Homeಮುಖಪುಟದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ನಾನು "ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ" ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ನಾಯಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಕುರಿತು ಸಚಿವ ಸುರೇಶ್‌ ಕುಮಾರ್‌ರವರು ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಅದನ್ನು ವಿರೋಧಿಸಿ ದೇವನೂರು ಮಹಾದೇವರು ಬಹಿರಂತ ಪತ್ರವನ್ನು ಬರೆದಿದ್ದರು. ಅದಕ್ಕೆ ಸುರೇಶ್‌ ಕುಮಾರ್‌ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಚಿಂತಕ-ಸಾಹಿತಿ ಶ್ರೀ ದೇವನೂರು ಮಹಾದೇವ ರು ನನಗೆ ಬರೆದ ಪತ್ರಕ್ಕೆ ನನ್ನ ಪ್ರತಿಕ್ರಿಯೆ.

ಹಿರಿಯರಾದ ಮಾನ್ಯ ದೇವನೂರು ಮಹಾದೇವ ರವರೇ,

ಈ “ನಿಮ್ಮಸುರೇಶ್ ನನ್ನು “ನಮ್ಮ ಸುರೇಶ್” ಎಂದು‌ ಪರಿಗಣಿಸಿ ನನಗೆ ಪತ್ರ ಬರೆದಿರುವುದಕ್ಕಾಗಿ ನನ್ನ ಧನ್ಯವಾದಗಳು.

ನಿಮ್ಮ ಪತ್ರವನ್ನು ನಾಲ್ಕೈದು ಬಾರಿ ವಿವರವಾಗಿ ಓದಿದೆ. ನೀವು ವ್ಯಕ್ತ‌‌ಪಡಿಸಿರುವ ಅಭಿಪ್ರಾಯಗಳ‌ ಪೈಕಿ ಕೆಲವದರ ಬಗ್ಗೆ ನನ್ನ ಸಹಮತವಿಲ್ಲದಿದ್ದರೂ ನಿಮ್ಮ ಭಾವನೆಯನ್ನು ನಾನು ಪೂರ್ಣ ಗೌರವಿಸುತ್ತೇನೆ.

ಶ್ರೀ‌ ಹೆಚ್.ಎಸ್.ದೊರೆಸ್ವಾಮಿಯವರನ್ನು ನಾನು ಅನೇಕ‌ ದಶಕಗಳಿಂದ‌ ನೋಡಿಕೊಂಡು ಬಂದಿದ್ದೇನೆ, ಬೆಳೆದಿದ್ದೇನೆ. ಅವರ ಹಿರಿತನ, ಸಾಮಾಜಿಕ ಕಾಳಜಿಯ ಕುರಿತು ನನಗೆ ಗೌರವವಿದೆ. ಅವರೂ ಸಹ ನನ್ನ ಬಗ್ಗೆ ಅನೇಕ ಬಾರಿ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅವರೊಡನೆ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳೂ ನನಗೆ ಸಿಕ್ಕಿವೆ.

#ಆದರೆ….

ಅಂತಹ ಹಿರಿಯ ಸ್ಥಾನದ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನು‌ ವ್ಯಕ್ತಪಡಿಸುವಾಗ ಉಪಯೋಗಿಸುವ ಪದಗಳು ಬಹುಮುಖ್ಯವಾಗುತ್ತವೆ. ಸೈದ್ಧಾಂತಿಕವಾಗಿ ತಾವು ವಿರೋಧಿಸುವರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತ‌ಪಡಿಸಲು ಹಿರಿಯರಾದ ದೊರೆಸ್ವಾಮಿಯವರಿಗೆ ಪೂರ್ಣ ಸ್ವಾತಂತ್ರ್ಯವಿದೆ. ಆದರೆ ಅದನ್ನು ವ್ಯಕ್ತಪಡಿಸುವ ಪರಿಭಾಷೆಯ ಕುರಿತು ಸ್ವಲ್ಪ ಅವರು ಗಮನ ಹರಿಸಬೇಕಿತ್ತು.

“ಆಡಬಾರದ್ದನ್ನು ಆಡಿದರೆ ಕೇಳಬಾರದ್ದನ್ನು ಕೇಳಬೇಕಾಗುತ್ತದೆ‌” ಎಂದು ನಾನು ಹೇಳಿರುವುದು ಇಂದಿನ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಸಂಬೋಧಿಸಿ ಹೇಳಿರುವ ಮಾತು ಎಂದು ತಮಗೆ ಅನಿಸುತ್ತಿಲ್ಲವೇ? ರಾಜಕೀಯ, ಸಾಮಾಜಿಕ, ಧಾರ್ಮಿಕ… ಈ ಎಲ್ಲ ವಲಯಗಳಲ್ಲಿಯೂ‌ ಹೆಚ್ಚಾಗಿ ಆಡಬಾರದ‌ ಮಾತುಗಳು, ಅದಕ್ಕೆ ಪ್ರತಿಕ್ರಿಯೆಯಾಗಿ ಕೇಳಬಾರದ ಮಾತುಗಳೇ ಬರುತ್ತಿವೆ. ಮುಂಚೆಯಿಂದ ಈ ಸಮಾಜವು – ವಾದ, ಪ್ರತಿವಾದಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.
(Thesis ಮತ್ತು‌ Anti thesis ಸಂಘರ್ಷದಿಂದ synthesis ಹುಟ್ಟುತ್ತದೆ ಎಂಬುದೂ ಒಂದು ವಾದ.).

ಆದರೆ, ವಾದ ಪ್ರತಿಸಲ ವಿವಾದಕ್ಕೇ ಆಸ್ಪದ ಕೊಡಬಾರದು. ದುರದೃಷ್ಟವಶಾತ್ ವಾದವನ್ನು ಮಾಡುವಾಗ, ಬಹಳ ಗಟ್ಟಿಯಾಗಿ ತಮ್ಮ‌ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ಬಳಕೆಯಾಗುತ್ತಿರುವ ರೀತಿಯಲ್ಲಿಯೂ ಇಂದು‌ ಕೆಟ್ಟ ಮೇಲ್ಪಂಕ್ತಿಯನ್ನು ನಾವೆಲ್ಲಾ ಕಾಣುತ್ತಿದ್ದೇವೆ. ಅತ್ಯಂತ ಅಗತ್ಯವಿರುವ ಉತ್ತಮ ಮೇಲ್ಪಂಕ್ತಿ ಬಹಳ ಅಪರೂಪವಾಗುತ್ತಿದೆ. ವಿರೋಧದ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರೂ‌ ಅದನ್ನು ಕೇಳಿದ ವಿರೋಧಿಗಳು‌ ಸಹಾ ಅಹುದಹುದೆನ್ನಬೇಕು.

ನರೇಂದ್ರ ಮೋದಿಯವರ ಕುರಿತು, ಸಾವರ್ಕರ್ ಕುರಿತು ನಿಮಗೆ ನಿಮ್ಮದೇ ಆದ ಅಭಿಪ್ರಾಯ ‌ಇರುವುದು‌ ಎಷ್ಟು‌ ಸಹಜವೋ ಹಾಗೆಯೇ‌ ನನಗೂ ನನ್ನದೇ ಆದ ಅಭಿಪ್ರಾಯ ಇರುವುದೂ ಸಹಜ‌. ನಾನು ಗೌರವಿಸುವ ಸಾವರ್ಕರ್ ಕುರಿತು, ನನ್ನ ನಾಯಕರಾದ ಮೋದಿಯವರ ಕುರಿತು ಯಾರಾದರೂ ಏನಾದರೂ ನನಗೆ ಸರಿಯಲ್ಲದ್ದನ್ನು ಹೇಳಿದರೆ‌ ಪ್ರತಿಕ್ರಿಯಿಸಬೇಕಾದ್ದು ನನ್ನ ಧರ್ಮ. ಹಾಗೆ ಪ್ರತಿಕ್ರಿಯಿಸುವಾಗ ನನ್ನ ಮಾತುಗಳ ಮೇಲೆ ನಿಯಂತ್ರಣ ವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತ ಪಡಿಸುವಾಗಲೂ ಇರಬೇಕಲ್ಲವೇ?

ಸಾಮಾಜಿಕ ಜಾಲತಾಣಗಳಲ್ಲಿ ಬಳಸುವ ಮಾತುಗಳಿಗೆ ಲಂಗುಲಗಾಮೇ ಇರದ ಈ ಕಾಲದಲ್ಲಿ ಪ್ರಮುಖರು ಉಪಯೋಗಿಸುವ ಪದಗಳು ಇನ್ನಷ್ಟು ಸ್ವೇಚ್ಛಾಚಾರಕ್ಕೆ ಇಂಬು ನೀಡಬಾರದು.‌

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಭಾಪ್ರಜ್ಞೆ, ಸಂದರ್ಭಪ್ರಜ್ಞೆ ಗಳಿಗೆ ಮಹತ್ವವಿರಬೇಕು.

ಒಟ್ಟಿನಲ್ಲಿ, ಇಂದಿನ‌ ಸಾರ್ವಜನಿಕ‌‌ ಜೀವನದಲ್ಲಿ ಕೇಳಿಬರುತ್ತಿರುವ ಪದಪುಂಜಗಳು ಯಾರಿಗೂ ಸಮಾಧಾನ ತರುತ್ತಿಲ್ಲ ಮತ್ತು ಸಮಾಜಕ್ಕೆ ಒಳಿತನ್ನೂ ಮಾಡುತ್ತಿಲ್ಲ.

ನಾನು “ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ” ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

ನನಗಾಗಿ ಮಾರ್ಗದರ್ಶಕ‌ ಮಾತುಗಳನ್ನು ಆಡಿರುವ ತಮಗೆ ಧನ್ಯವಾದಗಳು.

ವಿಶ್ವಾಸದಿಂದ

ಎಸ್.ಸುರೇಶ್ ಕುಮಾರ್.


ಇದನ್ನೂ ಓದಿ: ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...