Homeದಲಿತ್ ಫೈಲ್ಸ್ಸುರಪುರ: ಬೌದ್ಧಧಮ್ಮಕ್ಕೆ ಮರಳುವ ಮುನ್ನ ಹಿಂದೂ ದೇವರುಗಳ ಫೋಟೋ ನದಿಗೆ ವಿಸರ್ಜನೆ

ಸುರಪುರ: ಬೌದ್ಧಧಮ್ಮಕ್ಕೆ ಮರಳುವ ಮುನ್ನ ಹಿಂದೂ ದೇವರುಗಳ ಫೋಟೋ ನದಿಗೆ ವಿಸರ್ಜನೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮಾರ್ಗವನ್ನು ಅನುಸರಿಸಿ, ಬೌದ್ಧಧಮ್ಮಕ್ಕೆ ಮರಳಲು ಸಿದ್ಧವಾಗಿರುವ ಬುದ್ಧ ವಿಹಾರ ಟ್ರಸ್ಟ್ ಪದಾಧಿಕಾರಿಗಳು ಹಿಂದೂ ದೇವರುಗಳ ಫೋಟೋಗಳನ್ನು ನದಿಗೆ ವಿಸರ್ಜಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಸುರಪುರ ನಗರದ ಗೋಲ್ಡರ್‌ ಕೇವ್‌ ಬುದ್ಧ ವಿಹಾರದಲ್ಲಿ ಅಕ್ಟೋಬರ್ 14ರಂದು ನಡೆಯುವ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮದಲ್ಲಿ ಬುದ್ಧ ವಿಹಾರ ಟ್ರಸ್ಟ್‌ನ ಪದಾಧಿಕಾರಿಗಳು ಸೇರಿ 500ಕ್ಕೂ ಹೆಚ್ಚು ಮಂದಿ ಬೌದ್ಧ ಧಮ್ಮವನ್ನು ಸ್ವೀಕರಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮ ತ್ಯಜಿಸುವ ಸಂಕೇತದ ರೂಪದಲ್ಲಿ ಸೋಮವಾರ ಟ್ರಸ್ಟ್‌ನ ಪದಾಧಿಕಾರಿಗಳು ಹಿಂದೂ ದೇವರ ಚಿತ್ರಗಳನ್ನು ಕೃಷ್ಣಾ ನದಿಯಲ್ಲಿ ವಿಸರ್ಜಿಸಿದ್ದಾರೆ.

‘ಪ್ರಜಾವಾಣಿ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ಟ್ರಸ್ಟ್‌ನ ಅಧ್ಯಕ್ಷ ವೆಂಕಟೇಶ ಹೊಸಮನಿ, “ನಾನು ಮನೆಯಲ್ಲಿ ಪೂಜಿಸುತ್ತಿದ್ದ ವೆಂಕಟರಮಣ, ಸಾಯಿಬಾಬಾ ಮೂರ್ತಿ, ಲಕ್ಷ್ಮಿ, ಸರಸ್ವತಿ, ಗಣಪತಿ, ಕೃಷ್ಣ ರಾಧೆ ಮುಂತಾದ ದೇವರ ಚಿತ್ರಗಳನ್ನು ತಿಂಥಣಿ ಸೇತುವೆಗೆ ಒಯ್ದು, ಅಲ್ಲಿಂದ ನದಿಯಲ್ಲಿ ವಿಸರ್ಜಿಸಿರುವೆ” ಎಂದಿದ್ದಾರೆ.

“ಬೌದ್ಧ ಧರ್ಮ ಸ್ವೀಕಾರಕ್ಕೆ ನನ್ನ ಪತ್ನಿ ಶಿವಮೊಗ್ಗೆಮ್ಮ ಮತ್ತು ಮೂವರ ಮಕ್ಕಳ ಸಂಪೂರ್ಣ ಒಪ್ಪಿಗೆ ಇದೆ. ಎಲ್ಲರೂ ಸಂತೋಷದಿಂದ ನನ್ನ ನಿರ್ಧಾರ ಸಹಮತ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ನಾಗಪುರದಲ್ಲಿ 1956ರ ಅಕ್ಟೋಬರ್ 14ರಂದು ಡಾ.ಅಂಬೇಡ್ಕರ್ ಅವರು ನಾಗಪುರದಲ್ಲಿ 5 ಲಕ್ಷ ಅನುಯಾಯಿಗಳ ಜೊತೆ ಬೌದ್ಧ ಧರ್ಮ ಸ್ವೀಕರಿಸಿದ್ದರು. ಈ ಪುಣ್ಯ ದಿನದಂದೇ ನಾವೆಲ್ಲರೂ ಬೌದ್ಧ ಧರ್ಮ ಸ್ವೀಕರಿಸುತ್ತೇವೆ” ಎಂದಿದ್ದಾರೆ.

ಹಿಂದೂ ದೇವರುಗಳ ಫೋಟೋವನ್ನು ನದಿಗೆ ವಿಸರ್ಜಿಸುವ ವೇಳೆ ಟ್ರಸ್ಟ್ ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ, ಪ್ರಮುಖರಾದ ಮಾಳಪ್ಪ ಕಿರದಳ್ಳಿ, ಭೀಮಣ್ಣ ಕಟ್ಟಿಮನಿ ಹಾಜರಿದ್ದರು.

ಬೌದ್ಧಧಮ್ಮ ಸ್ವೀಕಾರದ ಬಳಿಕ ದೆಹಲಿಯಲ್ಲಿ ವಿವಾದ

ದೆಹಲಿ ಕ್ಯಾಬಿನೆಟ್ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ‘ಧಾರ್ಮಿಕ ಮತಾಂತರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಉಂಟಾದ ವಿವಾದದ ನಡುವೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಗುಜರಾತ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಕೇಜ್ರಿವಾಲ್ ಅವರನ್ನು ‘ಹಿಂದೂ ವಿರೋಧಿ’ ಎಂದು ಪ್ರಚಾರ ಮಾಡಲಾಯಿತು. ಸ್ಕಲ್ ಕ್ಯಾಪ್ ಧರಿಸಿರುವ ಬ್ಯಾನರ್‌ಗಳನ್ನು ರಾಜ್ಯದ ಹಲವಾರು ನಗರಗಳಲ್ಲಿ ಹಾಕಲಾಗಿತ್ತು. ಕೇಜ್ರಿವಾಲ್ ಅವರ ಚಿತ್ರಗಳೊಂದಿಗೆ, “ನಾನು ಹಿಂದೂ ಧರ್ಮವನ್ನು ಹುಚ್ಚುತನವೆಂದು ಪರಿಗಣಿಸುತ್ತೇನೆ”, “ಹಿಂದೂ ವಿರೋಧಿ ಕೇಜ್ರಿವಾಲ್ ಗೋ ಬ್ಯಾಕ್” ಎಂಬ ಸಾಲುಗಳನ್ನು ಬರೆಯಲಾಗಿತ್ತು.

ಇದನ್ನೂ ಓದಿರಿ: ಕೋಲಾರ: ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಕ್ಕೆ ದಲಿತನ ಮೇಲೆ ಹಲ್ಲೆ; ಎಫ್‌ಐಆರ್‌

ಅಕ್ಟೋಬರ್ 5ರಂದು ಸುಮಾರು 10,000 ಹಿಂದೂಗಳು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದರು. ಅದರಲ್ಲಿ ರಾಜೇಂದ್ರ ಪಾಲ್‌ ಪಾಲ್ಗೊಂಡಿದ್ದರು. ವಿಷ್ಣು, ಶಿವ, ಬ್ರಹ್ಮ, ರಾಮ, ಕೃಷ್ಣ, ಗೌರಿ ಮತ್ತು ಗಣಪತಿಯಂತಹ ಹಿಂದೂ ದೇವತೆಗಳನ್ನು ಪ್ರಾರ್ಥಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿದ್ದವರು ಪ್ರತಿಜ್ಞೆ ಮಾಡಿದ್ದರು. ರಾಜೇಂದ್ರ ಅವರು ಆ ವೇಳೆ ಹಾಜರಿದ್ದರು. ರಾಜೇಂದ್ರ ಅವರ ರಾಜೀನಾಮೆಯ ಬಳಿಕ ಬೌದ್ಧಧಮ್ಮಕ್ಕೆ ಮರಳುವ ಚರ್ಚೆಗಳು ಮುನ್ನೆಲೆಗೆ ಬಂದಿವೆ.

22 ಪ್ರತಿಜ್ಞೆಗಳು

1956ರಲ್ಲಿ ನಾಗ್ಪುರದ ದೀಕ್ಷಾ ಭೂಮಿಯಲ್ಲಿ ಡಾ.ಅಂಬೇಡ್ಕರ್ ಅವರು ತಮ್ಮ 3,65,000 ಅನುಯಾಯಿಗಳೊಂದಿಗೆ ಹಿಂದೂ ಧರ್ಮವನ್ನು ತೊರೆದರು. ಈ ಸಂದರ್ಭದಲ್ಲಿ ಅವರು 22 ಪ್ರತಿಜ್ಞೆಗಳನ್ನು ಸ್ವೀಕರಿಸಿದ್ದರು. ಅವುಗಳು ಹೀಗಿವೆ.

  1. ನನಗೆ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  2. ದೇವರ ಅವತಾರವೆಂದು ನಂಬಲಾದ ರಾಮ ಮತ್ತು ಕೃಷ್ಣರಲ್ಲಿ ನನಗೆ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  3. ಗೌರಿ, ಗಣಪತಿ ಮತ್ತು ಇತರ ಹಿಂದೂಗಳ ದೇವರುಗಳಲ್ಲಿ ನನಗೆ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  4. ನನಗೆ ದೇವರ ಅವತಾರದಲ್ಲಿ ನಂಬಿಕೆ ಇಲ್ಲ.
  5. ಭಗವಾನ್ ಬುದ್ಧ ವಿಷ್ಣುವಿನ ಅವತಾರ ಎಂದು ನಾನು ನಂಬುವುದಿಲ್ಲ. ಇದು ಸಂಪೂರ್ಣ ಹುಚ್ಚುತನ ಮತ್ತು ಸುಳ್ಳಿನ ಪ್ರಚಾರವೆಂದು ನಂಬುತ್ತೇನೆ.
  6. ನಾನು ‘ಶ್ರಾದ್ಧ’ವನ್ನು ಮಾಡುವುದಿಲ್ಲ ಅಥವಾ ‘ಪಿಂಡ-ದಾನ’ ನೀಡುವುದಿಲ್ಲ.
  7. ನಾನು ಬುದ್ಧನ ತತ್ವಗಳು ಮತ್ತು ಬೋಧನೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ವರ್ತಿಸುವುದಿಲ್ಲ.
  8. ನಾನು ಬ್ರಾಹ್ಮಣರಿಂದ ಯಾವುದೇ ಸಮಾರಂಭಗಳನ್ನು ಮಾಡಿಸುವುದಿಲ್ಲ.
  9. ನಾನು ಮನುಷ್ಯ ಸಮಾನತೆಯನ್ನು ನಂಬುತ್ತೇನೆ.
  10. ನಾನು ಸಮಾನತೆಯನ್ನು ತರಲು ಪ್ರಯತ್ನಿಸುತ್ತೇನೆ.
  11. ನಾನು ಬುದ್ಧನ ‘ಉದಾತ್ತವಾದ ಎಂಟು ಮಾರ್ಗಗಳನ್ನು’ ಅನುಸರಿಸುತ್ತೇನೆ.
  12. ನಾನು ಬುದ್ಧನು ಸೂಚಿಸಿದ ‘ಪರಮಿತಗಳನ್ನು’ ಅನುಸರಿಸುತ್ತೇನೆ.
  13. ನಾನು ಎಲ್ಲಾ ಜೀವಿಗಳ ಬಗ್ಗೆ ಸಹಾನುಭೂತಿ, ಪ್ರೀತಿ ಮತ್ತು ದಯೆಯನ್ನು ಹೊಂದಿದ್ದೇನೆ, ಅವುಗಳನ್ನು ರಕ್ಷಿಸುತ್ತೇನೆ.
  14. ನಾನು ಕದಿಯುವುದಿಲ್ಲ.
  15. ನಾನು ಸುಳ್ಳು ಹೇಳುವುದಿಲ್ಲ.
  16. ನಾನು ವಿಷಯಲೋಲುಪತೆಯ ಪಾಪಗಳನ್ನು ಮಾಡುವುದಿಲ್ಲ.
  17. ನಾನು ಮದ್ಯ, ಡ್ರಗ್ಸ್ ಮುಂತಾದ ಅಮಲು ಪದಾರ್ಥಗಳನ್ನು ತೆಗೆದುಕೊಳ್ಳುವುದಿಲ್ಲ.
  18. ನಾನು ಉದಾತ್ತವಾದ ಎಂಟು ಮಾರ್ಗಗಳನ್ನು ಅನುಸರಿಸಲು ಪ್ರಯತ್ನಿಸುತ್ತೇನೆ. ದೈನಂದಿನ ಜೀವನದಲ್ಲಿ ಸಹಾನುಭೂತಿ ಮತ್ತು ಪ್ರೀತಿಯ ದಯೆಯನ್ನು ಅಭ್ಯಾಸ ಮಾಡುತ್ತೇನೆ.
  19. ಮಾನವೀಯತೆಗೆ ಹಾನಿಕಾರಕವಾದ ಮತ್ತು ಮಾನವೀಯತೆಯ ಪ್ರಗತಿ ಮತ್ತು ಅಭಿವೃದ್ಧಿಗೆ ಅಡ್ಡಿಯುಂಟುಮಾಡುವ ಹಿಂದೂ ಧರ್ಮವನ್ನು ನಾನು ತ್ಯಜಿಸುತ್ತೇನೆ. ಏಕೆಂದರೆ ಅದು ಅಸಮಾನತೆಯನ್ನು ಆಧರಿಸಿದೆ. ಬೌದ್ಧ ಧರ್ಮವನ್ನು ನನ್ನ ಧರ್ಮವಾಗಿ ಸ್ವೀಕರಿಸುತ್ತೇನೆ.
  20. ಬುದ್ಧನ ಧಮ್ಮ ಒಂದೇ ನಿಜವಾದ ಧರ್ಮ ಎಂದು ನಾನು ದೃಢವಾಗಿ ನಂಬುತ್ತೇನೆ.
  21. ನನಗೆ ಪುನರ್ಜನ್ಮವಿದೆ ಎಂದು ನಾನು ನಂಬುತ್ತೇನೆ.
  22. ನಾನು ಇನ್ನು ಮುಂದೆ ಬುದ್ಧನ ತತ್ವಗಳು, ಬೋಧನೆಗಳ ಪ್ರಕಾರ ಮತ್ತು ಅವನ ಧಮ್ಮದ ಪ್ರಕಾರ ನನ್ನ ಜೀವನವನ್ನು ನಡೆಸುತ್ತೇನೆ ಎಂದು ನಾನು ಗಂಭೀರವಾಗಿ ಘೋಷಿಸುತ್ತೇನೆ ಮತ್ತು ದೃಢೀಕರಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...