Homeಅಂತರಾಷ್ಟ್ರೀಯಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಭಾರತೀಯ ಅಮೆರಿಕನ್ನರು ಮೋದಿಯನ್ನು ಬೆಂಬಲಿಸುತ್ತಾರೆ ಎಂದು ಸಮಿಕ್ಷೆ ಹೇಳಿದೆ

- Advertisement -
- Advertisement -

ಭಾರತೀಯ ಅಮೆರಿಕನ್ನರು ರಾಜಕೀಯ ವಿಷಯದ ಬಗ್ಗೆ ಅಮೆರಿಕದಲ್ಲಿ ಉದಾರವಾದಿ ದೃಷ್ಟಿಕೋನ ಹೊಂದಿದ್ದು, ಅದುವೆ ಭಾರತದ ವಿಷಯಕ್ಕೆ ಬಂದಾಗ ಸಂಪ್ರದಾಯವಾದಿಗಳಾಗಿ ಪರಿವರ್ತನೆ ಹೊಂದುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಉದಾಹರಣೆಗೆ, “ಹಿಂದೂಗಳು ಹಾಗೂ ಹಿಂದೂಯೇತರರು ’ಬಿಳಿ ಜನಾಂಗೀಯವಾದದ ಪ್ರಾಬಲ್ಯವು’ ಅಮೆರಿಕದಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಒಪ್ಪುತ್ತಾರೆ. ಆದರೆ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದದಿಂದ ಉಂಟಾಗುವ ಬೆದರಿಕೆಯ ಬಗ್ಗೆ ಅವರ ದೃಷ್ಟಿಕೋನ ಗಮನಾರ್ಹವಾಗಿ ಭಿನ್ನವಾಗಿದೆ” ಎಂದು ಸಮೀಕ್ಷೆಯು ಹೇಳಿದೆ.

ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್‌ನಲ್ಲಿ ಆನ್‌ಲೈನ್ ಮೂಲಕ ಈ ಸಮೀಕ್ಷೆ ನಡೆಸಿದೆ. ಸಮೀಕ್ಷೆಯು 1,200 ಭಾರತೀಯ ಅಮೆರಿಕನ್ ವಯಸ್ಕ ನಿವಾಸಿಗಳನ್ನು ಒಳಗೊಂಡಿದೆ. ಅಮೆರಿಕದಲ್ಲಿ 42 ಲಕ್ಷ ಭಾರತೀಯ ಅಮೆರಿಕನ್ನರಿದ್ದು, ಇದು ಎರಡನೇ ಅತಿದೊಡ್ಡ ವಲಸೆಗಾರ ಸಮುದಾಯವಾಗಿದೆ. ಇದರಲ್ಲಿ 38% ಜನರು ಇನ್ನೂ ಅಮೆರಿಕದ ಪ್ರಜೆಗಳಲ್ಲ.

ಇದನ್ನೂ ಓದಿ: ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಅಮೆರಿಕದಲ್ಲಿ ಬಿಳಿಜನಾಂಗೀಯವಾದವು ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ಹೇಳಿರುವ 73% ದಷ್ಟು ಜನರಲ್ಲಿ, ಅರ್ಧಕ್ಕಿಂತ ಕಡಿಮೆ ಜನರು ಹಿಂದೂ ಬಹುಸಂಖ್ಯಾತವಾದವು ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ನಂಬಿದ್ದಾರೆ. ಕೇವಲ 40% ಭಾರತೀಯ ಅಮೆರಿಕನ್‌ ಹಿಂದೂಗಳು, ಹಿಂದೂ ಬಹುಸಂಖ್ಯಾವಾದವು ಅಪಾಕಾರಿ ಎಂದು ನಂಬಿದ್ದಾರೆ. ಆದರೆ 67% ಹಿಂದೂಯೇತರ ಭಾರತೀಯ ಅಮೆರಿಕನ್ನರು ಹಿಂದೂ ಬಹುಸಂಖ್ಯಾತವಾದವು ಅಪಾಯ ಎಂದು ಹೇಳಿದ್ದಾರೆ.

ಭಾರತವು “ಸರಿಯಾದ ಹಾದಿಯಲ್ಲಿದೆ” ಎಂದು 36% ಜನರು ಒಪ್ಪಿಕೊಂಡಿದ್ದಾರೆ. ಆದರೆ 39% ಜನರು ಅದನ್ನು ಒಪ್ಪಿಕೊಂಡಿಲ್ಲ. ಅಮೆರಿಕದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರಿಗಿಂತ ಹೆಚ್ಚಾಗಿ, ವಿದೇಶದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರು ಭಾರತವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ಜನಸಂಖ್ಯೆಯ ಅತಿದೊಡ್ಡ ಭಾಗವಾದ 35% ಜನರು ತಮ್ಮನ್ನು “ಭಾರತ ಪರ” ಎಂದು ಗುರುತಿಸಿಕೊಂಡಿದ್ದಾರೆ ಆದರೆ ಪ್ರಸ್ತುತ ಸರ್ಕಾರದ ಕೆಲವು ನೀತಿಗಳನ್ನು ಟೀಕಿಸಿದ್ದಾರೆ. ಇನ್ನೂ 23% ಜನರು ಭಾರತದ ಪರವಾಗಿದ್ದರಾದರೂ ಅನೇಕ ರಾಜಕಾರಣವನ್ನು ಟೀಕಿಸಿದ್ದಾರೆ. 17% ಜನರು ಭಾರತ ಮತ್ತು ಪ್ರಸ್ತುತ ಸರ್ಕಾರದ ಬಗ್ಗೆ ಸಕಾರಾತ್ಮಕ ನಿಲುವನ್ನು ಹೊಂದಿದ್ದಾರೆ.

NRC-CAA ಯನ್ನು ಕ್ರಮವಾಗಿ 55% ಮತ್ತು 51% ರಷ್ಟು ಜನರು ಬೆಂಬಲಿಸಿದ್ದಾರೆ. ಆದರೆ, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲವನ್ನು ಬಳಸುವುದನ್ನು ಅವರು ವಿರೋಧಿಸಿದ್ದಾರೆ ಹಾಗೂ ಪತ್ರಕರ್ತರ ವಿರುದ್ಧ ಮತ್ತು ಮೋದಿ ಸರ್ಕಾರವನ್ನು ಟೀಕಿಸುವವರ ವಿರುದ್ದ ಮಾನಹಾನಿ ಮತ್ತು ದೇಶದ್ರೋಹ ಪ್ರಕರಣ ದಾಖಲಿಸುವುದನ್ನು ವಿರೋಧಿಸಿದ್ದಾರೆ.

ಅಮರಿಕದಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚು ಉದಾರವಾದಿಗಳಾಗಿದ್ದಾರೆ. ಉದಾಹರಣೆಗೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕೆಲವು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಹೇರಿದ ನಿಷೇಧವನ್ನು 60% ಜನರು ವಿರೋಧಿಸಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

40% ಜನರು ಭಾರತೀಯ ರಾಜಕೀಯ ಪಕ್ಷದಲ್ಲಿ ಯಾವುದೆ ಪಕ್ಷವನ್ನು ಆಯ್ಕೆ ಮಾಡಲಿಲ್ಲ, ಆದರೆ 33% ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದು, 12% ಜನರು ಕಾಂಗ್ರೆಸ್‌ ಪಕ್ಷವನ್ನು ಮತ್ತು 16% ಇತರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.

ಭಾರತ ಎದುರಿಸುತ್ತಿರುವ ದೊಡ್ಡ ಸವಾಲುಗಳ ಬಗ್ಗೆ, ಭ್ರಷ್ಟಾಚಾರವೆ ಅತೀ ದೊಡ್ಡ ಸಮಸ್ಯೆ ಎಂದು 18%  ಜನರು ಹೇಳಿದ್ದಾರೆ. ಆರ್ಥಿಕತೆ ಸಮಸ್ಯೆ 15%, ಧಾರ್ಮಿಕ ಬಹುಸಂಖ್ಯಾತವಾದ ಸಮಸ್ಯೆ 10%, ಆರೋಗ್ಯ ರಕ್ಷಣೆಯ ಸಮಸ್ಯೆ 8%, ಚೀನಾ 7%, ಭಯೋತ್ಪಾದನೆ 7%, ಜಾತಿ ತಾರತಮ್ಯ 6%, ಶಿಕ್ಷಣದ ಸಮಸ್ಯೆ 6%, ಆದಾಯ ಅಸಮಾನತೆ ಸಮಸ್ಯೆ 5%, ಹವಾಮಾನ ಬದಲಾವಣೆಯ ಸಮಸ್ಯೆ 4% ಮತ್ತು ಲಿಂಗಭೇದಭಾವದ ಸಮಸ್ಯೆ ಎಂದು 4% ಜನರು ಹೇಳಿದ್ದಾರೆ.

ಟ್ರಂಪ್‌ ಪಕ್ಷದಲ್ಲಿ ಮೋದಿ ಮತ್ತು ಬಿಜೆಪಿಯ ಬೆಂಬಲಿಗರ ನಡುವಿನ ಸಂಬಂಧವನ್ನು ಸಮೀಕ್ಷೆಯು ಕಂಡುಹಿಡಿದಿದೆ. ಅಮೆರಿಕನ್ ಭಾರತೀಯ ಹಿಂದೂಗಳಲ್ಲಿ 69% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇತರ ಸಮುದಾಯಗಳಲ್ಲಿ 20% ರಿಂದ 33% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇಂಜಿನಿಯರ್‌ ಅಲ್ಲದ 48% ಜನರಷ್ಟೇ ಮೋದಿಯನ್ನು ಬೆಂಬಲಿಸುತ್ತಾರೆ.

ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...