Homeಮುಖಪುಟಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ನಮ್ಮ ದೇಶದಲ್ಲಿ ಕೋಟ್ಯಾಂತರ ಜನ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಾ, ಹಲವು ಕೆಲಸಗಳನ್ನು ಮಾಡುತ್ತಾ, ಕಷ್ಟಪಟ್ಟು ದುಡಿಯುತ್ತಾ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಅವರೆಲ್ಲರೂ ತಾವು ಕೆಲಸ ಮಾಡುವ ಕಂಪನಿ, ಕಾರ್ಖಾನೆ, ಕಚೇರಿಗಳಲ್ಲಿ ತಮ್ಮ ವಿಳಾಸ ಸೇರಿ ಕನಿಷ್ಟ ಮಾಹಿತಿ ಕೊಟ್ಟಿರುತ್ತಾರೆ. ಆದರೆ ಕನಿಷ್ಟ ವೇತನ ಪಡೆಯುತ್ತಾ ದುಡಿಯುತ್ತಿರುವ ಮನೆಗೆಲಸಗಾರರ ಮೇಲೆ ಕಣ್ಗಾವಲು ಇಡಲು ತೆಲಂಗಾಣ ಪೊಲೀಸ್ ಮೊಬೈಲ್ ಆಪ್ ಒಂದನ್ನು ರಚಿಸಿದ್ದಾರೆ. ಇದು ವ್ಯಕ್ತಿಗಳ ಖಾಸಗಿತನದ ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ತೀವ್ರ ವಿರೋಧ ಸಹ ವ್ಯಕ್ತವಾಗಿದೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹೈದರಾಬಾದ್‌ನ ಹೆಚ್ಚುವರಿ ಪೊಲೀಸ್ ಕಮಿಷನರ್ (ಅಪರಾಧ) ಶಿಖಾ ಗೋಯೆಲ್, ಮನೆಕೆಲಸಗಾರರನ್ನು ನೇಮಿಸಿಕೊಳ್ಳುವಾಗ ಜಾಗರೂಕರಾಗಿರಿ, ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಸುರಕ್ಷತೆಗಾಗಿ ನೇಮಕ ಮಾಡಿಕೊಳ್ಳುವ ಮೊದಲು HAWKEYE ಆಪ್ ಮೂಲಕ ಪರೀಶಿಲಿಸಿ ಮತ್ತು ಅವರ ಮಾಹಿತಿಯನ್ನು ನಮಗೆ ನೀಡಿ” ಎಂದು ಹೇಳಿದ್ದಾರೆ.

ಈ ದಿನಗಳಲ್ಲಿ ನಾವು ಮನೆಗೆಲಸದವರನ್ನು ಅವಲಂಬಿಸಬೇಕಾಗಿದೆ. ಕೆಲವೊಮ್ಮೆ ಅವರು ವಿವಿಧ ರಾಜ್ಯಗಳು ಅಥವಾ ಬೇರೆ ದೇಶದವರಾಗಿರುತ್ತಾರೆ. ಆದರೆ ಅವರು ಕಳ್ಳತನ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಅಡುಗೆಯವರಾಗಿ, ಭದ್ರತಾ ಸಿಬ್ಬಂದಿಗಳಾಗಿ ಮತ್ತು ಶ್ರೀಮಂತ ಕುಟುಂಬಗಳಿಗೆ ಚಾಲಕರಾಗಿ ಕೆಲಸ ಮಾಡುತ್ತಾರೆ. ಮಾಲೀಕರ ನಂಬಿಕೆಯನ್ನು ಗಳಿಸಿದ ನಂತರ, ಅದು ಒಂದೆರೆಡು ದಿನಗಳಲ್ಲಿ ಅಲ್ಲ, ಹಲವಾರು ತಿಂಗಳುಗಳು ಕೆಲಸ ಮಾಡಿ ಕೊನೆಗೆ ಮಾಲೀಕರು ದೂರವಿರುವಾಗ ಮನೆಯಲ್ಲಿ ಕಳ್ಳತನ ಮಾಡಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ ಎಂದು ಆರೋಪಿಸಿದ್ದಾರೆ. ಹಾಗಾಗಿ ಅವರನ್ನು ನೇಮಿಸಿಕೊಳ್ಳುವ ಮುನ್ನ ನಮಗೆ ಅವರ ಪೂರ್ಣ ಮಾಹಿತಿ ನೀಡಿ ಎಂದಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಅವರು ಆಭರಣಗಳು ಮತ್ತು ಹಣವನ್ನು ದರೋಡೆ ಮಾಡುವ ಮೊದಲು ಕುಟುಂಬಗಳಿಗೆ ಮಾದಕ ದ್ರವ್ಯವನ್ನು ನೀಡಿದ್ದರು ಎಂದು ಸಹ ಅವರು ಆರೋಪಿಸಿದ್ದಾರೆ ಎಂದು ತೆಲಂಗಾಣ ಟುಡೆ ವರದಿ ಮಾಡಿದೆ.

ಹೈದರಾಬಾದ್ ಪೊಲೀಸರ ಈ ಕ್ರಮ ಮತ್ತು ಆರೋಪಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮನೆಗೆಲಸದವರು ಸಹ ಮನುಷ್ಯರು, ಅವರಲ್ಲಿ ಬಹುತೇಕರು ಪ್ರಾಮಾಣಿಕರಾಗಿರುತ್ತಾರೆ. ನಿಮ್ಮ ಶ್ರೀಮಂತಿಕೆಯ ಅಹಂನಿಂದ ಅವರನ್ನು ಕ್ರಿಮಿನಲ್‌ಗಳ ರೀತಿ ನೋಡುವುದನ್ನು ಬಿಡಿ ಎಂದು ತಾಕೀತು ಮಾಡಿದ್ದಾರೆ.

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ? ಅದರ ಪ್ರಕ್ರಿಯೆಯೇನು? ಅಥವಾ ಈ ಪರಿಶೀಲನೆ ಪ್ರಕ್ರಿಯೆಯು ಕಟ್ಟುನಿಟ್ಟಾಗಿ ಏಕಮುಖವಾಗಿದೆಯೇ? ಎಂದು ಧನಕ್ ಎಂಬುವವರು ಪ್ರಶ್ನಿಸಿದ್ದಾರೆ.

ಇದು ಬಡವರ ವಿರೋಧಿ ಮತ್ತು ಜಾತಿವಾದಿ ಕೊಳಕು ಕೆಲಸವಾಗಿದೆ. ಜನರು ತಮ್ಮ ವರ್ಗ, ಜಾತಿ, ಆರ್ಥಿಕ ಸವಲತ್ತುಗಳ ಕಾರಣದಿಂದ ಮನೆಗೆಲಸಗಾರರನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕಾಗಿ ಉದ್ಯೋಗದಾತರೆ ಹೆಚ್ಚು ಹೊಣೆಗಾರರಾಗಿರುತ್ತಾರೆ ಎಂದು ಸಬಿನಾ ಬಾಷ ಎಂಬುವವರು ಟ್ವೀಟ್ ಮಾಡಿದ್ದಾರೆ.

ಮನೆಗೆಲಸಗಾರರಿಗೆ ಶೌಚಾಲಯ ಬಳಸಲು ಅವಕಾಶ, ಸ್ವಚ್ಛತಾ ಉಪಕರಣಗಳು, ಕನಿಷ್ಠ ಮತ್ತು ವಾರ್ಷಿಕ ಹೆಚ್ಚಳ, ಕೆಲಸದ ಸಮಯ ನಿಗಧಿ, ಹಬ್ಬದ ರಜಾದಿನಗಳನ್ನು ನೀಡಿ. ದಯವಿಟ್ಟು ಇದನ್ನೂ ಸಹ ಖಚಿತಪಡಿಸಲು ಡವ್ ಐ ಎಂಬ ಆಪ್ ರಚಿಸಿರಿ ಎಂದು ರಾಜು ಎಂಬುವವರು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಮನೆಗೆಲಸ ಬಡಜನರ ಮೇಲೆ ಕಣ್ಗಾವಲು ಇಡುವ ಮೂಲಕ ತೆಲಂಗಾಣವನ್ನು ಪೊಲೀಸ್ ರಾಜ್ಯವನ್ನಾಗಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಂಬೈ-ದೆಹಲಿಯಂತಹ ನಗರಗಳಲ್ಲಿ “ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು” ಎಂದು ಹೆಲ್ಫ್ ಚೆಕ್ಕರ್ ಎಂಬ ಫೇಸ್‌ಬುಕ್ ಗ್ರೂಪ್ ಒಂದನ್ನು ಮಾಡಿಕೊಂಡು ಹೆಣ್ಣು ಮಕ್ಕಳ ಫೋಟೊವನ್ನು ಹಾಕಿ ವಿಕೃತಿ ಮೆರೆಯುತ್ತಿರುವುದರ ಕುರಿತು ನಾನುಗೌರಿ.ಕಾಂ ಈ ಹಿಂದೆ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.


ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...