Homeಕರ್ನಾಟಕಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು...... ಏನ್ ಆಂಜನೇಯ ನಿಮ್ಮ rss ಅಥವ BJPಗೆ ಮಾತ್ರ ಸ್ವತ್ತೆ...... ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು- ಟ್ವಿಟ್ಟಿಗರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹುಟ್ಟೂರಿಗೆ ಮತದಾನ ಮಾಡಲು ಹೋಗಿದ್ದಾಗ ನಾಟಿಕೋಳಿ ಸಾರು-ಮುದ್ದೆ ಸವಿಯುವಾಗ ಹನುಮ ಜಯಂತಿಯ ಬಗ್ಗೆ ಮಾತನಾಡಿದ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಸಚಿವರಾದ ಸುರೇಶ್‌ ಕುಮಾರ್ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ರೋಶಗೊಂಡ ಟ್ವಿಟ್ಟಿಗರು ಸುರೇಶ್‌ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮತದಾನ ಮಾಡಿದ ನಂತರ ಸಿದ್ದರಾಮಯ್ಯ ತಮ್ಮ ಸ್ನೇಹಿತನ ಮನೆಯ‌ಲ್ಲಿ ರಾಗಿ ಮುದ್ದೆ, ನಾಟಿ ಕೋಳಿ ಸಾರು ಊಟ ಮಾಡಿದರು. ಈ ಸಂದರ್ಭದಲ್ಲಿ “ಅಣ್ಣಾ ಇಂದು ಹನುಮ ಜಯಂತಿ. ನಾನು ನಾನ್‌ವೆಜ್‌ ತಿನ್ನಲ್ಲ” ಎಂದು ಊಟದ ವೇಳೆ ಸ್ನೇಹಿತರೊಬ್ಬರು ಸಿದ್ದರಾಮಯ್ಯ ಅವರಲ್ಲಿ ಹೇಳಿದರು. ಅದಕ್ಕೆ ಉತ್ತರಿಸಿ, “ಹನುಮ ಹುಟ್ಟಿದ ತಾರೀಖು ನಿನಗೆ ಗೊತ್ತಾ? ಗೊತ್ತಿದ್ದರೆ ಆ ದಿನ ತಿನ್ನಬೇಡ. ಗೊತ್ತಿಲ್ಲ ಅಂದರೆ ಚಿಕನ್‌ ತಿನ್ನು, ಏನೂ ಆಗ‌ಲ್ಲ” ಎಂದು ಗದರಿಸಿದ್ದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ಈ ಹೇಳಿಕೆಯನ್ನು ಉಲ್ಲೇಖಿಸಿ ಸುರೇಶ್‌ ಕುಮಾರ್ ಟ್ವೀಟ್ ಮಾಡಿದ್ದು, “ಅಣ್ಣಾ, ಇವತ್ತು ಹನುಮ ಜಯಂತಿ, ಎಂದು ನೆನಪಿಸಿದ ಗ್ರಾಮಸ್ಥನಿಗೆ, ‘ಯಾವ ಜಯಂತಿ? ಹನುಮ ಹುಟ್ಟಿದ ತಾರೀಕು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನು’ ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಮತ್ತೊಂದು ಟ್ವೀಟ್‌ನಲ್ಲಿ, “ಈ ನೆಲದ ನಂಬಿಕೆಗಳಿಗೆ ಈ ರೀತಿ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ “ಶ್ರೀ ರಾಮನ birth certificate ಎಲ್ಲಿ” ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ” ಎಂದು ಬರೆದುಕೊಂಡಿದ್ದರು.

ಸುರೇಶ್‌ ಕುಮಾರ್ ಅವರ ಈ ಹೇಳಿಕೆಗೆ ಅವರನ್ನೇ ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು ರೀಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷ ಆಚರಣೆ ಮಾಡುವಂತಿಲ್ಲ – ಇಂದು ಮಾರ್ಗಸೂಚಿ ಬಿಡುಗಡೆ

ಸುಭಾಶ್ ಎಂಬುವವರು ಟ್ವೀಟ್ ಮಾಡಿ, “ಹಾಗಾದ್ರೆ ಹನುಮ ಜಯತಿಯಂದು ಮಾಂಸ ತಿನುವಾಗಿಲ್ಲ ಎಂದರೆ ಮಾಂಸದ ಅಂಗಡಿಗಳನ್ನು ಮುಚ್ಚುಬಹುದಿತ್ತು ಅಲ್ಲ ಸರ್… ಅವರಹಾಗೆ ಎಷ್ಟೋ ಜನ ಮನೆಯಲ್ಲಿ ಮಾಂಸದ ಊಟ ಮಾಡಿರುತ್ತಾರೆ…. ಇದು ಪ್ರಜಾಪ್ರಭುತ್ವದ ವ್ಯವಸ್ಥೆ ಪ್ರಕಾರ ಯಾರಿಗೆ ಯಾವ ಊಟ ಇಷ್ಟಾನೋ ಅದನ್ನು ತಿನ್ನಬಹುದು…” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ಪ್ರವೀಣ್ ಹುಲಿಕುಂಟೆ ಎಂಬುವವರು ಟ್ವೀಟ್ ಮಾಡಿ, “ಸುರೇಶ್‌ ಕುಮಾರ್ ಸರ್… ನಿಮ್ಮ ಬಗ್ಗೆ ಅಪಾರವಾದ ಗೌರವ ಇದೆ. ನಾನೂ ಒಬ್ಬ ಅಪ್ಪಟ ಹಿಂದೂ. ಆಸ್ತಿಕ ಪರಂಪರೆಯ ಹುಡುಗ, ಹಳ್ಳಿಯಿಂದ ಬಂದವನು. ಈಗ್ಗೆ ಎರಡು-ಮೂರು ದಶಕಗಳ ಹಿಂದೆ ನಮಗೆ ಹನುಮ ಜಯಂತಿ ಯಾವಾಗ ಎಂಬುದು ತಿಳಿದಿರುತ್ತಿರಲಿಲ್ಲ. ಅವರವರ ಆಹಾರ ಪದ್ದತಿಯಂತೆ ಸಸ್ಯಾಹಾರ ಅಥವಾ ಮಾಂಸಾಹಾರ ತಿನ್ನುತ್ತಿದ್ದರು. ಕೆಲವು ಕಡೆ ದೇವರಿಗೂ ಮಾಂಸಾಹಾರ ಮಾಡುತ್ತಾರೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ದಿಲೀಪ್‌ ಗೌಡ ಎಂಬುವವರು ಟ್ವೀಟ್ ಮಾಡಿ, “ಸಂಕುಚಿತ ಮನೋಭಾವನೆ ಇದು…… ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು…… ಏನ್ ಆಂಜನೇಯ ನಿಮ್ಮ rss ಅಥವ BJP ಮಾತ್ರ ಸ್ವತ್ತೆ…… ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು. ಕೀಳುಮಟ್ಟದ ನಾಯಕರೂ, ಕೀಳುಮಟ್ಟದ ರಾಜಕಾರಣ” ಎಂದು ತರಾಟೆಗೆ ತಗೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಶ್ರೀಧರ್ ಗೌಡ ಟ್ವೀಟ್ ಮಾಡಿ, “ಸ್ವಾಮಿ ಅವರು ಮಾಂಸ ಆದ್ರು ತಿನ್ನಲಿ ಏನಾದ್ರು ಮಾಡ್ಲಿ ನಿಮಗೆ ಯಾಕೆ ಅದು ಅವರವರ ಸಂಪ್ರದಾಯ ಮೊದಲು ನೀವು ಶಿಕ್ಷಕರ ವಿದ್ಯಾರ್ಥಿಗಳ ಬಗ್ಗೆ ಗಮನ ಕೊಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಸಂಗಲಡ್ ಶೆಟ್ಟರ್‌ ಟ್ವೀಟ್‌ ಮಾಡಿ, “ವೈಕುಂಠ ಏಕಾದಶಿ ದಿನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳು ಚಿಕನ್ ಪಾರ್ಟಿ ಮಾಡಿಸಿ, ಹೆಂಡ ಸಾರಾಯಿ ಕುಡಿಸಿ, ಬೆಳಿಗ್ಗೆ ಕೇಸರಿ ಶಾಲ್ ಧರಿಸಿ ನಾವು ಹಿಂದೂಗಳು ಎಂದು ಹೇಳಿದ್ದರಂತೆ” ಎಂದು ಛೇಡಿಸಿದ್ದಾರೆ.

ಹೀಗೆ ಸಿದ್ದರಾಮಯ್ಯನವರಿಗೆ ಟಾಂಗ್ ಕೊಡಲು ಹೋಗಿ ಸುರೇಶ್‌ ಕುಮಾರ್ ಅವರೇ ತಗಲುಹಾಕಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರು ಮಾಂಸ ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆಗಲೂ ಇದೇ ರೀತಿಯ ವಿವಾದ ಎದ್ದಿತ್ತು. ಇದಕ್ಕೆ ಸಿದ್ದರಾಮಯ್ಯನವರು ಸ್ಪಷ್ಟವಾಗಿಯೇ ಉತ್ತರ ನೀಡಿದ್ದರು.

ಇನ್ನು ಸುರೇಶ್‌ ಕುಮಾರ್ ಅವರ ಅಭಿಪ್ರಾಯದ ಪರವಾಗಿಯೂ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ಹೋಗಾರ್ ಎಂಬುವವರು ಟ್ವೀಟ್ ಮಾಡಿ, “ಅದಕ್ಕಾಗಿ ತಾನೆ ಜನ ಅವರನ್ನ ಸೋಲಿಸಿದ್ದು. ಜನರ ನಂಬಿಕೆಗಳನ್ನು ಗೌರವಿಸದ ವ್ಯಕ್ತಿ ಒಳ್ಳೆ ನಾಯಕನಾಗಲಾರ. ಈ ವೈಚಾರಿಕತೆ ಕೇವಲ ಹಿಂದು ಧರ್ಮದ ಆಚರಣೆಗಳಿಗೆ ಸೀಮಿತವಾಗಿರುವುದು ದುರದೃಷ್ಟಕರ” ಎಂದು ಹೇಳಿದ್ದಾರೆ.

 

ಇದನ್ನೂ ಓದಿ: ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...