Homeಮುಖಪುಟತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

- Advertisement -
- Advertisement -

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹುದ್ದೆ ಮಾಜಿ ಶಾಸಕ ಬಿ. ಸುರೇಶ್ ಗೌಡ ಅವರಿಗೆ ದಕ್ಕಿದೆ. ರಾಜ್ಯಾಧ್ಯಕ್ಷರರಾದ ನಳೀನ್ ಕುಮಾರ್ ಕಟೀಲ್‌ರವರು ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಅಧ್ಯಕ್ಷ ಹುದ್ದೆ ನೀಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದ ಹೆಬ್ಬಾಕ ರವಿಗೆ ಜಿಲ್ಲಾ ಬಿಜೆಪಿ ಹುದ್ದೆ ಕೈತಪ್ಪಿದ್ದು ಸಂಸದ ಜಿ.ಎಸ್. ಬಸವರಾಜು ಮತ್ತು ಬೆಂಬಲಿಗರಿಗೆ ತೀವ್ರ ಹಿನ್ನಡೆಯಾಡಿದೆ.

ಅವಿಭಜಿತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೆನೆಟ್ ಮತ್ತು ಸಿಂಡಿಕೇಟ್ ಕೆಲಸ ನಿರ್ವಹಿಸಿದ್ದ ಬಿ.ಸುರೇಶ್ ಜೀವರಾಜ್ ಆಳ್ವ ಮೂಲಕ ಬಿಜೆಪಿಗೆ ಬಂದವರು. ಸೆನೆಟ್  ಹಾಗೂ ಸಿಂಡಿಕೇಟ್‌ ಸದಸ್ಯರಾಗಿದ್ದ ವೇಳೆ ಸುರೇಶ್ ಮೇಲೆ ಅಂಕಪಟ್ಟಿ ಹಗರಣದ ಆಪಾದನೆ ಇತ್ತು. ರಾಜಕೀಯ ಪ್ರವೇಶದ ನಂತರ ಆ ಆರೋಪಗಳು ಹಿನ್ನೆಲೆಗೆ ಸರಿದವು.

ಬಿಜೆಪಿ ಸೇರ್ಪಡೆಯಾದ ಮೇಲೆ ಬಿ.ಸುರೇಶ್ ಜೊತೆ ಗೌಡ ಹೆಸರು ಸೇರಿಕೊಂಡಿತು. ಬೆಂಗಳೂರಿನಿಂದ ನೇರ ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಬಂದರು. ದೇವಾಲಯಗಳ ನಿರ್ಮಾಣಕ್ಕೆ ಹಣ ಸುರಿದರು. ಎಲ್ಲಾ ಹಳ್ಳಿ- ಗ್ರಾಮಗಳಿಗೆ ತೆರಳಿ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದರು. ಜನರು ಕೂಡ ಸುರೇಶ್ ಗೌಡ ಹಣ ಸುರಿಯುತ್ತಿರುವುದನ್ನು ನೋಡಿ ತಮ್ಮತಮ್ಮ ಊರುಗಳಿಗೆ ಕರೆಸಿಕೊಂಡರು.

ಹಣ ಎಲ್ಲಿಂದ ಬಂತು?  ಹೇಗೆ ಸಂಪಾದನೆ ಮಾಡಿದರು? ಎಂದು ಯಾರೂ ಪ್ರಶ್ನಿಸಲಿಲ್ಲ. ಕುಣಿಗಲ್ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬಹುತೇಕ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿದರು. ಮುಂದಿನ ಚುನಾವಣೆಗೆ ವೇದಿಕೆ ಸಿದ್ದಮಾಡಿಕೊಂಡರು. ಹಣ ಇರುವಲ್ಲಿ ಜನ ಎಂಬಂತಹ ಪರಿಸ್ಥಿತಿ ನಿರ್ಮಾಣವಾಯಿತು. ಸುರೇಶ್ ಗೌಡ ಅಂದರೆ ಕೊಡುಗೈ ದಾನಿ ಎಂಬಷ್ಟರ ಮಟ್ಟಿಗೆ ಹೆಸರಾದರು.

2003ರಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಸೋಲು ಕಂಡ ಸುರೇಶ್ ಗೌಡ ಮತ್ತೆ ದೇವಾಲಯಗಳಿಗೆ ಹಣ ನೀಡುವುದನ್ನು ಮುಂದುವರಿಸಿದರು. ಕ್ಷೇತ್ರಾದ್ಯಂತ ಸುತ್ತಿದರು. ಪ್ರಚಾರವನ್ನು ಮುಂದುವರಿಸಿದರು; ಅಷ್ಟುಹೊತ್ತಿಗೆ ಕ್ಷೇತ್ರ ಪುನರ್ ವಿಂಗಡಣೆಯಾಗಿ ತುಮಕೂರು ಗ್ರಾಮಾಂತರ ಕ್ಷೇತ್ರ ಹೊಸದಾಗಿ ಅಸ್ತಿತ್ವಕ್ಕೆ ಬಂತು. ಇದು ಸುರೇಶ್ ಗೌಡರ ಗೆಲುವಿಗೆ ಕಾರಣವಾಯಿತು.

2008ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಸುರೇಶ್‌ಗೌಡ ಗೆದ್ದರು. ತುಮಕೂರು ನಗರದಿಂದ ಸೊಗಡು ಶಿವಣ್ಣ ಅಯ್ಕೆಯಾದರು. ತಿಪಟೂರಿನ ಬಿ.ಸಿ.ನಾಗೇಶ್ ಸೋತರು.. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸುರೇಶ್‌ಗೌಡ ಅವರದ್ದೇ ಸದ್ದು. 2013ರ ಚುನಾವಣೆಯಲ್ಲೂ ಸುರೇಶ್ ಗೌಡ ಗೆದ್ದು ಬಂದರು. ರಸ್ತೆಗಳ ಅಭಿವೃದ್ಧಿ ಮಾಡಿದರು. ಜಿದ್ದಿನ ರಾಜಕಾರಣಕ್ಕೂ ನಾಂದಿ ಹಾಡಿದರು.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೌರಿಶಂಕರ್ ವಿರುದ್ದ ಸುರೇಶ್‌ಗೌಡ ಸೋಲು ಅನುಭವಿಸಿದರು. 2008ರಿಂದಲೇ ಆರಂಭವಾದ ಜಿದ್ದಾಜಿದ್ದಿನ ರಾಜಕಾರಣದಲ್ಲಿ ಸುರೇಶ್ ಗೌಡ ಮತ್ತು ಬಿ.ಸಿ.ಗೌರಿಶಂಕರ್ ನಡುವೆ ತೀವ್ರ ಪೈಪೋಟಿ ಶುರವಾಗಿದ್ದು ಇಂದಿಗೂ ನಿಂತಿಲ್ಲ. ಜೆಡಿಎಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಆರೋಪ-ಪ್ರತ್ಯಾರೋಪಗಳು ಮಾತ್ರ ನಿಂತಿಲ್ಲ.

ಇಂಥ ಹೊತ್ತಿನಲ್ಲಿ ಜಿಲ್ಲಾ ಬಿಜೆಪಿಗೆ ಸುರೇಶ್ ಗೌಡರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ದುಸ್ಸಾಹಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರು ತೀರ್ಮಾನ ಮಾಡಿದಂತಿದೆ. ಒಂದು ಕಡೆ ಕಾಂಗ್ರೆಸ್ ನಿಂದ ವಲಸೆ ಬಂದಿರುವ ಸಂಸದ ಜಿ.ಎಸ್. ಬಸವರಾಜು ಅವರ ಬಲ ಕುಸಿಯುವಂತೆ ಮಾಡುವುದು ಮತ್ತು ಜೆಡಿಎಸ್ ಶಾಸಕ ಗೌರಿಶಂಕರ್ ಬೆಳವಣಿಗೆಯನ್ನು ನಿಯಂತ್ರಿಸುವುದು ಸುರೇಶ್‌ಗೌಡ ನೇಮಕದ ಉದ್ದೇಶ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಸಚಿವ ಸೊಗಡು ಶಿವಣ್ಣ ಜೊತೆಗೆ ಗುರುತಿಸಿಕೊಂಡಿದ್ದ ಬಿ.ಸುರೇಶ್‌ಗೌಡ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿರುವುದು ಸಂಸದ ಬಸವರಾಜು ಬೆಂಬಲಿಗರಿಗೆ ನುಂಗಲಾರದ ತುತ್ತಾಗಿದೆ. ಇದು ಒಂದು ರೀತಿಯಲ್ಲಿ ಸೊಗಡು ಶಿವಣ್ಣಗೆ ಗೆಲುವು ತಂದುಕೊಟ್ಟಂತಾಗಿದೆ. ರಾಜ್ಯ ಬಿಜೆಪಿ ಉರುಳಿಸಿರುವ ಈ ದಾಳ ಯಾರನ್ನು ಕಟ್ಟಿಹಾಕಲಿದೆಯೋ ನೋಡಬೇಕು.


ಇದನ್ನೂ ಓದಿ: ಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...