Homeಮುಖಪುಟದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ನಾನು "ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ" ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ನಾಯಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಕುರಿತು ಸಚಿವ ಸುರೇಶ್‌ ಕುಮಾರ್‌ರವರು ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಅದನ್ನು ವಿರೋಧಿಸಿ ದೇವನೂರು ಮಹಾದೇವರು ಬಹಿರಂತ ಪತ್ರವನ್ನು ಬರೆದಿದ್ದರು. ಅದಕ್ಕೆ ಸುರೇಶ್‌ ಕುಮಾರ್‌ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಚಿಂತಕ-ಸಾಹಿತಿ ಶ್ರೀ ದೇವನೂರು ಮಹಾದೇವ ರು ನನಗೆ ಬರೆದ ಪತ್ರಕ್ಕೆ ನನ್ನ ಪ್ರತಿಕ್ರಿಯೆ.

ಹಿರಿಯರಾದ ಮಾನ್ಯ ದೇವನೂರು ಮಹಾದೇವ ರವರೇ,

ಈ “ನಿಮ್ಮಸುರೇಶ್ ನನ್ನು “ನಮ್ಮ ಸುರೇಶ್” ಎಂದು‌ ಪರಿಗಣಿಸಿ ನನಗೆ ಪತ್ರ ಬರೆದಿರುವುದಕ್ಕಾಗಿ ನನ್ನ ಧನ್ಯವಾದಗಳು.

ನಿಮ್ಮ ಪತ್ರವನ್ನು ನಾಲ್ಕೈದು ಬಾರಿ ವಿವರವಾಗಿ ಓದಿದೆ. ನೀವು ವ್ಯಕ್ತ‌‌ಪಡಿಸಿರುವ ಅಭಿಪ್ರಾಯಗಳ‌ ಪೈಕಿ ಕೆಲವದರ ಬಗ್ಗೆ ನನ್ನ ಸಹಮತವಿಲ್ಲದಿದ್ದರೂ ನಿಮ್ಮ ಭಾವನೆಯನ್ನು ನಾನು ಪೂರ್ಣ ಗೌರವಿಸುತ್ತೇನೆ.

ಶ್ರೀ‌ ಹೆಚ್.ಎಸ್.ದೊರೆಸ್ವಾಮಿಯವರನ್ನು ನಾನು ಅನೇಕ‌ ದಶಕಗಳಿಂದ‌ ನೋಡಿಕೊಂಡು ಬಂದಿದ್ದೇನೆ, ಬೆಳೆದಿದ್ದೇನೆ. ಅವರ ಹಿರಿತನ, ಸಾಮಾಜಿಕ ಕಾಳಜಿಯ ಕುರಿತು ನನಗೆ ಗೌರವವಿದೆ. ಅವರೂ ಸಹ ನನ್ನ ಬಗ್ಗೆ ಅನೇಕ ಬಾರಿ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅವರೊಡನೆ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳೂ ನನಗೆ ಸಿಕ್ಕಿವೆ.

#ಆದರೆ….

ಅಂತಹ ಹಿರಿಯ ಸ್ಥಾನದ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನು‌ ವ್ಯಕ್ತಪಡಿಸುವಾಗ ಉಪಯೋಗಿಸುವ ಪದಗಳು ಬಹುಮುಖ್ಯವಾಗುತ್ತವೆ. ಸೈದ್ಧಾಂತಿಕವಾಗಿ ತಾವು ವಿರೋಧಿಸುವರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತ‌ಪಡಿಸಲು ಹಿರಿಯರಾದ ದೊರೆಸ್ವಾಮಿಯವರಿಗೆ ಪೂರ್ಣ ಸ್ವಾತಂತ್ರ್ಯವಿದೆ. ಆದರೆ ಅದನ್ನು ವ್ಯಕ್ತಪಡಿಸುವ ಪರಿಭಾಷೆಯ ಕುರಿತು ಸ್ವಲ್ಪ ಅವರು ಗಮನ ಹರಿಸಬೇಕಿತ್ತು.

“ಆಡಬಾರದ್ದನ್ನು ಆಡಿದರೆ ಕೇಳಬಾರದ್ದನ್ನು ಕೇಳಬೇಕಾಗುತ್ತದೆ‌” ಎಂದು ನಾನು ಹೇಳಿರುವುದು ಇಂದಿನ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಸಂಬೋಧಿಸಿ ಹೇಳಿರುವ ಮಾತು ಎಂದು ತಮಗೆ ಅನಿಸುತ್ತಿಲ್ಲವೇ? ರಾಜಕೀಯ, ಸಾಮಾಜಿಕ, ಧಾರ್ಮಿಕ… ಈ ಎಲ್ಲ ವಲಯಗಳಲ್ಲಿಯೂ‌ ಹೆಚ್ಚಾಗಿ ಆಡಬಾರದ‌ ಮಾತುಗಳು, ಅದಕ್ಕೆ ಪ್ರತಿಕ್ರಿಯೆಯಾಗಿ ಕೇಳಬಾರದ ಮಾತುಗಳೇ ಬರುತ್ತಿವೆ. ಮುಂಚೆಯಿಂದ ಈ ಸಮಾಜವು – ವಾದ, ಪ್ರತಿವಾದಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.
(Thesis ಮತ್ತು‌ Anti thesis ಸಂಘರ್ಷದಿಂದ synthesis ಹುಟ್ಟುತ್ತದೆ ಎಂಬುದೂ ಒಂದು ವಾದ.).

ಆದರೆ, ವಾದ ಪ್ರತಿಸಲ ವಿವಾದಕ್ಕೇ ಆಸ್ಪದ ಕೊಡಬಾರದು. ದುರದೃಷ್ಟವಶಾತ್ ವಾದವನ್ನು ಮಾಡುವಾಗ, ಬಹಳ ಗಟ್ಟಿಯಾಗಿ ತಮ್ಮ‌ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ಬಳಕೆಯಾಗುತ್ತಿರುವ ರೀತಿಯಲ್ಲಿಯೂ ಇಂದು‌ ಕೆಟ್ಟ ಮೇಲ್ಪಂಕ್ತಿಯನ್ನು ನಾವೆಲ್ಲಾ ಕಾಣುತ್ತಿದ್ದೇವೆ. ಅತ್ಯಂತ ಅಗತ್ಯವಿರುವ ಉತ್ತಮ ಮೇಲ್ಪಂಕ್ತಿ ಬಹಳ ಅಪರೂಪವಾಗುತ್ತಿದೆ. ವಿರೋಧದ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರೂ‌ ಅದನ್ನು ಕೇಳಿದ ವಿರೋಧಿಗಳು‌ ಸಹಾ ಅಹುದಹುದೆನ್ನಬೇಕು.

ನರೇಂದ್ರ ಮೋದಿಯವರ ಕುರಿತು, ಸಾವರ್ಕರ್ ಕುರಿತು ನಿಮಗೆ ನಿಮ್ಮದೇ ಆದ ಅಭಿಪ್ರಾಯ ‌ಇರುವುದು‌ ಎಷ್ಟು‌ ಸಹಜವೋ ಹಾಗೆಯೇ‌ ನನಗೂ ನನ್ನದೇ ಆದ ಅಭಿಪ್ರಾಯ ಇರುವುದೂ ಸಹಜ‌. ನಾನು ಗೌರವಿಸುವ ಸಾವರ್ಕರ್ ಕುರಿತು, ನನ್ನ ನಾಯಕರಾದ ಮೋದಿಯವರ ಕುರಿತು ಯಾರಾದರೂ ಏನಾದರೂ ನನಗೆ ಸರಿಯಲ್ಲದ್ದನ್ನು ಹೇಳಿದರೆ‌ ಪ್ರತಿಕ್ರಿಯಿಸಬೇಕಾದ್ದು ನನ್ನ ಧರ್ಮ. ಹಾಗೆ ಪ್ರತಿಕ್ರಿಯಿಸುವಾಗ ನನ್ನ ಮಾತುಗಳ ಮೇಲೆ ನಿಯಂತ್ರಣ ವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತ ಪಡಿಸುವಾಗಲೂ ಇರಬೇಕಲ್ಲವೇ?

ಸಾಮಾಜಿಕ ಜಾಲತಾಣಗಳಲ್ಲಿ ಬಳಸುವ ಮಾತುಗಳಿಗೆ ಲಂಗುಲಗಾಮೇ ಇರದ ಈ ಕಾಲದಲ್ಲಿ ಪ್ರಮುಖರು ಉಪಯೋಗಿಸುವ ಪದಗಳು ಇನ್ನಷ್ಟು ಸ್ವೇಚ್ಛಾಚಾರಕ್ಕೆ ಇಂಬು ನೀಡಬಾರದು.‌

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಭಾಪ್ರಜ್ಞೆ, ಸಂದರ್ಭಪ್ರಜ್ಞೆ ಗಳಿಗೆ ಮಹತ್ವವಿರಬೇಕು.

ಒಟ್ಟಿನಲ್ಲಿ, ಇಂದಿನ‌ ಸಾರ್ವಜನಿಕ‌‌ ಜೀವನದಲ್ಲಿ ಕೇಳಿಬರುತ್ತಿರುವ ಪದಪುಂಜಗಳು ಯಾರಿಗೂ ಸಮಾಧಾನ ತರುತ್ತಿಲ್ಲ ಮತ್ತು ಸಮಾಜಕ್ಕೆ ಒಳಿತನ್ನೂ ಮಾಡುತ್ತಿಲ್ಲ.

ನಾನು “ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ” ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

ನನಗಾಗಿ ಮಾರ್ಗದರ್ಶಕ‌ ಮಾತುಗಳನ್ನು ಆಡಿರುವ ತಮಗೆ ಧನ್ಯವಾದಗಳು.

ವಿಶ್ವಾಸದಿಂದ

ಎಸ್.ಸುರೇಶ್ ಕುಮಾರ್.


ಇದನ್ನೂ ಓದಿ: ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...