Homeಕರ್ನಾಟಕಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

- Advertisement -
- Advertisement -

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಸುರತ್ಕಲ್ ಟೋಲ್ ಪ್ಲಾಜಾವನ್ನು ಹೆಜಮಾಡಿ ಟೋಲ್ ಗೇಟ್‌‌‌ಗೆ ವಿಲೀನ ಮಾಡಿದ್ದು, ಅಲ್ಲಿ ಸಂಗ್ರಹಿಸುವ ಟೋಲ್‌ ದರಗಳನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಗುರುವಾರ ಪ್ರಕಟಿಸಿದೆ. ಅದರಂತೆ, ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ವಾಹನಗಳು ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುರತ್ಕಲ್ ಪ್ಲಾಜಾದ ಟೋಲ್‌ ಅನ್ನು ಒಟ್ಟು ಸೇರಿಸಿ ಪಾವತಿಸಬೇಕಾಗುತ್ತದೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀನ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸಂಗ್ರಹಿಸಲು (ಸುಲಿಗೆ ನಡೆಸಲು) ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈಗ ಹೆಜಮಾಡಿಯಲ್ಲಿ ಕಾರಿನ ಟೋಲ್ ದರ ಒಂದು ಬದಿಗೆ 40 ರುಪಾಯಿ ಇದ್ದದ್ದು 100 ರೂಪಾಯಿ ಆಗುತ್ತದೆ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ. ಏಳು ವರ್ಷಗಳ ಕಾಲ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸಂಗ್ರಹಿಸಿದ ನೂರಾರು ಕೋಟಿ ರೂಪಾಯಿಗೆ ಬೆಲೆಯೇ ಇಲ್ಲ” ಎಂದು ಅವರು ಹೇಳಿದ್ದಾರೆ.

“ಜನರ ಭಾವನೆ, ಕಷ್ಟ ಸುಖಗಳ ಅರಿವಿಲ್ಲದ ಸಂಸದ, ಶಾಸಕರುಗಳು ಮಾತ್ರ ಹೀಗೆ ನಡೆದುಕೊಳ್ಳಲು ಸಾಧ್ಯ. ಮತ ಹಾಕುವ ಇಲ್ಲಿನ ಜನರಿಗಿಂತ ನವಯುಗ್ ಟೋಲ್ ಕಂಪೆನಿಯ ಹಿತ ಮಾತ್ರ ಇವರಿಗೆ ಮುಖ್ಯವಾಯಿತು. ಜನತೆ ಇದನ್ನು ಒಪ್ಪಬಾರದು. ಅವಿಭಜಿತ ಜಿಲ್ಲೆಯ ಜನ ಒಂದೇ ಧ್ವನಿಯಾಗಿ ಈ ಅತ್ಯಂತ ಕೆಟ್ಟ ನಿರ್ಧಾರವನ್ನು ದೃಢವಾಗಿ ವಿರೋಧಿಸಬೇಕು. ಬಿಜೆಪಿ ಸಂಸದ, ಶಾಸಕರುಗಳಿಗೆ ಆಡಳಿತ ನಡೆಸುವ ಯಾವುದೇ ಅನುಭವ ಇಲ್ಲ ಎಂಬುದು ಈಗ ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತಾಯ್ತು‌” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದೇ ವೇಳೆ ಸುರತ್ಕಲ್‌ ಟೋಲ್ ವಿರೋಧಿ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಶುಕ್ರವಾರ 29 ನೇ ದಿನಕ್ಕೆ ಕಾಲಿಟ್ಟಿದೆ. ಸುರತ್ಕಲ್‌ನಲ್ಲಿ ಟೋಲ್‌ ಸಂಗ್ರಹ ನಿಲ್ಲುವವರೆಗೂ ಮುಂದುವರಿಯಲಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.

ಇದನ್ನೂ ಓದಿ: ‘ಸುರತ್ಕಲ್‌ ಟೋಲ್‌ ರದ್ದು’ | ಮಾಹಿತಿ ನೀಡಿದ ಸಂಸದ ನಳಿನ್ ಕುಮಾರ್‌; ಹಣ ಸಂಗ್ರಹ ನಿಲ್ಲುವವರೆಗೂ ಪ್ರತಿಭಟನೆ ಎಂದ ಹೋರಾಟ ಸಮಿತಿ

ಕಾರು, ಜೀಪ್, ವ್ಯಾನ್ ಇತ್ಯಾದಿ ಲಘು ಮೋಟಾರು ವಾಹನಗಳಿಗೆ (ಎಲ್‌ಎಂವಿ) ಸುರತ್ಕಲ್ ಪ್ಲಾಜಾದಲ್ಲಿ ಸಿಂಗಲ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 60 ರೂ. ಮತ್ತು ಹೆಜಮಾಡಿ ಪ್ಲಾಜಾದಲ್ಲಿ 40 ರೂ. ಇದೆ. ಇದೀಗ ಸುರತ್ಕಲ್ ಗೇಟ್ ವಿಲೀನದ ನಂತರ, ಹೆಜಮಾಡಿಯಲ್ಲಿ ಎಲ್‌ಎಂವಿಗೆ ಟೋಲ್ 100 ರೂ. ಗೆ ಏರಿಕೆಯಾಗಿದೆ.

ಸುರತ್ಕಲ್‌ನಲ್ಲಿ ಎಲ್‌ಎಂವಿ ರಿಟರ್ನ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 90 ರೂ. ಮತ್ತು ಹೆಜಮಾಡಿಯಲ್ಲಿ 65 ರೂ. ಇತ್ತು. ಇದೀಗ ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ LMV ಗೆ ರಿಟರ್ನ್ ಟ್ರಿಪ್ ಶುಲ್ಕ 155 ರೂ.ಗೆ ಏರಿಕೆ ಮಾಡಲಾಗಿದೆ.

ಸುರತ್ಕಲ್ ಪ್ಲಾಜಾದಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ ಪ್ರಸ್ತುತ ಶುಲ್ಕ 2,050 ರೂ ಇದ್ದು, ಹೆಜಮಾಡಿಯಲ್ಲಿ 1,410 ರೂ. ಇತ್ತು. ಟೋಲ್‌ ವಿಲೀನದ ನಂತರ ಹೆಜಮಾಡಿಯಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ 3,460 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಅದೇ ರೀತಿ, ಬಸ್ಸುಗಳು, ಟ್ರಕ್ಗಳು ​​ಮತ್ತು ಇತರ ಭಾರೀ ವಾಹನಗಳು ಕೂಡ ವಿಲೀನದ ನಂತರ ಹೆಜಮಾಡಿಯಲ್ಲಿ ಸುರತ್ಕಲ್ ಪ್ಲಾಜಾದ ಟೋಲ್ ಅನ್ನು ಪಾವತಿಸಬೇಕಾಗುತ್ತದೆ. ಸುರತ್ಕಲ್ ಮತ್ತು ಹೆಜಮಾಡಿಯಲ್ಲಿ ಕ್ರಮವಾಗಿ 50 ಸಿಂಗಲ್ ಟ್ರಿಪ್‌ಗಳಿಗೆ ಮಾಸಿಕ ಪಾಸ್‌ಗೆ 6,940 ರೂ. ಮತ್ತು 4,765 ರೂ. ಪಾವತಿಸುತ್ತಿರುವ ಬಸ್‌ಗಳು ವಿಲೀನದ ನಂತರ ಹೆಜಮಾಡಿಯಲ್ಲಿ 11,705 ರೂ. ಪಾವತಿಸಬೇಕಾಗುತ್ತದೆ.

ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2010 ಮತ್ತು ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2014 ರ ಪ್ರಕಾರ ಟೋಲ್ ಮಾಡಬಹುದಾದ ಉದ್ದದ ಲೆಕ್ಕಾಚಾರವನ್ನು ಮಾಡಲಾಗಿದೆ ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಎಚ್‌.ಎಸ್. ಲಿಂಗೇಗೌಡ ಅವರು ಉಡುಪಿ ಜಿಲ್ಲಾಧಿಕಾರಿಗೆ ಗುರುವಾರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರದ ನಿರಂತರ ಕೋರಿಕೆ, ಸ್ಥಳೀಯ ಸಾರ್ವಜನಿಕ ಹಾಗೂ ವಿಐಪಿ ಉಲ್ಲೇಖಗಳ ಆಧಾರದ ಮೇಲೆ, ಸುರತ್ಕಲ್ ಟೋಲ್ ಪ್ಲಾಜಾವನ್ನು ಪಕ್ಕದ ಹೆಜಮಾಡಿ ಟೋಲ್ ಪ್ಲಾಜಾದೊಂದಿಗೆ ವಿಲೀನಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದೆ. ಅದರಂತೆ, ಸುರತ್ಕಲ್ ಟೋಲ್ ಪ್ಲಾಜಾಗೆ ಬಳಕೆದಾರರ ಶುಲ್ಕವನ್ನು ಈಗ ಹೆಜಮಾಡಿಯಲ್ಲಿ ವಿಧಿಸಲಾಗುತ್ತದೆ. ಟೋಲ್ ಪ್ಲಾಜಾ ಎರಡೂ ಸ್ಟ್ರೆಚ್‌ಗಳಿಗೆ ಟೋಲ್ ಶುಲ್ಕವನ್ನು ಸೇರಿಸುತ್ತದೆ” ಎಂದು ಲಿಂಗೇಗೌಡ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ರಕ್ಷಣೆ ಸೇರಿದಂತೆ ಅಗತ್ಯ ಬೆಂಬಲವನ್ನು ನೀಡುವಂತೆ NHAI ಉಡುಪಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢ ಮನುವಾದಿಗಳಿಗೆ, ಜನಸಾಮಾನ್ಯರ ಹಿತಾಸಕ್ತಿಗಿಂತಲೂ, ಕಾರ್ಪೊರೇಟ್ ಕುಳಗಳ ಹಿತಾಸಕ್ತಿಯೇ ಮುಖ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...