Homeಮುಖಪುಟದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ನಾನು "ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ" ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ನಾಯಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಕುರಿತು ಸಚಿವ ಸುರೇಶ್‌ ಕುಮಾರ್‌ರವರು ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಅದನ್ನು ವಿರೋಧಿಸಿ ದೇವನೂರು ಮಹಾದೇವರು ಬಹಿರಂತ ಪತ್ರವನ್ನು ಬರೆದಿದ್ದರು. ಅದಕ್ಕೆ ಸುರೇಶ್‌ ಕುಮಾರ್‌ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಚಿಂತಕ-ಸಾಹಿತಿ ಶ್ರೀ ದೇವನೂರು ಮಹಾದೇವ ರು ನನಗೆ ಬರೆದ ಪತ್ರಕ್ಕೆ ನನ್ನ ಪ್ರತಿಕ್ರಿಯೆ.

ಹಿರಿಯರಾದ ಮಾನ್ಯ ದೇವನೂರು ಮಹಾದೇವ ರವರೇ,

ಈ “ನಿಮ್ಮಸುರೇಶ್ ನನ್ನು “ನಮ್ಮ ಸುರೇಶ್” ಎಂದು‌ ಪರಿಗಣಿಸಿ ನನಗೆ ಪತ್ರ ಬರೆದಿರುವುದಕ್ಕಾಗಿ ನನ್ನ ಧನ್ಯವಾದಗಳು.

ನಿಮ್ಮ ಪತ್ರವನ್ನು ನಾಲ್ಕೈದು ಬಾರಿ ವಿವರವಾಗಿ ಓದಿದೆ. ನೀವು ವ್ಯಕ್ತ‌‌ಪಡಿಸಿರುವ ಅಭಿಪ್ರಾಯಗಳ‌ ಪೈಕಿ ಕೆಲವದರ ಬಗ್ಗೆ ನನ್ನ ಸಹಮತವಿಲ್ಲದಿದ್ದರೂ ನಿಮ್ಮ ಭಾವನೆಯನ್ನು ನಾನು ಪೂರ್ಣ ಗೌರವಿಸುತ್ತೇನೆ.

ಶ್ರೀ‌ ಹೆಚ್.ಎಸ್.ದೊರೆಸ್ವಾಮಿಯವರನ್ನು ನಾನು ಅನೇಕ‌ ದಶಕಗಳಿಂದ‌ ನೋಡಿಕೊಂಡು ಬಂದಿದ್ದೇನೆ, ಬೆಳೆದಿದ್ದೇನೆ. ಅವರ ಹಿರಿತನ, ಸಾಮಾಜಿಕ ಕಾಳಜಿಯ ಕುರಿತು ನನಗೆ ಗೌರವವಿದೆ. ಅವರೂ ಸಹ ನನ್ನ ಬಗ್ಗೆ ಅನೇಕ ಬಾರಿ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅವರೊಡನೆ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳೂ ನನಗೆ ಸಿಕ್ಕಿವೆ.

#ಆದರೆ….

ಅಂತಹ ಹಿರಿಯ ಸ್ಥಾನದ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನು‌ ವ್ಯಕ್ತಪಡಿಸುವಾಗ ಉಪಯೋಗಿಸುವ ಪದಗಳು ಬಹುಮುಖ್ಯವಾಗುತ್ತವೆ. ಸೈದ್ಧಾಂತಿಕವಾಗಿ ತಾವು ವಿರೋಧಿಸುವರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತ‌ಪಡಿಸಲು ಹಿರಿಯರಾದ ದೊರೆಸ್ವಾಮಿಯವರಿಗೆ ಪೂರ್ಣ ಸ್ವಾತಂತ್ರ್ಯವಿದೆ. ಆದರೆ ಅದನ್ನು ವ್ಯಕ್ತಪಡಿಸುವ ಪರಿಭಾಷೆಯ ಕುರಿತು ಸ್ವಲ್ಪ ಅವರು ಗಮನ ಹರಿಸಬೇಕಿತ್ತು.

“ಆಡಬಾರದ್ದನ್ನು ಆಡಿದರೆ ಕೇಳಬಾರದ್ದನ್ನು ಕೇಳಬೇಕಾಗುತ್ತದೆ‌” ಎಂದು ನಾನು ಹೇಳಿರುವುದು ಇಂದಿನ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಸಂಬೋಧಿಸಿ ಹೇಳಿರುವ ಮಾತು ಎಂದು ತಮಗೆ ಅನಿಸುತ್ತಿಲ್ಲವೇ? ರಾಜಕೀಯ, ಸಾಮಾಜಿಕ, ಧಾರ್ಮಿಕ… ಈ ಎಲ್ಲ ವಲಯಗಳಲ್ಲಿಯೂ‌ ಹೆಚ್ಚಾಗಿ ಆಡಬಾರದ‌ ಮಾತುಗಳು, ಅದಕ್ಕೆ ಪ್ರತಿಕ್ರಿಯೆಯಾಗಿ ಕೇಳಬಾರದ ಮಾತುಗಳೇ ಬರುತ್ತಿವೆ. ಮುಂಚೆಯಿಂದ ಈ ಸಮಾಜವು – ವಾದ, ಪ್ರತಿವಾದಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.
(Thesis ಮತ್ತು‌ Anti thesis ಸಂಘರ್ಷದಿಂದ synthesis ಹುಟ್ಟುತ್ತದೆ ಎಂಬುದೂ ಒಂದು ವಾದ.).

ಆದರೆ, ವಾದ ಪ್ರತಿಸಲ ವಿವಾದಕ್ಕೇ ಆಸ್ಪದ ಕೊಡಬಾರದು. ದುರದೃಷ್ಟವಶಾತ್ ವಾದವನ್ನು ಮಾಡುವಾಗ, ಬಹಳ ಗಟ್ಟಿಯಾಗಿ ತಮ್ಮ‌ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ಬಳಕೆಯಾಗುತ್ತಿರುವ ರೀತಿಯಲ್ಲಿಯೂ ಇಂದು‌ ಕೆಟ್ಟ ಮೇಲ್ಪಂಕ್ತಿಯನ್ನು ನಾವೆಲ್ಲಾ ಕಾಣುತ್ತಿದ್ದೇವೆ. ಅತ್ಯಂತ ಅಗತ್ಯವಿರುವ ಉತ್ತಮ ಮೇಲ್ಪಂಕ್ತಿ ಬಹಳ ಅಪರೂಪವಾಗುತ್ತಿದೆ. ವಿರೋಧದ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರೂ‌ ಅದನ್ನು ಕೇಳಿದ ವಿರೋಧಿಗಳು‌ ಸಹಾ ಅಹುದಹುದೆನ್ನಬೇಕು.

ನರೇಂದ್ರ ಮೋದಿಯವರ ಕುರಿತು, ಸಾವರ್ಕರ್ ಕುರಿತು ನಿಮಗೆ ನಿಮ್ಮದೇ ಆದ ಅಭಿಪ್ರಾಯ ‌ಇರುವುದು‌ ಎಷ್ಟು‌ ಸಹಜವೋ ಹಾಗೆಯೇ‌ ನನಗೂ ನನ್ನದೇ ಆದ ಅಭಿಪ್ರಾಯ ಇರುವುದೂ ಸಹಜ‌. ನಾನು ಗೌರವಿಸುವ ಸಾವರ್ಕರ್ ಕುರಿತು, ನನ್ನ ನಾಯಕರಾದ ಮೋದಿಯವರ ಕುರಿತು ಯಾರಾದರೂ ಏನಾದರೂ ನನಗೆ ಸರಿಯಲ್ಲದ್ದನ್ನು ಹೇಳಿದರೆ‌ ಪ್ರತಿಕ್ರಿಯಿಸಬೇಕಾದ್ದು ನನ್ನ ಧರ್ಮ. ಹಾಗೆ ಪ್ರತಿಕ್ರಿಯಿಸುವಾಗ ನನ್ನ ಮಾತುಗಳ ಮೇಲೆ ನಿಯಂತ್ರಣ ವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತ ಪಡಿಸುವಾಗಲೂ ಇರಬೇಕಲ್ಲವೇ?

ಸಾಮಾಜಿಕ ಜಾಲತಾಣಗಳಲ್ಲಿ ಬಳಸುವ ಮಾತುಗಳಿಗೆ ಲಂಗುಲಗಾಮೇ ಇರದ ಈ ಕಾಲದಲ್ಲಿ ಪ್ರಮುಖರು ಉಪಯೋಗಿಸುವ ಪದಗಳು ಇನ್ನಷ್ಟು ಸ್ವೇಚ್ಛಾಚಾರಕ್ಕೆ ಇಂಬು ನೀಡಬಾರದು.‌

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಭಾಪ್ರಜ್ಞೆ, ಸಂದರ್ಭಪ್ರಜ್ಞೆ ಗಳಿಗೆ ಮಹತ್ವವಿರಬೇಕು.

ಒಟ್ಟಿನಲ್ಲಿ, ಇಂದಿನ‌ ಸಾರ್ವಜನಿಕ‌‌ ಜೀವನದಲ್ಲಿ ಕೇಳಿಬರುತ್ತಿರುವ ಪದಪುಂಜಗಳು ಯಾರಿಗೂ ಸಮಾಧಾನ ತರುತ್ತಿಲ್ಲ ಮತ್ತು ಸಮಾಜಕ್ಕೆ ಒಳಿತನ್ನೂ ಮಾಡುತ್ತಿಲ್ಲ.

ನಾನು “ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ” ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

ನನಗಾಗಿ ಮಾರ್ಗದರ್ಶಕ‌ ಮಾತುಗಳನ್ನು ಆಡಿರುವ ತಮಗೆ ಧನ್ಯವಾದಗಳು.

ವಿಶ್ವಾಸದಿಂದ

ಎಸ್.ಸುರೇಶ್ ಕುಮಾರ್.


ಇದನ್ನೂ ಓದಿ: ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...