Homeಮುಖಪುಟದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ನಾನು "ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ" ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ನಾಯಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಕುರಿತು ಸಚಿವ ಸುರೇಶ್‌ ಕುಮಾರ್‌ರವರು ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಅದನ್ನು ವಿರೋಧಿಸಿ ದೇವನೂರು ಮಹಾದೇವರು ಬಹಿರಂತ ಪತ್ರವನ್ನು ಬರೆದಿದ್ದರು. ಅದಕ್ಕೆ ಸುರೇಶ್‌ ಕುಮಾರ್‌ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಚಿಂತಕ-ಸಾಹಿತಿ ಶ್ರೀ ದೇವನೂರು ಮಹಾದೇವ ರು ನನಗೆ ಬರೆದ ಪತ್ರಕ್ಕೆ ನನ್ನ ಪ್ರತಿಕ್ರಿಯೆ.

ಹಿರಿಯರಾದ ಮಾನ್ಯ ದೇವನೂರು ಮಹಾದೇವ ರವರೇ,

ಈ “ನಿಮ್ಮಸುರೇಶ್ ನನ್ನು “ನಮ್ಮ ಸುರೇಶ್” ಎಂದು‌ ಪರಿಗಣಿಸಿ ನನಗೆ ಪತ್ರ ಬರೆದಿರುವುದಕ್ಕಾಗಿ ನನ್ನ ಧನ್ಯವಾದಗಳು.

ನಿಮ್ಮ ಪತ್ರವನ್ನು ನಾಲ್ಕೈದು ಬಾರಿ ವಿವರವಾಗಿ ಓದಿದೆ. ನೀವು ವ್ಯಕ್ತ‌‌ಪಡಿಸಿರುವ ಅಭಿಪ್ರಾಯಗಳ‌ ಪೈಕಿ ಕೆಲವದರ ಬಗ್ಗೆ ನನ್ನ ಸಹಮತವಿಲ್ಲದಿದ್ದರೂ ನಿಮ್ಮ ಭಾವನೆಯನ್ನು ನಾನು ಪೂರ್ಣ ಗೌರವಿಸುತ್ತೇನೆ.

ಶ್ರೀ‌ ಹೆಚ್.ಎಸ್.ದೊರೆಸ್ವಾಮಿಯವರನ್ನು ನಾನು ಅನೇಕ‌ ದಶಕಗಳಿಂದ‌ ನೋಡಿಕೊಂಡು ಬಂದಿದ್ದೇನೆ, ಬೆಳೆದಿದ್ದೇನೆ. ಅವರ ಹಿರಿತನ, ಸಾಮಾಜಿಕ ಕಾಳಜಿಯ ಕುರಿತು ನನಗೆ ಗೌರವವಿದೆ. ಅವರೂ ಸಹ ನನ್ನ ಬಗ್ಗೆ ಅನೇಕ ಬಾರಿ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅವರೊಡನೆ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳೂ ನನಗೆ ಸಿಕ್ಕಿವೆ.

#ಆದರೆ….

ಅಂತಹ ಹಿರಿಯ ಸ್ಥಾನದ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನು‌ ವ್ಯಕ್ತಪಡಿಸುವಾಗ ಉಪಯೋಗಿಸುವ ಪದಗಳು ಬಹುಮುಖ್ಯವಾಗುತ್ತವೆ. ಸೈದ್ಧಾಂತಿಕವಾಗಿ ತಾವು ವಿರೋಧಿಸುವರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತ‌ಪಡಿಸಲು ಹಿರಿಯರಾದ ದೊರೆಸ್ವಾಮಿಯವರಿಗೆ ಪೂರ್ಣ ಸ್ವಾತಂತ್ರ್ಯವಿದೆ. ಆದರೆ ಅದನ್ನು ವ್ಯಕ್ತಪಡಿಸುವ ಪರಿಭಾಷೆಯ ಕುರಿತು ಸ್ವಲ್ಪ ಅವರು ಗಮನ ಹರಿಸಬೇಕಿತ್ತು.

“ಆಡಬಾರದ್ದನ್ನು ಆಡಿದರೆ ಕೇಳಬಾರದ್ದನ್ನು ಕೇಳಬೇಕಾಗುತ್ತದೆ‌” ಎಂದು ನಾನು ಹೇಳಿರುವುದು ಇಂದಿನ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಸಂಬೋಧಿಸಿ ಹೇಳಿರುವ ಮಾತು ಎಂದು ತಮಗೆ ಅನಿಸುತ್ತಿಲ್ಲವೇ? ರಾಜಕೀಯ, ಸಾಮಾಜಿಕ, ಧಾರ್ಮಿಕ… ಈ ಎಲ್ಲ ವಲಯಗಳಲ್ಲಿಯೂ‌ ಹೆಚ್ಚಾಗಿ ಆಡಬಾರದ‌ ಮಾತುಗಳು, ಅದಕ್ಕೆ ಪ್ರತಿಕ್ರಿಯೆಯಾಗಿ ಕೇಳಬಾರದ ಮಾತುಗಳೇ ಬರುತ್ತಿವೆ. ಮುಂಚೆಯಿಂದ ಈ ಸಮಾಜವು – ವಾದ, ಪ್ರತಿವಾದಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.
(Thesis ಮತ್ತು‌ Anti thesis ಸಂಘರ್ಷದಿಂದ synthesis ಹುಟ್ಟುತ್ತದೆ ಎಂಬುದೂ ಒಂದು ವಾದ.).

ಆದರೆ, ವಾದ ಪ್ರತಿಸಲ ವಿವಾದಕ್ಕೇ ಆಸ್ಪದ ಕೊಡಬಾರದು. ದುರದೃಷ್ಟವಶಾತ್ ವಾದವನ್ನು ಮಾಡುವಾಗ, ಬಹಳ ಗಟ್ಟಿಯಾಗಿ ತಮ್ಮ‌ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ಬಳಕೆಯಾಗುತ್ತಿರುವ ರೀತಿಯಲ್ಲಿಯೂ ಇಂದು‌ ಕೆಟ್ಟ ಮೇಲ್ಪಂಕ್ತಿಯನ್ನು ನಾವೆಲ್ಲಾ ಕಾಣುತ್ತಿದ್ದೇವೆ. ಅತ್ಯಂತ ಅಗತ್ಯವಿರುವ ಉತ್ತಮ ಮೇಲ್ಪಂಕ್ತಿ ಬಹಳ ಅಪರೂಪವಾಗುತ್ತಿದೆ. ವಿರೋಧದ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರೂ‌ ಅದನ್ನು ಕೇಳಿದ ವಿರೋಧಿಗಳು‌ ಸಹಾ ಅಹುದಹುದೆನ್ನಬೇಕು.

ನರೇಂದ್ರ ಮೋದಿಯವರ ಕುರಿತು, ಸಾವರ್ಕರ್ ಕುರಿತು ನಿಮಗೆ ನಿಮ್ಮದೇ ಆದ ಅಭಿಪ್ರಾಯ ‌ಇರುವುದು‌ ಎಷ್ಟು‌ ಸಹಜವೋ ಹಾಗೆಯೇ‌ ನನಗೂ ನನ್ನದೇ ಆದ ಅಭಿಪ್ರಾಯ ಇರುವುದೂ ಸಹಜ‌. ನಾನು ಗೌರವಿಸುವ ಸಾವರ್ಕರ್ ಕುರಿತು, ನನ್ನ ನಾಯಕರಾದ ಮೋದಿಯವರ ಕುರಿತು ಯಾರಾದರೂ ಏನಾದರೂ ನನಗೆ ಸರಿಯಲ್ಲದ್ದನ್ನು ಹೇಳಿದರೆ‌ ಪ್ರತಿಕ್ರಿಯಿಸಬೇಕಾದ್ದು ನನ್ನ ಧರ್ಮ. ಹಾಗೆ ಪ್ರತಿಕ್ರಿಯಿಸುವಾಗ ನನ್ನ ಮಾತುಗಳ ಮೇಲೆ ನಿಯಂತ್ರಣ ವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತ ಪಡಿಸುವಾಗಲೂ ಇರಬೇಕಲ್ಲವೇ?

ಸಾಮಾಜಿಕ ಜಾಲತಾಣಗಳಲ್ಲಿ ಬಳಸುವ ಮಾತುಗಳಿಗೆ ಲಂಗುಲಗಾಮೇ ಇರದ ಈ ಕಾಲದಲ್ಲಿ ಪ್ರಮುಖರು ಉಪಯೋಗಿಸುವ ಪದಗಳು ಇನ್ನಷ್ಟು ಸ್ವೇಚ್ಛಾಚಾರಕ್ಕೆ ಇಂಬು ನೀಡಬಾರದು.‌

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಭಾಪ್ರಜ್ಞೆ, ಸಂದರ್ಭಪ್ರಜ್ಞೆ ಗಳಿಗೆ ಮಹತ್ವವಿರಬೇಕು.

ಒಟ್ಟಿನಲ್ಲಿ, ಇಂದಿನ‌ ಸಾರ್ವಜನಿಕ‌‌ ಜೀವನದಲ್ಲಿ ಕೇಳಿಬರುತ್ತಿರುವ ಪದಪುಂಜಗಳು ಯಾರಿಗೂ ಸಮಾಧಾನ ತರುತ್ತಿಲ್ಲ ಮತ್ತು ಸಮಾಜಕ್ಕೆ ಒಳಿತನ್ನೂ ಮಾಡುತ್ತಿಲ್ಲ.

ನಾನು “ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ” ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

ನನಗಾಗಿ ಮಾರ್ಗದರ್ಶಕ‌ ಮಾತುಗಳನ್ನು ಆಡಿರುವ ತಮಗೆ ಧನ್ಯವಾದಗಳು.

ವಿಶ್ವಾಸದಿಂದ

ಎಸ್.ಸುರೇಶ್ ಕುಮಾರ್.


ಇದನ್ನೂ ಓದಿ: ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...