Homeಮುಖಪುಟದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ನಾನು "ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ" ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ನಾಯಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಕುರಿತು ಸಚಿವ ಸುರೇಶ್‌ ಕುಮಾರ್‌ರವರು ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಅದನ್ನು ವಿರೋಧಿಸಿ ದೇವನೂರು ಮಹಾದೇವರು ಬಹಿರಂತ ಪತ್ರವನ್ನು ಬರೆದಿದ್ದರು. ಅದಕ್ಕೆ ಸುರೇಶ್‌ ಕುಮಾರ್‌ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಚಿಂತಕ-ಸಾಹಿತಿ ಶ್ರೀ ದೇವನೂರು ಮಹಾದೇವ ರು ನನಗೆ ಬರೆದ ಪತ್ರಕ್ಕೆ ನನ್ನ ಪ್ರತಿಕ್ರಿಯೆ.

ಹಿರಿಯರಾದ ಮಾನ್ಯ ದೇವನೂರು ಮಹಾದೇವ ರವರೇ,

ಈ “ನಿಮ್ಮಸುರೇಶ್ ನನ್ನು “ನಮ್ಮ ಸುರೇಶ್” ಎಂದು‌ ಪರಿಗಣಿಸಿ ನನಗೆ ಪತ್ರ ಬರೆದಿರುವುದಕ್ಕಾಗಿ ನನ್ನ ಧನ್ಯವಾದಗಳು.

ನಿಮ್ಮ ಪತ್ರವನ್ನು ನಾಲ್ಕೈದು ಬಾರಿ ವಿವರವಾಗಿ ಓದಿದೆ. ನೀವು ವ್ಯಕ್ತ‌‌ಪಡಿಸಿರುವ ಅಭಿಪ್ರಾಯಗಳ‌ ಪೈಕಿ ಕೆಲವದರ ಬಗ್ಗೆ ನನ್ನ ಸಹಮತವಿಲ್ಲದಿದ್ದರೂ ನಿಮ್ಮ ಭಾವನೆಯನ್ನು ನಾನು ಪೂರ್ಣ ಗೌರವಿಸುತ್ತೇನೆ.

ಶ್ರೀ‌ ಹೆಚ್.ಎಸ್.ದೊರೆಸ್ವಾಮಿಯವರನ್ನು ನಾನು ಅನೇಕ‌ ದಶಕಗಳಿಂದ‌ ನೋಡಿಕೊಂಡು ಬಂದಿದ್ದೇನೆ, ಬೆಳೆದಿದ್ದೇನೆ. ಅವರ ಹಿರಿತನ, ಸಾಮಾಜಿಕ ಕಾಳಜಿಯ ಕುರಿತು ನನಗೆ ಗೌರವವಿದೆ. ಅವರೂ ಸಹ ನನ್ನ ಬಗ್ಗೆ ಅನೇಕ ಬಾರಿ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅವರೊಡನೆ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳೂ ನನಗೆ ಸಿಕ್ಕಿವೆ.

#ಆದರೆ….

ಅಂತಹ ಹಿರಿಯ ಸ್ಥಾನದ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನು‌ ವ್ಯಕ್ತಪಡಿಸುವಾಗ ಉಪಯೋಗಿಸುವ ಪದಗಳು ಬಹುಮುಖ್ಯವಾಗುತ್ತವೆ. ಸೈದ್ಧಾಂತಿಕವಾಗಿ ತಾವು ವಿರೋಧಿಸುವರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತ‌ಪಡಿಸಲು ಹಿರಿಯರಾದ ದೊರೆಸ್ವಾಮಿಯವರಿಗೆ ಪೂರ್ಣ ಸ್ವಾತಂತ್ರ್ಯವಿದೆ. ಆದರೆ ಅದನ್ನು ವ್ಯಕ್ತಪಡಿಸುವ ಪರಿಭಾಷೆಯ ಕುರಿತು ಸ್ವಲ್ಪ ಅವರು ಗಮನ ಹರಿಸಬೇಕಿತ್ತು.

“ಆಡಬಾರದ್ದನ್ನು ಆಡಿದರೆ ಕೇಳಬಾರದ್ದನ್ನು ಕೇಳಬೇಕಾಗುತ್ತದೆ‌” ಎಂದು ನಾನು ಹೇಳಿರುವುದು ಇಂದಿನ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಸಂಬೋಧಿಸಿ ಹೇಳಿರುವ ಮಾತು ಎಂದು ತಮಗೆ ಅನಿಸುತ್ತಿಲ್ಲವೇ? ರಾಜಕೀಯ, ಸಾಮಾಜಿಕ, ಧಾರ್ಮಿಕ… ಈ ಎಲ್ಲ ವಲಯಗಳಲ್ಲಿಯೂ‌ ಹೆಚ್ಚಾಗಿ ಆಡಬಾರದ‌ ಮಾತುಗಳು, ಅದಕ್ಕೆ ಪ್ರತಿಕ್ರಿಯೆಯಾಗಿ ಕೇಳಬಾರದ ಮಾತುಗಳೇ ಬರುತ್ತಿವೆ. ಮುಂಚೆಯಿಂದ ಈ ಸಮಾಜವು – ವಾದ, ಪ್ರತಿವಾದಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.
(Thesis ಮತ್ತು‌ Anti thesis ಸಂಘರ್ಷದಿಂದ synthesis ಹುಟ್ಟುತ್ತದೆ ಎಂಬುದೂ ಒಂದು ವಾದ.).

ಆದರೆ, ವಾದ ಪ್ರತಿಸಲ ವಿವಾದಕ್ಕೇ ಆಸ್ಪದ ಕೊಡಬಾರದು. ದುರದೃಷ್ಟವಶಾತ್ ವಾದವನ್ನು ಮಾಡುವಾಗ, ಬಹಳ ಗಟ್ಟಿಯಾಗಿ ತಮ್ಮ‌ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ಬಳಕೆಯಾಗುತ್ತಿರುವ ರೀತಿಯಲ್ಲಿಯೂ ಇಂದು‌ ಕೆಟ್ಟ ಮೇಲ್ಪಂಕ್ತಿಯನ್ನು ನಾವೆಲ್ಲಾ ಕಾಣುತ್ತಿದ್ದೇವೆ. ಅತ್ಯಂತ ಅಗತ್ಯವಿರುವ ಉತ್ತಮ ಮೇಲ್ಪಂಕ್ತಿ ಬಹಳ ಅಪರೂಪವಾಗುತ್ತಿದೆ. ವಿರೋಧದ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರೂ‌ ಅದನ್ನು ಕೇಳಿದ ವಿರೋಧಿಗಳು‌ ಸಹಾ ಅಹುದಹುದೆನ್ನಬೇಕು.

ನರೇಂದ್ರ ಮೋದಿಯವರ ಕುರಿತು, ಸಾವರ್ಕರ್ ಕುರಿತು ನಿಮಗೆ ನಿಮ್ಮದೇ ಆದ ಅಭಿಪ್ರಾಯ ‌ಇರುವುದು‌ ಎಷ್ಟು‌ ಸಹಜವೋ ಹಾಗೆಯೇ‌ ನನಗೂ ನನ್ನದೇ ಆದ ಅಭಿಪ್ರಾಯ ಇರುವುದೂ ಸಹಜ‌. ನಾನು ಗೌರವಿಸುವ ಸಾವರ್ಕರ್ ಕುರಿತು, ನನ್ನ ನಾಯಕರಾದ ಮೋದಿಯವರ ಕುರಿತು ಯಾರಾದರೂ ಏನಾದರೂ ನನಗೆ ಸರಿಯಲ್ಲದ್ದನ್ನು ಹೇಳಿದರೆ‌ ಪ್ರತಿಕ್ರಿಯಿಸಬೇಕಾದ್ದು ನನ್ನ ಧರ್ಮ. ಹಾಗೆ ಪ್ರತಿಕ್ರಿಯಿಸುವಾಗ ನನ್ನ ಮಾತುಗಳ ಮೇಲೆ ನಿಯಂತ್ರಣ ವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತ ಪಡಿಸುವಾಗಲೂ ಇರಬೇಕಲ್ಲವೇ?

ಸಾಮಾಜಿಕ ಜಾಲತಾಣಗಳಲ್ಲಿ ಬಳಸುವ ಮಾತುಗಳಿಗೆ ಲಂಗುಲಗಾಮೇ ಇರದ ಈ ಕಾಲದಲ್ಲಿ ಪ್ರಮುಖರು ಉಪಯೋಗಿಸುವ ಪದಗಳು ಇನ್ನಷ್ಟು ಸ್ವೇಚ್ಛಾಚಾರಕ್ಕೆ ಇಂಬು ನೀಡಬಾರದು.‌

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಭಾಪ್ರಜ್ಞೆ, ಸಂದರ್ಭಪ್ರಜ್ಞೆ ಗಳಿಗೆ ಮಹತ್ವವಿರಬೇಕು.

ಒಟ್ಟಿನಲ್ಲಿ, ಇಂದಿನ‌ ಸಾರ್ವಜನಿಕ‌‌ ಜೀವನದಲ್ಲಿ ಕೇಳಿಬರುತ್ತಿರುವ ಪದಪುಂಜಗಳು ಯಾರಿಗೂ ಸಮಾಧಾನ ತರುತ್ತಿಲ್ಲ ಮತ್ತು ಸಮಾಜಕ್ಕೆ ಒಳಿತನ್ನೂ ಮಾಡುತ್ತಿಲ್ಲ.

ನಾನು “ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ” ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

ನನಗಾಗಿ ಮಾರ್ಗದರ್ಶಕ‌ ಮಾತುಗಳನ್ನು ಆಡಿರುವ ತಮಗೆ ಧನ್ಯವಾದಗಳು.

ವಿಶ್ವಾಸದಿಂದ

ಎಸ್.ಸುರೇಶ್ ಕುಮಾರ್.


ಇದನ್ನೂ ಓದಿ: ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...