿಕ ನಾಯಕ ಸುನಿಲ್ ಕುಮಾರ್‌ ಬಜಾಲ್‌ ಸೇರಿದಂತೆ 250ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ‘ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವ’ದಲ್ಲಿ ಜನರು ಶಾಂತಿಯುತವಾಗಿ ಪ್ರತಿಭಟಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಬಂಧನ ನಡೆದಿದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

“ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪಕ್ಷದ ಶಾಸಕ, ಸಂಸದ ಹಾಗೂ ಸಚಿವರು ಅನಧಿಕೃತ ಟೋಲ್ ಗೇಟ್ ತೆರವುಗೊಳಿಸುವ ಬದಲಿಗೆ ತುಳುನಾಡಿನ ಜನರ ಮೇಲೆ ದ್ವೇಷ ಸಾಧಿಸುತ್ತಿರುವುದು ಅಕ್ಷಮ್ಯ ಹಾಗೂ ಆಯ್ಕೆ ಮಾಡಿದ ಜನರಿಗೆ ಎಸಗುತ್ತಿರುವ ಮಹಾದ್ರೋಹವಾಗಿದೆ” ಎಂದು ಡಿವೈಎಫ್‌ಐ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರ ಸರಕಾರದ ಸಾರಿಗೆ ಸಚಿವ ನಿತಿನ್ ಗಡ್ಕರಿಯೇ ಸ್ವತಃ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸುವುದಾಗಿ ಹೇಳಿ, ನಾಲ್ಕು ತಿಂಗಳು ಕಳೆದಿದೆ. ಟೋಲ್ ತೆರವುಗೊಳಿಸದೆ ಜನರನ್ನು ಲೂಟಿ ಮಾಡಲು ಮುಂದಾಗುತ್ತಿರುವುದನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆಗೆ ಮುಂದಾದ ಹೋರಾಟ ಸಮಿತಿಯ ಮುಖಂಡರಿಗೆ ಸರಕಾರ ಮುಚ್ಚಳಿಕೆ ಬರೆದುಕೊಡುವುದು, ಬಾಂಡ್, ಶ್ಯೂರಿಟಿ ಕೊಡಬೇಕು ಎಂದು ಬೆದರಿಸುವ ಜೊತೆಗೆ ಪೂಡಾರಿಗಳ ರೀತಿ ಏಕವಚನ ಬಳಸಿ ಹೋರಾಟ ಹತ್ತಿಕ್ಕಲು ಹೊರಟು ವಿಫಲವಾಗಿದೆ ಎಂದು ಡಿವೈಎಫ್‌ಐ ತಿಳಿಸಿದೆ.

ಜನರ ಪ್ರತಿರೋಧವನ್ನು ಹತ್ತಿಕ್ಕಲು ಹೋಗಿ ಸ್ವತಃ ಬಿಜೆಪಿ ಸರಕಾರ ಜನರೆದುರು ಬೆತ್ತಲಾಗಿದೆ ಎಂದು ಹೇಳಿರುವ ಡಿವೈಎಫ್‌ಐ, “ಹೋರಾಟಗಾರರನ್ನು ಬಂಧಿಸಿದರೆ, ಬೆದರಿಕೆ ತಂತ್ರ ಅನುಸಿರಿದರೆ ಹೋರಾಟ ಹತ್ತಿಕ್ಕಬಹುದು ಎಂದು ಬಿಜೆಪಿ ಸರಕಾರ ಎಣಿಕೆಯಾದರೆ ಅದು ಅದರ ಭ್ರಮೆ ಮಾತ್ರ. ಈ ಟೋಲ್ ಗೇಟ್ ತೆರವುಗೊಳ್ಳುವವರೆಗೆ ತುಳುನಾಡ ಜನತೆ ಐಕ್ಯತೆಯಿಂದ ಹೋರಾಟ ಮುಂದುವರೆಸುತ್ತದೆ” ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ:  ಸಂಗಾತಿಗಳೇ, ನಾವು ಆಸ್ತಿ ಸಂಬಂಧಗಳ ಕುರಿತು ಮಾತನಾಡೋಣ : ಬರ್ಟೋಲ್ಟ್ ಬ್ರೆಕ್ಟ್

ಕೂಡಲೇ ಈ ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯವ್ಯಾಪಿ ಹೋರಾಟಕ್ಕೆ ಜನತೆ ಮುಂದಾಗಬೇಕುತ್ತದೆ ಎಂದು ಡಿವೈಎಫ್ಐ ರಾಜ್ಯ ಸರಕಾರಕ್ಕೆ ಎಚ್ಚರಿಸಿದೆ.

ಈ ಹೋರಾಟವನ್ನು ಮುರಿಯಲು, ಜನರ ಹಿತಾಸಕ್ತಿಯ ಬದಲು ಖಾಸಗಿ ನವಯುಗ ಕಂಪೆನಿಯ ಹಿತಾಸಕ್ತಿ ಕಾಪಾಡುತ್ತಿರುವ ಬಿಜೆಪಿ ಸರಕಾರದ ನೀತಿಯನ್ನು ಖಂಡಿಸಿ, ಅನಧಿಕೃತ ಟೋಲ್ ತೆರವುಗೊಳಿಸಲು ಮತ್ತು ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಲು ರಾಜ್ಯದ ಜನತೆ ಪ್ರತಿರೋಧಕ್ಕೆ ಮುಂದಾಗಬೇಕು ಎಂದು ಡಿವೈಎಫ್ಐ ರಾಜ್ಯ ಸಮಿತಿಯು ಕರೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...