Homeಮುಖಪುಟಜೂನ್ 2 ರಂದು ಜೈಲಿಗೆ ಶರಣಾಗತಿ: 'ಗಂಭೀರ ಕಾಯಿಲೆಯ ಲಕ್ಷಣಗಳಿವೆ' ಎಂದ ಅರವಿಂದ್ ಕೇಜ್ರಿವಾಲ್

ಜೂನ್ 2 ರಂದು ಜೈಲಿಗೆ ಶರಣಾಗತಿ: ‘ಗಂಭೀರ ಕಾಯಿಲೆಯ ಲಕ್ಷಣಗಳಿವೆ’ ಎಂದ ಅರವಿಂದ್ ಕೇಜ್ರಿವಾಲ್

- Advertisement -
- Advertisement -

ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 2 ರಂದು (ಭಾನುವಾರ) ತಿಹಾರ್ ಜೈಲಿನಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ. ಮೇ 10 ರಿಂದ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಕೇಜ್ರಿವಾಲ್, ಅವರ ದೇಹವು “ಗಂಭೀರ ಕಾಯಿಲೆ”ಯ ಕೆಲವು ಲಕ್ಷಣಗಳನ್ನು ಹೊಂದಿರಬಹುದು ಎಂದು ವೈದ್ಯರು ಹೇಳಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ‘ನನ್ನನ್ನು ಎಷ್ಟು ದಿನ ಜೈಲಿನಲ್ಲಿ ಇರಿಸಲಾಗುತ್ತದೆ ಎಂದು ನನಗೆ ತಿಳಿದಿಲ್ಲ. ದೇಶವನ್ನು ಸರ್ವಾಧಿಕಾರದಿಂದ ಪಾರುಮಾಡಲು ಮತ್ತೆ ಜೈಲಿಗೆ ಹೋಗುತ್ತೇನೆ. ಎಂದ ನನ್ನ ಆತ್ಮಶಕ್ತಿ ಹೆಚ್ಚಿದೆ’ ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, “ಅವರು ನನ್ನನ್ನು ಮುರಿಯಲು ಹಲವು ರೀತಿಯಲ್ಲಿ ಪ್ರಯತ್ನಿಸಿದರು, ನನ್ನ ಬಾಯಿ ಮುಚ್ಚಿಸಲು ಪ್ರಯತ್ನಿಸಿದರು. ಆದರೆ, ಅವರು ಯಶಸ್ವಿಯಾಗಲಿಲ್ಲ, ನಾನು ಜೈಲಿನಲ್ಲಿದ್ದಾಗ ಅವರು ನನಗೆ ಹಲವು ರೀತಿಯಲ್ಲಿ ಚಿತ್ರಹಿಂಸೆ ನೀಡಿದರು. ನನ್ನ ಔಷಧಿಗಳನ್ನು ನಿಲ್ಲಿಸಿದರು; ನಾನು ಏನೂ ಮಾಡಲಿಲ್ಲ. ಈ ಜನರಿಗೆ (ಬಿಜೆಪಿ) ಏನು ಬೇಕು ಎಂದು ತಿಳಿದಿಲ್ಲ, ಅವರು ಇದನ್ನು ಏಕೆ ಮಾಡಿದರು” ಎಂದು ಪ್ರಶ್ನಿಸಿದರು.

“ಜೈಲಿಗೆ ಹೋದಾಗ ನನ್ನ ತೂಕ 70 ಕೆ.ಜಿ. ಇವತ್ತು 64 ಕೆ.ಜಿ., ಜೈಲಿನಿಂದ ಬಿಡುಗಡೆಯಾದ ಮೇಲೂ ತೂಕ ಹೆಚ್ಚುತ್ತಿಲ್ಲ, ಇದು ದೇಹದಲ್ಲಿ ಯಾವುದೋ ಗಂಭೀರ ಕಾಯಿಲೆಯ ಲಕ್ಷಣವೂ ಆಗಿರಬಹುದು ಎಂದು ವೈದ್ಯರು ಹೇಳುತ್ತಿದ್ದಾರೆ. ಅನೇಕ ಪರೀಕ್ಷೆಗಳನ್ನು ಮಾಡಬೇಕಾಗಿದೆ” ಎಂದು ಅವರು ಹೇಳಿದರು.

ಎಎಪಿ ಮುಖ್ಯಸ್ಥರು, ಬಿಜೆಪಿಯು ಪಕ್ಷವನ್ನು ಹೆಸರಿಸದೆ, ಅವರು ಜೈಲಿಗೆ ಹಿಂತಿರುಗಿದ ನಂತರ ಅವರಿಗೆ “ಕಿರುಕುಳ ನೀಡಲು” ಪ್ರಯತ್ನಿಸುತ್ತಾರೆ. ಆದರೂ ನಾನು ತಲೆಬಾಗುವುದಿಲ್ಲ ಎಂದು ಪ್ರತಿಪಾದಿಸಿದರು.

“ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ನನಗೆ 21 ದಿನಗಳ ಕಾಲಾವಕಾಶ ನೀಡಿತ್ತು. ನಾಳೆಯ ದಿನ ನಾನು ತಿಹಾರ್ ಜೈಲಿಗೆ ಹಿಂತಿರುಗುತ್ತೇನೆ, ನಾನು ಶರಣಾಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಆದರೆ ನಾನು ಎಲ್ಲಿ ವಾಸಿಸುತ್ತಿದ್ದರೂ, ಒಳಗೆ ಅಥವಾ ಹೊರಗೆ ಅವರಿಗೆ ತಲೆಬಾಗುವುದಿಲ್ಲ” ಎಂದು ಹೇಳಿದರು.

“ನಿಮ್ಮ ಉಚಿತ ವಿದ್ಯುತ್, ಮೊಹಲ್ಲಾ ಚಿಕಿತ್ಸಾಲಯಗಳು, ಆಸ್ಪತ್ರೆಗಳು, ಉಚಿತ ಔಷಧಿಗಳು, ಚಿಕಿತ್ಸೆ, 24 ಗಂಟೆಗಳ ವಿದ್ಯುತ್ ಮತ್ತು ಇತರ ಹಲವು ವಿಷಯಗಳು ಮುಂದುವರಿಯುತ್ತದೆ. ಹಿಂದಿರುಗಿದ ನಂತರ, ನಾವು ದೆಹಲಿಯ ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1,000 ರೂಪಾಯಿಗಳನ್ನು ನೀಡಲು ಪ್ರಾರಂಭಿಸುತ್ತೇವೆ” ಎಂದು ಅವರು ಹೇಳಿದರು.

ಅಸ್ವಸ್ಥರಾಗಿರುವ ತಮ್ಮ ತಾಯಿಗಾಗಿ ಪ್ರಾರ್ಥಿಸುವಂತೆ ಕೇಜ್ರಿವಾಲ್ ಜನರಲ್ಲಿ ಮನವಿ ಮಾಡಿದ್ದಾರೆ. “ನನ್ನ ಹೆತ್ತವರಿಗೆ ತುಂಬಾ ವಯಸ್ಸಾಗಿದೆ, ನನ್ನ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ನಾನು ಜೈಲಿನಲ್ಲಿ ಅವಳ ಬಗ್ಗೆ ತುಂಬಾ ಚಿಂತೆ ಮಾಡುತ್ತೇನೆ, ನನ್ನ ಹೆತ್ತವರನ್ನು ನೋಡಿಕೊಳ್ಳಿ ಮತ್ತು ಅವರಿಗಾಗಿ ಪ್ರಾರ್ಥಿಸಿ” ಎಂದು ಅವರು ಹೇಳಿದರು.

ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಕೇಜ್ರಿವಾಲ್ ಮೇ 10 ರಂದು ತಿಹಾರ್ ಜೈಲಿನಿಂದ ಹೊರನಡೆದರು. ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಎರಡು ದಿನ ಮುಂಚಿತವಾಗಿ. ಅಂದರೆ, ಜೂನ್ 2 ರೊಳಗೆ ಶರಣಾಗುವಂತೆ ಸೂಚಿಸಲಾಗಿದೆ.

ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ವಿಚಾರಣೆ ನಡೆಸಿದ ನಂತರ ಎಎಪಿ ಮುಖ್ಯಸ್ಥರನ್ನು ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 21 ರಂದು ಬಂಧಿಸಿತು.

ಗುರುವಾರ, ದೆಹಲಿಯ ನ್ಯಾಯಾಲಯವು ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ಜೂನ್ 1 ರವರೆಗೆ ಮುಂದೂಡಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಾಮಾನ್ಯ ಜಾಮೀನು ಮತ್ತು ಮಧ್ಯಂತರ ಜಾಮೀನು ಎರಡನ್ನೂ ಕೋರಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಏಳು ದಿನಗಳ ವಿಸ್ತರಣೆಗೆ ಕೇಜ್ರಿವಾಲ್ ಅವರ ಮನವಿಯನ್ನು ಆಲಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ನ್ಯಾಯಾಲಯದ ನೋಂದಾವಣೆ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿತು, ಕೇಜ್ರಿವಾಲ್‌ಗೆ ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಸ್ವಾತಂತ್ರ್ಯವನ್ನು ನೀಡಲಾಗಿರುವುದರಿಂದ, ಮನವಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ; ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...