Homeಮುಖಪುಟತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

- Advertisement -
- Advertisement -

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹುದ್ದೆ ಮಾಜಿ ಶಾಸಕ ಬಿ. ಸುರೇಶ್ ಗೌಡ ಅವರಿಗೆ ದಕ್ಕಿದೆ. ರಾಜ್ಯಾಧ್ಯಕ್ಷರರಾದ ನಳೀನ್ ಕುಮಾರ್ ಕಟೀಲ್‌ರವರು ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಅಧ್ಯಕ್ಷ ಹುದ್ದೆ ನೀಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದ ಹೆಬ್ಬಾಕ ರವಿಗೆ ಜಿಲ್ಲಾ ಬಿಜೆಪಿ ಹುದ್ದೆ ಕೈತಪ್ಪಿದ್ದು ಸಂಸದ ಜಿ.ಎಸ್. ಬಸವರಾಜು ಮತ್ತು ಬೆಂಬಲಿಗರಿಗೆ ತೀವ್ರ ಹಿನ್ನಡೆಯಾಡಿದೆ.

ಅವಿಭಜಿತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೆನೆಟ್ ಮತ್ತು ಸಿಂಡಿಕೇಟ್ ಕೆಲಸ ನಿರ್ವಹಿಸಿದ್ದ ಬಿ.ಸುರೇಶ್ ಜೀವರಾಜ್ ಆಳ್ವ ಮೂಲಕ ಬಿಜೆಪಿಗೆ ಬಂದವರು. ಸೆನೆಟ್  ಹಾಗೂ ಸಿಂಡಿಕೇಟ್‌ ಸದಸ್ಯರಾಗಿದ್ದ ವೇಳೆ ಸುರೇಶ್ ಮೇಲೆ ಅಂಕಪಟ್ಟಿ ಹಗರಣದ ಆಪಾದನೆ ಇತ್ತು. ರಾಜಕೀಯ ಪ್ರವೇಶದ ನಂತರ ಆ ಆರೋಪಗಳು ಹಿನ್ನೆಲೆಗೆ ಸರಿದವು.

ಬಿಜೆಪಿ ಸೇರ್ಪಡೆಯಾದ ಮೇಲೆ ಬಿ.ಸುರೇಶ್ ಜೊತೆ ಗೌಡ ಹೆಸರು ಸೇರಿಕೊಂಡಿತು. ಬೆಂಗಳೂರಿನಿಂದ ನೇರ ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಬಂದರು. ದೇವಾಲಯಗಳ ನಿರ್ಮಾಣಕ್ಕೆ ಹಣ ಸುರಿದರು. ಎಲ್ಲಾ ಹಳ್ಳಿ- ಗ್ರಾಮಗಳಿಗೆ ತೆರಳಿ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದರು. ಜನರು ಕೂಡ ಸುರೇಶ್ ಗೌಡ ಹಣ ಸುರಿಯುತ್ತಿರುವುದನ್ನು ನೋಡಿ ತಮ್ಮತಮ್ಮ ಊರುಗಳಿಗೆ ಕರೆಸಿಕೊಂಡರು.

ಹಣ ಎಲ್ಲಿಂದ ಬಂತು?  ಹೇಗೆ ಸಂಪಾದನೆ ಮಾಡಿದರು? ಎಂದು ಯಾರೂ ಪ್ರಶ್ನಿಸಲಿಲ್ಲ. ಕುಣಿಗಲ್ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬಹುತೇಕ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿದರು. ಮುಂದಿನ ಚುನಾವಣೆಗೆ ವೇದಿಕೆ ಸಿದ್ದಮಾಡಿಕೊಂಡರು. ಹಣ ಇರುವಲ್ಲಿ ಜನ ಎಂಬಂತಹ ಪರಿಸ್ಥಿತಿ ನಿರ್ಮಾಣವಾಯಿತು. ಸುರೇಶ್ ಗೌಡ ಅಂದರೆ ಕೊಡುಗೈ ದಾನಿ ಎಂಬಷ್ಟರ ಮಟ್ಟಿಗೆ ಹೆಸರಾದರು.

2003ರಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಸೋಲು ಕಂಡ ಸುರೇಶ್ ಗೌಡ ಮತ್ತೆ ದೇವಾಲಯಗಳಿಗೆ ಹಣ ನೀಡುವುದನ್ನು ಮುಂದುವರಿಸಿದರು. ಕ್ಷೇತ್ರಾದ್ಯಂತ ಸುತ್ತಿದರು. ಪ್ರಚಾರವನ್ನು ಮುಂದುವರಿಸಿದರು; ಅಷ್ಟುಹೊತ್ತಿಗೆ ಕ್ಷೇತ್ರ ಪುನರ್ ವಿಂಗಡಣೆಯಾಗಿ ತುಮಕೂರು ಗ್ರಾಮಾಂತರ ಕ್ಷೇತ್ರ ಹೊಸದಾಗಿ ಅಸ್ತಿತ್ವಕ್ಕೆ ಬಂತು. ಇದು ಸುರೇಶ್ ಗೌಡರ ಗೆಲುವಿಗೆ ಕಾರಣವಾಯಿತು.

2008ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಸುರೇಶ್‌ಗೌಡ ಗೆದ್ದರು. ತುಮಕೂರು ನಗರದಿಂದ ಸೊಗಡು ಶಿವಣ್ಣ ಅಯ್ಕೆಯಾದರು. ತಿಪಟೂರಿನ ಬಿ.ಸಿ.ನಾಗೇಶ್ ಸೋತರು.. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸುರೇಶ್‌ಗೌಡ ಅವರದ್ದೇ ಸದ್ದು. 2013ರ ಚುನಾವಣೆಯಲ್ಲೂ ಸುರೇಶ್ ಗೌಡ ಗೆದ್ದು ಬಂದರು. ರಸ್ತೆಗಳ ಅಭಿವೃದ್ಧಿ ಮಾಡಿದರು. ಜಿದ್ದಿನ ರಾಜಕಾರಣಕ್ಕೂ ನಾಂದಿ ಹಾಡಿದರು.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೌರಿಶಂಕರ್ ವಿರುದ್ದ ಸುರೇಶ್‌ಗೌಡ ಸೋಲು ಅನುಭವಿಸಿದರು. 2008ರಿಂದಲೇ ಆರಂಭವಾದ ಜಿದ್ದಾಜಿದ್ದಿನ ರಾಜಕಾರಣದಲ್ಲಿ ಸುರೇಶ್ ಗೌಡ ಮತ್ತು ಬಿ.ಸಿ.ಗೌರಿಶಂಕರ್ ನಡುವೆ ತೀವ್ರ ಪೈಪೋಟಿ ಶುರವಾಗಿದ್ದು ಇಂದಿಗೂ ನಿಂತಿಲ್ಲ. ಜೆಡಿಎಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಆರೋಪ-ಪ್ರತ್ಯಾರೋಪಗಳು ಮಾತ್ರ ನಿಂತಿಲ್ಲ.

ಇಂಥ ಹೊತ್ತಿನಲ್ಲಿ ಜಿಲ್ಲಾ ಬಿಜೆಪಿಗೆ ಸುರೇಶ್ ಗೌಡರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ದುಸ್ಸಾಹಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರು ತೀರ್ಮಾನ ಮಾಡಿದಂತಿದೆ. ಒಂದು ಕಡೆ ಕಾಂಗ್ರೆಸ್ ನಿಂದ ವಲಸೆ ಬಂದಿರುವ ಸಂಸದ ಜಿ.ಎಸ್. ಬಸವರಾಜು ಅವರ ಬಲ ಕುಸಿಯುವಂತೆ ಮಾಡುವುದು ಮತ್ತು ಜೆಡಿಎಸ್ ಶಾಸಕ ಗೌರಿಶಂಕರ್ ಬೆಳವಣಿಗೆಯನ್ನು ನಿಯಂತ್ರಿಸುವುದು ಸುರೇಶ್‌ಗೌಡ ನೇಮಕದ ಉದ್ದೇಶ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಸಚಿವ ಸೊಗಡು ಶಿವಣ್ಣ ಜೊತೆಗೆ ಗುರುತಿಸಿಕೊಂಡಿದ್ದ ಬಿ.ಸುರೇಶ್‌ಗೌಡ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿರುವುದು ಸಂಸದ ಬಸವರಾಜು ಬೆಂಬಲಿಗರಿಗೆ ನುಂಗಲಾರದ ತುತ್ತಾಗಿದೆ. ಇದು ಒಂದು ರೀತಿಯಲ್ಲಿ ಸೊಗಡು ಶಿವಣ್ಣಗೆ ಗೆಲುವು ತಂದುಕೊಟ್ಟಂತಾಗಿದೆ. ರಾಜ್ಯ ಬಿಜೆಪಿ ಉರುಳಿಸಿರುವ ಈ ದಾಳ ಯಾರನ್ನು ಕಟ್ಟಿಹಾಕಲಿದೆಯೋ ನೋಡಬೇಕು.


ಇದನ್ನೂ ಓದಿ: ಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...