Homeಕರ್ನಾಟಕಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

- Advertisement -
- Advertisement -

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಸುರತ್ಕಲ್ ಟೋಲ್ ಪ್ಲಾಜಾವನ್ನು ಹೆಜಮಾಡಿ ಟೋಲ್ ಗೇಟ್‌‌‌ಗೆ ವಿಲೀನ ಮಾಡಿದ್ದು, ಅಲ್ಲಿ ಸಂಗ್ರಹಿಸುವ ಟೋಲ್‌ ದರಗಳನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಗುರುವಾರ ಪ್ರಕಟಿಸಿದೆ. ಅದರಂತೆ, ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ವಾಹನಗಳು ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುರತ್ಕಲ್ ಪ್ಲಾಜಾದ ಟೋಲ್‌ ಅನ್ನು ಒಟ್ಟು ಸೇರಿಸಿ ಪಾವತಿಸಬೇಕಾಗುತ್ತದೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀನ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸಂಗ್ರಹಿಸಲು (ಸುಲಿಗೆ ನಡೆಸಲು) ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈಗ ಹೆಜಮಾಡಿಯಲ್ಲಿ ಕಾರಿನ ಟೋಲ್ ದರ ಒಂದು ಬದಿಗೆ 40 ರುಪಾಯಿ ಇದ್ದದ್ದು 100 ರೂಪಾಯಿ ಆಗುತ್ತದೆ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ. ಏಳು ವರ್ಷಗಳ ಕಾಲ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸಂಗ್ರಹಿಸಿದ ನೂರಾರು ಕೋಟಿ ರೂಪಾಯಿಗೆ ಬೆಲೆಯೇ ಇಲ್ಲ” ಎಂದು ಅವರು ಹೇಳಿದ್ದಾರೆ.

“ಜನರ ಭಾವನೆ, ಕಷ್ಟ ಸುಖಗಳ ಅರಿವಿಲ್ಲದ ಸಂಸದ, ಶಾಸಕರುಗಳು ಮಾತ್ರ ಹೀಗೆ ನಡೆದುಕೊಳ್ಳಲು ಸಾಧ್ಯ. ಮತ ಹಾಕುವ ಇಲ್ಲಿನ ಜನರಿಗಿಂತ ನವಯುಗ್ ಟೋಲ್ ಕಂಪೆನಿಯ ಹಿತ ಮಾತ್ರ ಇವರಿಗೆ ಮುಖ್ಯವಾಯಿತು. ಜನತೆ ಇದನ್ನು ಒಪ್ಪಬಾರದು. ಅವಿಭಜಿತ ಜಿಲ್ಲೆಯ ಜನ ಒಂದೇ ಧ್ವನಿಯಾಗಿ ಈ ಅತ್ಯಂತ ಕೆಟ್ಟ ನಿರ್ಧಾರವನ್ನು ದೃಢವಾಗಿ ವಿರೋಧಿಸಬೇಕು. ಬಿಜೆಪಿ ಸಂಸದ, ಶಾಸಕರುಗಳಿಗೆ ಆಡಳಿತ ನಡೆಸುವ ಯಾವುದೇ ಅನುಭವ ಇಲ್ಲ ಎಂಬುದು ಈಗ ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತಾಯ್ತು‌” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದೇ ವೇಳೆ ಸುರತ್ಕಲ್‌ ಟೋಲ್ ವಿರೋಧಿ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಶುಕ್ರವಾರ 29 ನೇ ದಿನಕ್ಕೆ ಕಾಲಿಟ್ಟಿದೆ. ಸುರತ್ಕಲ್‌ನಲ್ಲಿ ಟೋಲ್‌ ಸಂಗ್ರಹ ನಿಲ್ಲುವವರೆಗೂ ಮುಂದುವರಿಯಲಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.

ಇದನ್ನೂ ಓದಿ: ‘ಸುರತ್ಕಲ್‌ ಟೋಲ್‌ ರದ್ದು’ | ಮಾಹಿತಿ ನೀಡಿದ ಸಂಸದ ನಳಿನ್ ಕುಮಾರ್‌; ಹಣ ಸಂಗ್ರಹ ನಿಲ್ಲುವವರೆಗೂ ಪ್ರತಿಭಟನೆ ಎಂದ ಹೋರಾಟ ಸಮಿತಿ

ಕಾರು, ಜೀಪ್, ವ್ಯಾನ್ ಇತ್ಯಾದಿ ಲಘು ಮೋಟಾರು ವಾಹನಗಳಿಗೆ (ಎಲ್‌ಎಂವಿ) ಸುರತ್ಕಲ್ ಪ್ಲಾಜಾದಲ್ಲಿ ಸಿಂಗಲ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 60 ರೂ. ಮತ್ತು ಹೆಜಮಾಡಿ ಪ್ಲಾಜಾದಲ್ಲಿ 40 ರೂ. ಇದೆ. ಇದೀಗ ಸುರತ್ಕಲ್ ಗೇಟ್ ವಿಲೀನದ ನಂತರ, ಹೆಜಮಾಡಿಯಲ್ಲಿ ಎಲ್‌ಎಂವಿಗೆ ಟೋಲ್ 100 ರೂ. ಗೆ ಏರಿಕೆಯಾಗಿದೆ.

ಸುರತ್ಕಲ್‌ನಲ್ಲಿ ಎಲ್‌ಎಂವಿ ರಿಟರ್ನ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 90 ರೂ. ಮತ್ತು ಹೆಜಮಾಡಿಯಲ್ಲಿ 65 ರೂ. ಇತ್ತು. ಇದೀಗ ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ LMV ಗೆ ರಿಟರ್ನ್ ಟ್ರಿಪ್ ಶುಲ್ಕ 155 ರೂ.ಗೆ ಏರಿಕೆ ಮಾಡಲಾಗಿದೆ.

ಸುರತ್ಕಲ್ ಪ್ಲಾಜಾದಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ ಪ್ರಸ್ತುತ ಶುಲ್ಕ 2,050 ರೂ ಇದ್ದು, ಹೆಜಮಾಡಿಯಲ್ಲಿ 1,410 ರೂ. ಇತ್ತು. ಟೋಲ್‌ ವಿಲೀನದ ನಂತರ ಹೆಜಮಾಡಿಯಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ 3,460 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಅದೇ ರೀತಿ, ಬಸ್ಸುಗಳು, ಟ್ರಕ್ಗಳು ​​ಮತ್ತು ಇತರ ಭಾರೀ ವಾಹನಗಳು ಕೂಡ ವಿಲೀನದ ನಂತರ ಹೆಜಮಾಡಿಯಲ್ಲಿ ಸುರತ್ಕಲ್ ಪ್ಲಾಜಾದ ಟೋಲ್ ಅನ್ನು ಪಾವತಿಸಬೇಕಾಗುತ್ತದೆ. ಸುರತ್ಕಲ್ ಮತ್ತು ಹೆಜಮಾಡಿಯಲ್ಲಿ ಕ್ರಮವಾಗಿ 50 ಸಿಂಗಲ್ ಟ್ರಿಪ್‌ಗಳಿಗೆ ಮಾಸಿಕ ಪಾಸ್‌ಗೆ 6,940 ರೂ. ಮತ್ತು 4,765 ರೂ. ಪಾವತಿಸುತ್ತಿರುವ ಬಸ್‌ಗಳು ವಿಲೀನದ ನಂತರ ಹೆಜಮಾಡಿಯಲ್ಲಿ 11,705 ರೂ. ಪಾವತಿಸಬೇಕಾಗುತ್ತದೆ.

ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2010 ಮತ್ತು ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2014 ರ ಪ್ರಕಾರ ಟೋಲ್ ಮಾಡಬಹುದಾದ ಉದ್ದದ ಲೆಕ್ಕಾಚಾರವನ್ನು ಮಾಡಲಾಗಿದೆ ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಎಚ್‌.ಎಸ್. ಲಿಂಗೇಗೌಡ ಅವರು ಉಡುಪಿ ಜಿಲ್ಲಾಧಿಕಾರಿಗೆ ಗುರುವಾರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರದ ನಿರಂತರ ಕೋರಿಕೆ, ಸ್ಥಳೀಯ ಸಾರ್ವಜನಿಕ ಹಾಗೂ ವಿಐಪಿ ಉಲ್ಲೇಖಗಳ ಆಧಾರದ ಮೇಲೆ, ಸುರತ್ಕಲ್ ಟೋಲ್ ಪ್ಲಾಜಾವನ್ನು ಪಕ್ಕದ ಹೆಜಮಾಡಿ ಟೋಲ್ ಪ್ಲಾಜಾದೊಂದಿಗೆ ವಿಲೀನಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದೆ. ಅದರಂತೆ, ಸುರತ್ಕಲ್ ಟೋಲ್ ಪ್ಲಾಜಾಗೆ ಬಳಕೆದಾರರ ಶುಲ್ಕವನ್ನು ಈಗ ಹೆಜಮಾಡಿಯಲ್ಲಿ ವಿಧಿಸಲಾಗುತ್ತದೆ. ಟೋಲ್ ಪ್ಲಾಜಾ ಎರಡೂ ಸ್ಟ್ರೆಚ್‌ಗಳಿಗೆ ಟೋಲ್ ಶುಲ್ಕವನ್ನು ಸೇರಿಸುತ್ತದೆ” ಎಂದು ಲಿಂಗೇಗೌಡ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ರಕ್ಷಣೆ ಸೇರಿದಂತೆ ಅಗತ್ಯ ಬೆಂಬಲವನ್ನು ನೀಡುವಂತೆ NHAI ಉಡುಪಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢ ಮನುವಾದಿಗಳಿಗೆ, ಜನಸಾಮಾನ್ಯರ ಹಿತಾಸಕ್ತಿಗಿಂತಲೂ, ಕಾರ್ಪೊರೇಟ್ ಕುಳಗಳ ಹಿತಾಸಕ್ತಿಯೇ ಮುಖ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...