Homeಕರ್ನಾಟಕಅನೇಕಲ್ ನಲ್ಲಿ ಕೆಐಎಡಿಬಿಯಿಂದ ಸರ್ವೇ:  ರೈತರಿಂದ ಡ್ರೋನ್, ಲ್ಯಾಪ್ ಟಾಪ್ ಸುಟ್ಟು ಭಸ್ಮ

ಅನೇಕಲ್ ನಲ್ಲಿ ಕೆಐಎಡಿಬಿಯಿಂದ ಸರ್ವೇ:  ರೈತರಿಂದ ಡ್ರೋನ್, ಲ್ಯಾಪ್ ಟಾಪ್ ಸುಟ್ಟು ಭಸ್ಮ

- Advertisement -
- Advertisement -

ಆನೇಕಲ್: ತಾಲೂಕಿನ ಸರ್ಜಾಪುರದಲ್ಲಿ ಸರಕಾರದ ಆದೇಶದ ಮೇರೆಗೆ ಖಾಸಗಿ ಸರ್ವೇಯರ್ ಗಳು ಸರ್ವೆಗೆ ಬಂದ ಸಂದರ್ಭದಲ್ಲಿ ರೈತರು ಅವರ ಡ್ರೋನ್ ಕ್ಯಾಮೆರಾ, ಲ್ಯಾಪ್ ಟಾಪ್ ಸೇರಿದಂತೆ ಇನ್ನಿತರ ವಸ್ತುಗಳಿಗೆ ಬೆಂಕಿಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿರ್ಮಿಸಲು ಉದ್ದೇಶಿಸಿರುವ ಕೈಗಾರಿಕಾ ಪ್ರದೇಶಕ್ಕೆ ಅಗತ್ಯವಾದ ಭೂಮಿಯನ್ನು ಸರ್ವೆ ಮಾಡಲು ಸೋಮವಾರ ತಾಲ್ಲೂಕಿನ ಹಂದೇನಹಳ್ಳಿ ಗ್ರಾಮಕ್ಕೆ ಬಂದಿದ್ದ ಖಾಸಗಿ ಸಂಸ್ಥೆಯ ಪ್ರತಿನಿಧಿಗಳ ಡ್ರೋನ್‌ ಮತ್ತು ಲ್ಯಾಪ್‌ಟಾಪ್‌ಗೆ ರೈತರು ಬೆಂಕಿ ಹಚ್ಚಿದ್ದಾರೆ. ಹಂದೇನಹಳ್ಳಿ ಮತ್ತು ಮೇಡಹಳ್ಳಿ ಗ್ರಾಮಗಳ 700 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಕೈಗಾರಿಕ ಪ್ರದೇಶ ಸ್ಥಾಪನೆಗೆ ಕೆಐಎಡಿಬಿ ಈಚೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ.

ಕೃಷಿ ಜಮೀನುಗಳ ಸರ್ವೇಗೆ ಖಾಸಗಿ ಸಂಸ್ಥೆಯ ಪ್ರತಿನಿಧಿಗಳು ಡ್ರೋನ್‌ ಮತ್ತು ಲ್ಯಾಪ್‌ಟಾಪ್‌ ಜೊತೆ ಬಂದಿದ್ದರು. ಗ್ರಾಮ ಪ್ರವೇಶಿಸದಂತೆ  ತಡೆಯೊಡ್ಡಿದ ರೈತರು, ಅವರಿಂದ ಡ್ರೋನ್‌ ಮತ್ತು ಲ್ಯಾಪ್‌ಟ್ಯಾಪ್‌ ಕಿತ್ತುಕೊಂಡು ಬೆಂಕಿ ಹಚ್ಚಿದರು. ನಂತರ ಬಡಿಗೆ ಮತ್ತು ದೊಣ್ಣೆಗಳೊಂದಿಗೆ ಅಡ್ಡಲಾಗಿ ನಿಂತು ಸರ್ವೆ ಕಾರ್ಯ ಮಾಡದಂತೆ ತಡೆದು ವಾಪಸ್‌ ಕಳಿಸಿದರು.

ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳಕ್ಕೆಸೂರ್ಯ ಸಿಟಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸಂಜಯ್ ಮಹಾಜನ್ ಆಗಮಿಸಿ ರೈತರ ಮನವೊಲಿಸಲು ಮುಂದಾದರೂ ವಿಫಲರಾದರು. ಬಳಿಕ ಡಿವೈಎಸ್ಪಿ ಮೋಹನ್ ಆಗಮಿಸಿ, ಪ್ರತಿಭಟನೆ ಕೈಬಿಡಲು ಮನವಿ ಮಾಡಿದ್ದಾರೆ.  ಆದರೆ, ಇದಕ್ಕೆ ಒಪ್ಪದ ರೈತರು ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದು ನಮ್ಮ ಸಮಸ್ಯೆಯನ್ನು ಆಲಿಸಬೇಕು ಎಂದು ಪಟ್ಟು ಹಿಡಿದರು.  ನಂತರ ಡಿವೈಎಸ್ಪಿ ಮೋಹನ್ ಅವರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ವಿಚಾರ ತಿಳಿಸಿದದು, ಜ.10ರಂದು ಅನೇಕಲ್ ತಾಲೂಕಿಗೆ ಬರುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.

ರೈತ ಮುಖಂಡರಾದ ಕೇಶವರೆಡ್ಡಿ, ನಾಗೇಶ್‌, ಅಂಬರೀಷ್‌, ಮುನಿಯಲ್ಲಪ್ಪ, ಶ್ರೀನಿವಾಸರೆಡ್ಡಿ, ವೇಣು ಮೊದಲಾದವರು ಭಾಗವಹಿಸಿದ್ದರು.

ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ನಟ ಪ್ರಕಾಶ್ ರಾಜ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...