Homeಕರ್ನಾಟಕಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು...... ಏನ್ ಆಂಜನೇಯ ನಿಮ್ಮ rss ಅಥವ BJPಗೆ ಮಾತ್ರ ಸ್ವತ್ತೆ...... ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು- ಟ್ವಿಟ್ಟಿಗರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹುಟ್ಟೂರಿಗೆ ಮತದಾನ ಮಾಡಲು ಹೋಗಿದ್ದಾಗ ನಾಟಿಕೋಳಿ ಸಾರು-ಮುದ್ದೆ ಸವಿಯುವಾಗ ಹನುಮ ಜಯಂತಿಯ ಬಗ್ಗೆ ಮಾತನಾಡಿದ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಸಚಿವರಾದ ಸುರೇಶ್‌ ಕುಮಾರ್ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ರೋಶಗೊಂಡ ಟ್ವಿಟ್ಟಿಗರು ಸುರೇಶ್‌ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮತದಾನ ಮಾಡಿದ ನಂತರ ಸಿದ್ದರಾಮಯ್ಯ ತಮ್ಮ ಸ್ನೇಹಿತನ ಮನೆಯ‌ಲ್ಲಿ ರಾಗಿ ಮುದ್ದೆ, ನಾಟಿ ಕೋಳಿ ಸಾರು ಊಟ ಮಾಡಿದರು. ಈ ಸಂದರ್ಭದಲ್ಲಿ “ಅಣ್ಣಾ ಇಂದು ಹನುಮ ಜಯಂತಿ. ನಾನು ನಾನ್‌ವೆಜ್‌ ತಿನ್ನಲ್ಲ” ಎಂದು ಊಟದ ವೇಳೆ ಸ್ನೇಹಿತರೊಬ್ಬರು ಸಿದ್ದರಾಮಯ್ಯ ಅವರಲ್ಲಿ ಹೇಳಿದರು. ಅದಕ್ಕೆ ಉತ್ತರಿಸಿ, “ಹನುಮ ಹುಟ್ಟಿದ ತಾರೀಖು ನಿನಗೆ ಗೊತ್ತಾ? ಗೊತ್ತಿದ್ದರೆ ಆ ದಿನ ತಿನ್ನಬೇಡ. ಗೊತ್ತಿಲ್ಲ ಅಂದರೆ ಚಿಕನ್‌ ತಿನ್ನು, ಏನೂ ಆಗ‌ಲ್ಲ” ಎಂದು ಗದರಿಸಿದ್ದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ಈ ಹೇಳಿಕೆಯನ್ನು ಉಲ್ಲೇಖಿಸಿ ಸುರೇಶ್‌ ಕುಮಾರ್ ಟ್ವೀಟ್ ಮಾಡಿದ್ದು, “ಅಣ್ಣಾ, ಇವತ್ತು ಹನುಮ ಜಯಂತಿ, ಎಂದು ನೆನಪಿಸಿದ ಗ್ರಾಮಸ್ಥನಿಗೆ, ‘ಯಾವ ಜಯಂತಿ? ಹನುಮ ಹುಟ್ಟಿದ ತಾರೀಕು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನು’ ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಮತ್ತೊಂದು ಟ್ವೀಟ್‌ನಲ್ಲಿ, “ಈ ನೆಲದ ನಂಬಿಕೆಗಳಿಗೆ ಈ ರೀತಿ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ “ಶ್ರೀ ರಾಮನ birth certificate ಎಲ್ಲಿ” ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ” ಎಂದು ಬರೆದುಕೊಂಡಿದ್ದರು.

ಸುರೇಶ್‌ ಕುಮಾರ್ ಅವರ ಈ ಹೇಳಿಕೆಗೆ ಅವರನ್ನೇ ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು ರೀಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷ ಆಚರಣೆ ಮಾಡುವಂತಿಲ್ಲ – ಇಂದು ಮಾರ್ಗಸೂಚಿ ಬಿಡುಗಡೆ

ಸುಭಾಶ್ ಎಂಬುವವರು ಟ್ವೀಟ್ ಮಾಡಿ, “ಹಾಗಾದ್ರೆ ಹನುಮ ಜಯತಿಯಂದು ಮಾಂಸ ತಿನುವಾಗಿಲ್ಲ ಎಂದರೆ ಮಾಂಸದ ಅಂಗಡಿಗಳನ್ನು ಮುಚ್ಚುಬಹುದಿತ್ತು ಅಲ್ಲ ಸರ್… ಅವರಹಾಗೆ ಎಷ್ಟೋ ಜನ ಮನೆಯಲ್ಲಿ ಮಾಂಸದ ಊಟ ಮಾಡಿರುತ್ತಾರೆ…. ಇದು ಪ್ರಜಾಪ್ರಭುತ್ವದ ವ್ಯವಸ್ಥೆ ಪ್ರಕಾರ ಯಾರಿಗೆ ಯಾವ ಊಟ ಇಷ್ಟಾನೋ ಅದನ್ನು ತಿನ್ನಬಹುದು…” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ಪ್ರವೀಣ್ ಹುಲಿಕುಂಟೆ ಎಂಬುವವರು ಟ್ವೀಟ್ ಮಾಡಿ, “ಸುರೇಶ್‌ ಕುಮಾರ್ ಸರ್… ನಿಮ್ಮ ಬಗ್ಗೆ ಅಪಾರವಾದ ಗೌರವ ಇದೆ. ನಾನೂ ಒಬ್ಬ ಅಪ್ಪಟ ಹಿಂದೂ. ಆಸ್ತಿಕ ಪರಂಪರೆಯ ಹುಡುಗ, ಹಳ್ಳಿಯಿಂದ ಬಂದವನು. ಈಗ್ಗೆ ಎರಡು-ಮೂರು ದಶಕಗಳ ಹಿಂದೆ ನಮಗೆ ಹನುಮ ಜಯಂತಿ ಯಾವಾಗ ಎಂಬುದು ತಿಳಿದಿರುತ್ತಿರಲಿಲ್ಲ. ಅವರವರ ಆಹಾರ ಪದ್ದತಿಯಂತೆ ಸಸ್ಯಾಹಾರ ಅಥವಾ ಮಾಂಸಾಹಾರ ತಿನ್ನುತ್ತಿದ್ದರು. ಕೆಲವು ಕಡೆ ದೇವರಿಗೂ ಮಾಂಸಾಹಾರ ಮಾಡುತ್ತಾರೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ದಿಲೀಪ್‌ ಗೌಡ ಎಂಬುವವರು ಟ್ವೀಟ್ ಮಾಡಿ, “ಸಂಕುಚಿತ ಮನೋಭಾವನೆ ಇದು…… ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು…… ಏನ್ ಆಂಜನೇಯ ನಿಮ್ಮ rss ಅಥವ BJP ಮಾತ್ರ ಸ್ವತ್ತೆ…… ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು. ಕೀಳುಮಟ್ಟದ ನಾಯಕರೂ, ಕೀಳುಮಟ್ಟದ ರಾಜಕಾರಣ” ಎಂದು ತರಾಟೆಗೆ ತಗೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಶ್ರೀಧರ್ ಗೌಡ ಟ್ವೀಟ್ ಮಾಡಿ, “ಸ್ವಾಮಿ ಅವರು ಮಾಂಸ ಆದ್ರು ತಿನ್ನಲಿ ಏನಾದ್ರು ಮಾಡ್ಲಿ ನಿಮಗೆ ಯಾಕೆ ಅದು ಅವರವರ ಸಂಪ್ರದಾಯ ಮೊದಲು ನೀವು ಶಿಕ್ಷಕರ ವಿದ್ಯಾರ್ಥಿಗಳ ಬಗ್ಗೆ ಗಮನ ಕೊಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಸಂಗಲಡ್ ಶೆಟ್ಟರ್‌ ಟ್ವೀಟ್‌ ಮಾಡಿ, “ವೈಕುಂಠ ಏಕಾದಶಿ ದಿನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳು ಚಿಕನ್ ಪಾರ್ಟಿ ಮಾಡಿಸಿ, ಹೆಂಡ ಸಾರಾಯಿ ಕುಡಿಸಿ, ಬೆಳಿಗ್ಗೆ ಕೇಸರಿ ಶಾಲ್ ಧರಿಸಿ ನಾವು ಹಿಂದೂಗಳು ಎಂದು ಹೇಳಿದ್ದರಂತೆ” ಎಂದು ಛೇಡಿಸಿದ್ದಾರೆ.

ಹೀಗೆ ಸಿದ್ದರಾಮಯ್ಯನವರಿಗೆ ಟಾಂಗ್ ಕೊಡಲು ಹೋಗಿ ಸುರೇಶ್‌ ಕುಮಾರ್ ಅವರೇ ತಗಲುಹಾಕಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರು ಮಾಂಸ ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆಗಲೂ ಇದೇ ರೀತಿಯ ವಿವಾದ ಎದ್ದಿತ್ತು. ಇದಕ್ಕೆ ಸಿದ್ದರಾಮಯ್ಯನವರು ಸ್ಪಷ್ಟವಾಗಿಯೇ ಉತ್ತರ ನೀಡಿದ್ದರು.

ಇನ್ನು ಸುರೇಶ್‌ ಕುಮಾರ್ ಅವರ ಅಭಿಪ್ರಾಯದ ಪರವಾಗಿಯೂ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ಹೋಗಾರ್ ಎಂಬುವವರು ಟ್ವೀಟ್ ಮಾಡಿ, “ಅದಕ್ಕಾಗಿ ತಾನೆ ಜನ ಅವರನ್ನ ಸೋಲಿಸಿದ್ದು. ಜನರ ನಂಬಿಕೆಗಳನ್ನು ಗೌರವಿಸದ ವ್ಯಕ್ತಿ ಒಳ್ಳೆ ನಾಯಕನಾಗಲಾರ. ಈ ವೈಚಾರಿಕತೆ ಕೇವಲ ಹಿಂದು ಧರ್ಮದ ಆಚರಣೆಗಳಿಗೆ ಸೀಮಿತವಾಗಿರುವುದು ದುರದೃಷ್ಟಕರ” ಎಂದು ಹೇಳಿದ್ದಾರೆ.

 

ಇದನ್ನೂ ಓದಿ: ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...