Homeಮುಖಪುಟದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ನಾನು "ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ" ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ನಾಯಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಕುರಿತು ಸಚಿವ ಸುರೇಶ್‌ ಕುಮಾರ್‌ರವರು ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಅದನ್ನು ವಿರೋಧಿಸಿ ದೇವನೂರು ಮಹಾದೇವರು ಬಹಿರಂತ ಪತ್ರವನ್ನು ಬರೆದಿದ್ದರು. ಅದಕ್ಕೆ ಸುರೇಶ್‌ ಕುಮಾರ್‌ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಚಿಂತಕ-ಸಾಹಿತಿ ಶ್ರೀ ದೇವನೂರು ಮಹಾದೇವ ರು ನನಗೆ ಬರೆದ ಪತ್ರಕ್ಕೆ ನನ್ನ ಪ್ರತಿಕ್ರಿಯೆ.

ಹಿರಿಯರಾದ ಮಾನ್ಯ ದೇವನೂರು ಮಹಾದೇವ ರವರೇ,

ಈ “ನಿಮ್ಮಸುರೇಶ್ ನನ್ನು “ನಮ್ಮ ಸುರೇಶ್” ಎಂದು‌ ಪರಿಗಣಿಸಿ ನನಗೆ ಪತ್ರ ಬರೆದಿರುವುದಕ್ಕಾಗಿ ನನ್ನ ಧನ್ಯವಾದಗಳು.

ನಿಮ್ಮ ಪತ್ರವನ್ನು ನಾಲ್ಕೈದು ಬಾರಿ ವಿವರವಾಗಿ ಓದಿದೆ. ನೀವು ವ್ಯಕ್ತ‌‌ಪಡಿಸಿರುವ ಅಭಿಪ್ರಾಯಗಳ‌ ಪೈಕಿ ಕೆಲವದರ ಬಗ್ಗೆ ನನ್ನ ಸಹಮತವಿಲ್ಲದಿದ್ದರೂ ನಿಮ್ಮ ಭಾವನೆಯನ್ನು ನಾನು ಪೂರ್ಣ ಗೌರವಿಸುತ್ತೇನೆ.

ಶ್ರೀ‌ ಹೆಚ್.ಎಸ್.ದೊರೆಸ್ವಾಮಿಯವರನ್ನು ನಾನು ಅನೇಕ‌ ದಶಕಗಳಿಂದ‌ ನೋಡಿಕೊಂಡು ಬಂದಿದ್ದೇನೆ, ಬೆಳೆದಿದ್ದೇನೆ. ಅವರ ಹಿರಿತನ, ಸಾಮಾಜಿಕ ಕಾಳಜಿಯ ಕುರಿತು ನನಗೆ ಗೌರವವಿದೆ. ಅವರೂ ಸಹ ನನ್ನ ಬಗ್ಗೆ ಅನೇಕ ಬಾರಿ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅವರೊಡನೆ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳೂ ನನಗೆ ಸಿಕ್ಕಿವೆ.

#ಆದರೆ….

ಅಂತಹ ಹಿರಿಯ ಸ್ಥಾನದ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನು‌ ವ್ಯಕ್ತಪಡಿಸುವಾಗ ಉಪಯೋಗಿಸುವ ಪದಗಳು ಬಹುಮುಖ್ಯವಾಗುತ್ತವೆ. ಸೈದ್ಧಾಂತಿಕವಾಗಿ ತಾವು ವಿರೋಧಿಸುವರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತ‌ಪಡಿಸಲು ಹಿರಿಯರಾದ ದೊರೆಸ್ವಾಮಿಯವರಿಗೆ ಪೂರ್ಣ ಸ್ವಾತಂತ್ರ್ಯವಿದೆ. ಆದರೆ ಅದನ್ನು ವ್ಯಕ್ತಪಡಿಸುವ ಪರಿಭಾಷೆಯ ಕುರಿತು ಸ್ವಲ್ಪ ಅವರು ಗಮನ ಹರಿಸಬೇಕಿತ್ತು.

“ಆಡಬಾರದ್ದನ್ನು ಆಡಿದರೆ ಕೇಳಬಾರದ್ದನ್ನು ಕೇಳಬೇಕಾಗುತ್ತದೆ‌” ಎಂದು ನಾನು ಹೇಳಿರುವುದು ಇಂದಿನ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಸಂಬೋಧಿಸಿ ಹೇಳಿರುವ ಮಾತು ಎಂದು ತಮಗೆ ಅನಿಸುತ್ತಿಲ್ಲವೇ? ರಾಜಕೀಯ, ಸಾಮಾಜಿಕ, ಧಾರ್ಮಿಕ… ಈ ಎಲ್ಲ ವಲಯಗಳಲ್ಲಿಯೂ‌ ಹೆಚ್ಚಾಗಿ ಆಡಬಾರದ‌ ಮಾತುಗಳು, ಅದಕ್ಕೆ ಪ್ರತಿಕ್ರಿಯೆಯಾಗಿ ಕೇಳಬಾರದ ಮಾತುಗಳೇ ಬರುತ್ತಿವೆ. ಮುಂಚೆಯಿಂದ ಈ ಸಮಾಜವು – ವಾದ, ಪ್ರತಿವಾದಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.
(Thesis ಮತ್ತು‌ Anti thesis ಸಂಘರ್ಷದಿಂದ synthesis ಹುಟ್ಟುತ್ತದೆ ಎಂಬುದೂ ಒಂದು ವಾದ.).

ಆದರೆ, ವಾದ ಪ್ರತಿಸಲ ವಿವಾದಕ್ಕೇ ಆಸ್ಪದ ಕೊಡಬಾರದು. ದುರದೃಷ್ಟವಶಾತ್ ವಾದವನ್ನು ಮಾಡುವಾಗ, ಬಹಳ ಗಟ್ಟಿಯಾಗಿ ತಮ್ಮ‌ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ಬಳಕೆಯಾಗುತ್ತಿರುವ ರೀತಿಯಲ್ಲಿಯೂ ಇಂದು‌ ಕೆಟ್ಟ ಮೇಲ್ಪಂಕ್ತಿಯನ್ನು ನಾವೆಲ್ಲಾ ಕಾಣುತ್ತಿದ್ದೇವೆ. ಅತ್ಯಂತ ಅಗತ್ಯವಿರುವ ಉತ್ತಮ ಮೇಲ್ಪಂಕ್ತಿ ಬಹಳ ಅಪರೂಪವಾಗುತ್ತಿದೆ. ವಿರೋಧದ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರೂ‌ ಅದನ್ನು ಕೇಳಿದ ವಿರೋಧಿಗಳು‌ ಸಹಾ ಅಹುದಹುದೆನ್ನಬೇಕು.

ನರೇಂದ್ರ ಮೋದಿಯವರ ಕುರಿತು, ಸಾವರ್ಕರ್ ಕುರಿತು ನಿಮಗೆ ನಿಮ್ಮದೇ ಆದ ಅಭಿಪ್ರಾಯ ‌ಇರುವುದು‌ ಎಷ್ಟು‌ ಸಹಜವೋ ಹಾಗೆಯೇ‌ ನನಗೂ ನನ್ನದೇ ಆದ ಅಭಿಪ್ರಾಯ ಇರುವುದೂ ಸಹಜ‌. ನಾನು ಗೌರವಿಸುವ ಸಾವರ್ಕರ್ ಕುರಿತು, ನನ್ನ ನಾಯಕರಾದ ಮೋದಿಯವರ ಕುರಿತು ಯಾರಾದರೂ ಏನಾದರೂ ನನಗೆ ಸರಿಯಲ್ಲದ್ದನ್ನು ಹೇಳಿದರೆ‌ ಪ್ರತಿಕ್ರಿಯಿಸಬೇಕಾದ್ದು ನನ್ನ ಧರ್ಮ. ಹಾಗೆ ಪ್ರತಿಕ್ರಿಯಿಸುವಾಗ ನನ್ನ ಮಾತುಗಳ ಮೇಲೆ ನಿಯಂತ್ರಣ ವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತ ಪಡಿಸುವಾಗಲೂ ಇರಬೇಕಲ್ಲವೇ?

ಸಾಮಾಜಿಕ ಜಾಲತಾಣಗಳಲ್ಲಿ ಬಳಸುವ ಮಾತುಗಳಿಗೆ ಲಂಗುಲಗಾಮೇ ಇರದ ಈ ಕಾಲದಲ್ಲಿ ಪ್ರಮುಖರು ಉಪಯೋಗಿಸುವ ಪದಗಳು ಇನ್ನಷ್ಟು ಸ್ವೇಚ್ಛಾಚಾರಕ್ಕೆ ಇಂಬು ನೀಡಬಾರದು.‌

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಭಾಪ್ರಜ್ಞೆ, ಸಂದರ್ಭಪ್ರಜ್ಞೆ ಗಳಿಗೆ ಮಹತ್ವವಿರಬೇಕು.

ಒಟ್ಟಿನಲ್ಲಿ, ಇಂದಿನ‌ ಸಾರ್ವಜನಿಕ‌‌ ಜೀವನದಲ್ಲಿ ಕೇಳಿಬರುತ್ತಿರುವ ಪದಪುಂಜಗಳು ಯಾರಿಗೂ ಸಮಾಧಾನ ತರುತ್ತಿಲ್ಲ ಮತ್ತು ಸಮಾಜಕ್ಕೆ ಒಳಿತನ್ನೂ ಮಾಡುತ್ತಿಲ್ಲ.

ನಾನು “ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ” ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

ನನಗಾಗಿ ಮಾರ್ಗದರ್ಶಕ‌ ಮಾತುಗಳನ್ನು ಆಡಿರುವ ತಮಗೆ ಧನ್ಯವಾದಗಳು.

ವಿಶ್ವಾಸದಿಂದ

ಎಸ್.ಸುರೇಶ್ ಕುಮಾರ್.


ಇದನ್ನೂ ಓದಿ: ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...