Homeಮುಖಪುಟತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

- Advertisement -
- Advertisement -

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹುದ್ದೆ ಮಾಜಿ ಶಾಸಕ ಬಿ. ಸುರೇಶ್ ಗೌಡ ಅವರಿಗೆ ದಕ್ಕಿದೆ. ರಾಜ್ಯಾಧ್ಯಕ್ಷರರಾದ ನಳೀನ್ ಕುಮಾರ್ ಕಟೀಲ್‌ರವರು ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಅಧ್ಯಕ್ಷ ಹುದ್ದೆ ನೀಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದ ಹೆಬ್ಬಾಕ ರವಿಗೆ ಜಿಲ್ಲಾ ಬಿಜೆಪಿ ಹುದ್ದೆ ಕೈತಪ್ಪಿದ್ದು ಸಂಸದ ಜಿ.ಎಸ್. ಬಸವರಾಜು ಮತ್ತು ಬೆಂಬಲಿಗರಿಗೆ ತೀವ್ರ ಹಿನ್ನಡೆಯಾಡಿದೆ.

ಅವಿಭಜಿತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೆನೆಟ್ ಮತ್ತು ಸಿಂಡಿಕೇಟ್ ಕೆಲಸ ನಿರ್ವಹಿಸಿದ್ದ ಬಿ.ಸುರೇಶ್ ಜೀವರಾಜ್ ಆಳ್ವ ಮೂಲಕ ಬಿಜೆಪಿಗೆ ಬಂದವರು. ಸೆನೆಟ್  ಹಾಗೂ ಸಿಂಡಿಕೇಟ್‌ ಸದಸ್ಯರಾಗಿದ್ದ ವೇಳೆ ಸುರೇಶ್ ಮೇಲೆ ಅಂಕಪಟ್ಟಿ ಹಗರಣದ ಆಪಾದನೆ ಇತ್ತು. ರಾಜಕೀಯ ಪ್ರವೇಶದ ನಂತರ ಆ ಆರೋಪಗಳು ಹಿನ್ನೆಲೆಗೆ ಸರಿದವು.

ಬಿಜೆಪಿ ಸೇರ್ಪಡೆಯಾದ ಮೇಲೆ ಬಿ.ಸುರೇಶ್ ಜೊತೆ ಗೌಡ ಹೆಸರು ಸೇರಿಕೊಂಡಿತು. ಬೆಂಗಳೂರಿನಿಂದ ನೇರ ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಬಂದರು. ದೇವಾಲಯಗಳ ನಿರ್ಮಾಣಕ್ಕೆ ಹಣ ಸುರಿದರು. ಎಲ್ಲಾ ಹಳ್ಳಿ- ಗ್ರಾಮಗಳಿಗೆ ತೆರಳಿ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದರು. ಜನರು ಕೂಡ ಸುರೇಶ್ ಗೌಡ ಹಣ ಸುರಿಯುತ್ತಿರುವುದನ್ನು ನೋಡಿ ತಮ್ಮತಮ್ಮ ಊರುಗಳಿಗೆ ಕರೆಸಿಕೊಂಡರು.

ಹಣ ಎಲ್ಲಿಂದ ಬಂತು?  ಹೇಗೆ ಸಂಪಾದನೆ ಮಾಡಿದರು? ಎಂದು ಯಾರೂ ಪ್ರಶ್ನಿಸಲಿಲ್ಲ. ಕುಣಿಗಲ್ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬಹುತೇಕ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿದರು. ಮುಂದಿನ ಚುನಾವಣೆಗೆ ವೇದಿಕೆ ಸಿದ್ದಮಾಡಿಕೊಂಡರು. ಹಣ ಇರುವಲ್ಲಿ ಜನ ಎಂಬಂತಹ ಪರಿಸ್ಥಿತಿ ನಿರ್ಮಾಣವಾಯಿತು. ಸುರೇಶ್ ಗೌಡ ಅಂದರೆ ಕೊಡುಗೈ ದಾನಿ ಎಂಬಷ್ಟರ ಮಟ್ಟಿಗೆ ಹೆಸರಾದರು.

2003ರಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಸೋಲು ಕಂಡ ಸುರೇಶ್ ಗೌಡ ಮತ್ತೆ ದೇವಾಲಯಗಳಿಗೆ ಹಣ ನೀಡುವುದನ್ನು ಮುಂದುವರಿಸಿದರು. ಕ್ಷೇತ್ರಾದ್ಯಂತ ಸುತ್ತಿದರು. ಪ್ರಚಾರವನ್ನು ಮುಂದುವರಿಸಿದರು; ಅಷ್ಟುಹೊತ್ತಿಗೆ ಕ್ಷೇತ್ರ ಪುನರ್ ವಿಂಗಡಣೆಯಾಗಿ ತುಮಕೂರು ಗ್ರಾಮಾಂತರ ಕ್ಷೇತ್ರ ಹೊಸದಾಗಿ ಅಸ್ತಿತ್ವಕ್ಕೆ ಬಂತು. ಇದು ಸುರೇಶ್ ಗೌಡರ ಗೆಲುವಿಗೆ ಕಾರಣವಾಯಿತು.

2008ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಸುರೇಶ್‌ಗೌಡ ಗೆದ್ದರು. ತುಮಕೂರು ನಗರದಿಂದ ಸೊಗಡು ಶಿವಣ್ಣ ಅಯ್ಕೆಯಾದರು. ತಿಪಟೂರಿನ ಬಿ.ಸಿ.ನಾಗೇಶ್ ಸೋತರು.. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸುರೇಶ್‌ಗೌಡ ಅವರದ್ದೇ ಸದ್ದು. 2013ರ ಚುನಾವಣೆಯಲ್ಲೂ ಸುರೇಶ್ ಗೌಡ ಗೆದ್ದು ಬಂದರು. ರಸ್ತೆಗಳ ಅಭಿವೃದ್ಧಿ ಮಾಡಿದರು. ಜಿದ್ದಿನ ರಾಜಕಾರಣಕ್ಕೂ ನಾಂದಿ ಹಾಡಿದರು.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೌರಿಶಂಕರ್ ವಿರುದ್ದ ಸುರೇಶ್‌ಗೌಡ ಸೋಲು ಅನುಭವಿಸಿದರು. 2008ರಿಂದಲೇ ಆರಂಭವಾದ ಜಿದ್ದಾಜಿದ್ದಿನ ರಾಜಕಾರಣದಲ್ಲಿ ಸುರೇಶ್ ಗೌಡ ಮತ್ತು ಬಿ.ಸಿ.ಗೌರಿಶಂಕರ್ ನಡುವೆ ತೀವ್ರ ಪೈಪೋಟಿ ಶುರವಾಗಿದ್ದು ಇಂದಿಗೂ ನಿಂತಿಲ್ಲ. ಜೆಡಿಎಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಆರೋಪ-ಪ್ರತ್ಯಾರೋಪಗಳು ಮಾತ್ರ ನಿಂತಿಲ್ಲ.

ಇಂಥ ಹೊತ್ತಿನಲ್ಲಿ ಜಿಲ್ಲಾ ಬಿಜೆಪಿಗೆ ಸುರೇಶ್ ಗೌಡರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ದುಸ್ಸಾಹಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರು ತೀರ್ಮಾನ ಮಾಡಿದಂತಿದೆ. ಒಂದು ಕಡೆ ಕಾಂಗ್ರೆಸ್ ನಿಂದ ವಲಸೆ ಬಂದಿರುವ ಸಂಸದ ಜಿ.ಎಸ್. ಬಸವರಾಜು ಅವರ ಬಲ ಕುಸಿಯುವಂತೆ ಮಾಡುವುದು ಮತ್ತು ಜೆಡಿಎಸ್ ಶಾಸಕ ಗೌರಿಶಂಕರ್ ಬೆಳವಣಿಗೆಯನ್ನು ನಿಯಂತ್ರಿಸುವುದು ಸುರೇಶ್‌ಗೌಡ ನೇಮಕದ ಉದ್ದೇಶ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಸಚಿವ ಸೊಗಡು ಶಿವಣ್ಣ ಜೊತೆಗೆ ಗುರುತಿಸಿಕೊಂಡಿದ್ದ ಬಿ.ಸುರೇಶ್‌ಗೌಡ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿರುವುದು ಸಂಸದ ಬಸವರಾಜು ಬೆಂಬಲಿಗರಿಗೆ ನುಂಗಲಾರದ ತುತ್ತಾಗಿದೆ. ಇದು ಒಂದು ರೀತಿಯಲ್ಲಿ ಸೊಗಡು ಶಿವಣ್ಣಗೆ ಗೆಲುವು ತಂದುಕೊಟ್ಟಂತಾಗಿದೆ. ರಾಜ್ಯ ಬಿಜೆಪಿ ಉರುಳಿಸಿರುವ ಈ ದಾಳ ಯಾರನ್ನು ಕಟ್ಟಿಹಾಕಲಿದೆಯೋ ನೋಡಬೇಕು.


ಇದನ್ನೂ ಓದಿ: ಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...