Homeದಲಿತ್ ಫೈಲ್ಸ್ಸುರಪುರ: ಬೌದ್ಧಧಮ್ಮಕ್ಕೆ ಮರಳುವ ಮುನ್ನ ಹಿಂದೂ ದೇವರುಗಳ ಫೋಟೋ ನದಿಗೆ ವಿಸರ್ಜನೆ

ಸುರಪುರ: ಬೌದ್ಧಧಮ್ಮಕ್ಕೆ ಮರಳುವ ಮುನ್ನ ಹಿಂದೂ ದೇವರುಗಳ ಫೋಟೋ ನದಿಗೆ ವಿಸರ್ಜನೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮಾರ್ಗವನ್ನು ಅನುಸರಿಸಿ, ಬೌದ್ಧಧಮ್ಮಕ್ಕೆ ಮರಳಲು ಸಿದ್ಧವಾಗಿರುವ ಬುದ್ಧ ವಿಹಾರ ಟ್ರಸ್ಟ್ ಪದಾಧಿಕಾರಿಗಳು ಹಿಂದೂ ದೇವರುಗಳ ಫೋಟೋಗಳನ್ನು ನದಿಗೆ ವಿಸರ್ಜಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಸುರಪುರ ನಗರದ ಗೋಲ್ಡರ್‌ ಕೇವ್‌ ಬುದ್ಧ ವಿಹಾರದಲ್ಲಿ ಅಕ್ಟೋಬರ್ 14ರಂದು ನಡೆಯುವ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮದಲ್ಲಿ ಬುದ್ಧ ವಿಹಾರ ಟ್ರಸ್ಟ್‌ನ ಪದಾಧಿಕಾರಿಗಳು ಸೇರಿ 500ಕ್ಕೂ ಹೆಚ್ಚು ಮಂದಿ ಬೌದ್ಧ ಧಮ್ಮವನ್ನು ಸ್ವೀಕರಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮ ತ್ಯಜಿಸುವ ಸಂಕೇತದ ರೂಪದಲ್ಲಿ ಸೋಮವಾರ ಟ್ರಸ್ಟ್‌ನ ಪದಾಧಿಕಾರಿಗಳು ಹಿಂದೂ ದೇವರ ಚಿತ್ರಗಳನ್ನು ಕೃಷ್ಣಾ ನದಿಯಲ್ಲಿ ವಿಸರ್ಜಿಸಿದ್ದಾರೆ.

‘ಪ್ರಜಾವಾಣಿ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿರುವ ಟ್ರಸ್ಟ್‌ನ ಅಧ್ಯಕ್ಷ ವೆಂಕಟೇಶ ಹೊಸಮನಿ, “ನಾನು ಮನೆಯಲ್ಲಿ ಪೂಜಿಸುತ್ತಿದ್ದ ವೆಂಕಟರಮಣ, ಸಾಯಿಬಾಬಾ ಮೂರ್ತಿ, ಲಕ್ಷ್ಮಿ, ಸರಸ್ವತಿ, ಗಣಪತಿ, ಕೃಷ್ಣ ರಾಧೆ ಮುಂತಾದ ದೇವರ ಚಿತ್ರಗಳನ್ನು ತಿಂಥಣಿ ಸೇತುವೆಗೆ ಒಯ್ದು, ಅಲ್ಲಿಂದ ನದಿಯಲ್ಲಿ ವಿಸರ್ಜಿಸಿರುವೆ” ಎಂದಿದ್ದಾರೆ.

“ಬೌದ್ಧ ಧರ್ಮ ಸ್ವೀಕಾರಕ್ಕೆ ನನ್ನ ಪತ್ನಿ ಶಿವಮೊಗ್ಗೆಮ್ಮ ಮತ್ತು ಮೂವರ ಮಕ್ಕಳ ಸಂಪೂರ್ಣ ಒಪ್ಪಿಗೆ ಇದೆ. ಎಲ್ಲರೂ ಸಂತೋಷದಿಂದ ನನ್ನ ನಿರ್ಧಾರ ಸಹಮತ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ನಾಗಪುರದಲ್ಲಿ 1956ರ ಅಕ್ಟೋಬರ್ 14ರಂದು ಡಾ.ಅಂಬೇಡ್ಕರ್ ಅವರು ನಾಗಪುರದಲ್ಲಿ 5 ಲಕ್ಷ ಅನುಯಾಯಿಗಳ ಜೊತೆ ಬೌದ್ಧ ಧರ್ಮ ಸ್ವೀಕರಿಸಿದ್ದರು. ಈ ಪುಣ್ಯ ದಿನದಂದೇ ನಾವೆಲ್ಲರೂ ಬೌದ್ಧ ಧರ್ಮ ಸ್ವೀಕರಿಸುತ್ತೇವೆ” ಎಂದಿದ್ದಾರೆ.

ಹಿಂದೂ ದೇವರುಗಳ ಫೋಟೋವನ್ನು ನದಿಗೆ ವಿಸರ್ಜಿಸುವ ವೇಳೆ ಟ್ರಸ್ಟ್ ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ, ಪ್ರಮುಖರಾದ ಮಾಳಪ್ಪ ಕಿರದಳ್ಳಿ, ಭೀಮಣ್ಣ ಕಟ್ಟಿಮನಿ ಹಾಜರಿದ್ದರು.

ಬೌದ್ಧಧಮ್ಮ ಸ್ವೀಕಾರದ ಬಳಿಕ ದೆಹಲಿಯಲ್ಲಿ ವಿವಾದ

ದೆಹಲಿ ಕ್ಯಾಬಿನೆಟ್ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ‘ಧಾರ್ಮಿಕ ಮತಾಂತರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಉಂಟಾದ ವಿವಾದದ ನಡುವೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಗುಜರಾತ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಕೇಜ್ರಿವಾಲ್ ಅವರನ್ನು ‘ಹಿಂದೂ ವಿರೋಧಿ’ ಎಂದು ಪ್ರಚಾರ ಮಾಡಲಾಯಿತು. ಸ್ಕಲ್ ಕ್ಯಾಪ್ ಧರಿಸಿರುವ ಬ್ಯಾನರ್‌ಗಳನ್ನು ರಾಜ್ಯದ ಹಲವಾರು ನಗರಗಳಲ್ಲಿ ಹಾಕಲಾಗಿತ್ತು. ಕೇಜ್ರಿವಾಲ್ ಅವರ ಚಿತ್ರಗಳೊಂದಿಗೆ, “ನಾನು ಹಿಂದೂ ಧರ್ಮವನ್ನು ಹುಚ್ಚುತನವೆಂದು ಪರಿಗಣಿಸುತ್ತೇನೆ”, “ಹಿಂದೂ ವಿರೋಧಿ ಕೇಜ್ರಿವಾಲ್ ಗೋ ಬ್ಯಾಕ್” ಎಂಬ ಸಾಲುಗಳನ್ನು ಬರೆಯಲಾಗಿತ್ತು.

ಇದನ್ನೂ ಓದಿರಿ: ಕೋಲಾರ: ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಕ್ಕೆ ದಲಿತನ ಮೇಲೆ ಹಲ್ಲೆ; ಎಫ್‌ಐಆರ್‌

ಅಕ್ಟೋಬರ್ 5ರಂದು ಸುಮಾರು 10,000 ಹಿಂದೂಗಳು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದರು. ಅದರಲ್ಲಿ ರಾಜೇಂದ್ರ ಪಾಲ್‌ ಪಾಲ್ಗೊಂಡಿದ್ದರು. ವಿಷ್ಣು, ಶಿವ, ಬ್ರಹ್ಮ, ರಾಮ, ಕೃಷ್ಣ, ಗೌರಿ ಮತ್ತು ಗಣಪತಿಯಂತಹ ಹಿಂದೂ ದೇವತೆಗಳನ್ನು ಪ್ರಾರ್ಥಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿದ್ದವರು ಪ್ರತಿಜ್ಞೆ ಮಾಡಿದ್ದರು. ರಾಜೇಂದ್ರ ಅವರು ಆ ವೇಳೆ ಹಾಜರಿದ್ದರು. ರಾಜೇಂದ್ರ ಅವರ ರಾಜೀನಾಮೆಯ ಬಳಿಕ ಬೌದ್ಧಧಮ್ಮಕ್ಕೆ ಮರಳುವ ಚರ್ಚೆಗಳು ಮುನ್ನೆಲೆಗೆ ಬಂದಿವೆ.

22 ಪ್ರತಿಜ್ಞೆಗಳು

1956ರಲ್ಲಿ ನಾಗ್ಪುರದ ದೀಕ್ಷಾ ಭೂಮಿಯಲ್ಲಿ ಡಾ.ಅಂಬೇಡ್ಕರ್ ಅವರು ತಮ್ಮ 3,65,000 ಅನುಯಾಯಿಗಳೊಂದಿಗೆ ಹಿಂದೂ ಧರ್ಮವನ್ನು ತೊರೆದರು. ಈ ಸಂದರ್ಭದಲ್ಲಿ ಅವರು 22 ಪ್ರತಿಜ್ಞೆಗಳನ್ನು ಸ್ವೀಕರಿಸಿದ್ದರು. ಅವುಗಳು ಹೀಗಿವೆ.

  1. ನನಗೆ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  2. ದೇವರ ಅವತಾರವೆಂದು ನಂಬಲಾದ ರಾಮ ಮತ್ತು ಕೃಷ್ಣರಲ್ಲಿ ನನಗೆ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  3. ಗೌರಿ, ಗಣಪತಿ ಮತ್ತು ಇತರ ಹಿಂದೂಗಳ ದೇವರುಗಳಲ್ಲಿ ನನಗೆ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  4. ನನಗೆ ದೇವರ ಅವತಾರದಲ್ಲಿ ನಂಬಿಕೆ ಇಲ್ಲ.
  5. ಭಗವಾನ್ ಬುದ್ಧ ವಿಷ್ಣುವಿನ ಅವತಾರ ಎಂದು ನಾನು ನಂಬುವುದಿಲ್ಲ. ಇದು ಸಂಪೂರ್ಣ ಹುಚ್ಚುತನ ಮತ್ತು ಸುಳ್ಳಿನ ಪ್ರಚಾರವೆಂದು ನಂಬುತ್ತೇನೆ.
  6. ನಾನು ‘ಶ್ರಾದ್ಧ’ವನ್ನು ಮಾಡುವುದಿಲ್ಲ ಅಥವಾ ‘ಪಿಂಡ-ದಾನ’ ನೀಡುವುದಿಲ್ಲ.
  7. ನಾನು ಬುದ್ಧನ ತತ್ವಗಳು ಮತ್ತು ಬೋಧನೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ವರ್ತಿಸುವುದಿಲ್ಲ.
  8. ನಾನು ಬ್ರಾಹ್ಮಣರಿಂದ ಯಾವುದೇ ಸಮಾರಂಭಗಳನ್ನು ಮಾಡಿಸುವುದಿಲ್ಲ.
  9. ನಾನು ಮನುಷ್ಯ ಸಮಾನತೆಯನ್ನು ನಂಬುತ್ತೇನೆ.
  10. ನಾನು ಸಮಾನತೆಯನ್ನು ತರಲು ಪ್ರಯತ್ನಿಸುತ್ತೇನೆ.
  11. ನಾನು ಬುದ್ಧನ ‘ಉದಾತ್ತವಾದ ಎಂಟು ಮಾರ್ಗಗಳನ್ನು’ ಅನುಸರಿಸುತ್ತೇನೆ.
  12. ನಾನು ಬುದ್ಧನು ಸೂಚಿಸಿದ ‘ಪರಮಿತಗಳನ್ನು’ ಅನುಸರಿಸುತ್ತೇನೆ.
  13. ನಾನು ಎಲ್ಲಾ ಜೀವಿಗಳ ಬಗ್ಗೆ ಸಹಾನುಭೂತಿ, ಪ್ರೀತಿ ಮತ್ತು ದಯೆಯನ್ನು ಹೊಂದಿದ್ದೇನೆ, ಅವುಗಳನ್ನು ರಕ್ಷಿಸುತ್ತೇನೆ.
  14. ನಾನು ಕದಿಯುವುದಿಲ್ಲ.
  15. ನಾನು ಸುಳ್ಳು ಹೇಳುವುದಿಲ್ಲ.
  16. ನಾನು ವಿಷಯಲೋಲುಪತೆಯ ಪಾಪಗಳನ್ನು ಮಾಡುವುದಿಲ್ಲ.
  17. ನಾನು ಮದ್ಯ, ಡ್ರಗ್ಸ್ ಮುಂತಾದ ಅಮಲು ಪದಾರ್ಥಗಳನ್ನು ತೆಗೆದುಕೊಳ್ಳುವುದಿಲ್ಲ.
  18. ನಾನು ಉದಾತ್ತವಾದ ಎಂಟು ಮಾರ್ಗಗಳನ್ನು ಅನುಸರಿಸಲು ಪ್ರಯತ್ನಿಸುತ್ತೇನೆ. ದೈನಂದಿನ ಜೀವನದಲ್ಲಿ ಸಹಾನುಭೂತಿ ಮತ್ತು ಪ್ರೀತಿಯ ದಯೆಯನ್ನು ಅಭ್ಯಾಸ ಮಾಡುತ್ತೇನೆ.
  19. ಮಾನವೀಯತೆಗೆ ಹಾನಿಕಾರಕವಾದ ಮತ್ತು ಮಾನವೀಯತೆಯ ಪ್ರಗತಿ ಮತ್ತು ಅಭಿವೃದ್ಧಿಗೆ ಅಡ್ಡಿಯುಂಟುಮಾಡುವ ಹಿಂದೂ ಧರ್ಮವನ್ನು ನಾನು ತ್ಯಜಿಸುತ್ತೇನೆ. ಏಕೆಂದರೆ ಅದು ಅಸಮಾನತೆಯನ್ನು ಆಧರಿಸಿದೆ. ಬೌದ್ಧ ಧರ್ಮವನ್ನು ನನ್ನ ಧರ್ಮವಾಗಿ ಸ್ವೀಕರಿಸುತ್ತೇನೆ.
  20. ಬುದ್ಧನ ಧಮ್ಮ ಒಂದೇ ನಿಜವಾದ ಧರ್ಮ ಎಂದು ನಾನು ದೃಢವಾಗಿ ನಂಬುತ್ತೇನೆ.
  21. ನನಗೆ ಪುನರ್ಜನ್ಮವಿದೆ ಎಂದು ನಾನು ನಂಬುತ್ತೇನೆ.
  22. ನಾನು ಇನ್ನು ಮುಂದೆ ಬುದ್ಧನ ತತ್ವಗಳು, ಬೋಧನೆಗಳ ಪ್ರಕಾರ ಮತ್ತು ಅವನ ಧಮ್ಮದ ಪ್ರಕಾರ ನನ್ನ ಜೀವನವನ್ನು ನಡೆಸುತ್ತೇನೆ ಎಂದು ನಾನು ಗಂಭೀರವಾಗಿ ಘೋಷಿಸುತ್ತೇನೆ ಮತ್ತು ದೃಢೀಕರಿಸುತ್ತೇನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...