Homeಮುಖಪುಟಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಅನುಮಾನದ ರೋಗ: ತೆಲಂಗಾಣದಲ್ಲಿ ಮನೆಗೆಲಸಗಾರರ ಮೇಲೆ ಕಣ್ಗಾವಲು ಆಪ್

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ ಎಂಬ ಪ್ರಶ್ನೆ ಎದ್ದಿದೆ.

- Advertisement -
- Advertisement -

ನಮ್ಮ ದೇಶದಲ್ಲಿ ಕೋಟ್ಯಾಂತರ ಜನ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಾ, ಹಲವು ಕೆಲಸಗಳನ್ನು ಮಾಡುತ್ತಾ, ಕಷ್ಟಪಟ್ಟು ದುಡಿಯುತ್ತಾ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಅವರೆಲ್ಲರೂ ತಾವು ಕೆಲಸ ಮಾಡುವ ಕಂಪನಿ, ಕಾರ್ಖಾನೆ, ಕಚೇರಿಗಳಲ್ಲಿ ತಮ್ಮ ವಿಳಾಸ ಸೇರಿ ಕನಿಷ್ಟ ಮಾಹಿತಿ ಕೊಟ್ಟಿರುತ್ತಾರೆ. ಆದರೆ ಕನಿಷ್ಟ ವೇತನ ಪಡೆಯುತ್ತಾ ದುಡಿಯುತ್ತಿರುವ ಮನೆಗೆಲಸಗಾರರ ಮೇಲೆ ಕಣ್ಗಾವಲು ಇಡಲು ತೆಲಂಗಾಣ ಪೊಲೀಸ್ ಮೊಬೈಲ್ ಆಪ್ ಒಂದನ್ನು ರಚಿಸಿದ್ದಾರೆ. ಇದು ವ್ಯಕ್ತಿಗಳ ಖಾಸಗಿತನದ ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ತೀವ್ರ ವಿರೋಧ ಸಹ ವ್ಯಕ್ತವಾಗಿದೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹೈದರಾಬಾದ್‌ನ ಹೆಚ್ಚುವರಿ ಪೊಲೀಸ್ ಕಮಿಷನರ್ (ಅಪರಾಧ) ಶಿಖಾ ಗೋಯೆಲ್, ಮನೆಕೆಲಸಗಾರರನ್ನು ನೇಮಿಸಿಕೊಳ್ಳುವಾಗ ಜಾಗರೂಕರಾಗಿರಿ, ನಿಮ್ಮ ಮತ್ತು ನಿಮ್ಮ ಪ್ರೀತಿ ಪಾತ್ರರ ಸುರಕ್ಷತೆಗಾಗಿ ನೇಮಕ ಮಾಡಿಕೊಳ್ಳುವ ಮೊದಲು HAWKEYE ಆಪ್ ಮೂಲಕ ಪರೀಶಿಲಿಸಿ ಮತ್ತು ಅವರ ಮಾಹಿತಿಯನ್ನು ನಮಗೆ ನೀಡಿ” ಎಂದು ಹೇಳಿದ್ದಾರೆ.

ಈ ದಿನಗಳಲ್ಲಿ ನಾವು ಮನೆಗೆಲಸದವರನ್ನು ಅವಲಂಬಿಸಬೇಕಾಗಿದೆ. ಕೆಲವೊಮ್ಮೆ ಅವರು ವಿವಿಧ ರಾಜ್ಯಗಳು ಅಥವಾ ಬೇರೆ ದೇಶದವರಾಗಿರುತ್ತಾರೆ. ಆದರೆ ಅವರು ಕಳ್ಳತನ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಅಡುಗೆಯವರಾಗಿ, ಭದ್ರತಾ ಸಿಬ್ಬಂದಿಗಳಾಗಿ ಮತ್ತು ಶ್ರೀಮಂತ ಕುಟುಂಬಗಳಿಗೆ ಚಾಲಕರಾಗಿ ಕೆಲಸ ಮಾಡುತ್ತಾರೆ. ಮಾಲೀಕರ ನಂಬಿಕೆಯನ್ನು ಗಳಿಸಿದ ನಂತರ, ಅದು ಒಂದೆರೆಡು ದಿನಗಳಲ್ಲಿ ಅಲ್ಲ, ಹಲವಾರು ತಿಂಗಳುಗಳು ಕೆಲಸ ಮಾಡಿ ಕೊನೆಗೆ ಮಾಲೀಕರು ದೂರವಿರುವಾಗ ಮನೆಯಲ್ಲಿ ಕಳ್ಳತನ ಮಾಡಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಾರೆ ಎಂದು ಆರೋಪಿಸಿದ್ದಾರೆ. ಹಾಗಾಗಿ ಅವರನ್ನು ನೇಮಿಸಿಕೊಳ್ಳುವ ಮುನ್ನ ನಮಗೆ ಅವರ ಪೂರ್ಣ ಮಾಹಿತಿ ನೀಡಿ ಎಂದಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಅವರು ಆಭರಣಗಳು ಮತ್ತು ಹಣವನ್ನು ದರೋಡೆ ಮಾಡುವ ಮೊದಲು ಕುಟುಂಬಗಳಿಗೆ ಮಾದಕ ದ್ರವ್ಯವನ್ನು ನೀಡಿದ್ದರು ಎಂದು ಸಹ ಅವರು ಆರೋಪಿಸಿದ್ದಾರೆ ಎಂದು ತೆಲಂಗಾಣ ಟುಡೆ ವರದಿ ಮಾಡಿದೆ.

ಹೈದರಾಬಾದ್ ಪೊಲೀಸರ ಈ ಕ್ರಮ ಮತ್ತು ಆರೋಪಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮನೆಗೆಲಸದವರು ಸಹ ಮನುಷ್ಯರು, ಅವರಲ್ಲಿ ಬಹುತೇಕರು ಪ್ರಾಮಾಣಿಕರಾಗಿರುತ್ತಾರೆ. ನಿಮ್ಮ ಶ್ರೀಮಂತಿಕೆಯ ಅಹಂನಿಂದ ಅವರನ್ನು ಕ್ರಿಮಿನಲ್‌ಗಳ ರೀತಿ ನೋಡುವುದನ್ನು ಬಿಡಿ ಎಂದು ತಾಕೀತು ಮಾಡಿದ್ದಾರೆ.

ಮನೆಗೆಲಸದವರು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ತಮ್ಮ ಉದ್ಯೋಗದಾತರ ಅಪರಾಧದ ಹಿನ್ನೆಲೆಯನ್ನು ಪರಿಶೀಲಿಸಲು ಪೊಲೀಸರು ಯಾವ ಆಪ್ ರಚಿಸಿದ್ದೀರಿ? ಅದರ ಪ್ರಕ್ರಿಯೆಯೇನು? ಅಥವಾ ಈ ಪರಿಶೀಲನೆ ಪ್ರಕ್ರಿಯೆಯು ಕಟ್ಟುನಿಟ್ಟಾಗಿ ಏಕಮುಖವಾಗಿದೆಯೇ? ಎಂದು ಧನಕ್ ಎಂಬುವವರು ಪ್ರಶ್ನಿಸಿದ್ದಾರೆ.

ಇದು ಬಡವರ ವಿರೋಧಿ ಮತ್ತು ಜಾತಿವಾದಿ ಕೊಳಕು ಕೆಲಸವಾಗಿದೆ. ಜನರು ತಮ್ಮ ವರ್ಗ, ಜಾತಿ, ಆರ್ಥಿಕ ಸವಲತ್ತುಗಳ ಕಾರಣದಿಂದ ಮನೆಗೆಲಸಗಾರರನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕಾಗಿ ಉದ್ಯೋಗದಾತರೆ ಹೆಚ್ಚು ಹೊಣೆಗಾರರಾಗಿರುತ್ತಾರೆ ಎಂದು ಸಬಿನಾ ಬಾಷ ಎಂಬುವವರು ಟ್ವೀಟ್ ಮಾಡಿದ್ದಾರೆ.

ಮನೆಗೆಲಸಗಾರರಿಗೆ ಶೌಚಾಲಯ ಬಳಸಲು ಅವಕಾಶ, ಸ್ವಚ್ಛತಾ ಉಪಕರಣಗಳು, ಕನಿಷ್ಠ ಮತ್ತು ವಾರ್ಷಿಕ ಹೆಚ್ಚಳ, ಕೆಲಸದ ಸಮಯ ನಿಗಧಿ, ಹಬ್ಬದ ರಜಾದಿನಗಳನ್ನು ನೀಡಿ. ದಯವಿಟ್ಟು ಇದನ್ನೂ ಸಹ ಖಚಿತಪಡಿಸಲು ಡವ್ ಐ ಎಂಬ ಆಪ್ ರಚಿಸಿರಿ ಎಂದು ರಾಜು ಎಂಬುವವರು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಮನೆಗೆಲಸ ಬಡಜನರ ಮೇಲೆ ಕಣ್ಗಾವಲು ಇಡುವ ಮೂಲಕ ತೆಲಂಗಾಣವನ್ನು ಪೊಲೀಸ್ ರಾಜ್ಯವನ್ನಾಗಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಂಬೈ-ದೆಹಲಿಯಂತಹ ನಗರಗಳಲ್ಲಿ “ಮನೆ ನಮ್ಮ ವೈಯಕ್ತಿಕ ಜಾಗ. ಕಳ್ಳತನ ಮಾಡಿದವರು, ಯಾರೊಬ್ಬರ ಮಗುವನ್ನು ಹೊಡೆದವರು, ವೃದ್ಧ ದಂಪತಿಯನ್ನು ಕೊಂದವರು, ಜೈಲಿನಿಂದ ಹೊರಬಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಕೆಲಸಕ್ಕೆ ತೆಗೆದುಕೊಳ್ಳುವ ಮುನ್ನ ಈ ಹಿಂದೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು, ಅಲ್ಲಿನ ಮಾಲೀಕರಿಂದ ಪ್ರತಿಕ್ರಿಯೆ ಪಡೆಯಬೇಕು” ಎಂದು ಹೆಲ್ಫ್ ಚೆಕ್ಕರ್ ಎಂಬ ಫೇಸ್‌ಬುಕ್ ಗ್ರೂಪ್ ಒಂದನ್ನು ಮಾಡಿಕೊಂಡು ಹೆಣ್ಣು ಮಕ್ಕಳ ಫೋಟೊವನ್ನು ಹಾಕಿ ವಿಕೃತಿ ಮೆರೆಯುತ್ತಿರುವುದರ ಕುರಿತು ನಾನುಗೌರಿ.ಕಾಂ ಈ ಹಿಂದೆ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.


ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...