Homeಮುಖಪುಟದೇಶದಾದ್ಯಂತ ಮಸೀದಿಗಳ ಸಮೀಕ್ಷೆ ಮತ್ತು ಪ್ರಕರಣಗಳಿಗೆ ಸುಪ್ರೀಂಕೋರ್ಟ್‌ ತಡೆ

ದೇಶದಾದ್ಯಂತ ಮಸೀದಿಗಳ ಸಮೀಕ್ಷೆ ಮತ್ತು ಪ್ರಕರಣಗಳಿಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991 ರ ಅಡಿಯಲ್ಲಿ ಧಾರ್ಮಿಕ ಸ್ಥಳಗಳ ಸಮೀಕ್ಷೆ ಸೇರಿದಂತೆ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಪ್ರಕರಣಗಳಲ್ಲಿ ಆದೇಶಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಗುರುವಾರ ದೇಶಾದ್ಯಂತ ಕೆಳ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ. 1991ರ ಕಾಯಿದೆಯ ಕೆಲವು ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ. ದೇಶದಾದ್ಯಂತ ಮಸೀದಿಗಳ ಸಮೀಕ್ಷೆ

“ಪ್ರಕರಣವು ಈ ನ್ಯಾಯಾಲಯದ ಮುಂದೆ ಇರುವುದರಿಂದ, ಸಮೀಕ್ಷೆಗಾಗಿ ಮೊಕದ್ದಮೆಗಳನ್ನು ಸಲ್ಲಿಸಬಹುದಾದರೂ, ಈ ನ್ಯಾಯಾಲಯದ ಮುಂದಿನ ಆದೇಶದವರೆಗೆ ಯಾವುದೇ ಮೊಕದ್ದಮೆಗಳನ್ನು ದಾಖಲಿಸಬಾರದು ಮತ್ತು ಪ್ರಕ್ರಿಯೆಗಳನ್ನು ಕೈಗೊಳ್ಳಬಾರದು ಎಂದು ನಿರ್ದೇಶಿಸುವುದು ಸೂಕ್ತವೆಂದು ನಾವು ಭಾವಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸಂಜೀವ್ ಖನ್ನಾ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೆವಿ ವಿಶ್ವನಾಥನ್ ಮತ್ತು ಸಂಜಯ್ ಕುಮಾರ್ ಇದ್ದಾರೆ. ದೇಶದಾದ್ಯಂತ ಮಸೀದಿಗಳ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಾಕಿ ಉಳಿದಿರುವ ಮೊಕದ್ದಮೆಗಳಲ್ಲಿ, ನ್ಯಾಯಾಲಯಗಳು ಮುಂದಿನ ವಿಚಾರಣೆಯ ದಿನಾಂಕದವರೆಗೆ ಸಮೀಕ್ಷೆಯ ಆದೇಶಗಳು ಸೇರಿದಂತೆ ಯಾವುದೇ ಪರಿಣಾಮಕಾರಿ ಮಧ್ಯಂತರ ಆದೇಶಗಳನ್ನು ಅಥವಾ ಅಂತಿಮ ಆದೇಶಗಳನ್ನು ನೀಡಬಾರದು ಎಂದು ನಾವು ನಿರ್ದೇಶಿಸುತ್ತೇವೆ” ಎಂದು ಪೀಠವು ಹೇಳಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿ ಸೇರಿದಂತೆ ಧಾರ್ಮಿಕ ಸ್ಥಳಗಳ ಮಾಲೀಕತ್ವವನ್ನು ಪ್ರಶ್ನಿಸಿ ದೇಶದ ವಿವಿಧ ನ್ಯಾಯಾಲಯಗಳಲ್ಲಿ ಸಲ್ಲಿಸಲಾದ ಕನಿಷ್ಠ ಹತ್ತು ಅರ್ಜಿಗಳ ಮೇಲೆ ಈ ಆದೇಶವು ಪರಿಣಾಮ ಬೀರುತ್ತದೆ.

1991ರ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆಯು, ಯಾವುದೇ ಪೂಜಾ ಸ್ಥಳದ ಪರಿವರ್ತನೆಯನ್ನು ನಿಷೇಧಿಸುತ್ತದೆ ಮತ್ತು ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಕಾಪಾಡಿಕೊಳ್ಳಲು ಅನುಮತಿ ನೀಡುತ್ತದೆ.

1991ರ ಕಾನೂನನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ನಾಲ್ಕು ವಾರಗಳಲ್ಲಿ ವಿವರವಾದ ಉತ್ತರವನ್ನು ಸಲ್ಲಿಸುವಂತೆಯೂ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ. ಬಾಕಿ ಉಳಿದಿರುವ ಅರ್ಜಿಗಳನ್ನು ಆಲಿಸಿ ವಿಲೇವಾರಿ ಮಾಡುವವರೆಗೆ ದೇಶದಲ್ಲಿ ಧಾರ್ಮಿಕ ಸ್ಥಳಗಳ ಮೂಲವನ್ನು ಪ್ರಶ್ನಿಸುವ ಯಾವುದೇ ದಾವೆಗಳನ್ನು ನೋಂದಾಯಿಸಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ಮಧ್ಯೆ, ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಮುಸ್ಲಿಂ ಸಂಸ್ಥೆಗಳು ಸೇರಿದಂತೆ ವಿವಿಧ ಪಕ್ಷಗಳ ಅರ್ಜಿಗಳಿಗೆ ಅದು ಅನುಮತಿ ನೀಡಿತು. ಸಿಪಿಐ (ಎಂ), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಎನ್‌ಸಿಪಿ (ಶರದ್ ಪವಾರ್) ಶಾಸಕ ಜಿತೇಂದ್ರ ಅವ್ಹಾದ್, ಆರ್‌ಜೆಡಿ ಸಂಸದ (ಸಂಸತ್ ಸದಸ್ಯ) ಮನೋಜ್ ಕುಮಾರ್ ಝಾ, ಸಂಸದ ತೋಲ್ ತಿರುಮಾವಲನ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಪೂಜಾ ಸ್ಥಳಗಳ ಕಾಯ್ದೆಯನ್ನು ಬೆಂಬಲಿಸಿದ್ದಾರೆ.

ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ನಾಲ್ಕು ವಾರಗಳಲ್ಲಿ ಉತ್ತರವನ್ನು ಸಲ್ಲಿಸಲು ಒಪ್ಪಿಕೊಂಡಿದ್ದಾರೆ.

1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯ ಸೆಕ್ಷನ್ 2, 3 ಮತ್ತು 4 ರ ನಿರ್ದೇಶನವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಮನವಿ ಸೇರಿದಂತೆ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಪಕ್ಕಕ್ಕೆ ಇಟ್ಟಿದೆ.

1991 ರ ಕಾನೂನಿನ ನಿಬಂಧನೆಗಳ ವಿರುದ್ಧ ಮಾಜಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಈದ್ಗಾ ಮಸೀದಿಯ ಮೇಲೆ ಹಿಂದೂಗಳು ಹಕ್ಕು ಸಾಧಿಸಲು ಅನುಕೂಲವಾಗುವಂತೆ ಸುಪ್ರೀಂ ಕೋರ್ಟ್ ಕೆಲವು ನಿಬಂಧನೆಗಳನ್ನು ಬದಲಿಸುವಂತೆ ಅವರು ಬಯಸಿದ್ದಾರೆ.

ಇದನ್ನೂ ಓದಿ: ‘ಅಕ್ರಮ ಅತಿಕ್ರಮಣ’ದ ವಿರುದ್ಧ ಸಿಎಂ ಅವರ ಬುಲ್ಡೋಜರ್ ಬರಲಿದೆ – ಗುಜರಾತ್ ಗೃಹ ಸಚಿವ

‘ಅಕ್ರಮ ಅತಿಕ್ರಮಣ’ದ ವಿರುದ್ಧ ಸಿಎಂ ಅವರ ಬುಲ್ಡೋಜರ್ ಬರಲಿದೆ – ಗುಜರಾತ್ ಗೃಹ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...