Homeಕರ್ನಾಟಕಅನೇಕಲ್ ನಲ್ಲಿ ಕೆಐಎಡಿಬಿಯಿಂದ ಸರ್ವೇ:  ರೈತರಿಂದ ಡ್ರೋನ್, ಲ್ಯಾಪ್ ಟಾಪ್ ಸುಟ್ಟು ಭಸ್ಮ

ಅನೇಕಲ್ ನಲ್ಲಿ ಕೆಐಎಡಿಬಿಯಿಂದ ಸರ್ವೇ:  ರೈತರಿಂದ ಡ್ರೋನ್, ಲ್ಯಾಪ್ ಟಾಪ್ ಸುಟ್ಟು ಭಸ್ಮ

- Advertisement -
- Advertisement -

ಆನೇಕಲ್: ತಾಲೂಕಿನ ಸರ್ಜಾಪುರದಲ್ಲಿ ಸರಕಾರದ ಆದೇಶದ ಮೇರೆಗೆ ಖಾಸಗಿ ಸರ್ವೇಯರ್ ಗಳು ಸರ್ವೆಗೆ ಬಂದ ಸಂದರ್ಭದಲ್ಲಿ ರೈತರು ಅವರ ಡ್ರೋನ್ ಕ್ಯಾಮೆರಾ, ಲ್ಯಾಪ್ ಟಾಪ್ ಸೇರಿದಂತೆ ಇನ್ನಿತರ ವಸ್ತುಗಳಿಗೆ ಬೆಂಕಿಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿರ್ಮಿಸಲು ಉದ್ದೇಶಿಸಿರುವ ಕೈಗಾರಿಕಾ ಪ್ರದೇಶಕ್ಕೆ ಅಗತ್ಯವಾದ ಭೂಮಿಯನ್ನು ಸರ್ವೆ ಮಾಡಲು ಸೋಮವಾರ ತಾಲ್ಲೂಕಿನ ಹಂದೇನಹಳ್ಳಿ ಗ್ರಾಮಕ್ಕೆ ಬಂದಿದ್ದ ಖಾಸಗಿ ಸಂಸ್ಥೆಯ ಪ್ರತಿನಿಧಿಗಳ ಡ್ರೋನ್‌ ಮತ್ತು ಲ್ಯಾಪ್‌ಟಾಪ್‌ಗೆ ರೈತರು ಬೆಂಕಿ ಹಚ್ಚಿದ್ದಾರೆ. ಹಂದೇನಹಳ್ಳಿ ಮತ್ತು ಮೇಡಹಳ್ಳಿ ಗ್ರಾಮಗಳ 700 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಕೈಗಾರಿಕ ಪ್ರದೇಶ ಸ್ಥಾಪನೆಗೆ ಕೆಐಎಡಿಬಿ ಈಚೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ.

ಕೃಷಿ ಜಮೀನುಗಳ ಸರ್ವೇಗೆ ಖಾಸಗಿ ಸಂಸ್ಥೆಯ ಪ್ರತಿನಿಧಿಗಳು ಡ್ರೋನ್‌ ಮತ್ತು ಲ್ಯಾಪ್‌ಟಾಪ್‌ ಜೊತೆ ಬಂದಿದ್ದರು. ಗ್ರಾಮ ಪ್ರವೇಶಿಸದಂತೆ  ತಡೆಯೊಡ್ಡಿದ ರೈತರು, ಅವರಿಂದ ಡ್ರೋನ್‌ ಮತ್ತು ಲ್ಯಾಪ್‌ಟ್ಯಾಪ್‌ ಕಿತ್ತುಕೊಂಡು ಬೆಂಕಿ ಹಚ್ಚಿದರು. ನಂತರ ಬಡಿಗೆ ಮತ್ತು ದೊಣ್ಣೆಗಳೊಂದಿಗೆ ಅಡ್ಡಲಾಗಿ ನಿಂತು ಸರ್ವೆ ಕಾರ್ಯ ಮಾಡದಂತೆ ತಡೆದು ವಾಪಸ್‌ ಕಳಿಸಿದರು.

ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳಕ್ಕೆಸೂರ್ಯ ಸಿಟಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸಂಜಯ್ ಮಹಾಜನ್ ಆಗಮಿಸಿ ರೈತರ ಮನವೊಲಿಸಲು ಮುಂದಾದರೂ ವಿಫಲರಾದರು. ಬಳಿಕ ಡಿವೈಎಸ್ಪಿ ಮೋಹನ್ ಆಗಮಿಸಿ, ಪ್ರತಿಭಟನೆ ಕೈಬಿಡಲು ಮನವಿ ಮಾಡಿದ್ದಾರೆ.  ಆದರೆ, ಇದಕ್ಕೆ ಒಪ್ಪದ ರೈತರು ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದು ನಮ್ಮ ಸಮಸ್ಯೆಯನ್ನು ಆಲಿಸಬೇಕು ಎಂದು ಪಟ್ಟು ಹಿಡಿದರು.  ನಂತರ ಡಿವೈಎಸ್ಪಿ ಮೋಹನ್ ಅವರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ವಿಚಾರ ತಿಳಿಸಿದದು, ಜ.10ರಂದು ಅನೇಕಲ್ ತಾಲೂಕಿಗೆ ಬರುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.

ರೈತ ಮುಖಂಡರಾದ ಕೇಶವರೆಡ್ಡಿ, ನಾಗೇಶ್‌, ಅಂಬರೀಷ್‌, ಮುನಿಯಲ್ಲಪ್ಪ, ಶ್ರೀನಿವಾಸರೆಡ್ಡಿ, ವೇಣು ಮೊದಲಾದವರು ಭಾಗವಹಿಸಿದ್ದರು.

ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ನಟ ಪ್ರಕಾಶ್ ರಾಜ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...