Homeಕರ್ನಾಟಕಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

- Advertisement -
- Advertisement -

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಸುರತ್ಕಲ್ ಟೋಲ್ ಪ್ಲಾಜಾವನ್ನು ಹೆಜಮಾಡಿ ಟೋಲ್ ಗೇಟ್‌‌‌ಗೆ ವಿಲೀನ ಮಾಡಿದ್ದು, ಅಲ್ಲಿ ಸಂಗ್ರಹಿಸುವ ಟೋಲ್‌ ದರಗಳನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಗುರುವಾರ ಪ್ರಕಟಿಸಿದೆ. ಅದರಂತೆ, ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ವಾಹನಗಳು ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುರತ್ಕಲ್ ಪ್ಲಾಜಾದ ಟೋಲ್‌ ಅನ್ನು ಒಟ್ಟು ಸೇರಿಸಿ ಪಾವತಿಸಬೇಕಾಗುತ್ತದೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀನ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸಂಗ್ರಹಿಸಲು (ಸುಲಿಗೆ ನಡೆಸಲು) ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈಗ ಹೆಜಮಾಡಿಯಲ್ಲಿ ಕಾರಿನ ಟೋಲ್ ದರ ಒಂದು ಬದಿಗೆ 40 ರುಪಾಯಿ ಇದ್ದದ್ದು 100 ರೂಪಾಯಿ ಆಗುತ್ತದೆ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ. ಏಳು ವರ್ಷಗಳ ಕಾಲ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸಂಗ್ರಹಿಸಿದ ನೂರಾರು ಕೋಟಿ ರೂಪಾಯಿಗೆ ಬೆಲೆಯೇ ಇಲ್ಲ” ಎಂದು ಅವರು ಹೇಳಿದ್ದಾರೆ.

“ಜನರ ಭಾವನೆ, ಕಷ್ಟ ಸುಖಗಳ ಅರಿವಿಲ್ಲದ ಸಂಸದ, ಶಾಸಕರುಗಳು ಮಾತ್ರ ಹೀಗೆ ನಡೆದುಕೊಳ್ಳಲು ಸಾಧ್ಯ. ಮತ ಹಾಕುವ ಇಲ್ಲಿನ ಜನರಿಗಿಂತ ನವಯುಗ್ ಟೋಲ್ ಕಂಪೆನಿಯ ಹಿತ ಮಾತ್ರ ಇವರಿಗೆ ಮುಖ್ಯವಾಯಿತು. ಜನತೆ ಇದನ್ನು ಒಪ್ಪಬಾರದು. ಅವಿಭಜಿತ ಜಿಲ್ಲೆಯ ಜನ ಒಂದೇ ಧ್ವನಿಯಾಗಿ ಈ ಅತ್ಯಂತ ಕೆಟ್ಟ ನಿರ್ಧಾರವನ್ನು ದೃಢವಾಗಿ ವಿರೋಧಿಸಬೇಕು. ಬಿಜೆಪಿ ಸಂಸದ, ಶಾಸಕರುಗಳಿಗೆ ಆಡಳಿತ ನಡೆಸುವ ಯಾವುದೇ ಅನುಭವ ಇಲ್ಲ ಎಂಬುದು ಈಗ ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತಾಯ್ತು‌” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದೇ ವೇಳೆ ಸುರತ್ಕಲ್‌ ಟೋಲ್ ವಿರೋಧಿ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಶುಕ್ರವಾರ 29 ನೇ ದಿನಕ್ಕೆ ಕಾಲಿಟ್ಟಿದೆ. ಸುರತ್ಕಲ್‌ನಲ್ಲಿ ಟೋಲ್‌ ಸಂಗ್ರಹ ನಿಲ್ಲುವವರೆಗೂ ಮುಂದುವರಿಯಲಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.

ಇದನ್ನೂ ಓದಿ: ‘ಸುರತ್ಕಲ್‌ ಟೋಲ್‌ ರದ್ದು’ | ಮಾಹಿತಿ ನೀಡಿದ ಸಂಸದ ನಳಿನ್ ಕುಮಾರ್‌; ಹಣ ಸಂಗ್ರಹ ನಿಲ್ಲುವವರೆಗೂ ಪ್ರತಿಭಟನೆ ಎಂದ ಹೋರಾಟ ಸಮಿತಿ

ಕಾರು, ಜೀಪ್, ವ್ಯಾನ್ ಇತ್ಯಾದಿ ಲಘು ಮೋಟಾರು ವಾಹನಗಳಿಗೆ (ಎಲ್‌ಎಂವಿ) ಸುರತ್ಕಲ್ ಪ್ಲಾಜಾದಲ್ಲಿ ಸಿಂಗಲ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 60 ರೂ. ಮತ್ತು ಹೆಜಮಾಡಿ ಪ್ಲಾಜಾದಲ್ಲಿ 40 ರೂ. ಇದೆ. ಇದೀಗ ಸುರತ್ಕಲ್ ಗೇಟ್ ವಿಲೀನದ ನಂತರ, ಹೆಜಮಾಡಿಯಲ್ಲಿ ಎಲ್‌ಎಂವಿಗೆ ಟೋಲ್ 100 ರೂ. ಗೆ ಏರಿಕೆಯಾಗಿದೆ.

ಸುರತ್ಕಲ್‌ನಲ್ಲಿ ಎಲ್‌ಎಂವಿ ರಿಟರ್ನ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 90 ರೂ. ಮತ್ತು ಹೆಜಮಾಡಿಯಲ್ಲಿ 65 ರೂ. ಇತ್ತು. ಇದೀಗ ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ LMV ಗೆ ರಿಟರ್ನ್ ಟ್ರಿಪ್ ಶುಲ್ಕ 155 ರೂ.ಗೆ ಏರಿಕೆ ಮಾಡಲಾಗಿದೆ.

ಸುರತ್ಕಲ್ ಪ್ಲಾಜಾದಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ ಪ್ರಸ್ತುತ ಶುಲ್ಕ 2,050 ರೂ ಇದ್ದು, ಹೆಜಮಾಡಿಯಲ್ಲಿ 1,410 ರೂ. ಇತ್ತು. ಟೋಲ್‌ ವಿಲೀನದ ನಂತರ ಹೆಜಮಾಡಿಯಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ 3,460 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಅದೇ ರೀತಿ, ಬಸ್ಸುಗಳು, ಟ್ರಕ್ಗಳು ​​ಮತ್ತು ಇತರ ಭಾರೀ ವಾಹನಗಳು ಕೂಡ ವಿಲೀನದ ನಂತರ ಹೆಜಮಾಡಿಯಲ್ಲಿ ಸುರತ್ಕಲ್ ಪ್ಲಾಜಾದ ಟೋಲ್ ಅನ್ನು ಪಾವತಿಸಬೇಕಾಗುತ್ತದೆ. ಸುರತ್ಕಲ್ ಮತ್ತು ಹೆಜಮಾಡಿಯಲ್ಲಿ ಕ್ರಮವಾಗಿ 50 ಸಿಂಗಲ್ ಟ್ರಿಪ್‌ಗಳಿಗೆ ಮಾಸಿಕ ಪಾಸ್‌ಗೆ 6,940 ರೂ. ಮತ್ತು 4,765 ರೂ. ಪಾವತಿಸುತ್ತಿರುವ ಬಸ್‌ಗಳು ವಿಲೀನದ ನಂತರ ಹೆಜಮಾಡಿಯಲ್ಲಿ 11,705 ರೂ. ಪಾವತಿಸಬೇಕಾಗುತ್ತದೆ.

ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2010 ಮತ್ತು ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2014 ರ ಪ್ರಕಾರ ಟೋಲ್ ಮಾಡಬಹುದಾದ ಉದ್ದದ ಲೆಕ್ಕಾಚಾರವನ್ನು ಮಾಡಲಾಗಿದೆ ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಎಚ್‌.ಎಸ್. ಲಿಂಗೇಗೌಡ ಅವರು ಉಡುಪಿ ಜಿಲ್ಲಾಧಿಕಾರಿಗೆ ಗುರುವಾರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರದ ನಿರಂತರ ಕೋರಿಕೆ, ಸ್ಥಳೀಯ ಸಾರ್ವಜನಿಕ ಹಾಗೂ ವಿಐಪಿ ಉಲ್ಲೇಖಗಳ ಆಧಾರದ ಮೇಲೆ, ಸುರತ್ಕಲ್ ಟೋಲ್ ಪ್ಲಾಜಾವನ್ನು ಪಕ್ಕದ ಹೆಜಮಾಡಿ ಟೋಲ್ ಪ್ಲಾಜಾದೊಂದಿಗೆ ವಿಲೀನಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದೆ. ಅದರಂತೆ, ಸುರತ್ಕಲ್ ಟೋಲ್ ಪ್ಲಾಜಾಗೆ ಬಳಕೆದಾರರ ಶುಲ್ಕವನ್ನು ಈಗ ಹೆಜಮಾಡಿಯಲ್ಲಿ ವಿಧಿಸಲಾಗುತ್ತದೆ. ಟೋಲ್ ಪ್ಲಾಜಾ ಎರಡೂ ಸ್ಟ್ರೆಚ್‌ಗಳಿಗೆ ಟೋಲ್ ಶುಲ್ಕವನ್ನು ಸೇರಿಸುತ್ತದೆ” ಎಂದು ಲಿಂಗೇಗೌಡ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ರಕ್ಷಣೆ ಸೇರಿದಂತೆ ಅಗತ್ಯ ಬೆಂಬಲವನ್ನು ನೀಡುವಂತೆ NHAI ಉಡುಪಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢ ಮನುವಾದಿಗಳಿಗೆ, ಜನಸಾಮಾನ್ಯರ ಹಿತಾಸಕ್ತಿಗಿಂತಲೂ, ಕಾರ್ಪೊರೇಟ್ ಕುಳಗಳ ಹಿತಾಸಕ್ತಿಯೇ ಮುಖ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...