Homeಅಂತರಾಷ್ಟ್ರೀಯಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಭಾರತೀಯ ಅಮೆರಿಕನ್ನರು ಮೋದಿಯನ್ನು ಬೆಂಬಲಿಸುತ್ತಾರೆ ಎಂದು ಸಮಿಕ್ಷೆ ಹೇಳಿದೆ

- Advertisement -
- Advertisement -

ಭಾರತೀಯ ಅಮೆರಿಕನ್ನರು ರಾಜಕೀಯ ವಿಷಯದ ಬಗ್ಗೆ ಅಮೆರಿಕದಲ್ಲಿ ಉದಾರವಾದಿ ದೃಷ್ಟಿಕೋನ ಹೊಂದಿದ್ದು, ಅದುವೆ ಭಾರತದ ವಿಷಯಕ್ಕೆ ಬಂದಾಗ ಸಂಪ್ರದಾಯವಾದಿಗಳಾಗಿ ಪರಿವರ್ತನೆ ಹೊಂದುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಉದಾಹರಣೆಗೆ, “ಹಿಂದೂಗಳು ಹಾಗೂ ಹಿಂದೂಯೇತರರು ’ಬಿಳಿ ಜನಾಂಗೀಯವಾದದ ಪ್ರಾಬಲ್ಯವು’ ಅಮೆರಿಕದಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಒಪ್ಪುತ್ತಾರೆ. ಆದರೆ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದದಿಂದ ಉಂಟಾಗುವ ಬೆದರಿಕೆಯ ಬಗ್ಗೆ ಅವರ ದೃಷ್ಟಿಕೋನ ಗಮನಾರ್ಹವಾಗಿ ಭಿನ್ನವಾಗಿದೆ” ಎಂದು ಸಮೀಕ್ಷೆಯು ಹೇಳಿದೆ.

ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್‌ನಲ್ಲಿ ಆನ್‌ಲೈನ್ ಮೂಲಕ ಈ ಸಮೀಕ್ಷೆ ನಡೆಸಿದೆ. ಸಮೀಕ್ಷೆಯು 1,200 ಭಾರತೀಯ ಅಮೆರಿಕನ್ ವಯಸ್ಕ ನಿವಾಸಿಗಳನ್ನು ಒಳಗೊಂಡಿದೆ. ಅಮೆರಿಕದಲ್ಲಿ 42 ಲಕ್ಷ ಭಾರತೀಯ ಅಮೆರಿಕನ್ನರಿದ್ದು, ಇದು ಎರಡನೇ ಅತಿದೊಡ್ಡ ವಲಸೆಗಾರ ಸಮುದಾಯವಾಗಿದೆ. ಇದರಲ್ಲಿ 38% ಜನರು ಇನ್ನೂ ಅಮೆರಿಕದ ಪ್ರಜೆಗಳಲ್ಲ.

ಇದನ್ನೂ ಓದಿ: ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಅಮೆರಿಕದಲ್ಲಿ ಬಿಳಿಜನಾಂಗೀಯವಾದವು ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ಹೇಳಿರುವ 73% ದಷ್ಟು ಜನರಲ್ಲಿ, ಅರ್ಧಕ್ಕಿಂತ ಕಡಿಮೆ ಜನರು ಹಿಂದೂ ಬಹುಸಂಖ್ಯಾತವಾದವು ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ನಂಬಿದ್ದಾರೆ. ಕೇವಲ 40% ಭಾರತೀಯ ಅಮೆರಿಕನ್‌ ಹಿಂದೂಗಳು, ಹಿಂದೂ ಬಹುಸಂಖ್ಯಾವಾದವು ಅಪಾಕಾರಿ ಎಂದು ನಂಬಿದ್ದಾರೆ. ಆದರೆ 67% ಹಿಂದೂಯೇತರ ಭಾರತೀಯ ಅಮೆರಿಕನ್ನರು ಹಿಂದೂ ಬಹುಸಂಖ್ಯಾತವಾದವು ಅಪಾಯ ಎಂದು ಹೇಳಿದ್ದಾರೆ.

ಭಾರತವು “ಸರಿಯಾದ ಹಾದಿಯಲ್ಲಿದೆ” ಎಂದು 36% ಜನರು ಒಪ್ಪಿಕೊಂಡಿದ್ದಾರೆ. ಆದರೆ 39% ಜನರು ಅದನ್ನು ಒಪ್ಪಿಕೊಂಡಿಲ್ಲ. ಅಮೆರಿಕದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರಿಗಿಂತ ಹೆಚ್ಚಾಗಿ, ವಿದೇಶದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರು ಭಾರತವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ಜನಸಂಖ್ಯೆಯ ಅತಿದೊಡ್ಡ ಭಾಗವಾದ 35% ಜನರು ತಮ್ಮನ್ನು “ಭಾರತ ಪರ” ಎಂದು ಗುರುತಿಸಿಕೊಂಡಿದ್ದಾರೆ ಆದರೆ ಪ್ರಸ್ತುತ ಸರ್ಕಾರದ ಕೆಲವು ನೀತಿಗಳನ್ನು ಟೀಕಿಸಿದ್ದಾರೆ. ಇನ್ನೂ 23% ಜನರು ಭಾರತದ ಪರವಾಗಿದ್ದರಾದರೂ ಅನೇಕ ರಾಜಕಾರಣವನ್ನು ಟೀಕಿಸಿದ್ದಾರೆ. 17% ಜನರು ಭಾರತ ಮತ್ತು ಪ್ರಸ್ತುತ ಸರ್ಕಾರದ ಬಗ್ಗೆ ಸಕಾರಾತ್ಮಕ ನಿಲುವನ್ನು ಹೊಂದಿದ್ದಾರೆ.

NRC-CAA ಯನ್ನು ಕ್ರಮವಾಗಿ 55% ಮತ್ತು 51% ರಷ್ಟು ಜನರು ಬೆಂಬಲಿಸಿದ್ದಾರೆ. ಆದರೆ, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲವನ್ನು ಬಳಸುವುದನ್ನು ಅವರು ವಿರೋಧಿಸಿದ್ದಾರೆ ಹಾಗೂ ಪತ್ರಕರ್ತರ ವಿರುದ್ಧ ಮತ್ತು ಮೋದಿ ಸರ್ಕಾರವನ್ನು ಟೀಕಿಸುವವರ ವಿರುದ್ದ ಮಾನಹಾನಿ ಮತ್ತು ದೇಶದ್ರೋಹ ಪ್ರಕರಣ ದಾಖಲಿಸುವುದನ್ನು ವಿರೋಧಿಸಿದ್ದಾರೆ.

ಅಮರಿಕದಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚು ಉದಾರವಾದಿಗಳಾಗಿದ್ದಾರೆ. ಉದಾಹರಣೆಗೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕೆಲವು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಹೇರಿದ ನಿಷೇಧವನ್ನು 60% ಜನರು ವಿರೋಧಿಸಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

40% ಜನರು ಭಾರತೀಯ ರಾಜಕೀಯ ಪಕ್ಷದಲ್ಲಿ ಯಾವುದೆ ಪಕ್ಷವನ್ನು ಆಯ್ಕೆ ಮಾಡಲಿಲ್ಲ, ಆದರೆ 33% ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದು, 12% ಜನರು ಕಾಂಗ್ರೆಸ್‌ ಪಕ್ಷವನ್ನು ಮತ್ತು 16% ಇತರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.

ಭಾರತ ಎದುರಿಸುತ್ತಿರುವ ದೊಡ್ಡ ಸವಾಲುಗಳ ಬಗ್ಗೆ, ಭ್ರಷ್ಟಾಚಾರವೆ ಅತೀ ದೊಡ್ಡ ಸಮಸ್ಯೆ ಎಂದು 18%  ಜನರು ಹೇಳಿದ್ದಾರೆ. ಆರ್ಥಿಕತೆ ಸಮಸ್ಯೆ 15%, ಧಾರ್ಮಿಕ ಬಹುಸಂಖ್ಯಾತವಾದ ಸಮಸ್ಯೆ 10%, ಆರೋಗ್ಯ ರಕ್ಷಣೆಯ ಸಮಸ್ಯೆ 8%, ಚೀನಾ 7%, ಭಯೋತ್ಪಾದನೆ 7%, ಜಾತಿ ತಾರತಮ್ಯ 6%, ಶಿಕ್ಷಣದ ಸಮಸ್ಯೆ 6%, ಆದಾಯ ಅಸಮಾನತೆ ಸಮಸ್ಯೆ 5%, ಹವಾಮಾನ ಬದಲಾವಣೆಯ ಸಮಸ್ಯೆ 4% ಮತ್ತು ಲಿಂಗಭೇದಭಾವದ ಸಮಸ್ಯೆ ಎಂದು 4% ಜನರು ಹೇಳಿದ್ದಾರೆ.

ಟ್ರಂಪ್‌ ಪಕ್ಷದಲ್ಲಿ ಮೋದಿ ಮತ್ತು ಬಿಜೆಪಿಯ ಬೆಂಬಲಿಗರ ನಡುವಿನ ಸಂಬಂಧವನ್ನು ಸಮೀಕ್ಷೆಯು ಕಂಡುಹಿಡಿದಿದೆ. ಅಮೆರಿಕನ್ ಭಾರತೀಯ ಹಿಂದೂಗಳಲ್ಲಿ 69% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇತರ ಸಮುದಾಯಗಳಲ್ಲಿ 20% ರಿಂದ 33% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇಂಜಿನಿಯರ್‌ ಅಲ್ಲದ 48% ಜನರಷ್ಟೇ ಮೋದಿಯನ್ನು ಬೆಂಬಲಿಸುತ್ತಾರೆ.

ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...