Homeಮುಖಪುಟತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

- Advertisement -
- Advertisement -

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹುದ್ದೆ ಮಾಜಿ ಶಾಸಕ ಬಿ. ಸುರೇಶ್ ಗೌಡ ಅವರಿಗೆ ದಕ್ಕಿದೆ. ರಾಜ್ಯಾಧ್ಯಕ್ಷರರಾದ ನಳೀನ್ ಕುಮಾರ್ ಕಟೀಲ್‌ರವರು ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಅಧ್ಯಕ್ಷ ಹುದ್ದೆ ನೀಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದ ಹೆಬ್ಬಾಕ ರವಿಗೆ ಜಿಲ್ಲಾ ಬಿಜೆಪಿ ಹುದ್ದೆ ಕೈತಪ್ಪಿದ್ದು ಸಂಸದ ಜಿ.ಎಸ್. ಬಸವರಾಜು ಮತ್ತು ಬೆಂಬಲಿಗರಿಗೆ ತೀವ್ರ ಹಿನ್ನಡೆಯಾಡಿದೆ.

ಅವಿಭಜಿತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೆನೆಟ್ ಮತ್ತು ಸಿಂಡಿಕೇಟ್ ಕೆಲಸ ನಿರ್ವಹಿಸಿದ್ದ ಬಿ.ಸುರೇಶ್ ಜೀವರಾಜ್ ಆಳ್ವ ಮೂಲಕ ಬಿಜೆಪಿಗೆ ಬಂದವರು. ಸೆನೆಟ್  ಹಾಗೂ ಸಿಂಡಿಕೇಟ್‌ ಸದಸ್ಯರಾಗಿದ್ದ ವೇಳೆ ಸುರೇಶ್ ಮೇಲೆ ಅಂಕಪಟ್ಟಿ ಹಗರಣದ ಆಪಾದನೆ ಇತ್ತು. ರಾಜಕೀಯ ಪ್ರವೇಶದ ನಂತರ ಆ ಆರೋಪಗಳು ಹಿನ್ನೆಲೆಗೆ ಸರಿದವು.

ಬಿಜೆಪಿ ಸೇರ್ಪಡೆಯಾದ ಮೇಲೆ ಬಿ.ಸುರೇಶ್ ಜೊತೆ ಗೌಡ ಹೆಸರು ಸೇರಿಕೊಂಡಿತು. ಬೆಂಗಳೂರಿನಿಂದ ನೇರ ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಬಂದರು. ದೇವಾಲಯಗಳ ನಿರ್ಮಾಣಕ್ಕೆ ಹಣ ಸುರಿದರು. ಎಲ್ಲಾ ಹಳ್ಳಿ- ಗ್ರಾಮಗಳಿಗೆ ತೆರಳಿ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದರು. ಜನರು ಕೂಡ ಸುರೇಶ್ ಗೌಡ ಹಣ ಸುರಿಯುತ್ತಿರುವುದನ್ನು ನೋಡಿ ತಮ್ಮತಮ್ಮ ಊರುಗಳಿಗೆ ಕರೆಸಿಕೊಂಡರು.

ಹಣ ಎಲ್ಲಿಂದ ಬಂತು?  ಹೇಗೆ ಸಂಪಾದನೆ ಮಾಡಿದರು? ಎಂದು ಯಾರೂ ಪ್ರಶ್ನಿಸಲಿಲ್ಲ. ಕುಣಿಗಲ್ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬಹುತೇಕ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿದರು. ಮುಂದಿನ ಚುನಾವಣೆಗೆ ವೇದಿಕೆ ಸಿದ್ದಮಾಡಿಕೊಂಡರು. ಹಣ ಇರುವಲ್ಲಿ ಜನ ಎಂಬಂತಹ ಪರಿಸ್ಥಿತಿ ನಿರ್ಮಾಣವಾಯಿತು. ಸುರೇಶ್ ಗೌಡ ಅಂದರೆ ಕೊಡುಗೈ ದಾನಿ ಎಂಬಷ್ಟರ ಮಟ್ಟಿಗೆ ಹೆಸರಾದರು.

2003ರಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಸೋಲು ಕಂಡ ಸುರೇಶ್ ಗೌಡ ಮತ್ತೆ ದೇವಾಲಯಗಳಿಗೆ ಹಣ ನೀಡುವುದನ್ನು ಮುಂದುವರಿಸಿದರು. ಕ್ಷೇತ್ರಾದ್ಯಂತ ಸುತ್ತಿದರು. ಪ್ರಚಾರವನ್ನು ಮುಂದುವರಿಸಿದರು; ಅಷ್ಟುಹೊತ್ತಿಗೆ ಕ್ಷೇತ್ರ ಪುನರ್ ವಿಂಗಡಣೆಯಾಗಿ ತುಮಕೂರು ಗ್ರಾಮಾಂತರ ಕ್ಷೇತ್ರ ಹೊಸದಾಗಿ ಅಸ್ತಿತ್ವಕ್ಕೆ ಬಂತು. ಇದು ಸುರೇಶ್ ಗೌಡರ ಗೆಲುವಿಗೆ ಕಾರಣವಾಯಿತು.

2008ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಸುರೇಶ್‌ಗೌಡ ಗೆದ್ದರು. ತುಮಕೂರು ನಗರದಿಂದ ಸೊಗಡು ಶಿವಣ್ಣ ಅಯ್ಕೆಯಾದರು. ತಿಪಟೂರಿನ ಬಿ.ಸಿ.ನಾಗೇಶ್ ಸೋತರು.. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸುರೇಶ್‌ಗೌಡ ಅವರದ್ದೇ ಸದ್ದು. 2013ರ ಚುನಾವಣೆಯಲ್ಲೂ ಸುರೇಶ್ ಗೌಡ ಗೆದ್ದು ಬಂದರು. ರಸ್ತೆಗಳ ಅಭಿವೃದ್ಧಿ ಮಾಡಿದರು. ಜಿದ್ದಿನ ರಾಜಕಾರಣಕ್ಕೂ ನಾಂದಿ ಹಾಡಿದರು.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೌರಿಶಂಕರ್ ವಿರುದ್ದ ಸುರೇಶ್‌ಗೌಡ ಸೋಲು ಅನುಭವಿಸಿದರು. 2008ರಿಂದಲೇ ಆರಂಭವಾದ ಜಿದ್ದಾಜಿದ್ದಿನ ರಾಜಕಾರಣದಲ್ಲಿ ಸುರೇಶ್ ಗೌಡ ಮತ್ತು ಬಿ.ಸಿ.ಗೌರಿಶಂಕರ್ ನಡುವೆ ತೀವ್ರ ಪೈಪೋಟಿ ಶುರವಾಗಿದ್ದು ಇಂದಿಗೂ ನಿಂತಿಲ್ಲ. ಜೆಡಿಎಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಆರೋಪ-ಪ್ರತ್ಯಾರೋಪಗಳು ಮಾತ್ರ ನಿಂತಿಲ್ಲ.

ಇಂಥ ಹೊತ್ತಿನಲ್ಲಿ ಜಿಲ್ಲಾ ಬಿಜೆಪಿಗೆ ಸುರೇಶ್ ಗೌಡರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ದುಸ್ಸಾಹಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರು ತೀರ್ಮಾನ ಮಾಡಿದಂತಿದೆ. ಒಂದು ಕಡೆ ಕಾಂಗ್ರೆಸ್ ನಿಂದ ವಲಸೆ ಬಂದಿರುವ ಸಂಸದ ಜಿ.ಎಸ್. ಬಸವರಾಜು ಅವರ ಬಲ ಕುಸಿಯುವಂತೆ ಮಾಡುವುದು ಮತ್ತು ಜೆಡಿಎಸ್ ಶಾಸಕ ಗೌರಿಶಂಕರ್ ಬೆಳವಣಿಗೆಯನ್ನು ನಿಯಂತ್ರಿಸುವುದು ಸುರೇಶ್‌ಗೌಡ ನೇಮಕದ ಉದ್ದೇಶ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಸಚಿವ ಸೊಗಡು ಶಿವಣ್ಣ ಜೊತೆಗೆ ಗುರುತಿಸಿಕೊಂಡಿದ್ದ ಬಿ.ಸುರೇಶ್‌ಗೌಡ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿರುವುದು ಸಂಸದ ಬಸವರಾಜು ಬೆಂಬಲಿಗರಿಗೆ ನುಂಗಲಾರದ ತುತ್ತಾಗಿದೆ. ಇದು ಒಂದು ರೀತಿಯಲ್ಲಿ ಸೊಗಡು ಶಿವಣ್ಣಗೆ ಗೆಲುವು ತಂದುಕೊಟ್ಟಂತಾಗಿದೆ. ರಾಜ್ಯ ಬಿಜೆಪಿ ಉರುಳಿಸಿರುವ ಈ ದಾಳ ಯಾರನ್ನು ಕಟ್ಟಿಹಾಕಲಿದೆಯೋ ನೋಡಬೇಕು.


ಇದನ್ನೂ ಓದಿ: ಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...