Homeಅಂತರಾಷ್ಟ್ರೀಯಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಭಾರತೀಯ ಅಮೆರಿಕನ್ನರು ಮೋದಿಯನ್ನು ಬೆಂಬಲಿಸುತ್ತಾರೆ ಎಂದು ಸಮಿಕ್ಷೆ ಹೇಳಿದೆ

- Advertisement -
- Advertisement -

ಭಾರತೀಯ ಅಮೆರಿಕನ್ನರು ರಾಜಕೀಯ ವಿಷಯದ ಬಗ್ಗೆ ಅಮೆರಿಕದಲ್ಲಿ ಉದಾರವಾದಿ ದೃಷ್ಟಿಕೋನ ಹೊಂದಿದ್ದು, ಅದುವೆ ಭಾರತದ ವಿಷಯಕ್ಕೆ ಬಂದಾಗ ಸಂಪ್ರದಾಯವಾದಿಗಳಾಗಿ ಪರಿವರ್ತನೆ ಹೊಂದುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಉದಾಹರಣೆಗೆ, “ಹಿಂದೂಗಳು ಹಾಗೂ ಹಿಂದೂಯೇತರರು ’ಬಿಳಿ ಜನಾಂಗೀಯವಾದದ ಪ್ರಾಬಲ್ಯವು’ ಅಮೆರಿಕದಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಒಪ್ಪುತ್ತಾರೆ. ಆದರೆ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದದಿಂದ ಉಂಟಾಗುವ ಬೆದರಿಕೆಯ ಬಗ್ಗೆ ಅವರ ದೃಷ್ಟಿಕೋನ ಗಮನಾರ್ಹವಾಗಿ ಭಿನ್ನವಾಗಿದೆ” ಎಂದು ಸಮೀಕ್ಷೆಯು ಹೇಳಿದೆ.

ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್‌ನಲ್ಲಿ ಆನ್‌ಲೈನ್ ಮೂಲಕ ಈ ಸಮೀಕ್ಷೆ ನಡೆಸಿದೆ. ಸಮೀಕ್ಷೆಯು 1,200 ಭಾರತೀಯ ಅಮೆರಿಕನ್ ವಯಸ್ಕ ನಿವಾಸಿಗಳನ್ನು ಒಳಗೊಂಡಿದೆ. ಅಮೆರಿಕದಲ್ಲಿ 42 ಲಕ್ಷ ಭಾರತೀಯ ಅಮೆರಿಕನ್ನರಿದ್ದು, ಇದು ಎರಡನೇ ಅತಿದೊಡ್ಡ ವಲಸೆಗಾರ ಸಮುದಾಯವಾಗಿದೆ. ಇದರಲ್ಲಿ 38% ಜನರು ಇನ್ನೂ ಅಮೆರಿಕದ ಪ್ರಜೆಗಳಲ್ಲ.

ಇದನ್ನೂ ಓದಿ: ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಅಮೆರಿಕದಲ್ಲಿ ಬಿಳಿಜನಾಂಗೀಯವಾದವು ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ಹೇಳಿರುವ 73% ದಷ್ಟು ಜನರಲ್ಲಿ, ಅರ್ಧಕ್ಕಿಂತ ಕಡಿಮೆ ಜನರು ಹಿಂದೂ ಬಹುಸಂಖ್ಯಾತವಾದವು ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ನಂಬಿದ್ದಾರೆ. ಕೇವಲ 40% ಭಾರತೀಯ ಅಮೆರಿಕನ್‌ ಹಿಂದೂಗಳು, ಹಿಂದೂ ಬಹುಸಂಖ್ಯಾವಾದವು ಅಪಾಕಾರಿ ಎಂದು ನಂಬಿದ್ದಾರೆ. ಆದರೆ 67% ಹಿಂದೂಯೇತರ ಭಾರತೀಯ ಅಮೆರಿಕನ್ನರು ಹಿಂದೂ ಬಹುಸಂಖ್ಯಾತವಾದವು ಅಪಾಯ ಎಂದು ಹೇಳಿದ್ದಾರೆ.

ಭಾರತವು “ಸರಿಯಾದ ಹಾದಿಯಲ್ಲಿದೆ” ಎಂದು 36% ಜನರು ಒಪ್ಪಿಕೊಂಡಿದ್ದಾರೆ. ಆದರೆ 39% ಜನರು ಅದನ್ನು ಒಪ್ಪಿಕೊಂಡಿಲ್ಲ. ಅಮೆರಿಕದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರಿಗಿಂತ ಹೆಚ್ಚಾಗಿ, ವಿದೇಶದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರು ಭಾರತವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ಜನಸಂಖ್ಯೆಯ ಅತಿದೊಡ್ಡ ಭಾಗವಾದ 35% ಜನರು ತಮ್ಮನ್ನು “ಭಾರತ ಪರ” ಎಂದು ಗುರುತಿಸಿಕೊಂಡಿದ್ದಾರೆ ಆದರೆ ಪ್ರಸ್ತುತ ಸರ್ಕಾರದ ಕೆಲವು ನೀತಿಗಳನ್ನು ಟೀಕಿಸಿದ್ದಾರೆ. ಇನ್ನೂ 23% ಜನರು ಭಾರತದ ಪರವಾಗಿದ್ದರಾದರೂ ಅನೇಕ ರಾಜಕಾರಣವನ್ನು ಟೀಕಿಸಿದ್ದಾರೆ. 17% ಜನರು ಭಾರತ ಮತ್ತು ಪ್ರಸ್ತುತ ಸರ್ಕಾರದ ಬಗ್ಗೆ ಸಕಾರಾತ್ಮಕ ನಿಲುವನ್ನು ಹೊಂದಿದ್ದಾರೆ.

NRC-CAA ಯನ್ನು ಕ್ರಮವಾಗಿ 55% ಮತ್ತು 51% ರಷ್ಟು ಜನರು ಬೆಂಬಲಿಸಿದ್ದಾರೆ. ಆದರೆ, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲವನ್ನು ಬಳಸುವುದನ್ನು ಅವರು ವಿರೋಧಿಸಿದ್ದಾರೆ ಹಾಗೂ ಪತ್ರಕರ್ತರ ವಿರುದ್ಧ ಮತ್ತು ಮೋದಿ ಸರ್ಕಾರವನ್ನು ಟೀಕಿಸುವವರ ವಿರುದ್ದ ಮಾನಹಾನಿ ಮತ್ತು ದೇಶದ್ರೋಹ ಪ್ರಕರಣ ದಾಖಲಿಸುವುದನ್ನು ವಿರೋಧಿಸಿದ್ದಾರೆ.

ಅಮರಿಕದಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚು ಉದಾರವಾದಿಗಳಾಗಿದ್ದಾರೆ. ಉದಾಹರಣೆಗೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕೆಲವು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಹೇರಿದ ನಿಷೇಧವನ್ನು 60% ಜನರು ವಿರೋಧಿಸಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

40% ಜನರು ಭಾರತೀಯ ರಾಜಕೀಯ ಪಕ್ಷದಲ್ಲಿ ಯಾವುದೆ ಪಕ್ಷವನ್ನು ಆಯ್ಕೆ ಮಾಡಲಿಲ್ಲ, ಆದರೆ 33% ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದು, 12% ಜನರು ಕಾಂಗ್ರೆಸ್‌ ಪಕ್ಷವನ್ನು ಮತ್ತು 16% ಇತರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.

ಭಾರತ ಎದುರಿಸುತ್ತಿರುವ ದೊಡ್ಡ ಸವಾಲುಗಳ ಬಗ್ಗೆ, ಭ್ರಷ್ಟಾಚಾರವೆ ಅತೀ ದೊಡ್ಡ ಸಮಸ್ಯೆ ಎಂದು 18%  ಜನರು ಹೇಳಿದ್ದಾರೆ. ಆರ್ಥಿಕತೆ ಸಮಸ್ಯೆ 15%, ಧಾರ್ಮಿಕ ಬಹುಸಂಖ್ಯಾತವಾದ ಸಮಸ್ಯೆ 10%, ಆರೋಗ್ಯ ರಕ್ಷಣೆಯ ಸಮಸ್ಯೆ 8%, ಚೀನಾ 7%, ಭಯೋತ್ಪಾದನೆ 7%, ಜಾತಿ ತಾರತಮ್ಯ 6%, ಶಿಕ್ಷಣದ ಸಮಸ್ಯೆ 6%, ಆದಾಯ ಅಸಮಾನತೆ ಸಮಸ್ಯೆ 5%, ಹವಾಮಾನ ಬದಲಾವಣೆಯ ಸಮಸ್ಯೆ 4% ಮತ್ತು ಲಿಂಗಭೇದಭಾವದ ಸಮಸ್ಯೆ ಎಂದು 4% ಜನರು ಹೇಳಿದ್ದಾರೆ.

ಟ್ರಂಪ್‌ ಪಕ್ಷದಲ್ಲಿ ಮೋದಿ ಮತ್ತು ಬಿಜೆಪಿಯ ಬೆಂಬಲಿಗರ ನಡುವಿನ ಸಂಬಂಧವನ್ನು ಸಮೀಕ್ಷೆಯು ಕಂಡುಹಿಡಿದಿದೆ. ಅಮೆರಿಕನ್ ಭಾರತೀಯ ಹಿಂದೂಗಳಲ್ಲಿ 69% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇತರ ಸಮುದಾಯಗಳಲ್ಲಿ 20% ರಿಂದ 33% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇಂಜಿನಿಯರ್‌ ಅಲ್ಲದ 48% ಜನರಷ್ಟೇ ಮೋದಿಯನ್ನು ಬೆಂಬಲಿಸುತ್ತಾರೆ.

ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....