ಕರ್ನಾಟಕ ವಿಧಾನಸಭೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು “ಧಾರ್ಮಿಕ” ಘೋಷಣೆಗಳನ್ನು ಕೂಗಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಚುನಾವಣೆಯಲ್ಲಿ ಒಬ್ಬರು ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ, ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಅದು ಒಳ್ಳೆಯದಲ್ಲ ಎಂದು ಪವಾರ್ ಅವರು ಮಹಾರಾಷ್ಟ್ರದ ಪ್ರಾದೇಶಿಕ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ಪಂಢರಪುರ ದೇವಸ್ಥಾನ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎನ್ಸಿಪಿ ಮುಖ್ಯಸ್ಥರು ಹೇಳಿದ್ದಾರೆ.
”ಚುನಾವಣೆಯಲ್ಲಿ ಸ್ಪರ್ಧಿಸುವ ಸಮಯದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜಾತ್ಯತೀತತೆಗಾಗಿ ಪ್ರತಿಜ್ಞೆ ಮಾಡುತ್ತೇವೆ” ಎಂದು ಪವಾರ್ ತಿಳಿಸಿದರು.
”ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಜಾತ್ಯತೀತತೆಯ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ನೀವು ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಇದು ಒಳ್ಳೆಯದಲ್ಲ” ಎಂದು ಅವರು ಹೇಳಿದರು.
ಇದನ್ನೂ ಓದಿ: ಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು
ಅಂಕೋಲದಲ್ಲಿ ಸಾರ್ವಜನಿಕ ಸಭೆ ಉದ್ದೇಶ ಮಾತನಾಡಿದ್ದ ಮೋದಿ, ”ಮತದಾನದ ದಿನ ಇವಿಎಂನಲ್ಲಿ ಬಟನ್ ಒತ್ತುವ ಮುನ್ನ ಜೈ ಭಜರಂಗ ಬಲಿ ಎಂದು ಘೋಷಣೆ ಕೂಗಿ ಕಾಂಗ್ರೆಸ್ಗೆ ಶಿಕ್ಷೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು.
ಪ್ರಧಾನಿ ಮೋದಿ ಅವರು ಪ್ರಚಾರ ಸಂದರ್ಭದಲ್ಲಿ ಹನುಮಾನ್ ಚಾಲಿಸ್ ಹೇಳುವುದು, ಬಜರಂಗ ಬಲಿ ಎನ್ನುವ ಘೋಷಣೆ ಕೂಗಿದ್ದರು. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದರು.
”ಬಿಜೆಪಿ ಹಿರಿಯ ನಾಯಕರಾಗಿರುವ ಪ್ರಧಾನಿ ಮೋದಿ ಪ್ರಚಾರದಲ್ಲಿ ಹಿಂದೂ ದೇವರುಗಳನ್ನು ಬಳಸಿಕೊಳ್ಳುವ ಮೂಲಕ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ” ಎಂದು ಆರೋಪಿಸಿತ್ತು.
”ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣಗಳಲ್ಲಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಂಡಿದ್ದಾರೆ. ಕೇವಲ ಚುನಾವಣೆ ಲಾಭಕ್ಕೋಸ್ಕರ ದೇವ ದೇವತೆಗಳನ್ನು ಬಳಸುತ್ತಿದ್ದಾರೆ. ಈ ರೀತಿಯ ಪ್ರಚಾರಕ್ಕೆ ಅವಕಾಶ ನೀಡಬಾರದು. ಜಾತಿ ಧರ್ಮದ ಹೆಸರು ಬಳಸಿಕೊಂಡು ಚುನಾವಣೆ ಪ್ರಚಾರಕ್ಕೆ ಅವಕಾಶ ನೀಡಬಾರದು” ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಈ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಲಾಗಿತ್ತು.