Homeಕರ್ನಾಟಕಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು...... ಏನ್ ಆಂಜನೇಯ ನಿಮ್ಮ rss ಅಥವ BJPಗೆ ಮಾತ್ರ ಸ್ವತ್ತೆ...... ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು- ಟ್ವಿಟ್ಟಿಗರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹುಟ್ಟೂರಿಗೆ ಮತದಾನ ಮಾಡಲು ಹೋಗಿದ್ದಾಗ ನಾಟಿಕೋಳಿ ಸಾರು-ಮುದ್ದೆ ಸವಿಯುವಾಗ ಹನುಮ ಜಯಂತಿಯ ಬಗ್ಗೆ ಮಾತನಾಡಿದ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಸಚಿವರಾದ ಸುರೇಶ್‌ ಕುಮಾರ್ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ರೋಶಗೊಂಡ ಟ್ವಿಟ್ಟಿಗರು ಸುರೇಶ್‌ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮತದಾನ ಮಾಡಿದ ನಂತರ ಸಿದ್ದರಾಮಯ್ಯ ತಮ್ಮ ಸ್ನೇಹಿತನ ಮನೆಯ‌ಲ್ಲಿ ರಾಗಿ ಮುದ್ದೆ, ನಾಟಿ ಕೋಳಿ ಸಾರು ಊಟ ಮಾಡಿದರು. ಈ ಸಂದರ್ಭದಲ್ಲಿ “ಅಣ್ಣಾ ಇಂದು ಹನುಮ ಜಯಂತಿ. ನಾನು ನಾನ್‌ವೆಜ್‌ ತಿನ್ನಲ್ಲ” ಎಂದು ಊಟದ ವೇಳೆ ಸ್ನೇಹಿತರೊಬ್ಬರು ಸಿದ್ದರಾಮಯ್ಯ ಅವರಲ್ಲಿ ಹೇಳಿದರು. ಅದಕ್ಕೆ ಉತ್ತರಿಸಿ, “ಹನುಮ ಹುಟ್ಟಿದ ತಾರೀಖು ನಿನಗೆ ಗೊತ್ತಾ? ಗೊತ್ತಿದ್ದರೆ ಆ ದಿನ ತಿನ್ನಬೇಡ. ಗೊತ್ತಿಲ್ಲ ಅಂದರೆ ಚಿಕನ್‌ ತಿನ್ನು, ಏನೂ ಆಗ‌ಲ್ಲ” ಎಂದು ಗದರಿಸಿದ್ದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ಈ ಹೇಳಿಕೆಯನ್ನು ಉಲ್ಲೇಖಿಸಿ ಸುರೇಶ್‌ ಕುಮಾರ್ ಟ್ವೀಟ್ ಮಾಡಿದ್ದು, “ಅಣ್ಣಾ, ಇವತ್ತು ಹನುಮ ಜಯಂತಿ, ಎಂದು ನೆನಪಿಸಿದ ಗ್ರಾಮಸ್ಥನಿಗೆ, ‘ಯಾವ ಜಯಂತಿ? ಹನುಮ ಹುಟ್ಟಿದ ತಾರೀಕು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನು’ ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಮತ್ತೊಂದು ಟ್ವೀಟ್‌ನಲ್ಲಿ, “ಈ ನೆಲದ ನಂಬಿಕೆಗಳಿಗೆ ಈ ರೀತಿ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ “ಶ್ರೀ ರಾಮನ birth certificate ಎಲ್ಲಿ” ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ” ಎಂದು ಬರೆದುಕೊಂಡಿದ್ದರು.

ಸುರೇಶ್‌ ಕುಮಾರ್ ಅವರ ಈ ಹೇಳಿಕೆಗೆ ಅವರನ್ನೇ ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು ರೀಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷ ಆಚರಣೆ ಮಾಡುವಂತಿಲ್ಲ – ಇಂದು ಮಾರ್ಗಸೂಚಿ ಬಿಡುಗಡೆ

ಸುಭಾಶ್ ಎಂಬುವವರು ಟ್ವೀಟ್ ಮಾಡಿ, “ಹಾಗಾದ್ರೆ ಹನುಮ ಜಯತಿಯಂದು ಮಾಂಸ ತಿನುವಾಗಿಲ್ಲ ಎಂದರೆ ಮಾಂಸದ ಅಂಗಡಿಗಳನ್ನು ಮುಚ್ಚುಬಹುದಿತ್ತು ಅಲ್ಲ ಸರ್… ಅವರಹಾಗೆ ಎಷ್ಟೋ ಜನ ಮನೆಯಲ್ಲಿ ಮಾಂಸದ ಊಟ ಮಾಡಿರುತ್ತಾರೆ…. ಇದು ಪ್ರಜಾಪ್ರಭುತ್ವದ ವ್ಯವಸ್ಥೆ ಪ್ರಕಾರ ಯಾರಿಗೆ ಯಾವ ಊಟ ಇಷ್ಟಾನೋ ಅದನ್ನು ತಿನ್ನಬಹುದು…” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ಪ್ರವೀಣ್ ಹುಲಿಕುಂಟೆ ಎಂಬುವವರು ಟ್ವೀಟ್ ಮಾಡಿ, “ಸುರೇಶ್‌ ಕುಮಾರ್ ಸರ್… ನಿಮ್ಮ ಬಗ್ಗೆ ಅಪಾರವಾದ ಗೌರವ ಇದೆ. ನಾನೂ ಒಬ್ಬ ಅಪ್ಪಟ ಹಿಂದೂ. ಆಸ್ತಿಕ ಪರಂಪರೆಯ ಹುಡುಗ, ಹಳ್ಳಿಯಿಂದ ಬಂದವನು. ಈಗ್ಗೆ ಎರಡು-ಮೂರು ದಶಕಗಳ ಹಿಂದೆ ನಮಗೆ ಹನುಮ ಜಯಂತಿ ಯಾವಾಗ ಎಂಬುದು ತಿಳಿದಿರುತ್ತಿರಲಿಲ್ಲ. ಅವರವರ ಆಹಾರ ಪದ್ದತಿಯಂತೆ ಸಸ್ಯಾಹಾರ ಅಥವಾ ಮಾಂಸಾಹಾರ ತಿನ್ನುತ್ತಿದ್ದರು. ಕೆಲವು ಕಡೆ ದೇವರಿಗೂ ಮಾಂಸಾಹಾರ ಮಾಡುತ್ತಾರೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ದಿಲೀಪ್‌ ಗೌಡ ಎಂಬುವವರು ಟ್ವೀಟ್ ಮಾಡಿ, “ಸಂಕುಚಿತ ಮನೋಭಾವನೆ ಇದು…… ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು…… ಏನ್ ಆಂಜನೇಯ ನಿಮ್ಮ rss ಅಥವ BJP ಮಾತ್ರ ಸ್ವತ್ತೆ…… ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು. ಕೀಳುಮಟ್ಟದ ನಾಯಕರೂ, ಕೀಳುಮಟ್ಟದ ರಾಜಕಾರಣ” ಎಂದು ತರಾಟೆಗೆ ತಗೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಶ್ರೀಧರ್ ಗೌಡ ಟ್ವೀಟ್ ಮಾಡಿ, “ಸ್ವಾಮಿ ಅವರು ಮಾಂಸ ಆದ್ರು ತಿನ್ನಲಿ ಏನಾದ್ರು ಮಾಡ್ಲಿ ನಿಮಗೆ ಯಾಕೆ ಅದು ಅವರವರ ಸಂಪ್ರದಾಯ ಮೊದಲು ನೀವು ಶಿಕ್ಷಕರ ವಿದ್ಯಾರ್ಥಿಗಳ ಬಗ್ಗೆ ಗಮನ ಕೊಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಸಂಗಲಡ್ ಶೆಟ್ಟರ್‌ ಟ್ವೀಟ್‌ ಮಾಡಿ, “ವೈಕುಂಠ ಏಕಾದಶಿ ದಿನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳು ಚಿಕನ್ ಪಾರ್ಟಿ ಮಾಡಿಸಿ, ಹೆಂಡ ಸಾರಾಯಿ ಕುಡಿಸಿ, ಬೆಳಿಗ್ಗೆ ಕೇಸರಿ ಶಾಲ್ ಧರಿಸಿ ನಾವು ಹಿಂದೂಗಳು ಎಂದು ಹೇಳಿದ್ದರಂತೆ” ಎಂದು ಛೇಡಿಸಿದ್ದಾರೆ.

ಹೀಗೆ ಸಿದ್ದರಾಮಯ್ಯನವರಿಗೆ ಟಾಂಗ್ ಕೊಡಲು ಹೋಗಿ ಸುರೇಶ್‌ ಕುಮಾರ್ ಅವರೇ ತಗಲುಹಾಕಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರು ಮಾಂಸ ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆಗಲೂ ಇದೇ ರೀತಿಯ ವಿವಾದ ಎದ್ದಿತ್ತು. ಇದಕ್ಕೆ ಸಿದ್ದರಾಮಯ್ಯನವರು ಸ್ಪಷ್ಟವಾಗಿಯೇ ಉತ್ತರ ನೀಡಿದ್ದರು.

ಇನ್ನು ಸುರೇಶ್‌ ಕುಮಾರ್ ಅವರ ಅಭಿಪ್ರಾಯದ ಪರವಾಗಿಯೂ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ಹೋಗಾರ್ ಎಂಬುವವರು ಟ್ವೀಟ್ ಮಾಡಿ, “ಅದಕ್ಕಾಗಿ ತಾನೆ ಜನ ಅವರನ್ನ ಸೋಲಿಸಿದ್ದು. ಜನರ ನಂಬಿಕೆಗಳನ್ನು ಗೌರವಿಸದ ವ್ಯಕ್ತಿ ಒಳ್ಳೆ ನಾಯಕನಾಗಲಾರ. ಈ ವೈಚಾರಿಕತೆ ಕೇವಲ ಹಿಂದು ಧರ್ಮದ ಆಚರಣೆಗಳಿಗೆ ಸೀಮಿತವಾಗಿರುವುದು ದುರದೃಷ್ಟಕರ” ಎಂದು ಹೇಳಿದ್ದಾರೆ.

 

ಇದನ್ನೂ ಓದಿ: ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...