Homeಕರ್ನಾಟಕಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು...... ಏನ್ ಆಂಜನೇಯ ನಿಮ್ಮ rss ಅಥವ BJPಗೆ ಮಾತ್ರ ಸ್ವತ್ತೆ...... ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು- ಟ್ವಿಟ್ಟಿಗರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹುಟ್ಟೂರಿಗೆ ಮತದಾನ ಮಾಡಲು ಹೋಗಿದ್ದಾಗ ನಾಟಿಕೋಳಿ ಸಾರು-ಮುದ್ದೆ ಸವಿಯುವಾಗ ಹನುಮ ಜಯಂತಿಯ ಬಗ್ಗೆ ಮಾತನಾಡಿದ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಸಚಿವರಾದ ಸುರೇಶ್‌ ಕುಮಾರ್ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ರೋಶಗೊಂಡ ಟ್ವಿಟ್ಟಿಗರು ಸುರೇಶ್‌ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮತದಾನ ಮಾಡಿದ ನಂತರ ಸಿದ್ದರಾಮಯ್ಯ ತಮ್ಮ ಸ್ನೇಹಿತನ ಮನೆಯ‌ಲ್ಲಿ ರಾಗಿ ಮುದ್ದೆ, ನಾಟಿ ಕೋಳಿ ಸಾರು ಊಟ ಮಾಡಿದರು. ಈ ಸಂದರ್ಭದಲ್ಲಿ “ಅಣ್ಣಾ ಇಂದು ಹನುಮ ಜಯಂತಿ. ನಾನು ನಾನ್‌ವೆಜ್‌ ತಿನ್ನಲ್ಲ” ಎಂದು ಊಟದ ವೇಳೆ ಸ್ನೇಹಿತರೊಬ್ಬರು ಸಿದ್ದರಾಮಯ್ಯ ಅವರಲ್ಲಿ ಹೇಳಿದರು. ಅದಕ್ಕೆ ಉತ್ತರಿಸಿ, “ಹನುಮ ಹುಟ್ಟಿದ ತಾರೀಖು ನಿನಗೆ ಗೊತ್ತಾ? ಗೊತ್ತಿದ್ದರೆ ಆ ದಿನ ತಿನ್ನಬೇಡ. ಗೊತ್ತಿಲ್ಲ ಅಂದರೆ ಚಿಕನ್‌ ತಿನ್ನು, ಏನೂ ಆಗ‌ಲ್ಲ” ಎಂದು ಗದರಿಸಿದ್ದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ಈ ಹೇಳಿಕೆಯನ್ನು ಉಲ್ಲೇಖಿಸಿ ಸುರೇಶ್‌ ಕುಮಾರ್ ಟ್ವೀಟ್ ಮಾಡಿದ್ದು, “ಅಣ್ಣಾ, ಇವತ್ತು ಹನುಮ ಜಯಂತಿ, ಎಂದು ನೆನಪಿಸಿದ ಗ್ರಾಮಸ್ಥನಿಗೆ, ‘ಯಾವ ಜಯಂತಿ? ಹನುಮ ಹುಟ್ಟಿದ ತಾರೀಕು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನು’ ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಮತ್ತೊಂದು ಟ್ವೀಟ್‌ನಲ್ಲಿ, “ಈ ನೆಲದ ನಂಬಿಕೆಗಳಿಗೆ ಈ ರೀತಿ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ “ಶ್ರೀ ರಾಮನ birth certificate ಎಲ್ಲಿ” ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ” ಎಂದು ಬರೆದುಕೊಂಡಿದ್ದರು.

ಸುರೇಶ್‌ ಕುಮಾರ್ ಅವರ ಈ ಹೇಳಿಕೆಗೆ ಅವರನ್ನೇ ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು ರೀಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷ ಆಚರಣೆ ಮಾಡುವಂತಿಲ್ಲ – ಇಂದು ಮಾರ್ಗಸೂಚಿ ಬಿಡುಗಡೆ

ಸುಭಾಶ್ ಎಂಬುವವರು ಟ್ವೀಟ್ ಮಾಡಿ, “ಹಾಗಾದ್ರೆ ಹನುಮ ಜಯತಿಯಂದು ಮಾಂಸ ತಿನುವಾಗಿಲ್ಲ ಎಂದರೆ ಮಾಂಸದ ಅಂಗಡಿಗಳನ್ನು ಮುಚ್ಚುಬಹುದಿತ್ತು ಅಲ್ಲ ಸರ್… ಅವರಹಾಗೆ ಎಷ್ಟೋ ಜನ ಮನೆಯಲ್ಲಿ ಮಾಂಸದ ಊಟ ಮಾಡಿರುತ್ತಾರೆ…. ಇದು ಪ್ರಜಾಪ್ರಭುತ್ವದ ವ್ಯವಸ್ಥೆ ಪ್ರಕಾರ ಯಾರಿಗೆ ಯಾವ ಊಟ ಇಷ್ಟಾನೋ ಅದನ್ನು ತಿನ್ನಬಹುದು…” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ಪ್ರವೀಣ್ ಹುಲಿಕುಂಟೆ ಎಂಬುವವರು ಟ್ವೀಟ್ ಮಾಡಿ, “ಸುರೇಶ್‌ ಕುಮಾರ್ ಸರ್… ನಿಮ್ಮ ಬಗ್ಗೆ ಅಪಾರವಾದ ಗೌರವ ಇದೆ. ನಾನೂ ಒಬ್ಬ ಅಪ್ಪಟ ಹಿಂದೂ. ಆಸ್ತಿಕ ಪರಂಪರೆಯ ಹುಡುಗ, ಹಳ್ಳಿಯಿಂದ ಬಂದವನು. ಈಗ್ಗೆ ಎರಡು-ಮೂರು ದಶಕಗಳ ಹಿಂದೆ ನಮಗೆ ಹನುಮ ಜಯಂತಿ ಯಾವಾಗ ಎಂಬುದು ತಿಳಿದಿರುತ್ತಿರಲಿಲ್ಲ. ಅವರವರ ಆಹಾರ ಪದ್ದತಿಯಂತೆ ಸಸ್ಯಾಹಾರ ಅಥವಾ ಮಾಂಸಾಹಾರ ತಿನ್ನುತ್ತಿದ್ದರು. ಕೆಲವು ಕಡೆ ದೇವರಿಗೂ ಮಾಂಸಾಹಾರ ಮಾಡುತ್ತಾರೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ದಿಲೀಪ್‌ ಗೌಡ ಎಂಬುವವರು ಟ್ವೀಟ್ ಮಾಡಿ, “ಸಂಕುಚಿತ ಮನೋಭಾವನೆ ಇದು…… ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು…… ಏನ್ ಆಂಜನೇಯ ನಿಮ್ಮ rss ಅಥವ BJP ಮಾತ್ರ ಸ್ವತ್ತೆ…… ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು. ಕೀಳುಮಟ್ಟದ ನಾಯಕರೂ, ಕೀಳುಮಟ್ಟದ ರಾಜಕಾರಣ” ಎಂದು ತರಾಟೆಗೆ ತಗೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಶ್ರೀಧರ್ ಗೌಡ ಟ್ವೀಟ್ ಮಾಡಿ, “ಸ್ವಾಮಿ ಅವರು ಮಾಂಸ ಆದ್ರು ತಿನ್ನಲಿ ಏನಾದ್ರು ಮಾಡ್ಲಿ ನಿಮಗೆ ಯಾಕೆ ಅದು ಅವರವರ ಸಂಪ್ರದಾಯ ಮೊದಲು ನೀವು ಶಿಕ್ಷಕರ ವಿದ್ಯಾರ್ಥಿಗಳ ಬಗ್ಗೆ ಗಮನ ಕೊಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಸಂಗಲಡ್ ಶೆಟ್ಟರ್‌ ಟ್ವೀಟ್‌ ಮಾಡಿ, “ವೈಕುಂಠ ಏಕಾದಶಿ ದಿನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳು ಚಿಕನ್ ಪಾರ್ಟಿ ಮಾಡಿಸಿ, ಹೆಂಡ ಸಾರಾಯಿ ಕುಡಿಸಿ, ಬೆಳಿಗ್ಗೆ ಕೇಸರಿ ಶಾಲ್ ಧರಿಸಿ ನಾವು ಹಿಂದೂಗಳು ಎಂದು ಹೇಳಿದ್ದರಂತೆ” ಎಂದು ಛೇಡಿಸಿದ್ದಾರೆ.

ಹೀಗೆ ಸಿದ್ದರಾಮಯ್ಯನವರಿಗೆ ಟಾಂಗ್ ಕೊಡಲು ಹೋಗಿ ಸುರೇಶ್‌ ಕುಮಾರ್ ಅವರೇ ತಗಲುಹಾಕಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರು ಮಾಂಸ ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆಗಲೂ ಇದೇ ರೀತಿಯ ವಿವಾದ ಎದ್ದಿತ್ತು. ಇದಕ್ಕೆ ಸಿದ್ದರಾಮಯ್ಯನವರು ಸ್ಪಷ್ಟವಾಗಿಯೇ ಉತ್ತರ ನೀಡಿದ್ದರು.

ಇನ್ನು ಸುರೇಶ್‌ ಕುಮಾರ್ ಅವರ ಅಭಿಪ್ರಾಯದ ಪರವಾಗಿಯೂ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ಹೋಗಾರ್ ಎಂಬುವವರು ಟ್ವೀಟ್ ಮಾಡಿ, “ಅದಕ್ಕಾಗಿ ತಾನೆ ಜನ ಅವರನ್ನ ಸೋಲಿಸಿದ್ದು. ಜನರ ನಂಬಿಕೆಗಳನ್ನು ಗೌರವಿಸದ ವ್ಯಕ್ತಿ ಒಳ್ಳೆ ನಾಯಕನಾಗಲಾರ. ಈ ವೈಚಾರಿಕತೆ ಕೇವಲ ಹಿಂದು ಧರ್ಮದ ಆಚರಣೆಗಳಿಗೆ ಸೀಮಿತವಾಗಿರುವುದು ದುರದೃಷ್ಟಕರ” ಎಂದು ಹೇಳಿದ್ದಾರೆ.

 

ಇದನ್ನೂ ಓದಿ: ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...