Homeಕರ್ನಾಟಕಸುರತ್ಕಲ್ ಫಾಝಿಲ್ ಹತ್ಯೆ: ಪ್ರೇಮ ಪ್ರಕರಣವೆಂದ ಡೆಕ್ಕನ್ ಹೆರಾಲ್ಡ್‌; ಅದನ್ನೆ ಉಲ್ಲೇಖಿಸಿ ವರದಿ ಮಾಡಿದ ಪ್ರೊಪಗಾಂಡ...

ಸುರತ್ಕಲ್ ಫಾಝಿಲ್ ಹತ್ಯೆ: ಪ್ರೇಮ ಪ್ರಕರಣವೆಂದ ಡೆಕ್ಕನ್ ಹೆರಾಲ್ಡ್‌; ಅದನ್ನೆ ಉಲ್ಲೇಖಿಸಿ ವರದಿ ಮಾಡಿದ ಪ್ರೊಪಗಾಂಡ ವೆಬ್ ಒಪಿಂಡಿಯಾ!

ಮಂಗಳೂರು ನಗರ ಕಮಿಷನರ್‌‌ ಶಶಿಕುಮಾರ್‌ ಅವರು ತಪ್ಪು ಸಂದೇಶ ಹರಿಬಿಡದಂತೆ ಎಂದು ಹೇಳಿದ್ದು, ಕೊಲೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ ಮಾಧ್ಯಮಗಳು ಹಾಗೂ ಸಾರ್ವಜನಿಕರು ವದಂತಿ ಹರಡಬೇಡಿ ಎಂದು ಕಿಡಿ ಕಾರಿದ್ದರು.

- Advertisement -
- Advertisement -

ಪ್ರವೀಣ್ ಕೊಲೆ ನಡೆದು ಒಂದು ದಿನ ಮುಗಿಯುವುದರ ಒಳಗಾಗಿ ಮಂಗಳೂರು ಹೊರ ವಲಯದ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ಮಾಡಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಅಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸುವ ಮುಂಚೆಯೆ ಕೆಲವು ಬಿಜೆಪಿ ಬೆಂಬಲಿತ ಪೇಜ್‌ಗಳು ಮತ್ತು ಬಿಜೆಪಿ ಬೆಂಬಲಿಗರು ಫಾಝಿಲ್ ಕೊಲೆ ಸುನ್ನಿ-ಷಿಯಾ ಪ್ರೇಮ ಪ್ರಕರಣ ಕೊಲೆ ಎಂದು ತೀರ್ಪು ನೀಡಿ ದುರುದ್ದೇಶದಿಂದ ಹರಿಬಿಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲವ್ ವಿಷಯದಲ್ಲಿ ಸುನ್ನಿ ಮುಸಲ್ಮಾನ ಸಮುದಾಯದ ತಂಡ ಮತ್ತು ಶಿಯಾ ಮುಸಲ್ಮಾನ ಸಮುದಾಯದ ತಂಡದ ನಡುವೆ ಸುರತ್ಕಲ್‌ನಲ್ಲಿ ಮಾರಾಮಾರಿ. ಮೇಲ್ಜಾತಿ ಸುನ್ನಿ ಮುಸಲ್ಮಾನರ ಯುವತಿಯನ್ನು ಪ್ರೀತಿಸಿದ ಕೆಳಜಾತಿಯ ಷಿಯಾ ಮುಸಲ್ಮಾನ ಯುವಕನ ಮೇಲೆ ತಲವಾರು ದಾಳಿ ನಡೆಸಿ ಕೊಂದ ಸುನ್ನಿ ಮುಸಲ್ಮಾನರು. ಯುವಕನ ಸ್ಥಿತಿ ಗಂಭೀರ” ಎಂಬ ಸಂದೇಶವನ್ನು ಬಿಜೆಪಿ ಬೆಂಬಲಿಗರು ಹರಿಯಬಿಟ್ಟಿದ್ದರು.

ಕೊಲೆಯಾದ ಕೂಡಲೇ ಫೇಸ್‌ಬುಕ್‌ನಲ್ಲಿ ತಪ್ಪು ಸಂದೇಶ ಹರಿಯ ಬಿಟ್ಟ ಬಿಜೆಪಿ ಬೆಂಬಲಿಗರ ಕೆಲವು ಪೋಸ್ಟ್‌

ಕನ್ನಡದ ಮಾಧ್ಯಮಗಳು ಕೂಡಾ ಬಿಜೆಪಿ ಬೆಂಬಲಿಗರ ಸಂದೇಶದಂತೆ ಪ್ರೇಮ ಪ್ರಕರಣದಿಂದಾದ ಕೊಲೆ ಎಂದೆ ವರದಿ ಮಾಡಿದ್ದವು.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಯಾವುದೇ ಅಧಿಕೃತವಲ್ಲದ ಬಿಜೆಪಿ ಬೆಂಬಲಿಗರು ಹರಿಬಿಟ್ಟ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಕಮಿಷನರ್‌ ಶಶಿಕುಮಾರ್‌ ಅವರು ಕೂಡಾ ತಪ್ಪು ಸಂದೇಶ ಹರಿಬಿಡದಂತೆ ಹಾಗೂ ಕೊಲೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ತಿಳಿದಿಲ್ಲ ಎಂದು ತಿಳಿಸಿದ್ದರು. ಮಾಧ್ಯಮಗಳು ಹಾಗೂ ಸಾರ್ವಜನಿಕರು ವದಂತಿ ಹರಡಬೇಡಿ ಎಂದು ಕಿಡಿ ಕಾರಿದ್ದರು.

ಈ ನಡುವೆ ಸುರತ್ಕಲ್ ಕ್ಷೇತ್ರದ ಮಾಜಿ ಶಾಸಕ ಮೊಯಿದಿನ್ ಬಾವ ಅವರು, ‘‘ಇದು ಪ್ರೇಮ ಪ್ರಕರಣದ ಕಾರಣಕ್ಕೆ ನಡೆದ ಕೊಲೆ” ಎಂದು ಹೇಳಿದ್ದಾಗಿ ಕನ್ನಡ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಬಗ್ಗೆ ಮತ್ತೇ ಸ್ಪಷ್ಟನೆ ನೀಡಿದ್ದ ಮೊಯಿದಿನ್ ಬಾವ ಅವರು, “ನಾನು ಈ ರೀತಿ ಹೇಳಿಕೆ ನೀಡಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನನ್ನ ಹೇಳಿಕೆ ತಿರುಚಿರುವ ಸುವರ್ಣ ನ್ಯೂಸ್ ವಿರುದ್ಧ ಪ್ರಕರಣ ದಾಖಲಿಸುತ್ತೇನೆ” ಎಂದು ಹೇಳಿದ್ದರು.

ಅದಾಗಿಯೂ ದೇಶದ ಪ್ರಮುಖ ಇಂಗ್ಲಿಷ್‌‌‌‌ ಪತ್ರಿಕೆಯಾಗಿರುವ ಡೆಕ್ಕನ್ ಹೆರಾಲ್ಡ್‌ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, “ಶಿಯಾ ಸಮುದಾಯದ ಹುಡುಗಿಯನ್ನು ಪ್ರೀತಿಸುತ್ತಿದ್ದ ಕಾರಣ ಫಾಝಿಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೊಹಮ್ಮದ್ ಫಾಝಿಲ್ ಅವರು ಸುನ್ನಿ ಮುಸ್ಲಿಂ ಎಂದು ಪೊಲೀಸ್ ಮೂಲಗಳು ತಿಳಿಸಿವೆ” ಎಂದು ವರದಿ ಮಾಡಿದೆ.

ಆರ್ಕೈವ್‌‌ಗೆ ಇಲ್ಲಿ ಕ್ಲಿಕ್ ಮಾಡಿ

ಡೆಕ್ಕನ್ ಹೆರಾಲ್ಡ್‌‌ನ ಈ ವರದಿಯನ್ನು ಉಲ್ಲೇಖಿಸಿ ಭಾರತ ಮಟ್ಟದಲ್ಲಿ ಬಿಜೆಪಿಯ ಪರವಾಗಿ ಪ್ರೊಪಗಾಂಡ ಹರಡುವ ಒಪಿಂಡಿಯಾ ಎಂಬ ವೆಬ್‌ಸೈಟ್‌, “ಸುನ್ನಿ ಫಾಜಿಲ್ ಶಿಯಾ ಹುಡುಗಿಯನ್ನು ಪ್ರೀತಿಸುತ್ತಿರುವುದೇ ಹತ್ಯೆಗೆ ಕಾರಣ ಎಂದು ವರದಿಗಳು ಸೂಚಿಸುತ್ತವೆ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ.

ಆರ್ಕೈವ್‌‌ ಇಲ್ಲಿ ಕ್ಲಿಕ್ ಮಾಡಿ

ವಾಸ್ತವದಲ್ಲಿ ಕೊಲೆಯಾದ ಫಾಝಿಲ್‌ ಆದರೆ ಸುನ್ನಿ ಮುಸ್ಲಿಂ ಆಗಿದ್ದು, ಬಿಜೆಪಿ ಬೆಂಬಲಿಗರು ಹೇಳುವಂತೆ ಶಿಯಾ ಪಂಥವನ್ನು ಅನುಸರಿಸುವ ಯುವಕನಲ್ಲ. ಅವರ ಅಂತ್ಯ ಸಂಸ್ಕಾರವನ್ನು ಸುರತ್ಕಲ್‌ನ ಮಂಗಳಪೇಟೆಯ ಮುಹಿಯದ್ದೀನ್ ಮಸೀದಿಯಲ್ಲಿ ಮಾಡಲಾಗಿದೆ. ಈ ಮಸೀದಿ ಸುನ್ನಿ ಮಸೀದಿಯಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಫಾಝಿಲ್ ಅವರು ಸುನ್ನಿ ಪಂಥವನ್ನು ಅನುಸರಿಸುತ್ತಿದ್ದರು. ಅಷ್ಟಕ್ಕೂ ಸುರತ್ಕಲ್ ಆಸುಪಾಸಿನಲ್ಲಿ ಶಿಯಾ ಪಂಥದ ಜನರು ಕೂಡಾ ಇಲ್ಲ ಎಂದು ಸ್ಥಳೀಯರು ಉಲ್ಲೇಖಿಸುತ್ತಾರೆ. ಹೀಗಾಗಿ ಬಿಜೆಪಿ ಬೆಂಬಲಿಗರು ಸುನ್ನಿ ಶಿಯಾ ಕಟ್ಟುಕತೆಯನ್ನು ತನಿಖೆಯ ದಾರಿ ತಪ್ಪಿಸಲು ಬೇಕಾಗಿ ದುರುದ್ದೇಶ ಪೂರ್ವಕವಾಗಿ ಹರಿಯ ಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

‘‘ಸುನ್ನಿ-ಶಿಯಾ ಪ್ರೇಮ ವಿವಾದ’’ ಎಂಬುವುದು ಬಲಪಂಥೀಯರು ಕಟ್ಟಿದ ಅಪ್ಪಟ ಕಟ್ಟುಕತೆ ಎಂದು ಬ್ಯಾರಿ ಸಮುದಾಯದ ಸಂಸ್ಕೃತಿ ಚಿಂತಕ, ಬರಹಗಾರ ಇಸ್ಮತ್ ಪಜೀರ್‌ ಅವರು ಆರೋಪಿಸುತ್ತಾರೆ. “ವಾಸ್ತವದಲ್ಲಿ ಕರಾವಳಿಯಲ್ಲಿ ಶಿಯಾ ಸಮುದಾಯ ತೀರಾ ಇಲ್ಲವೆ ಇಲ್ಲ ಎನ್ನುವಷ್ಟು ಕಡಿಮೆ, ಇದ್ದರೂ ಒಂದಷ್ಟು ಬೆರಳೆಣಿಕೆಯ ಆಗರ್ಭ ಶ್ರೀಮಂತರು ವ್ಯಾಪರಕ್ಕೆ ಅಷ್ಟೆ ಬರುತ್ತಾರೆ. ಅವರು ಇಲ್ಲಿನ ಬ್ಯಾರಿ ಸಮುದಾಯ(ಸ್ಥಳೀಯ ಮುಸ್ಲಿಮರು)ದೊಂದಿಗೆ ಸಾಮಾಜಿಕವಾಗಿ ಬೆರೆಯುವುದೆ ಇಲ್ಲ. ಅವರಿಗೆ ಬ್ಯಾರಿ ಭಾಷೆಯು ಬರುವುದಿಲ್ಲ” ಎಂದು ಹೇಳಿದ್ದಾರೆ.

ಅದೂ ಅಲ್ಲದೆ ಶಿಯಾ-ಸುನ್ನಿ ಎಂಬುವುದು ಮುಸ್ಲಿಮರ ಒಳಗಿನ ಜಾತಿಗಳೂ ಅಲ್ಲ ಎಂದು ಇಸ್ಮತ್ ಹೇಳುತ್ತಾರೆ. ಸುನ್ನಿ-ಶಿಯಾ ಎಂಬುವುದು ತಾತ್ವಿಕ ಭಿನ್ನತೆಗಳ ಆಧಾರದಲ್ಲಿ ವಿಗಂಡನೆಗೊಂಡಿರುವ ಪಂಥಗಳಾಗಿವೆ. ಭಾರತದಲ್ಲಿ ಕಂಡು ಬರುವ ಜಾತಿ ಮಾದರಿಯಲ್ಲಿ ಅವುಗಳು ಇರುವುದಿಲ್ಲ. ಜಾತಿಗಳು ಜನ್ಮತಃ ಬರುತ್ತದೆ ಮತ್ತು ತಮ್ಮ ಹೆತ್ತವರ ಜಾತಿಯೆ ಮಕ್ಕಳ ಜಾತಿಯೂ ಆಗಿರುತ್ತದೆ. ಅವುಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ ಸುನ್ನಿ ಮುಸ್ಲಿಂ ಒಬ್ಬ ಯಾವುದೇ ಸಮಯಕ್ಕೆ ಶಿಯಾ ಆಗಬಹುದಾಗಿದೆ ಹಾಗೆಯೆ ಶಿಯಾ ಒಬ್ಬ ಸುನ್ನಿ ಕೂಡಾ ಆಗಬಹುದಾಗಿದೆ. ಅವುಗಳು ಕೇವಲ ಸೈದ್ಧಾಂತಿಕ ವಿಚಾರ ಧಾರೆಯಾಗಿದೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

ಫಾಝಿಲ್ ಕೊಲೆಯು ಸುನ್ನಿ-ಶಿಯಾ ಪ್ರೇಮ ವಿಚಾರದ ಕಾರಣದಕ್ಕೆ ನಡೆದಿದೆ ಎಂಬ ವರದಿಯ ಬಗ್ಗೆ ಮಾತನಾಡಿದ ಇ‌ಸ್ಮತ್ ಪಜೀರ್‌, “Deccan herald‌ ನಂತಹ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯೂ ಈ‌ ಸಂಘಪರಿವಾರದ ಆಯಾಮವನ್ನು‌ ಸುದ್ಧಿ‌ಮೂಲವಾಗಿ ಎತ್ತಿಕೊಂಡು ವರದಿ ಮಾಡಿ‌‌ ಉನ್ನತ ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆಂದು ಪ್ರಕಟಿಸಿದೆ ಎಂಬುವುದು ಬೇಸರದ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...