Homeಕರ್ನಾಟಕಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

- Advertisement -
- Advertisement -

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಸುರತ್ಕಲ್ ಟೋಲ್ ಪ್ಲಾಜಾವನ್ನು ಹೆಜಮಾಡಿ ಟೋಲ್ ಗೇಟ್‌‌‌ಗೆ ವಿಲೀನ ಮಾಡಿದ್ದು, ಅಲ್ಲಿ ಸಂಗ್ರಹಿಸುವ ಟೋಲ್‌ ದರಗಳನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಗುರುವಾರ ಪ್ರಕಟಿಸಿದೆ. ಅದರಂತೆ, ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ವಾಹನಗಳು ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುರತ್ಕಲ್ ಪ್ಲಾಜಾದ ಟೋಲ್‌ ಅನ್ನು ಒಟ್ಟು ಸೇರಿಸಿ ಪಾವತಿಸಬೇಕಾಗುತ್ತದೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀನ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸಂಗ್ರಹಿಸಲು (ಸುಲಿಗೆ ನಡೆಸಲು) ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈಗ ಹೆಜಮಾಡಿಯಲ್ಲಿ ಕಾರಿನ ಟೋಲ್ ದರ ಒಂದು ಬದಿಗೆ 40 ರುಪಾಯಿ ಇದ್ದದ್ದು 100 ರೂಪಾಯಿ ಆಗುತ್ತದೆ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ. ಏಳು ವರ್ಷಗಳ ಕಾಲ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸಂಗ್ರಹಿಸಿದ ನೂರಾರು ಕೋಟಿ ರೂಪಾಯಿಗೆ ಬೆಲೆಯೇ ಇಲ್ಲ” ಎಂದು ಅವರು ಹೇಳಿದ್ದಾರೆ.

“ಜನರ ಭಾವನೆ, ಕಷ್ಟ ಸುಖಗಳ ಅರಿವಿಲ್ಲದ ಸಂಸದ, ಶಾಸಕರುಗಳು ಮಾತ್ರ ಹೀಗೆ ನಡೆದುಕೊಳ್ಳಲು ಸಾಧ್ಯ. ಮತ ಹಾಕುವ ಇಲ್ಲಿನ ಜನರಿಗಿಂತ ನವಯುಗ್ ಟೋಲ್ ಕಂಪೆನಿಯ ಹಿತ ಮಾತ್ರ ಇವರಿಗೆ ಮುಖ್ಯವಾಯಿತು. ಜನತೆ ಇದನ್ನು ಒಪ್ಪಬಾರದು. ಅವಿಭಜಿತ ಜಿಲ್ಲೆಯ ಜನ ಒಂದೇ ಧ್ವನಿಯಾಗಿ ಈ ಅತ್ಯಂತ ಕೆಟ್ಟ ನಿರ್ಧಾರವನ್ನು ದೃಢವಾಗಿ ವಿರೋಧಿಸಬೇಕು. ಬಿಜೆಪಿ ಸಂಸದ, ಶಾಸಕರುಗಳಿಗೆ ಆಡಳಿತ ನಡೆಸುವ ಯಾವುದೇ ಅನುಭವ ಇಲ್ಲ ಎಂಬುದು ಈಗ ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತಾಯ್ತು‌” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದೇ ವೇಳೆ ಸುರತ್ಕಲ್‌ ಟೋಲ್ ವಿರೋಧಿ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಶುಕ್ರವಾರ 29 ನೇ ದಿನಕ್ಕೆ ಕಾಲಿಟ್ಟಿದೆ. ಸುರತ್ಕಲ್‌ನಲ್ಲಿ ಟೋಲ್‌ ಸಂಗ್ರಹ ನಿಲ್ಲುವವರೆಗೂ ಮುಂದುವರಿಯಲಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.

ಇದನ್ನೂ ಓದಿ: ‘ಸುರತ್ಕಲ್‌ ಟೋಲ್‌ ರದ್ದು’ | ಮಾಹಿತಿ ನೀಡಿದ ಸಂಸದ ನಳಿನ್ ಕುಮಾರ್‌; ಹಣ ಸಂಗ್ರಹ ನಿಲ್ಲುವವರೆಗೂ ಪ್ರತಿಭಟನೆ ಎಂದ ಹೋರಾಟ ಸಮಿತಿ

ಕಾರು, ಜೀಪ್, ವ್ಯಾನ್ ಇತ್ಯಾದಿ ಲಘು ಮೋಟಾರು ವಾಹನಗಳಿಗೆ (ಎಲ್‌ಎಂವಿ) ಸುರತ್ಕಲ್ ಪ್ಲಾಜಾದಲ್ಲಿ ಸಿಂಗಲ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 60 ರೂ. ಮತ್ತು ಹೆಜಮಾಡಿ ಪ್ಲಾಜಾದಲ್ಲಿ 40 ರೂ. ಇದೆ. ಇದೀಗ ಸುರತ್ಕಲ್ ಗೇಟ್ ವಿಲೀನದ ನಂತರ, ಹೆಜಮಾಡಿಯಲ್ಲಿ ಎಲ್‌ಎಂವಿಗೆ ಟೋಲ್ 100 ರೂ. ಗೆ ಏರಿಕೆಯಾಗಿದೆ.

ಸುರತ್ಕಲ್‌ನಲ್ಲಿ ಎಲ್‌ಎಂವಿ ರಿಟರ್ನ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 90 ರೂ. ಮತ್ತು ಹೆಜಮಾಡಿಯಲ್ಲಿ 65 ರೂ. ಇತ್ತು. ಇದೀಗ ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ LMV ಗೆ ರಿಟರ್ನ್ ಟ್ರಿಪ್ ಶುಲ್ಕ 155 ರೂ.ಗೆ ಏರಿಕೆ ಮಾಡಲಾಗಿದೆ.

ಸುರತ್ಕಲ್ ಪ್ಲಾಜಾದಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ ಪ್ರಸ್ತುತ ಶುಲ್ಕ 2,050 ರೂ ಇದ್ದು, ಹೆಜಮಾಡಿಯಲ್ಲಿ 1,410 ರೂ. ಇತ್ತು. ಟೋಲ್‌ ವಿಲೀನದ ನಂತರ ಹೆಜಮಾಡಿಯಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ 3,460 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಅದೇ ರೀತಿ, ಬಸ್ಸುಗಳು, ಟ್ರಕ್ಗಳು ​​ಮತ್ತು ಇತರ ಭಾರೀ ವಾಹನಗಳು ಕೂಡ ವಿಲೀನದ ನಂತರ ಹೆಜಮಾಡಿಯಲ್ಲಿ ಸುರತ್ಕಲ್ ಪ್ಲಾಜಾದ ಟೋಲ್ ಅನ್ನು ಪಾವತಿಸಬೇಕಾಗುತ್ತದೆ. ಸುರತ್ಕಲ್ ಮತ್ತು ಹೆಜಮಾಡಿಯಲ್ಲಿ ಕ್ರಮವಾಗಿ 50 ಸಿಂಗಲ್ ಟ್ರಿಪ್‌ಗಳಿಗೆ ಮಾಸಿಕ ಪಾಸ್‌ಗೆ 6,940 ರೂ. ಮತ್ತು 4,765 ರೂ. ಪಾವತಿಸುತ್ತಿರುವ ಬಸ್‌ಗಳು ವಿಲೀನದ ನಂತರ ಹೆಜಮಾಡಿಯಲ್ಲಿ 11,705 ರೂ. ಪಾವತಿಸಬೇಕಾಗುತ್ತದೆ.

ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2010 ಮತ್ತು ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2014 ರ ಪ್ರಕಾರ ಟೋಲ್ ಮಾಡಬಹುದಾದ ಉದ್ದದ ಲೆಕ್ಕಾಚಾರವನ್ನು ಮಾಡಲಾಗಿದೆ ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಎಚ್‌.ಎಸ್. ಲಿಂಗೇಗೌಡ ಅವರು ಉಡುಪಿ ಜಿಲ್ಲಾಧಿಕಾರಿಗೆ ಗುರುವಾರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರದ ನಿರಂತರ ಕೋರಿಕೆ, ಸ್ಥಳೀಯ ಸಾರ್ವಜನಿಕ ಹಾಗೂ ವಿಐಪಿ ಉಲ್ಲೇಖಗಳ ಆಧಾರದ ಮೇಲೆ, ಸುರತ್ಕಲ್ ಟೋಲ್ ಪ್ಲಾಜಾವನ್ನು ಪಕ್ಕದ ಹೆಜಮಾಡಿ ಟೋಲ್ ಪ್ಲಾಜಾದೊಂದಿಗೆ ವಿಲೀನಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದೆ. ಅದರಂತೆ, ಸುರತ್ಕಲ್ ಟೋಲ್ ಪ್ಲಾಜಾಗೆ ಬಳಕೆದಾರರ ಶುಲ್ಕವನ್ನು ಈಗ ಹೆಜಮಾಡಿಯಲ್ಲಿ ವಿಧಿಸಲಾಗುತ್ತದೆ. ಟೋಲ್ ಪ್ಲಾಜಾ ಎರಡೂ ಸ್ಟ್ರೆಚ್‌ಗಳಿಗೆ ಟೋಲ್ ಶುಲ್ಕವನ್ನು ಸೇರಿಸುತ್ತದೆ” ಎಂದು ಲಿಂಗೇಗೌಡ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ರಕ್ಷಣೆ ಸೇರಿದಂತೆ ಅಗತ್ಯ ಬೆಂಬಲವನ್ನು ನೀಡುವಂತೆ NHAI ಉಡುಪಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢ ಮನುವಾದಿಗಳಿಗೆ, ಜನಸಾಮಾನ್ಯರ ಹಿತಾಸಕ್ತಿಗಿಂತಲೂ, ಕಾರ್ಪೊರೇಟ್ ಕುಳಗಳ ಹಿತಾಸಕ್ತಿಯೇ ಮುಖ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...