Homeಕರ್ನಾಟಕಸುರತ್ಕಲ್ ಫಾಝಿಲ್ ಹತ್ಯೆ: ಪ್ರೇಮ ಪ್ರಕರಣವೆಂದ ಡೆಕ್ಕನ್ ಹೆರಾಲ್ಡ್‌; ಅದನ್ನೆ ಉಲ್ಲೇಖಿಸಿ ವರದಿ ಮಾಡಿದ ಪ್ರೊಪಗಾಂಡ...

ಸುರತ್ಕಲ್ ಫಾಝಿಲ್ ಹತ್ಯೆ: ಪ್ರೇಮ ಪ್ರಕರಣವೆಂದ ಡೆಕ್ಕನ್ ಹೆರಾಲ್ಡ್‌; ಅದನ್ನೆ ಉಲ್ಲೇಖಿಸಿ ವರದಿ ಮಾಡಿದ ಪ್ರೊಪಗಾಂಡ ವೆಬ್ ಒಪಿಂಡಿಯಾ!

ಮಂಗಳೂರು ನಗರ ಕಮಿಷನರ್‌‌ ಶಶಿಕುಮಾರ್‌ ಅವರು ತಪ್ಪು ಸಂದೇಶ ಹರಿಬಿಡದಂತೆ ಎಂದು ಹೇಳಿದ್ದು, ಕೊಲೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ ಮಾಧ್ಯಮಗಳು ಹಾಗೂ ಸಾರ್ವಜನಿಕರು ವದಂತಿ ಹರಡಬೇಡಿ ಎಂದು ಕಿಡಿ ಕಾರಿದ್ದರು.

- Advertisement -
- Advertisement -

ಪ್ರವೀಣ್ ಕೊಲೆ ನಡೆದು ಒಂದು ದಿನ ಮುಗಿಯುವುದರ ಒಳಗಾಗಿ ಮಂಗಳೂರು ಹೊರ ವಲಯದ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ಮಾಡಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಅಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸುವ ಮುಂಚೆಯೆ ಕೆಲವು ಬಿಜೆಪಿ ಬೆಂಬಲಿತ ಪೇಜ್‌ಗಳು ಮತ್ತು ಬಿಜೆಪಿ ಬೆಂಬಲಿಗರು ಫಾಝಿಲ್ ಕೊಲೆ ಸುನ್ನಿ-ಷಿಯಾ ಪ್ರೇಮ ಪ್ರಕರಣ ಕೊಲೆ ಎಂದು ತೀರ್ಪು ನೀಡಿ ದುರುದ್ದೇಶದಿಂದ ಹರಿಬಿಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲವ್ ವಿಷಯದಲ್ಲಿ ಸುನ್ನಿ ಮುಸಲ್ಮಾನ ಸಮುದಾಯದ ತಂಡ ಮತ್ತು ಶಿಯಾ ಮುಸಲ್ಮಾನ ಸಮುದಾಯದ ತಂಡದ ನಡುವೆ ಸುರತ್ಕಲ್‌ನಲ್ಲಿ ಮಾರಾಮಾರಿ. ಮೇಲ್ಜಾತಿ ಸುನ್ನಿ ಮುಸಲ್ಮಾನರ ಯುವತಿಯನ್ನು ಪ್ರೀತಿಸಿದ ಕೆಳಜಾತಿಯ ಷಿಯಾ ಮುಸಲ್ಮಾನ ಯುವಕನ ಮೇಲೆ ತಲವಾರು ದಾಳಿ ನಡೆಸಿ ಕೊಂದ ಸುನ್ನಿ ಮುಸಲ್ಮಾನರು. ಯುವಕನ ಸ್ಥಿತಿ ಗಂಭೀರ” ಎಂಬ ಸಂದೇಶವನ್ನು ಬಿಜೆಪಿ ಬೆಂಬಲಿಗರು ಹರಿಯಬಿಟ್ಟಿದ್ದರು.

ಕೊಲೆಯಾದ ಕೂಡಲೇ ಫೇಸ್‌ಬುಕ್‌ನಲ್ಲಿ ತಪ್ಪು ಸಂದೇಶ ಹರಿಯ ಬಿಟ್ಟ ಬಿಜೆಪಿ ಬೆಂಬಲಿಗರ ಕೆಲವು ಪೋಸ್ಟ್‌

ಕನ್ನಡದ ಮಾಧ್ಯಮಗಳು ಕೂಡಾ ಬಿಜೆಪಿ ಬೆಂಬಲಿಗರ ಸಂದೇಶದಂತೆ ಪ್ರೇಮ ಪ್ರಕರಣದಿಂದಾದ ಕೊಲೆ ಎಂದೆ ವರದಿ ಮಾಡಿದ್ದವು.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಯಾವುದೇ ಅಧಿಕೃತವಲ್ಲದ ಬಿಜೆಪಿ ಬೆಂಬಲಿಗರು ಹರಿಬಿಟ್ಟ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಕಮಿಷನರ್‌ ಶಶಿಕುಮಾರ್‌ ಅವರು ಕೂಡಾ ತಪ್ಪು ಸಂದೇಶ ಹರಿಬಿಡದಂತೆ ಹಾಗೂ ಕೊಲೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ತಿಳಿದಿಲ್ಲ ಎಂದು ತಿಳಿಸಿದ್ದರು. ಮಾಧ್ಯಮಗಳು ಹಾಗೂ ಸಾರ್ವಜನಿಕರು ವದಂತಿ ಹರಡಬೇಡಿ ಎಂದು ಕಿಡಿ ಕಾರಿದ್ದರು.

ಈ ನಡುವೆ ಸುರತ್ಕಲ್ ಕ್ಷೇತ್ರದ ಮಾಜಿ ಶಾಸಕ ಮೊಯಿದಿನ್ ಬಾವ ಅವರು, ‘‘ಇದು ಪ್ರೇಮ ಪ್ರಕರಣದ ಕಾರಣಕ್ಕೆ ನಡೆದ ಕೊಲೆ” ಎಂದು ಹೇಳಿದ್ದಾಗಿ ಕನ್ನಡ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಬಗ್ಗೆ ಮತ್ತೇ ಸ್ಪಷ್ಟನೆ ನೀಡಿದ್ದ ಮೊಯಿದಿನ್ ಬಾವ ಅವರು, “ನಾನು ಈ ರೀತಿ ಹೇಳಿಕೆ ನೀಡಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನನ್ನ ಹೇಳಿಕೆ ತಿರುಚಿರುವ ಸುವರ್ಣ ನ್ಯೂಸ್ ವಿರುದ್ಧ ಪ್ರಕರಣ ದಾಖಲಿಸುತ್ತೇನೆ” ಎಂದು ಹೇಳಿದ್ದರು.

ಅದಾಗಿಯೂ ದೇಶದ ಪ್ರಮುಖ ಇಂಗ್ಲಿಷ್‌‌‌‌ ಪತ್ರಿಕೆಯಾಗಿರುವ ಡೆಕ್ಕನ್ ಹೆರಾಲ್ಡ್‌ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ, “ಶಿಯಾ ಸಮುದಾಯದ ಹುಡುಗಿಯನ್ನು ಪ್ರೀತಿಸುತ್ತಿದ್ದ ಕಾರಣ ಫಾಝಿಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೊಹಮ್ಮದ್ ಫಾಝಿಲ್ ಅವರು ಸುನ್ನಿ ಮುಸ್ಲಿಂ ಎಂದು ಪೊಲೀಸ್ ಮೂಲಗಳು ತಿಳಿಸಿವೆ” ಎಂದು ವರದಿ ಮಾಡಿದೆ.

ಆರ್ಕೈವ್‌‌ಗೆ ಇಲ್ಲಿ ಕ್ಲಿಕ್ ಮಾಡಿ

ಡೆಕ್ಕನ್ ಹೆರಾಲ್ಡ್‌‌ನ ಈ ವರದಿಯನ್ನು ಉಲ್ಲೇಖಿಸಿ ಭಾರತ ಮಟ್ಟದಲ್ಲಿ ಬಿಜೆಪಿಯ ಪರವಾಗಿ ಪ್ರೊಪಗಾಂಡ ಹರಡುವ ಒಪಿಂಡಿಯಾ ಎಂಬ ವೆಬ್‌ಸೈಟ್‌, “ಸುನ್ನಿ ಫಾಜಿಲ್ ಶಿಯಾ ಹುಡುಗಿಯನ್ನು ಪ್ರೀತಿಸುತ್ತಿರುವುದೇ ಹತ್ಯೆಗೆ ಕಾರಣ ಎಂದು ವರದಿಗಳು ಸೂಚಿಸುತ್ತವೆ” ಎಂಬ ಹೆಡ್‌ಲೈನ್‌ನೊಂದಿಗೆ ವರದಿ ಮಾಡಿದೆ.

ಆರ್ಕೈವ್‌‌ ಇಲ್ಲಿ ಕ್ಲಿಕ್ ಮಾಡಿ

ವಾಸ್ತವದಲ್ಲಿ ಕೊಲೆಯಾದ ಫಾಝಿಲ್‌ ಆದರೆ ಸುನ್ನಿ ಮುಸ್ಲಿಂ ಆಗಿದ್ದು, ಬಿಜೆಪಿ ಬೆಂಬಲಿಗರು ಹೇಳುವಂತೆ ಶಿಯಾ ಪಂಥವನ್ನು ಅನುಸರಿಸುವ ಯುವಕನಲ್ಲ. ಅವರ ಅಂತ್ಯ ಸಂಸ್ಕಾರವನ್ನು ಸುರತ್ಕಲ್‌ನ ಮಂಗಳಪೇಟೆಯ ಮುಹಿಯದ್ದೀನ್ ಮಸೀದಿಯಲ್ಲಿ ಮಾಡಲಾಗಿದೆ. ಈ ಮಸೀದಿ ಸುನ್ನಿ ಮಸೀದಿಯಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಫಾಝಿಲ್ ಅವರು ಸುನ್ನಿ ಪಂಥವನ್ನು ಅನುಸರಿಸುತ್ತಿದ್ದರು. ಅಷ್ಟಕ್ಕೂ ಸುರತ್ಕಲ್ ಆಸುಪಾಸಿನಲ್ಲಿ ಶಿಯಾ ಪಂಥದ ಜನರು ಕೂಡಾ ಇಲ್ಲ ಎಂದು ಸ್ಥಳೀಯರು ಉಲ್ಲೇಖಿಸುತ್ತಾರೆ. ಹೀಗಾಗಿ ಬಿಜೆಪಿ ಬೆಂಬಲಿಗರು ಸುನ್ನಿ ಶಿಯಾ ಕಟ್ಟುಕತೆಯನ್ನು ತನಿಖೆಯ ದಾರಿ ತಪ್ಪಿಸಲು ಬೇಕಾಗಿ ದುರುದ್ದೇಶ ಪೂರ್ವಕವಾಗಿ ಹರಿಯ ಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

‘‘ಸುನ್ನಿ-ಶಿಯಾ ಪ್ರೇಮ ವಿವಾದ’’ ಎಂಬುವುದು ಬಲಪಂಥೀಯರು ಕಟ್ಟಿದ ಅಪ್ಪಟ ಕಟ್ಟುಕತೆ ಎಂದು ಬ್ಯಾರಿ ಸಮುದಾಯದ ಸಂಸ್ಕೃತಿ ಚಿಂತಕ, ಬರಹಗಾರ ಇಸ್ಮತ್ ಪಜೀರ್‌ ಅವರು ಆರೋಪಿಸುತ್ತಾರೆ. “ವಾಸ್ತವದಲ್ಲಿ ಕರಾವಳಿಯಲ್ಲಿ ಶಿಯಾ ಸಮುದಾಯ ತೀರಾ ಇಲ್ಲವೆ ಇಲ್ಲ ಎನ್ನುವಷ್ಟು ಕಡಿಮೆ, ಇದ್ದರೂ ಒಂದಷ್ಟು ಬೆರಳೆಣಿಕೆಯ ಆಗರ್ಭ ಶ್ರೀಮಂತರು ವ್ಯಾಪರಕ್ಕೆ ಅಷ್ಟೆ ಬರುತ್ತಾರೆ. ಅವರು ಇಲ್ಲಿನ ಬ್ಯಾರಿ ಸಮುದಾಯ(ಸ್ಥಳೀಯ ಮುಸ್ಲಿಮರು)ದೊಂದಿಗೆ ಸಾಮಾಜಿಕವಾಗಿ ಬೆರೆಯುವುದೆ ಇಲ್ಲ. ಅವರಿಗೆ ಬ್ಯಾರಿ ಭಾಷೆಯು ಬರುವುದಿಲ್ಲ” ಎಂದು ಹೇಳಿದ್ದಾರೆ.

ಅದೂ ಅಲ್ಲದೆ ಶಿಯಾ-ಸುನ್ನಿ ಎಂಬುವುದು ಮುಸ್ಲಿಮರ ಒಳಗಿನ ಜಾತಿಗಳೂ ಅಲ್ಲ ಎಂದು ಇಸ್ಮತ್ ಹೇಳುತ್ತಾರೆ. ಸುನ್ನಿ-ಶಿಯಾ ಎಂಬುವುದು ತಾತ್ವಿಕ ಭಿನ್ನತೆಗಳ ಆಧಾರದಲ್ಲಿ ವಿಗಂಡನೆಗೊಂಡಿರುವ ಪಂಥಗಳಾಗಿವೆ. ಭಾರತದಲ್ಲಿ ಕಂಡು ಬರುವ ಜಾತಿ ಮಾದರಿಯಲ್ಲಿ ಅವುಗಳು ಇರುವುದಿಲ್ಲ. ಜಾತಿಗಳು ಜನ್ಮತಃ ಬರುತ್ತದೆ ಮತ್ತು ತಮ್ಮ ಹೆತ್ತವರ ಜಾತಿಯೆ ಮಕ್ಕಳ ಜಾತಿಯೂ ಆಗಿರುತ್ತದೆ. ಅವುಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ ಸುನ್ನಿ ಮುಸ್ಲಿಂ ಒಬ್ಬ ಯಾವುದೇ ಸಮಯಕ್ಕೆ ಶಿಯಾ ಆಗಬಹುದಾಗಿದೆ ಹಾಗೆಯೆ ಶಿಯಾ ಒಬ್ಬ ಸುನ್ನಿ ಕೂಡಾ ಆಗಬಹುದಾಗಿದೆ. ಅವುಗಳು ಕೇವಲ ಸೈದ್ಧಾಂತಿಕ ವಿಚಾರ ಧಾರೆಯಾಗಿದೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

ಫಾಝಿಲ್ ಕೊಲೆಯು ಸುನ್ನಿ-ಶಿಯಾ ಪ್ರೇಮ ವಿಚಾರದ ಕಾರಣದಕ್ಕೆ ನಡೆದಿದೆ ಎಂಬ ವರದಿಯ ಬಗ್ಗೆ ಮಾತನಾಡಿದ ಇ‌ಸ್ಮತ್ ಪಜೀರ್‌, “Deccan herald‌ ನಂತಹ ಅತ್ಯಂತ ವಿಶ್ವಾಸಾರ್ಹ ಪತ್ರಿಕೆಯೂ ಈ‌ ಸಂಘಪರಿವಾರದ ಆಯಾಮವನ್ನು‌ ಸುದ್ಧಿ‌ಮೂಲವಾಗಿ ಎತ್ತಿಕೊಂಡು ವರದಿ ಮಾಡಿ‌‌ ಉನ್ನತ ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆಂದು ಪ್ರಕಟಿಸಿದೆ ಎಂಬುವುದು ಬೇಸರದ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...