Homeಮುಖಪುಟಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ನಮ್ಮ ದೇಶದಲ್ಲಿ ಕೋಟ್ಯಾಂತರ ಜನ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಾ, ಹಲವು ಕೆಲಸಗಳನ್ನು ಮಾಡುತ್ತಾ, ಕಷ್ಟಪಟ್ಟು ದುಡಿಯುತ್ತಾ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಅವರೆಲ್ಲರೂ ತಾವು ಕೆಲಸ ಮಾಡುವ ಕಂಪನಿ, ಕಾರ್ಖಾನೆ, ಕಚೇರಿಗಳಲ್ಲಿ ತಮ್ಮ ವಿಳಾಸ ಸೇರಿ ಕನಿಷ್ಟ ಮಾಹಿತಿ ಕೊಟ್ಟಿರುತ್ತಾರೆ. ಆದರೆ ಕನಿಷ್ಟ ವೇತನ ಪಡೆಯುತ್ತಾ ದುಡಿಯುತ್ತಿರುವ ಮನೆಗೆಲಸಗಾರರ ಮೇಲೆ ಕಣ್ಗಾವಲು ಇಡಲು ತೆಲಂಗಾಣ ಪೊಲೀಸ್ ಮೊಬೈಲ್ ಆಪ್ ಒಂದನ್ನು ರಚಿಸಿದ್ದಾರೆ. ಇದು ವ್ಯಕ್ತಿಗಳ ಖಾಸಗಿತನದ ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ತೀವ್ರ ವಿರೋಧ ಸಹ ವ್ಯಕ್ತವಾಗಿದೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹೈದರಾಬಾದ್‌ನ ಹೆಚ್ಚುವರಿ ಪೊಲೀಸ್ ಕಮಿಷನರ್ (ಅಪರಾಧ) ಶಿಖಾ ಗೋಯೆಲ್, ಮನೆಕೆಲಸಗಾರರನ್ನು ನೇಮಿಸಿಕೊಳ್ಳುವಾಗ ಜಾಗರೂಕರಾಗಿರಿ, ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಸುರಕ್ಷತೆಗಾಗಿ ನೇಮಕ ಮಾಡಿಕೊಳ್ಳುವ ಮೊದಲು HAWKEYE ಆಪ್ ಮೂಲಕ ಪರೀಶಿಲಿಸಿ ಮತ್ತು ಅವರ ಮಾಹಿತಿಯನ್ನು ನಮಗೆ ನೀಡಿ” ಎಂದು ಹೇಳಿದ್ದಾರೆ.

ಈ ದಿನಗಳಲ್ಲಿ ನಾವು ಮನೆಗೆಲಸದವರನ್ನು ಅವಲಂಬಿಸಬೇಕಾಗಿದೆ. ಕೆಲವೊಮ್ಮೆ ಅವರು ವಿವಿಧ ರಾಜ್ಯಗಳು ಅಥವಾ ಬೇರೆ ದೇಶದವರಾಗಿರುತ್ತಾರೆ. ಆದರೆ ಅವರು ಕಳ್ಳತನ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಅಡುಗೆಯವರಾಗಿ, ಭದ್ರತಾ ಸಿಬ್ಬಂದಿಗಳಾಗಿ ಮತ್ತು ಶ್ರೀಮಂತ ಕುಟುಂಬಗಳಿಗೆ ಚಾಲಕರಾಗಿ ಕೆಲಸ ಮಾಡುತ್ತಾರೆ. ಮಾಲೀಕರ ನಂಬಿಕೆಯನ್ನು ಗಳಿಸಿದ ನಂತರ, ಅದು ಒಂದೆರೆಡು ದಿನಗಳಲ್ಲಿ ಅಲ್ಲ, ಹಲವಾರು ತಿಂಗಳುಗಳು ಕೆಲಸ ಮಾಡಿ ಕೊನೆಗೆ ಮಾಲೀಕರು ದೂರವಿರುವಾಗ ಮನೆಯಲ್ಲಿ ಕಳ್ಳತನ ಮಾಡಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ ಎಂದು ಆರೋಪಿಸಿದ್ದಾರೆ. ಹಾಗಾಗಿ ಅವರನ್ನು ನೇಮಿಸಿಕೊಳ್ಳುವ ಮುನ್ನ ನಮಗೆ ಅವರ ಪೂರ್ಣ ಮಾಹಿತಿ ನೀಡಿ ಎಂದಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಅವರು ಆಭರಣಗಳು ಮತ್ತು ಹಣವನ್ನು ದರೋಡೆ ಮಾಡುವ ಮೊದಲು ಕುಟುಂಬಗಳಿಗೆ ಮಾದಕ ದ್ರವ್ಯವನ್ನು ನೀಡಿದ್ದರು ಎಂದು ಸಹ ಅವರು ಆರೋಪಿಸಿದ್ದಾರೆ ಎಂದು ತೆಲಂಗಾಣ ಟುಡೆ ವರದಿ ಮಾಡಿದೆ.

ಹೈದರಾಬಾದ್ ಪೊಲೀಸರ ಈ ಕ್ರಮ ಮತ್ತು ಆರೋಪಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮನೆಗೆಲಸದವರು ಸಹ ಮನುಷ್ಯರು, ಅವರಲ್ಲಿ ಬಹುತೇಕರು ಪ್ರಾಮಾಣಿಕರಾಗಿರುತ್ತಾರೆ. ನಿಮ್ಮ ಶ್ರೀಮಂತಿಕೆಯ ಅಹಂನಿಂದ ಅವರನ್ನು ಕ್ರಿಮಿನಲ್‌ಗಳ ರೀತಿ ನೋಡುವುದನ್ನು ಬಿಡಿ ಎಂದು ತಾಕೀತು ಮಾಡಿದ್ದಾರೆ.

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ? ಅದರ ಪ್ರಕ್ರಿಯೆಯೇನು? ಅಥವಾ ಈ ಪರಿಶೀಲನೆ ಪ್ರಕ್ರಿಯೆಯು ಕಟ್ಟುನಿಟ್ಟಾಗಿ ಏಕಮುಖವಾಗಿದೆಯೇ? ಎಂದು ಧನಕ್ ಎಂಬುವವರು ಪ್ರಶ್ನಿಸಿದ್ದಾರೆ.

ಇದು ಬಡವರ ವಿರೋಧಿ ಮತ್ತು ಜಾತಿವಾದಿ ಕೊಳಕು ಕೆಲಸವಾಗಿದೆ. ಜನರು ತಮ್ಮ ವರ್ಗ, ಜಾತಿ, ಆರ್ಥಿಕ ಸವಲತ್ತುಗಳ ಕಾರಣದಿಂದ ಮನೆಗೆಲಸಗಾರರನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕಾಗಿ ಉದ್ಯೋಗದಾತರೆ ಹೆಚ್ಚು ಹೊಣೆಗಾರರಾಗಿರುತ್ತಾರೆ ಎಂದು ಸಬಿನಾ ಬಾಷ ಎಂಬುವವರು ಟ್ವೀಟ್ ಮಾಡಿದ್ದಾರೆ.

ಮನೆಗೆಲಸಗಾರರಿಗೆ ಶೌಚಾಲಯ ಬಳಸಲು ಅವಕಾಶ, ಸ್ವಚ್ಛತಾ ಉಪಕರಣಗಳು, ಕನಿಷ್ಠ ಮತ್ತು ವಾರ್ಷಿಕ ಹೆಚ್ಚಳ, ಕೆಲಸದ ಸಮಯ ನಿಗಧಿ, ಹಬ್ಬದ ರಜಾದಿನಗಳನ್ನು ನೀಡಿ. ದಯವಿಟ್ಟು ಇದನ್ನೂ ಸಹ ಖಚಿತಪಡಿಸಲು ಡವ್ ಐ ಎಂಬ ಆಪ್ ರಚಿಸಿರಿ ಎಂದು ರಾಜು ಎಂಬುವವರು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಮನೆಗೆಲಸ ಬಡಜನರ ಮೇಲೆ ಕಣ್ಗಾವಲು ಇಡುವ ಮೂಲಕ ತೆಲಂಗಾಣವನ್ನು ಪೊಲೀಸ್ ರಾಜ್ಯವನ್ನಾಗಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಂಬೈ-ದೆಹಲಿಯಂತಹ ನಗರಗಳಲ್ಲಿ “ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು” ಎಂದು ಹೆಲ್ಫ್ ಚೆಕ್ಕರ್ ಎಂಬ ಫೇಸ್‌ಬುಕ್ ಗ್ರೂಪ್ ಒಂದನ್ನು ಮಾಡಿಕೊಂಡು ಹೆಣ್ಣು ಮಕ್ಕಳ ಫೋಟೊವನ್ನು ಹಾಕಿ ವಿಕೃತಿ ಮೆರೆಯುತ್ತಿರುವುದರ ಕುರಿತು ನಾನುಗೌರಿ.ಕಾಂ ಈ ಹಿಂದೆ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.


ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...