Homeಮುಖಪುಟಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ನಮ್ಮ ದೇಶದಲ್ಲಿ ಕೋಟ್ಯಾಂತರ ಜನ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಾ, ಹಲವು ಕೆಲಸಗಳನ್ನು ಮಾಡುತ್ತಾ, ಕಷ್ಟಪಟ್ಟು ದುಡಿಯುತ್ತಾ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಅವರೆಲ್ಲರೂ ತಾವು ಕೆಲಸ ಮಾಡುವ ಕಂಪನಿ, ಕಾರ್ಖಾನೆ, ಕಚೇರಿಗಳಲ್ಲಿ ತಮ್ಮ ವಿಳಾಸ ಸೇರಿ ಕನಿಷ್ಟ ಮಾಹಿತಿ ಕೊಟ್ಟಿರುತ್ತಾರೆ. ಆದರೆ ಕನಿಷ್ಟ ವೇತನ ಪಡೆಯುತ್ತಾ ದುಡಿಯುತ್ತಿರುವ ಮನೆಗೆಲಸಗಾರರ ಮೇಲೆ ಕಣ್ಗಾವಲು ಇಡಲು ತೆಲಂಗಾಣ ಪೊಲೀಸ್ ಮೊಬೈಲ್ ಆಪ್ ಒಂದನ್ನು ರಚಿಸಿದ್ದಾರೆ. ಇದು ವ್ಯಕ್ತಿಗಳ ಖಾಸಗಿತನದ ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ತೀವ್ರ ವಿರೋಧ ಸಹ ವ್ಯಕ್ತವಾಗಿದೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹೈದರಾಬಾದ್‌ನ ಹೆಚ್ಚುವರಿ ಪೊಲೀಸ್ ಕಮಿಷನರ್ (ಅಪರಾಧ) ಶಿಖಾ ಗೋಯೆಲ್, ಮನೆಕೆಲಸಗಾರರನ್ನು ನೇಮಿಸಿಕೊಳ್ಳುವಾಗ ಜಾಗರೂಕರಾಗಿರಿ, ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಸುರಕ್ಷತೆಗಾಗಿ ನೇಮಕ ಮಾಡಿಕೊಳ್ಳುವ ಮೊದಲು HAWKEYE ಆಪ್ ಮೂಲಕ ಪರೀಶಿಲಿಸಿ ಮತ್ತು ಅವರ ಮಾಹಿತಿಯನ್ನು ನಮಗೆ ನೀಡಿ” ಎಂದು ಹೇಳಿದ್ದಾರೆ.

ಈ ದಿನಗಳಲ್ಲಿ ನಾವು ಮನೆಗೆಲಸದವರನ್ನು ಅವಲಂಬಿಸಬೇಕಾಗಿದೆ. ಕೆಲವೊಮ್ಮೆ ಅವರು ವಿವಿಧ ರಾಜ್ಯಗಳು ಅಥವಾ ಬೇರೆ ದೇಶದವರಾಗಿರುತ್ತಾರೆ. ಆದರೆ ಅವರು ಕಳ್ಳತನ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಅಡುಗೆಯವರಾಗಿ, ಭದ್ರತಾ ಸಿಬ್ಬಂದಿಗಳಾಗಿ ಮತ್ತು ಶ್ರೀಮಂತ ಕುಟುಂಬಗಳಿಗೆ ಚಾಲಕರಾಗಿ ಕೆಲಸ ಮಾಡುತ್ತಾರೆ. ಮಾಲೀಕರ ನಂಬಿಕೆಯನ್ನು ಗಳಿಸಿದ ನಂತರ, ಅದು ಒಂದೆರೆಡು ದಿನಗಳಲ್ಲಿ ಅಲ್ಲ, ಹಲವಾರು ತಿಂಗಳುಗಳು ಕೆಲಸ ಮಾಡಿ ಕೊನೆಗೆ ಮಾಲೀಕರು ದೂರವಿರುವಾಗ ಮನೆಯಲ್ಲಿ ಕಳ್ಳತನ ಮಾಡಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ ಎಂದು ಆರೋಪಿಸಿದ್ದಾರೆ. ಹಾಗಾಗಿ ಅವರನ್ನು ನೇಮಿಸಿಕೊಳ್ಳುವ ಮುನ್ನ ನಮಗೆ ಅವರ ಪೂರ್ಣ ಮಾಹಿತಿ ನೀಡಿ ಎಂದಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಅವರು ಆಭರಣಗಳು ಮತ್ತು ಹಣವನ್ನು ದರೋಡೆ ಮಾಡುವ ಮೊದಲು ಕುಟುಂಬಗಳಿಗೆ ಮಾದಕ ದ್ರವ್ಯವನ್ನು ನೀಡಿದ್ದರು ಎಂದು ಸಹ ಅವರು ಆರೋಪಿಸಿದ್ದಾರೆ ಎಂದು ತೆಲಂಗಾಣ ಟುಡೆ ವರದಿ ಮಾಡಿದೆ.

ಹೈದರಾಬಾದ್ ಪೊಲೀಸರ ಈ ಕ್ರಮ ಮತ್ತು ಆರೋಪಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮನೆಗೆಲಸದವರು ಸಹ ಮನುಷ್ಯರು, ಅವರಲ್ಲಿ ಬಹುತೇಕರು ಪ್ರಾಮಾಣಿಕರಾಗಿರುತ್ತಾರೆ. ನಿಮ್ಮ ಶ್ರೀಮಂತಿಕೆಯ ಅಹಂನಿಂದ ಅವರನ್ನು ಕ್ರಿಮಿನಲ್‌ಗಳ ರೀತಿ ನೋಡುವುದನ್ನು ಬಿಡಿ ಎಂದು ತಾಕೀತು ಮಾಡಿದ್ದಾರೆ.

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ? ಅದರ ಪ್ರಕ್ರಿಯೆಯೇನು? ಅಥವಾ ಈ ಪರಿಶೀಲನೆ ಪ್ರಕ್ರಿಯೆಯು ಕಟ್ಟುನಿಟ್ಟಾಗಿ ಏಕಮುಖವಾಗಿದೆಯೇ? ಎಂದು ಧನಕ್ ಎಂಬುವವರು ಪ್ರಶ್ನಿಸಿದ್ದಾರೆ.

ಇದು ಬಡವರ ವಿರೋಧಿ ಮತ್ತು ಜಾತಿವಾದಿ ಕೊಳಕು ಕೆಲಸವಾಗಿದೆ. ಜನರು ತಮ್ಮ ವರ್ಗ, ಜಾತಿ, ಆರ್ಥಿಕ ಸವಲತ್ತುಗಳ ಕಾರಣದಿಂದ ಮನೆಗೆಲಸಗಾರರನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕಾಗಿ ಉದ್ಯೋಗದಾತರೆ ಹೆಚ್ಚು ಹೊಣೆಗಾರರಾಗಿರುತ್ತಾರೆ ಎಂದು ಸಬಿನಾ ಬಾಷ ಎಂಬುವವರು ಟ್ವೀಟ್ ಮಾಡಿದ್ದಾರೆ.

ಮನೆಗೆಲಸಗಾರರಿಗೆ ಶೌಚಾಲಯ ಬಳಸಲು ಅವಕಾಶ, ಸ್ವಚ್ಛತಾ ಉಪಕರಣಗಳು, ಕನಿಷ್ಠ ಮತ್ತು ವಾರ್ಷಿಕ ಹೆಚ್ಚಳ, ಕೆಲಸದ ಸಮಯ ನಿಗಧಿ, ಹಬ್ಬದ ರಜಾದಿನಗಳನ್ನು ನೀಡಿ. ದಯವಿಟ್ಟು ಇದನ್ನೂ ಸಹ ಖಚಿತಪಡಿಸಲು ಡವ್ ಐ ಎಂಬ ಆಪ್ ರಚಿಸಿರಿ ಎಂದು ರಾಜು ಎಂಬುವವರು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಮನೆಗೆಲಸ ಬಡಜನರ ಮೇಲೆ ಕಣ್ಗಾವಲು ಇಡುವ ಮೂಲಕ ತೆಲಂಗಾಣವನ್ನು ಪೊಲೀಸ್ ರಾಜ್ಯವನ್ನಾಗಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಂಬೈ-ದೆಹಲಿಯಂತಹ ನಗರಗಳಲ್ಲಿ “ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು” ಎಂದು ಹೆಲ್ಫ್ ಚೆಕ್ಕರ್ ಎಂಬ ಫೇಸ್‌ಬುಕ್ ಗ್ರೂಪ್ ಒಂದನ್ನು ಮಾಡಿಕೊಂಡು ಹೆಣ್ಣು ಮಕ್ಕಳ ಫೋಟೊವನ್ನು ಹಾಕಿ ವಿಕೃತಿ ಮೆರೆಯುತ್ತಿರುವುದರ ಕುರಿತು ನಾನುಗೌರಿ.ಕಾಂ ಈ ಹಿಂದೆ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.


ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...