Homeಮುಖಪುಟಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ನಮ್ಮ ದೇಶದಲ್ಲಿ ಕೋಟ್ಯಾಂತರ ಜನ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಾ, ಹಲವು ಕೆಲಸಗಳನ್ನು ಮಾಡುತ್ತಾ, ಕಷ್ಟಪಟ್ಟು ದುಡಿಯುತ್ತಾ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಅವರೆಲ್ಲರೂ ತಾವು ಕೆಲಸ ಮಾಡುವ ಕಂಪನಿ, ಕಾರ್ಖಾನೆ, ಕಚೇರಿಗಳಲ್ಲಿ ತಮ್ಮ ವಿಳಾಸ ಸೇರಿ ಕನಿಷ್ಟ ಮಾಹಿತಿ ಕೊಟ್ಟಿರುತ್ತಾರೆ. ಆದರೆ ಕನಿಷ್ಟ ವೇತನ ಪಡೆಯುತ್ತಾ ದುಡಿಯುತ್ತಿರುವ ಮನೆಗೆಲಸಗಾರರ ಮೇಲೆ ಕಣ್ಗಾವಲು ಇಡಲು ತೆಲಂಗಾಣ ಪೊಲೀಸ್ ಮೊಬೈಲ್ ಆಪ್ ಒಂದನ್ನು ರಚಿಸಿದ್ದಾರೆ. ಇದು ವ್ಯಕ್ತಿಗಳ ಖಾಸಗಿತನದ ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ತೀವ್ರ ವಿರೋಧ ಸಹ ವ್ಯಕ್ತವಾಗಿದೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹೈದರಾಬಾದ್‌ನ ಹೆಚ್ಚುವರಿ ಪೊಲೀಸ್ ಕಮಿಷನರ್ (ಅಪರಾಧ) ಶಿಖಾ ಗೋಯೆಲ್, ಮನೆಕೆಲಸಗಾರರನ್ನು ನೇಮಿಸಿಕೊಳ್ಳುವಾಗ ಜಾಗರೂಕರಾಗಿರಿ, ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಸುರಕ್ಷತೆಗಾಗಿ ನೇಮಕ ಮಾಡಿಕೊಳ್ಳುವ ಮೊದಲು HAWKEYE ಆಪ್ ಮೂಲಕ ಪರೀಶಿಲಿಸಿ ಮತ್ತು ಅವರ ಮಾಹಿತಿಯನ್ನು ನಮಗೆ ನೀಡಿ” ಎಂದು ಹೇಳಿದ್ದಾರೆ.

ಈ ದಿನಗಳಲ್ಲಿ ನಾವು ಮನೆಗೆಲಸದವರನ್ನು ಅವಲಂಬಿಸಬೇಕಾಗಿದೆ. ಕೆಲವೊಮ್ಮೆ ಅವರು ವಿವಿಧ ರಾಜ್ಯಗಳು ಅಥವಾ ಬೇರೆ ದೇಶದವರಾಗಿರುತ್ತಾರೆ. ಆದರೆ ಅವರು ಕಳ್ಳತನ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಅಡುಗೆಯವರಾಗಿ, ಭದ್ರತಾ ಸಿಬ್ಬಂದಿಗಳಾಗಿ ಮತ್ತು ಶ್ರೀಮಂತ ಕುಟುಂಬಗಳಿಗೆ ಚಾಲಕರಾಗಿ ಕೆಲಸ ಮಾಡುತ್ತಾರೆ. ಮಾಲೀಕರ ನಂಬಿಕೆಯನ್ನು ಗಳಿಸಿದ ನಂತರ, ಅದು ಒಂದೆರೆಡು ದಿನಗಳಲ್ಲಿ ಅಲ್ಲ, ಹಲವಾರು ತಿಂಗಳುಗಳು ಕೆಲಸ ಮಾಡಿ ಕೊನೆಗೆ ಮಾಲೀಕರು ದೂರವಿರುವಾಗ ಮನೆಯಲ್ಲಿ ಕಳ್ಳತನ ಮಾಡಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ ಎಂದು ಆರೋಪಿಸಿದ್ದಾರೆ. ಹಾಗಾಗಿ ಅವರನ್ನು ನೇಮಿಸಿಕೊಳ್ಳುವ ಮುನ್ನ ನಮಗೆ ಅವರ ಪೂರ್ಣ ಮಾಹಿತಿ ನೀಡಿ ಎಂದಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಅವರು ಆಭರಣಗಳು ಮತ್ತು ಹಣವನ್ನು ದರೋಡೆ ಮಾಡುವ ಮೊದಲು ಕುಟುಂಬಗಳಿಗೆ ಮಾದಕ ದ್ರವ್ಯವನ್ನು ನೀಡಿದ್ದರು ಎಂದು ಸಹ ಅವರು ಆರೋಪಿಸಿದ್ದಾರೆ ಎಂದು ತೆಲಂಗಾಣ ಟುಡೆ ವರದಿ ಮಾಡಿದೆ.

ಹೈದರಾಬಾದ್ ಪೊಲೀಸರ ಈ ಕ್ರಮ ಮತ್ತು ಆರೋಪಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮನೆಗೆಲಸದವರು ಸಹ ಮನುಷ್ಯರು, ಅವರಲ್ಲಿ ಬಹುತೇಕರು ಪ್ರಾಮಾಣಿಕರಾಗಿರುತ್ತಾರೆ. ನಿಮ್ಮ ಶ್ರೀಮಂತಿಕೆಯ ಅಹಂನಿಂದ ಅವರನ್ನು ಕ್ರಿಮಿನಲ್‌ಗಳ ರೀತಿ ನೋಡುವುದನ್ನು ಬಿಡಿ ಎಂದು ತಾಕೀತು ಮಾಡಿದ್ದಾರೆ.

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ? ಅದರ ಪ್ರಕ್ರಿಯೆಯೇನು? ಅಥವಾ ಈ ಪರಿಶೀಲನೆ ಪ್ರಕ್ರಿಯೆಯು ಕಟ್ಟುನಿಟ್ಟಾಗಿ ಏಕಮುಖವಾಗಿದೆಯೇ? ಎಂದು ಧನಕ್ ಎಂಬುವವರು ಪ್ರಶ್ನಿಸಿದ್ದಾರೆ.

ಇದು ಬಡವರ ವಿರೋಧಿ ಮತ್ತು ಜಾತಿವಾದಿ ಕೊಳಕು ಕೆಲಸವಾಗಿದೆ. ಜನರು ತಮ್ಮ ವರ್ಗ, ಜಾತಿ, ಆರ್ಥಿಕ ಸವಲತ್ತುಗಳ ಕಾರಣದಿಂದ ಮನೆಗೆಲಸಗಾರರನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕಾಗಿ ಉದ್ಯೋಗದಾತರೆ ಹೆಚ್ಚು ಹೊಣೆಗಾರರಾಗಿರುತ್ತಾರೆ ಎಂದು ಸಬಿನಾ ಬಾಷ ಎಂಬುವವರು ಟ್ವೀಟ್ ಮಾಡಿದ್ದಾರೆ.

ಮನೆಗೆಲಸಗಾರರಿಗೆ ಶೌಚಾಲಯ ಬಳಸಲು ಅವಕಾಶ, ಸ್ವಚ್ಛತಾ ಉಪಕರಣಗಳು, ಕನಿಷ್ಠ ಮತ್ತು ವಾರ್ಷಿಕ ಹೆಚ್ಚಳ, ಕೆಲಸದ ಸಮಯ ನಿಗಧಿ, ಹಬ್ಬದ ರಜಾದಿನಗಳನ್ನು ನೀಡಿ. ದಯವಿಟ್ಟು ಇದನ್ನೂ ಸಹ ಖಚಿತಪಡಿಸಲು ಡವ್ ಐ ಎಂಬ ಆಪ್ ರಚಿಸಿರಿ ಎಂದು ರಾಜು ಎಂಬುವವರು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಮನೆಗೆಲಸ ಬಡಜನರ ಮೇಲೆ ಕಣ್ಗಾವಲು ಇಡುವ ಮೂಲಕ ತೆಲಂಗಾಣವನ್ನು ಪೊಲೀಸ್ ರಾಜ್ಯವನ್ನಾಗಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಂಬೈ-ದೆಹಲಿಯಂತಹ ನಗರಗಳಲ್ಲಿ “ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು” ಎಂದು ಹೆಲ್ಫ್ ಚೆಕ್ಕರ್ ಎಂಬ ಫೇಸ್‌ಬುಕ್ ಗ್ರೂಪ್ ಒಂದನ್ನು ಮಾಡಿಕೊಂಡು ಹೆಣ್ಣು ಮಕ್ಕಳ ಫೋಟೊವನ್ನು ಹಾಕಿ ವಿಕೃತಿ ಮೆರೆಯುತ್ತಿರುವುದರ ಕುರಿತು ನಾನುಗೌರಿ.ಕಾಂ ಈ ಹಿಂದೆ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.


ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...