Homeಕರ್ನಾಟಕಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ, 'ಧಾರ್ಮಿಕ' ಘೋಷಣೆ ಕೂಗಿದ್ದು ಆಶ್ಚರ್ಯ ತಂದಿದೆ: ಶರದ್ ಪವಾರ್

ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ, ‘ಧಾರ್ಮಿಕ’ ಘೋಷಣೆ ಕೂಗಿದ್ದು ಆಶ್ಚರ್ಯ ತಂದಿದೆ: ಶರದ್ ಪವಾರ್

- Advertisement -
- Advertisement -

ಕರ್ನಾಟಕ ವಿಧಾನಸಭೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು “ಧಾರ್ಮಿಕ” ಘೋಷಣೆಗಳನ್ನು ಕೂಗಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಒಬ್ಬರು ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ, ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಅದು ಒಳ್ಳೆಯದಲ್ಲ ಎಂದು ಪವಾರ್ ಅವರು ಮಹಾರಾಷ್ಟ್ರದ ಪ್ರಾದೇಶಿಕ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಪಂಢರಪುರ ದೇವಸ್ಥಾನ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎನ್‌ಸಿಪಿ ಮುಖ್ಯಸ್ಥರು ಹೇಳಿದ್ದಾರೆ.

”ಚುನಾವಣೆಯಲ್ಲಿ ಸ್ಪರ್ಧಿಸುವ ಸಮಯದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜಾತ್ಯತೀತತೆಗಾಗಿ ಪ್ರತಿಜ್ಞೆ ಮಾಡುತ್ತೇವೆ” ಎಂದು ಪವಾರ್ ತಿಳಿಸಿದರು.

”ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಜಾತ್ಯತೀತತೆಯ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ನೀವು ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಇದು ಒಳ್ಳೆಯದಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

ಅಂಕೋಲದಲ್ಲಿ ಸಾರ್ವಜನಿಕ ಸಭೆ ಉದ್ದೇಶ ಮಾತನಾಡಿದ್ದ ಮೋದಿ, ”ಮತದಾನದ ದಿನ ಇವಿಎಂನಲ್ಲಿ ಬಟನ್‌ ಒತ್ತುವ ಮುನ್ನ ಜೈ ಭಜರಂಗ ಬಲಿ ಎಂದು ಘೋಷಣೆ ಕೂಗಿ ಕಾಂಗ್ರೆಸ್‌ಗೆ ಶಿಕ್ಷೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು.

ಪ್ರಧಾನಿ ಮೋದಿ ಅವರು ಪ್ರಚಾರ ಸಂದರ್ಭದಲ್ಲಿ ಹನುಮಾನ್ ಚಾಲಿಸ್ ಹೇಳುವುದು, ಬಜರಂಗ ಬಲಿ ಎನ್ನುವ ಘೋಷಣೆ ಕೂಗಿದ್ದರು. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದರು.

”ಬಿಜೆಪಿ ಹಿರಿಯ ನಾಯಕರಾಗಿರುವ ಪ್ರಧಾನಿ  ಮೋದಿ ಪ್ರಚಾರದಲ್ಲಿ ಹಿಂದೂ ದೇವರುಗಳನ್ನು ಬಳಸಿಕೊಳ್ಳುವ ಮೂಲಕ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ” ಎಂದು ಆರೋಪಿಸಿತ್ತು.

”ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣಗಳಲ್ಲಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಂಡಿದ್ದಾರೆ. ಕೇವಲ ಚುನಾವಣೆ ಲಾಭಕ್ಕೋಸ್ಕರ ದೇವ ದೇವತೆಗಳನ್ನು ಬಳಸುತ್ತಿದ್ದಾರೆ. ಈ ರೀತಿಯ ಪ್ರಚಾರಕ್ಕೆ ಅವಕಾಶ ನೀಡಬಾರದು. ಜಾತಿ ಧರ್ಮದ ಹೆಸರು ಬಳಸಿಕೊಂಡು ಚುನಾವಣೆ ಪ್ರಚಾರಕ್ಕೆ ಅವಕಾಶ ನೀಡಬಾರದು” ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಈ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...