Homeಮುಖಪುಟಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ನಮ್ಮ ದೇಶದಲ್ಲಿ ಕೋಟ್ಯಾಂತರ ಜನ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಾ, ಹಲವು ಕೆಲಸಗಳನ್ನು ಮಾಡುತ್ತಾ, ಕಷ್ಟಪಟ್ಟು ದುಡಿಯುತ್ತಾ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಅವರೆಲ್ಲರೂ ತಾವು ಕೆಲಸ ಮಾಡುವ ಕಂಪನಿ, ಕಾರ್ಖಾನೆ, ಕಚೇರಿಗಳಲ್ಲಿ ತಮ್ಮ ವಿಳಾಸ ಸೇರಿ ಕನಿಷ್ಟ ಮಾಹಿತಿ ಕೊಟ್ಟಿರುತ್ತಾರೆ. ಆದರೆ ಕನಿಷ್ಟ ವೇತನ ಪಡೆಯುತ್ತಾ ದುಡಿಯುತ್ತಿರುವ ಮನೆಗೆಲಸಗಾರರ ಮೇಲೆ ಕಣ್ಗಾವಲು ಇಡಲು ತೆಲಂಗಾಣ ಪೊಲೀಸ್ ಮೊಬೈಲ್ ಆಪ್ ಒಂದನ್ನು ರಚಿಸಿದ್ದಾರೆ. ಇದು ವ್ಯಕ್ತಿಗಳ ಖಾಸಗಿತನದ ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ತೀವ್ರ ವಿರೋಧ ಸಹ ವ್ಯಕ್ತವಾಗಿದೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹೈದರಾಬಾದ್‌ನ ಹೆಚ್ಚುವರಿ ಪೊಲೀಸ್ ಕಮಿಷನರ್ (ಅಪರಾಧ) ಶಿಖಾ ಗೋಯೆಲ್, ಮನೆಕೆಲಸಗಾರರನ್ನು ನೇಮಿಸಿಕೊಳ್ಳುವಾಗ ಜಾಗರೂಕರಾಗಿರಿ, ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಸುರಕ್ಷತೆಗಾಗಿ ನೇಮಕ ಮಾಡಿಕೊಳ್ಳುವ ಮೊದಲು HAWKEYE ಆಪ್ ಮೂಲಕ ಪರೀಶಿಲಿಸಿ ಮತ್ತು ಅವರ ಮಾಹಿತಿಯನ್ನು ನಮಗೆ ನೀಡಿ” ಎಂದು ಹೇಳಿದ್ದಾರೆ.

ಈ ದಿನಗಳಲ್ಲಿ ನಾವು ಮನೆಗೆಲಸದವರನ್ನು ಅವಲಂಬಿಸಬೇಕಾಗಿದೆ. ಕೆಲವೊಮ್ಮೆ ಅವರು ವಿವಿಧ ರಾಜ್ಯಗಳು ಅಥವಾ ಬೇರೆ ದೇಶದವರಾಗಿರುತ್ತಾರೆ. ಆದರೆ ಅವರು ಕಳ್ಳತನ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಅಡುಗೆಯವರಾಗಿ, ಭದ್ರತಾ ಸಿಬ್ಬಂದಿಗಳಾಗಿ ಮತ್ತು ಶ್ರೀಮಂತ ಕುಟುಂಬಗಳಿಗೆ ಚಾಲಕರಾಗಿ ಕೆಲಸ ಮಾಡುತ್ತಾರೆ. ಮಾಲೀಕರ ನಂಬಿಕೆಯನ್ನು ಗಳಿಸಿದ ನಂತರ, ಅದು ಒಂದೆರೆಡು ದಿನಗಳಲ್ಲಿ ಅಲ್ಲ, ಹಲವಾರು ತಿಂಗಳುಗಳು ಕೆಲಸ ಮಾಡಿ ಕೊನೆಗೆ ಮಾಲೀಕರು ದೂರವಿರುವಾಗ ಮನೆಯಲ್ಲಿ ಕಳ್ಳತನ ಮಾಡಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ ಎಂದು ಆರೋಪಿಸಿದ್ದಾರೆ. ಹಾಗಾಗಿ ಅವರನ್ನು ನೇಮಿಸಿಕೊಳ್ಳುವ ಮುನ್ನ ನಮಗೆ ಅವರ ಪೂರ್ಣ ಮಾಹಿತಿ ನೀಡಿ ಎಂದಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಅವರು ಆಭರಣಗಳು ಮತ್ತು ಹಣವನ್ನು ದರೋಡೆ ಮಾಡುವ ಮೊದಲು ಕುಟುಂಬಗಳಿಗೆ ಮಾದಕ ದ್ರವ್ಯವನ್ನು ನೀಡಿದ್ದರು ಎಂದು ಸಹ ಅವರು ಆರೋಪಿಸಿದ್ದಾರೆ ಎಂದು ತೆಲಂಗಾಣ ಟುಡೆ ವರದಿ ಮಾಡಿದೆ.

ಹೈದರಾಬಾದ್ ಪೊಲೀಸರ ಈ ಕ್ರಮ ಮತ್ತು ಆರೋಪಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮನೆಗೆಲಸದವರು ಸಹ ಮನುಷ್ಯರು, ಅವರಲ್ಲಿ ಬಹುತೇಕರು ಪ್ರಾಮಾಣಿಕರಾಗಿರುತ್ತಾರೆ. ನಿಮ್ಮ ಶ್ರೀಮಂತಿಕೆಯ ಅಹಂನಿಂದ ಅವರನ್ನು ಕ್ರಿಮಿನಲ್‌ಗಳ ರೀತಿ ನೋಡುವುದನ್ನು ಬಿಡಿ ಎಂದು ತಾಕೀತು ಮಾಡಿದ್ದಾರೆ.

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ? ಅದರ ಪ್ರಕ್ರಿಯೆಯೇನು? ಅಥವಾ ಈ ಪರಿಶೀಲನೆ ಪ್ರಕ್ರಿಯೆಯು ಕಟ್ಟುನಿಟ್ಟಾಗಿ ಏಕಮುಖವಾಗಿದೆಯೇ? ಎಂದು ಧನಕ್ ಎಂಬುವವರು ಪ್ರಶ್ನಿಸಿದ್ದಾರೆ.

ಇದು ಬಡವರ ವಿರೋಧಿ ಮತ್ತು ಜಾತಿವಾದಿ ಕೊಳಕು ಕೆಲಸವಾಗಿದೆ. ಜನರು ತಮ್ಮ ವರ್ಗ, ಜಾತಿ, ಆರ್ಥಿಕ ಸವಲತ್ತುಗಳ ಕಾರಣದಿಂದ ಮನೆಗೆಲಸಗಾರರನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕಾಗಿ ಉದ್ಯೋಗದಾತರೆ ಹೆಚ್ಚು ಹೊಣೆಗಾರರಾಗಿರುತ್ತಾರೆ ಎಂದು ಸಬಿನಾ ಬಾಷ ಎಂಬುವವರು ಟ್ವೀಟ್ ಮಾಡಿದ್ದಾರೆ.

ಮನೆಗೆಲಸಗಾರರಿಗೆ ಶೌಚಾಲಯ ಬಳಸಲು ಅವಕಾಶ, ಸ್ವಚ್ಛತಾ ಉಪಕರಣಗಳು, ಕನಿಷ್ಠ ಮತ್ತು ವಾರ್ಷಿಕ ಹೆಚ್ಚಳ, ಕೆಲಸದ ಸಮಯ ನಿಗಧಿ, ಹಬ್ಬದ ರಜಾದಿನಗಳನ್ನು ನೀಡಿ. ದಯವಿಟ್ಟು ಇದನ್ನೂ ಸಹ ಖಚಿತಪಡಿಸಲು ಡವ್ ಐ ಎಂಬ ಆಪ್ ರಚಿಸಿರಿ ಎಂದು ರಾಜು ಎಂಬುವವರು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಮನೆಗೆಲಸ ಬಡಜನರ ಮೇಲೆ ಕಣ್ಗಾವಲು ಇಡುವ ಮೂಲಕ ತೆಲಂಗಾಣವನ್ನು ಪೊಲೀಸ್ ರಾಜ್ಯವನ್ನಾಗಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಂಬೈ-ದೆಹಲಿಯಂತಹ ನಗರಗಳಲ್ಲಿ “ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು” ಎಂದು ಹೆಲ್ಫ್ ಚೆಕ್ಕರ್ ಎಂಬ ಫೇಸ್‌ಬುಕ್ ಗ್ರೂಪ್ ಒಂದನ್ನು ಮಾಡಿಕೊಂಡು ಹೆಣ್ಣು ಮಕ್ಕಳ ಫೋಟೊವನ್ನು ಹಾಕಿ ವಿಕೃತಿ ಮೆರೆಯುತ್ತಿರುವುದರ ಕುರಿತು ನಾನುಗೌರಿ.ಕಾಂ ಈ ಹಿಂದೆ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.


ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...