Homeಮುಖಪುಟದೇಶದಾದ್ಯಂತ ಮಸೀದಿಗಳ ಸಮೀಕ್ಷೆ ಮತ್ತು ಪ್ರಕರಣಗಳಿಗೆ ಸುಪ್ರೀಂಕೋರ್ಟ್‌ ತಡೆ

ದೇಶದಾದ್ಯಂತ ಮಸೀದಿಗಳ ಸಮೀಕ್ಷೆ ಮತ್ತು ಪ್ರಕರಣಗಳಿಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991 ರ ಅಡಿಯಲ್ಲಿ ಧಾರ್ಮಿಕ ಸ್ಥಳಗಳ ಸಮೀಕ್ಷೆ ಸೇರಿದಂತೆ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಪ್ರಕರಣಗಳಲ್ಲಿ ಆದೇಶಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಗುರುವಾರ ದೇಶಾದ್ಯಂತ ಕೆಳ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ. 1991ರ ಕಾಯಿದೆಯ ಕೆಲವು ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ. ದೇಶದಾದ್ಯಂತ ಮಸೀದಿಗಳ ಸಮೀಕ್ಷೆ

“ಪ್ರಕರಣವು ಈ ನ್ಯಾಯಾಲಯದ ಮುಂದೆ ಇರುವುದರಿಂದ, ಸಮೀಕ್ಷೆಗಾಗಿ ಮೊಕದ್ದಮೆಗಳನ್ನು ಸಲ್ಲಿಸಬಹುದಾದರೂ, ಈ ನ್ಯಾಯಾಲಯದ ಮುಂದಿನ ಆದೇಶದವರೆಗೆ ಯಾವುದೇ ಮೊಕದ್ದಮೆಗಳನ್ನು ದಾಖಲಿಸಬಾರದು ಮತ್ತು ಪ್ರಕ್ರಿಯೆಗಳನ್ನು ಕೈಗೊಳ್ಳಬಾರದು ಎಂದು ನಿರ್ದೇಶಿಸುವುದು ಸೂಕ್ತವೆಂದು ನಾವು ಭಾವಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸಂಜೀವ್ ಖನ್ನಾ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೆವಿ ವಿಶ್ವನಾಥನ್ ಮತ್ತು ಸಂಜಯ್ ಕುಮಾರ್ ಇದ್ದಾರೆ. ದೇಶದಾದ್ಯಂತ ಮಸೀದಿಗಳ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಾಕಿ ಉಳಿದಿರುವ ಮೊಕದ್ದಮೆಗಳಲ್ಲಿ, ನ್ಯಾಯಾಲಯಗಳು ಮುಂದಿನ ವಿಚಾರಣೆಯ ದಿನಾಂಕದವರೆಗೆ ಸಮೀಕ್ಷೆಯ ಆದೇಶಗಳು ಸೇರಿದಂತೆ ಯಾವುದೇ ಪರಿಣಾಮಕಾರಿ ಮಧ್ಯಂತರ ಆದೇಶಗಳನ್ನು ಅಥವಾ ಅಂತಿಮ ಆದೇಶಗಳನ್ನು ನೀಡಬಾರದು ಎಂದು ನಾವು ನಿರ್ದೇಶಿಸುತ್ತೇವೆ” ಎಂದು ಪೀಠವು ಹೇಳಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿ ಸೇರಿದಂತೆ ಧಾರ್ಮಿಕ ಸ್ಥಳಗಳ ಮಾಲೀಕತ್ವವನ್ನು ಪ್ರಶ್ನಿಸಿ ದೇಶದ ವಿವಿಧ ನ್ಯಾಯಾಲಯಗಳಲ್ಲಿ ಸಲ್ಲಿಸಲಾದ ಕನಿಷ್ಠ ಹತ್ತು ಅರ್ಜಿಗಳ ಮೇಲೆ ಈ ಆದೇಶವು ಪರಿಣಾಮ ಬೀರುತ್ತದೆ.

1991ರ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆಯು, ಯಾವುದೇ ಪೂಜಾ ಸ್ಥಳದ ಪರಿವರ್ತನೆಯನ್ನು ನಿಷೇಧಿಸುತ್ತದೆ ಮತ್ತು ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಕಾಪಾಡಿಕೊಳ್ಳಲು ಅನುಮತಿ ನೀಡುತ್ತದೆ.

1991ರ ಕಾನೂನನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ನಾಲ್ಕು ವಾರಗಳಲ್ಲಿ ವಿವರವಾದ ಉತ್ತರವನ್ನು ಸಲ್ಲಿಸುವಂತೆಯೂ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ. ಬಾಕಿ ಉಳಿದಿರುವ ಅರ್ಜಿಗಳನ್ನು ಆಲಿಸಿ ವಿಲೇವಾರಿ ಮಾಡುವವರೆಗೆ ದೇಶದಲ್ಲಿ ಧಾರ್ಮಿಕ ಸ್ಥಳಗಳ ಮೂಲವನ್ನು ಪ್ರಶ್ನಿಸುವ ಯಾವುದೇ ದಾವೆಗಳನ್ನು ನೋಂದಾಯಿಸಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ಮಧ್ಯೆ, ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಮುಸ್ಲಿಂ ಸಂಸ್ಥೆಗಳು ಸೇರಿದಂತೆ ವಿವಿಧ ಪಕ್ಷಗಳ ಅರ್ಜಿಗಳಿಗೆ ಅದು ಅನುಮತಿ ನೀಡಿತು. ಸಿಪಿಐ (ಎಂ), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಎನ್‌ಸಿಪಿ (ಶರದ್ ಪವಾರ್) ಶಾಸಕ ಜಿತೇಂದ್ರ ಅವ್ಹಾದ್, ಆರ್‌ಜೆಡಿ ಸಂಸದ (ಸಂಸತ್ ಸದಸ್ಯ) ಮನೋಜ್ ಕುಮಾರ್ ಝಾ, ಸಂಸದ ತೋಲ್ ತಿರುಮಾವಲನ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಪೂಜಾ ಸ್ಥಳಗಳ ಕಾಯ್ದೆಯನ್ನು ಬೆಂಬಲಿಸಿದ್ದಾರೆ.

ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ನಾಲ್ಕು ವಾರಗಳಲ್ಲಿ ಉತ್ತರವನ್ನು ಸಲ್ಲಿಸಲು ಒಪ್ಪಿಕೊಂಡಿದ್ದಾರೆ.

1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯ ಸೆಕ್ಷನ್ 2, 3 ಮತ್ತು 4 ರ ನಿರ್ದೇಶನವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಮನವಿ ಸೇರಿದಂತೆ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಪಕ್ಕಕ್ಕೆ ಇಟ್ಟಿದೆ.

1991 ರ ಕಾನೂನಿನ ನಿಬಂಧನೆಗಳ ವಿರುದ್ಧ ಮಾಜಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯ ಮೇಲೆ ಹಿಂದೂಗಳು ಹಕ್ಕು ಸಾಧಿಸಲು ಅನುಕೂಲವಾಗುವಂತೆ ಸುಪ್ರೀಂ ಕೋರ್ಟ್ ಕೆಲವು ನಿಬಂಧನೆಗಳನ್ನು ಬದಲಿಸುವಂತೆ ಅವರು ಬಯಸಿದ್ದಾರೆ.

ಇದನ್ನೂ ಓದಿ: ‘ಅಕ್ರಮ ಅತಿಕ್ರಮಣ’ದ ವಿರುದ್ಧ ಸಿಎಂ ಅವರ ಬುಲ್ಡೋಜರ್ ಬರಲಿದೆ – ಗುಜರಾತ್ ಗೃಹ ಸಚಿವ

‘ಅಕ್ರಮ ಅತಿಕ್ರಮಣ’ದ ವಿರುದ್ಧ ಸಿಎಂ ಅವರ ಬುಲ್ಡೋಜರ್ ಬರಲಿದೆ – ಗುಜರಾತ್ ಗೃಹ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...