Homeಅಂತರಾಷ್ಟ್ರೀಯಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಭಾರತೀಯ ಅಮೆರಿಕನ್ನರು ಮೋದಿಯನ್ನು ಬೆಂಬಲಿಸುತ್ತಾರೆ ಎಂದು ಸಮಿಕ್ಷೆ ಹೇಳಿದೆ

- Advertisement -
- Advertisement -

ಭಾರತೀಯ ಅಮೆರಿಕನ್ನರು ರಾಜಕೀಯ ವಿಷಯದ ಬಗ್ಗೆ ಅಮೆರಿಕದಲ್ಲಿ ಉದಾರವಾದಿ ದೃಷ್ಟಿಕೋನ ಹೊಂದಿದ್ದು, ಅದುವೆ ಭಾರತದ ವಿಷಯಕ್ಕೆ ಬಂದಾಗ ಸಂಪ್ರದಾಯವಾದಿಗಳಾಗಿ ಪರಿವರ್ತನೆ ಹೊಂದುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಉದಾಹರಣೆಗೆ, “ಹಿಂದೂಗಳು ಹಾಗೂ ಹಿಂದೂಯೇತರರು ’ಬಿಳಿ ಜನಾಂಗೀಯವಾದದ ಪ್ರಾಬಲ್ಯವು’ ಅಮೆರಿಕದಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಒಪ್ಪುತ್ತಾರೆ. ಆದರೆ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದದಿಂದ ಉಂಟಾಗುವ ಬೆದರಿಕೆಯ ಬಗ್ಗೆ ಅವರ ದೃಷ್ಟಿಕೋನ ಗಮನಾರ್ಹವಾಗಿ ಭಿನ್ನವಾಗಿದೆ” ಎಂದು ಸಮೀಕ್ಷೆಯು ಹೇಳಿದೆ.

ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್‌ನಲ್ಲಿ ಆನ್‌ಲೈನ್ ಮೂಲಕ ಈ ಸಮೀಕ್ಷೆ ನಡೆಸಿದೆ. ಸಮೀಕ್ಷೆಯು 1,200 ಭಾರತೀಯ ಅಮೆರಿಕನ್ ವಯಸ್ಕ ನಿವಾಸಿಗಳನ್ನು ಒಳಗೊಂಡಿದೆ. ಅಮೆರಿಕದಲ್ಲಿ 42 ಲಕ್ಷ ಭಾರತೀಯ ಅಮೆರಿಕನ್ನರಿದ್ದು, ಇದು ಎರಡನೇ ಅತಿದೊಡ್ಡ ವಲಸೆಗಾರ ಸಮುದಾಯವಾಗಿದೆ. ಇದರಲ್ಲಿ 38% ಜನರು ಇನ್ನೂ ಅಮೆರಿಕದ ಪ್ರಜೆಗಳಲ್ಲ.

ಇದನ್ನೂ ಓದಿ: ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಅಮೆರಿಕದಲ್ಲಿ ಬಿಳಿಜನಾಂಗೀಯವಾದವು ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ಹೇಳಿರುವ 73% ದಷ್ಟು ಜನರಲ್ಲಿ, ಅರ್ಧಕ್ಕಿಂತ ಕಡಿಮೆ ಜನರು ಹಿಂದೂ ಬಹುಸಂಖ್ಯಾತವಾದವು ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ನಂಬಿದ್ದಾರೆ. ಕೇವಲ 40% ಭಾರತೀಯ ಅಮೆರಿಕನ್‌ ಹಿಂದೂಗಳು, ಹಿಂದೂ ಬಹುಸಂಖ್ಯಾವಾದವು ಅಪಾಕಾರಿ ಎಂದು ನಂಬಿದ್ದಾರೆ. ಆದರೆ 67% ಹಿಂದೂಯೇತರ ಭಾರತೀಯ ಅಮೆರಿಕನ್ನರು ಹಿಂದೂ ಬಹುಸಂಖ್ಯಾತವಾದವು ಅಪಾಯ ಎಂದು ಹೇಳಿದ್ದಾರೆ.

ಭಾರತವು “ಸರಿಯಾದ ಹಾದಿಯಲ್ಲಿದೆ” ಎಂದು 36% ಜನರು ಒಪ್ಪಿಕೊಂಡಿದ್ದಾರೆ. ಆದರೆ 39% ಜನರು ಅದನ್ನು ಒಪ್ಪಿಕೊಂಡಿಲ್ಲ. ಅಮೆರಿಕದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರಿಗಿಂತ ಹೆಚ್ಚಾಗಿ, ವಿದೇಶದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರು ಭಾರತವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ಜನಸಂಖ್ಯೆಯ ಅತಿದೊಡ್ಡ ಭಾಗವಾದ 35% ಜನರು ತಮ್ಮನ್ನು “ಭಾರತ ಪರ” ಎಂದು ಗುರುತಿಸಿಕೊಂಡಿದ್ದಾರೆ ಆದರೆ ಪ್ರಸ್ತುತ ಸರ್ಕಾರದ ಕೆಲವು ನೀತಿಗಳನ್ನು ಟೀಕಿಸಿದ್ದಾರೆ. ಇನ್ನೂ 23% ಜನರು ಭಾರತದ ಪರವಾಗಿದ್ದರಾದರೂ ಅನೇಕ ರಾಜಕಾರಣವನ್ನು ಟೀಕಿಸಿದ್ದಾರೆ. 17% ಜನರು ಭಾರತ ಮತ್ತು ಪ್ರಸ್ತುತ ಸರ್ಕಾರದ ಬಗ್ಗೆ ಸಕಾರಾತ್ಮಕ ನಿಲುವನ್ನು ಹೊಂದಿದ್ದಾರೆ.

NRC-CAA ಯನ್ನು ಕ್ರಮವಾಗಿ 55% ಮತ್ತು 51% ರಷ್ಟು ಜನರು ಬೆಂಬಲಿಸಿದ್ದಾರೆ. ಆದರೆ, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲವನ್ನು ಬಳಸುವುದನ್ನು ಅವರು ವಿರೋಧಿಸಿದ್ದಾರೆ ಹಾಗೂ ಪತ್ರಕರ್ತರ ವಿರುದ್ಧ ಮತ್ತು ಮೋದಿ ಸರ್ಕಾರವನ್ನು ಟೀಕಿಸುವವರ ವಿರುದ್ದ ಮಾನಹಾನಿ ಮತ್ತು ದೇಶದ್ರೋಹ ಪ್ರಕರಣ ದಾಖಲಿಸುವುದನ್ನು ವಿರೋಧಿಸಿದ್ದಾರೆ.

ಅಮರಿಕದಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚು ಉದಾರವಾದಿಗಳಾಗಿದ್ದಾರೆ. ಉದಾಹರಣೆಗೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕೆಲವು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಹೇರಿದ ನಿಷೇಧವನ್ನು 60% ಜನರು ವಿರೋಧಿಸಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

40% ಜನರು ಭಾರತೀಯ ರಾಜಕೀಯ ಪಕ್ಷದಲ್ಲಿ ಯಾವುದೆ ಪಕ್ಷವನ್ನು ಆಯ್ಕೆ ಮಾಡಲಿಲ್ಲ, ಆದರೆ 33% ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದು, 12% ಜನರು ಕಾಂಗ್ರೆಸ್‌ ಪಕ್ಷವನ್ನು ಮತ್ತು 16% ಇತರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.

ಭಾರತ ಎದುರಿಸುತ್ತಿರುವ ದೊಡ್ಡ ಸವಾಲುಗಳ ಬಗ್ಗೆ, ಭ್ರಷ್ಟಾಚಾರವೆ ಅತೀ ದೊಡ್ಡ ಸಮಸ್ಯೆ ಎಂದು 18%  ಜನರು ಹೇಳಿದ್ದಾರೆ. ಆರ್ಥಿಕತೆ ಸಮಸ್ಯೆ 15%, ಧಾರ್ಮಿಕ ಬಹುಸಂಖ್ಯಾತವಾದ ಸಮಸ್ಯೆ 10%, ಆರೋಗ್ಯ ರಕ್ಷಣೆಯ ಸಮಸ್ಯೆ 8%, ಚೀನಾ 7%, ಭಯೋತ್ಪಾದನೆ 7%, ಜಾತಿ ತಾರತಮ್ಯ 6%, ಶಿಕ್ಷಣದ ಸಮಸ್ಯೆ 6%, ಆದಾಯ ಅಸಮಾನತೆ ಸಮಸ್ಯೆ 5%, ಹವಾಮಾನ ಬದಲಾವಣೆಯ ಸಮಸ್ಯೆ 4% ಮತ್ತು ಲಿಂಗಭೇದಭಾವದ ಸಮಸ್ಯೆ ಎಂದು 4% ಜನರು ಹೇಳಿದ್ದಾರೆ.

ಟ್ರಂಪ್‌ ಪಕ್ಷದಲ್ಲಿ ಮೋದಿ ಮತ್ತು ಬಿಜೆಪಿಯ ಬೆಂಬಲಿಗರ ನಡುವಿನ ಸಂಬಂಧವನ್ನು ಸಮೀಕ್ಷೆಯು ಕಂಡುಹಿಡಿದಿದೆ. ಅಮೆರಿಕನ್ ಭಾರತೀಯ ಹಿಂದೂಗಳಲ್ಲಿ 69% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇತರ ಸಮುದಾಯಗಳಲ್ಲಿ 20% ರಿಂದ 33% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇಂಜಿನಿಯರ್‌ ಅಲ್ಲದ 48% ಜನರಷ್ಟೇ ಮೋದಿಯನ್ನು ಬೆಂಬಲಿಸುತ್ತಾರೆ.

ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...