Homeದಲಿತ್ ಫೈಲ್ಸ್ಸುರಪುರ: ಬೌದ್ಧಧಮ್ಮಕ್ಕೆ ಮರಳುವ ಮುನ್ನ ಹಿಂದೂ ದೇವರುಗಳ ಫೋಟೋ ನದಿಗೆ ವಿಸರ್ಜನೆ

ಸುರಪುರ: ಬೌದ್ಧಧಮ್ಮಕ್ಕೆ ಮರಳುವ ಮುನ್ನ ಹಿಂದೂ ದೇವರುಗಳ ಫೋಟೋ ನದಿಗೆ ವಿಸರ್ಜನೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮಾರ್ಗವನ್ನು ಅನುಸರಿಸಿ, ಬೌದ್ಧಧಮ್ಮಕ್ಕೆ ಮರಳಲು ಸಿದ್ಧವಾಗಿರುವ ಬುದ್ಧ ವಿಹಾರ ಟ್ರಸ್ಟ್ ಪದಾಧಿಕಾರಿಗಳು ಹಿಂದೂ ದೇವರುಗಳ ಫೋಟೋಗಳನ್ನು ನದಿಗೆ ವಿಸರ್ಜಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಸುರಪುರ ನಗರದ ಗೋಲ್ಡರ್‌ ಕೇವ್‌ ಬುದ್ಧ ವಿಹಾರದಲ್ಲಿ ಅಕ್ಟೋಬರ್ 14ರಂದು ನಡೆಯುವ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮದಲ್ಲಿ ಬುದ್ಧ ವಿಹಾರ ಟ್ರಸ್ಟ್‌ನ ಪದಾಧಿಕಾರಿಗಳು ಸೇರಿ 500ಕ್ಕೂ ಹೆಚ್ಚು ಮಂದಿ ಬೌದ್ಧ ಧಮ್ಮವನ್ನು ಸ್ವೀಕರಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮ ತ್ಯಜಿಸುವ ಸಂಕೇತದ ರೂಪದಲ್ಲಿ ಸೋಮವಾರ ಟ್ರಸ್ಟ್‌ನ ಪದಾಧಿಕಾರಿಗಳು ಹಿಂದೂ ದೇವರ ಚಿತ್ರಗಳನ್ನು ಕೃಷ್ಣಾ ನದಿಯಲ್ಲಿ ವಿಸರ್ಜಿಸಿದ್ದಾರೆ.

‘ಪ್ರಜಾವಾಣಿ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ಟ್ರಸ್ಟ್‌ನ ಅಧ್ಯಕ್ಷ ವೆಂಕಟೇಶ ಹೊಸಮನಿ, “ನಾನು ಮನೆಯಲ್ಲಿ ಪೂಜಿಸುತ್ತಿದ್ದ ವೆಂಕಟರಮಣ, ಸಾಯಿಬಾಬಾ ಮೂರ್ತಿ, ಲಕ್ಷ್ಮಿ, ಸರಸ್ವತಿ, ಗಣಪತಿ, ಕೃಷ್ಣ ರಾಧೆ ಮುಂತಾದ ದೇವರ ಚಿತ್ರಗಳನ್ನು ತಿಂಥಣಿ ಸೇತುವೆಗೆ ಒಯ್ದು, ಅಲ್ಲಿಂದ ನದಿಯಲ್ಲಿ ವಿಸರ್ಜಿಸಿರುವೆ” ಎಂದಿದ್ದಾರೆ.

“ಬೌದ್ಧ ಧರ್ಮ ಸ್ವೀಕಾರಕ್ಕೆ ನನ್ನ ಪತ್ನಿ ಶಿವಮೊಗ್ಗೆಮ್ಮ ಮತ್ತು ಮೂವರ ಮಕ್ಕಳ ಸಂಪೂರ್ಣ ಒಪ್ಪಿಗೆ ಇದೆ. ಎಲ್ಲರೂ ಸಂತೋಷದಿಂದ ನನ್ನ ನಿರ್ಧಾರ ಸಹಮತ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ನಾಗಪುರದಲ್ಲಿ 1956ರ ಅಕ್ಟೋಬರ್ 14ರಂದು ಡಾ.ಅಂಬೇಡ್ಕರ್ ಅವರು ನಾಗಪುರದಲ್ಲಿ 5 ಲಕ್ಷ ಅನುಯಾಯಿಗಳ ಜೊತೆ ಬೌದ್ಧ ಧರ್ಮ ಸ್ವೀಕರಿಸಿದ್ದರು. ಈ ಪುಣ್ಯ ದಿನದಂದೇ ನಾವೆಲ್ಲರೂ ಬೌದ್ಧ ಧರ್ಮ ಸ್ವೀಕರಿಸುತ್ತೇವೆ” ಎಂದಿದ್ದಾರೆ.

ಹಿಂದೂ ದೇವರುಗಳ ಫೋಟೋವನ್ನು ನದಿಗೆ ವಿಸರ್ಜಿಸುವ ವೇಳೆ ಟ್ರಸ್ಟ್ ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ, ಪ್ರಮುಖರಾದ ಮಾಳಪ್ಪ ಕಿರದಳ್ಳಿ, ಭೀಮಣ್ಣ ಕಟ್ಟಿಮನಿ ಹಾಜರಿದ್ದರು.

ಬೌದ್ಧಧಮ್ಮ ಸ್ವೀಕಾರದ ಬಳಿಕ ದೆಹಲಿಯಲ್ಲಿ ವಿವಾದ

ದೆಹಲಿ ಕ್ಯಾಬಿನೆಟ್ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ‘ಧಾರ್ಮಿಕ ಮತಾಂತರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಉಂಟಾದ ವಿವಾದದ ನಡುವೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಗುಜರಾತ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಕೇಜ್ರಿವಾಲ್ ಅವರನ್ನು ‘ಹಿಂದೂ ವಿರೋಧಿ’ ಎಂದು ಪ್ರಚಾರ ಮಾಡಲಾಯಿತು. ಸ್ಕಲ್ ಕ್ಯಾಪ್ ಧರಿಸಿರುವ ಬ್ಯಾನರ್‌ಗಳನ್ನು ರಾಜ್ಯದ ಹಲವಾರು ನಗರಗಳಲ್ಲಿ ಹಾಕಲಾಗಿತ್ತು. ಕೇಜ್ರಿವಾಲ್ ಅವರ ಚಿತ್ರಗಳೊಂದಿಗೆ, “ನಾನು ಹಿಂದೂ ಧರ್ಮವನ್ನು ಹುಚ್ಚುತನವೆಂದು ಪರಿಗಣಿಸುತ್ತೇನೆ”, “ಹಿಂದೂ ವಿರೋಧಿ ಕೇಜ್ರಿವಾಲ್ ಗೋ ಬ್ಯಾಕ್” ಎಂಬ ಸಾಲುಗಳನ್ನು ಬರೆಯಲಾಗಿತ್ತು.

ಇದನ್ನೂ ಓದಿರಿ: ಕೋಲಾರ: ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಕ್ಕೆ ದಲಿತನ ಮೇಲೆ ಹಲ್ಲೆ; ಎಫ್‌ಐಆರ್‌

ಅಕ್ಟೋಬರ್ 5ರಂದು ಸುಮಾರು 10,000 ಹಿಂದೂಗಳು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದರು. ಅದರಲ್ಲಿ ರಾಜೇಂದ್ರ ಪಾಲ್‌ ಪಾಲ್ಗೊಂಡಿದ್ದರು. ವಿಷ್ಣು, ಶಿವ, ಬ್ರಹ್ಮ, ರಾಮ, ಕೃಷ್ಣ, ಗೌರಿ ಮತ್ತು ಗಣಪತಿಯಂತಹ ಹಿಂದೂ ದೇವತೆಗಳನ್ನು ಪ್ರಾರ್ಥಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿದ್ದವರು ಪ್ರತಿಜ್ಞೆ ಮಾಡಿದ್ದರು. ರಾಜೇಂದ್ರ ಅವರು ಆ ವೇಳೆ ಹಾಜರಿದ್ದರು. ರಾಜೇಂದ್ರ ಅವರ ರಾಜೀನಾಮೆಯ ಬಳಿಕ ಬೌದ್ಧಧಮ್ಮಕ್ಕೆ ಮರಳುವ ಚರ್ಚೆಗಳು ಮುನ್ನೆಲೆಗೆ ಬಂದಿವೆ.

22 ಪ್ರತಿಜ್ಞೆಗಳು

1956ರಲ್ಲಿ ನಾಗ್ಪುರದ ದೀಕ್ಷಾ ಭೂಮಿಯಲ್ಲಿ ಡಾ.ಅಂಬೇಡ್ಕರ್ ಅವರು ತಮ್ಮ 3,65,000 ಅನುಯಾಯಿಗಳೊಂದಿಗೆ ಹಿಂದೂ ಧರ್ಮವನ್ನು ತೊರೆದರು. ಈ ಸಂದರ್ಭದಲ್ಲಿ ಅವರು 22 ಪ್ರತಿಜ್ಞೆಗಳನ್ನು ಸ್ವೀಕರಿಸಿದ್ದರು. ಅವುಗಳು ಹೀಗಿವೆ.

  1. ನನಗೆ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  2. ದೇವರ ಅವತಾರವೆಂದು ನಂಬಲಾದ ರಾಮ ಮತ್ತು ಕೃಷ್ಣರಲ್ಲಿ ನನಗೆ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  3. ಗೌರಿ, ಗಣಪತಿ ಮತ್ತು ಇತರ ಹಿಂದೂಗಳ ದೇವರುಗಳಲ್ಲಿ ನನಗೆ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  4. ನನಗೆ ದೇವರ ಅವತಾರದಲ್ಲಿ ನಂಬಿಕೆ ಇಲ್ಲ.
  5. ಭಗವಾನ್ ಬುದ್ಧ ವಿಷ್ಣುವಿನ ಅವತಾರ ಎಂದು ನಾನು ನಂಬುವುದಿಲ್ಲ. ಇದು ಸಂಪೂರ್ಣ ಹುಚ್ಚುತನ ಮತ್ತು ಸುಳ್ಳಿನ ಪ್ರಚಾರವೆಂದು ನಂಬುತ್ತೇನೆ.
  6. ನಾನು ‘ಶ್ರಾದ್ಧ’ವನ್ನು ಮಾಡುವುದಿಲ್ಲ ಅಥವಾ ‘ಪಿಂಡ-ದಾನ’ ನೀಡುವುದಿಲ್ಲ.
  7. ನಾನು ಬುದ್ಧನ ತತ್ವಗಳು ಮತ್ತು ಬೋಧನೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ವರ್ತಿಸುವುದಿಲ್ಲ.
  8. ನಾನು ಬ್ರಾಹ್ಮಣರಿಂದ ಯಾವುದೇ ಸಮಾರಂಭಗಳನ್ನು ಮಾಡಿಸುವುದಿಲ್ಲ.
  9. ನಾನು ಮನುಷ್ಯ ಸಮಾನತೆಯನ್ನು ನಂಬುತ್ತೇನೆ.
  10. ನಾನು ಸಮಾನತೆಯನ್ನು ತರಲು ಪ್ರಯತ್ನಿಸುತ್ತೇನೆ.
  11. ನಾನು ಬುದ್ಧನ ‘ಉದಾತ್ತವಾದ ಎಂಟು ಮಾರ್ಗಗಳನ್ನು’ ಅನುಸರಿಸುತ್ತೇನೆ.
  12. ನಾನು ಬುದ್ಧನು ಸೂಚಿಸಿದ ‘ಪರಮಿತಗಳನ್ನು’ ಅನುಸರಿಸುತ್ತೇನೆ.
  13. ನಾನು ಎಲ್ಲಾ ಜೀವಿಗಳ ಬಗ್ಗೆ ಸಹಾನುಭೂತಿ, ಪ್ರೀತಿ ಮತ್ತು ದಯೆಯನ್ನು ಹೊಂದಿದ್ದೇನೆ, ಅವುಗಳನ್ನು ರಕ್ಷಿಸುತ್ತೇನೆ.
  14. ನಾನು ಕದಿಯುವುದಿಲ್ಲ.
  15. ನಾನು ಸುಳ್ಳು ಹೇಳುವುದಿಲ್ಲ.
  16. ನಾನು ವಿಷಯಲೋಲುಪತೆಯ ಪಾಪಗಳನ್ನು ಮಾಡುವುದಿಲ್ಲ.
  17. ನಾನು ಮದ್ಯ, ಡ್ರಗ್ಸ್ ಮುಂತಾದ ಅಮಲು ಪದಾರ್ಥಗಳನ್ನು ತೆಗೆದುಕೊಳ್ಳುವುದಿಲ್ಲ.
  18. ನಾನು ಉದಾತ್ತವಾದ ಎಂಟು ಮಾರ್ಗಗಳನ್ನು ಅನುಸರಿಸಲು ಪ್ರಯತ್ನಿಸುತ್ತೇನೆ. ದೈನಂದಿನ ಜೀವನದಲ್ಲಿ ಸಹಾನುಭೂತಿ ಮತ್ತು ಪ್ರೀತಿಯ ದಯೆಯನ್ನು ಅಭ್ಯಾಸ ಮಾಡುತ್ತೇನೆ.
  19. ಮಾನವೀಯತೆಗೆ ಹಾನಿಕಾರಕವಾದ ಮತ್ತು ಮಾನವೀಯತೆಯ ಪ್ರಗತಿ ಮತ್ತು ಅಭಿವೃದ್ಧಿಗೆ ಅಡ್ಡಿಯುಂಟುಮಾಡುವ ಹಿಂದೂ ಧರ್ಮವನ್ನು ನಾನು ತ್ಯಜಿಸುತ್ತೇನೆ. ಏಕೆಂದರೆ ಅದು ಅಸಮಾನತೆಯನ್ನು ಆಧರಿಸಿದೆ. ಬೌದ್ಧ ಧರ್ಮವನ್ನು ನನ್ನ ಧರ್ಮವಾಗಿ ಸ್ವೀಕರಿಸುತ್ತೇನೆ.
  20. ಬುದ್ಧನ ಧಮ್ಮ ಒಂದೇ ನಿಜವಾದ ಧರ್ಮ ಎಂದು ನಾನು ದೃಢವಾಗಿ ನಂಬುತ್ತೇನೆ.
  21. ನನಗೆ ಪುನರ್ಜನ್ಮವಿದೆ ಎಂದು ನಾನು ನಂಬುತ್ತೇನೆ.
  22. ನಾನು ಇನ್ನು ಮುಂದೆ ಬುದ್ಧನ ತತ್ವಗಳು, ಬೋಧನೆಗಳ ಪ್ರಕಾರ ಮತ್ತು ಅವನ ಧಮ್ಮದ ಪ್ರಕಾರ ನನ್ನ ಜೀವನವನ್ನು ನಡೆಸುತ್ತೇನೆ ಎಂದು ನಾನು ಗಂಭೀರವಾಗಿ ಘೋಷಿಸುತ್ತೇನೆ ಮತ್ತು ದೃಢೀಕರಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....