Homeಕರ್ನಾಟಕಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

- Advertisement -
- Advertisement -

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಸುರತ್ಕಲ್ ಟೋಲ್ ಪ್ಲಾಜಾವನ್ನು ಹೆಜಮಾಡಿ ಟೋಲ್ ಗೇಟ್‌‌‌ಗೆ ವಿಲೀನ ಮಾಡಿದ್ದು, ಅಲ್ಲಿ ಸಂಗ್ರಹಿಸುವ ಟೋಲ್‌ ದರಗಳನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಗುರುವಾರ ಪ್ರಕಟಿಸಿದೆ. ಅದರಂತೆ, ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ವಾಹನಗಳು ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುರತ್ಕಲ್ ಪ್ಲಾಜಾದ ಟೋಲ್‌ ಅನ್ನು ಒಟ್ಟು ಸೇರಿಸಿ ಪಾವತಿಸಬೇಕಾಗುತ್ತದೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀನ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸಂಗ್ರಹಿಸಲು (ಸುಲಿಗೆ ನಡೆಸಲು) ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈಗ ಹೆಜಮಾಡಿಯಲ್ಲಿ ಕಾರಿನ ಟೋಲ್ ದರ ಒಂದು ಬದಿಗೆ 40 ರುಪಾಯಿ ಇದ್ದದ್ದು 100 ರೂಪಾಯಿ ಆಗುತ್ತದೆ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ. ಏಳು ವರ್ಷಗಳ ಕಾಲ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸಂಗ್ರಹಿಸಿದ ನೂರಾರು ಕೋಟಿ ರೂಪಾಯಿಗೆ ಬೆಲೆಯೇ ಇಲ್ಲ” ಎಂದು ಅವರು ಹೇಳಿದ್ದಾರೆ.

“ಜನರ ಭಾವನೆ, ಕಷ್ಟ ಸುಖಗಳ ಅರಿವಿಲ್ಲದ ಸಂಸದ, ಶಾಸಕರುಗಳು ಮಾತ್ರ ಹೀಗೆ ನಡೆದುಕೊಳ್ಳಲು ಸಾಧ್ಯ. ಮತ ಹಾಕುವ ಇಲ್ಲಿನ ಜನರಿಗಿಂತ ನವಯುಗ್ ಟೋಲ್ ಕಂಪೆನಿಯ ಹಿತ ಮಾತ್ರ ಇವರಿಗೆ ಮುಖ್ಯವಾಯಿತು. ಜನತೆ ಇದನ್ನು ಒಪ್ಪಬಾರದು. ಅವಿಭಜಿತ ಜಿಲ್ಲೆಯ ಜನ ಒಂದೇ ಧ್ವನಿಯಾಗಿ ಈ ಅತ್ಯಂತ ಕೆಟ್ಟ ನಿರ್ಧಾರವನ್ನು ದೃಢವಾಗಿ ವಿರೋಧಿಸಬೇಕು. ಬಿಜೆಪಿ ಸಂಸದ, ಶಾಸಕರುಗಳಿಗೆ ಆಡಳಿತ ನಡೆಸುವ ಯಾವುದೇ ಅನುಭವ ಇಲ್ಲ ಎಂಬುದು ಈಗ ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತಾಯ್ತು‌” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದೇ ವೇಳೆ ಸುರತ್ಕಲ್‌ ಟೋಲ್ ವಿರೋಧಿ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಶುಕ್ರವಾರ 29 ನೇ ದಿನಕ್ಕೆ ಕಾಲಿಟ್ಟಿದೆ. ಸುರತ್ಕಲ್‌ನಲ್ಲಿ ಟೋಲ್‌ ಸಂಗ್ರಹ ನಿಲ್ಲುವವರೆಗೂ ಮುಂದುವರಿಯಲಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.

ಇದನ್ನೂ ಓದಿ: ‘ಸುರತ್ಕಲ್‌ ಟೋಲ್‌ ರದ್ದು’ | ಮಾಹಿತಿ ನೀಡಿದ ಸಂಸದ ನಳಿನ್ ಕುಮಾರ್‌; ಹಣ ಸಂಗ್ರಹ ನಿಲ್ಲುವವರೆಗೂ ಪ್ರತಿಭಟನೆ ಎಂದ ಹೋರಾಟ ಸಮಿತಿ

ಕಾರು, ಜೀಪ್, ವ್ಯಾನ್ ಇತ್ಯಾದಿ ಲಘು ಮೋಟಾರು ವಾಹನಗಳಿಗೆ (ಎಲ್‌ಎಂವಿ) ಸುರತ್ಕಲ್ ಪ್ಲಾಜಾದಲ್ಲಿ ಸಿಂಗಲ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 60 ರೂ. ಮತ್ತು ಹೆಜಮಾಡಿ ಪ್ಲಾಜಾದಲ್ಲಿ 40 ರೂ. ಇದೆ. ಇದೀಗ ಸುರತ್ಕಲ್ ಗೇಟ್ ವಿಲೀನದ ನಂತರ, ಹೆಜಮಾಡಿಯಲ್ಲಿ ಎಲ್‌ಎಂವಿಗೆ ಟೋಲ್ 100 ರೂ. ಗೆ ಏರಿಕೆಯಾಗಿದೆ.

ಸುರತ್ಕಲ್‌ನಲ್ಲಿ ಎಲ್‌ಎಂವಿ ರಿಟರ್ನ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 90 ರೂ. ಮತ್ತು ಹೆಜಮಾಡಿಯಲ್ಲಿ 65 ರೂ. ಇತ್ತು. ಇದೀಗ ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ LMV ಗೆ ರಿಟರ್ನ್ ಟ್ರಿಪ್ ಶುಲ್ಕ 155 ರೂ.ಗೆ ಏರಿಕೆ ಮಾಡಲಾಗಿದೆ.

ಸುರತ್ಕಲ್ ಪ್ಲಾಜಾದಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ ಪ್ರಸ್ತುತ ಶುಲ್ಕ 2,050 ರೂ ಇದ್ದು, ಹೆಜಮಾಡಿಯಲ್ಲಿ 1,410 ರೂ. ಇತ್ತು. ಟೋಲ್‌ ವಿಲೀನದ ನಂತರ ಹೆಜಮಾಡಿಯಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ 3,460 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಅದೇ ರೀತಿ, ಬಸ್ಸುಗಳು, ಟ್ರಕ್ಗಳು ​​ಮತ್ತು ಇತರ ಭಾರೀ ವಾಹನಗಳು ಕೂಡ ವಿಲೀನದ ನಂತರ ಹೆಜಮಾಡಿಯಲ್ಲಿ ಸುರತ್ಕಲ್ ಪ್ಲಾಜಾದ ಟೋಲ್ ಅನ್ನು ಪಾವತಿಸಬೇಕಾಗುತ್ತದೆ. ಸುರತ್ಕಲ್ ಮತ್ತು ಹೆಜಮಾಡಿಯಲ್ಲಿ ಕ್ರಮವಾಗಿ 50 ಸಿಂಗಲ್ ಟ್ರಿಪ್‌ಗಳಿಗೆ ಮಾಸಿಕ ಪಾಸ್‌ಗೆ 6,940 ರೂ. ಮತ್ತು 4,765 ರೂ. ಪಾವತಿಸುತ್ತಿರುವ ಬಸ್‌ಗಳು ವಿಲೀನದ ನಂತರ ಹೆಜಮಾಡಿಯಲ್ಲಿ 11,705 ರೂ. ಪಾವತಿಸಬೇಕಾಗುತ್ತದೆ.

ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2010 ಮತ್ತು ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2014 ರ ಪ್ರಕಾರ ಟೋಲ್ ಮಾಡಬಹುದಾದ ಉದ್ದದ ಲೆಕ್ಕಾಚಾರವನ್ನು ಮಾಡಲಾಗಿದೆ ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಎಚ್‌.ಎಸ್. ಲಿಂಗೇಗೌಡ ಅವರು ಉಡುಪಿ ಜಿಲ್ಲಾಧಿಕಾರಿಗೆ ಗುರುವಾರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರದ ನಿರಂತರ ಕೋರಿಕೆ, ಸ್ಥಳೀಯ ಸಾರ್ವಜನಿಕ ಹಾಗೂ ವಿಐಪಿ ಉಲ್ಲೇಖಗಳ ಆಧಾರದ ಮೇಲೆ, ಸುರತ್ಕಲ್ ಟೋಲ್ ಪ್ಲಾಜಾವನ್ನು ಪಕ್ಕದ ಹೆಜಮಾಡಿ ಟೋಲ್ ಪ್ಲಾಜಾದೊಂದಿಗೆ ವಿಲೀನಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದೆ. ಅದರಂತೆ, ಸುರತ್ಕಲ್ ಟೋಲ್ ಪ್ಲಾಜಾಗೆ ಬಳಕೆದಾರರ ಶುಲ್ಕವನ್ನು ಈಗ ಹೆಜಮಾಡಿಯಲ್ಲಿ ವಿಧಿಸಲಾಗುತ್ತದೆ. ಟೋಲ್ ಪ್ಲಾಜಾ ಎರಡೂ ಸ್ಟ್ರೆಚ್‌ಗಳಿಗೆ ಟೋಲ್ ಶುಲ್ಕವನ್ನು ಸೇರಿಸುತ್ತದೆ” ಎಂದು ಲಿಂಗೇಗೌಡ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ರಕ್ಷಣೆ ಸೇರಿದಂತೆ ಅಗತ್ಯ ಬೆಂಬಲವನ್ನು ನೀಡುವಂತೆ NHAI ಉಡುಪಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢ ಮನುವಾದಿಗಳಿಗೆ, ಜನಸಾಮಾನ್ಯರ ಹಿತಾಸಕ್ತಿಗಿಂತಲೂ, ಕಾರ್ಪೊರೇಟ್ ಕುಳಗಳ ಹಿತಾಸಕ್ತಿಯೇ ಮುಖ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...