Homeಅಂತರಾಷ್ಟ್ರೀಯಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಭಾರತೀಯ ಅಮೆರಿಕನ್ನರು ಮೋದಿಯನ್ನು ಬೆಂಬಲಿಸುತ್ತಾರೆ ಎಂದು ಸಮಿಕ್ಷೆ ಹೇಳಿದೆ

- Advertisement -
- Advertisement -

ಭಾರತೀಯ ಅಮೆರಿಕನ್ನರು ರಾಜಕೀಯ ವಿಷಯದ ಬಗ್ಗೆ ಅಮೆರಿಕದಲ್ಲಿ ಉದಾರವಾದಿ ದೃಷ್ಟಿಕೋನ ಹೊಂದಿದ್ದು, ಅದುವೆ ಭಾರತದ ವಿಷಯಕ್ಕೆ ಬಂದಾಗ ಸಂಪ್ರದಾಯವಾದಿಗಳಾಗಿ ಪರಿವರ್ತನೆ ಹೊಂದುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಉದಾಹರಣೆಗೆ, “ಹಿಂದೂಗಳು ಹಾಗೂ ಹಿಂದೂಯೇತರರು ’ಬಿಳಿ ಜನಾಂಗೀಯವಾದದ ಪ್ರಾಬಲ್ಯವು’ ಅಮೆರಿಕದಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಒಪ್ಪುತ್ತಾರೆ. ಆದರೆ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದದಿಂದ ಉಂಟಾಗುವ ಬೆದರಿಕೆಯ ಬಗ್ಗೆ ಅವರ ದೃಷ್ಟಿಕೋನ ಗಮನಾರ್ಹವಾಗಿ ಭಿನ್ನವಾಗಿದೆ” ಎಂದು ಸಮೀಕ್ಷೆಯು ಹೇಳಿದೆ.

ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್‌ನಲ್ಲಿ ಆನ್‌ಲೈನ್ ಮೂಲಕ ಈ ಸಮೀಕ್ಷೆ ನಡೆಸಿದೆ. ಸಮೀಕ್ಷೆಯು 1,200 ಭಾರತೀಯ ಅಮೆರಿಕನ್ ವಯಸ್ಕ ನಿವಾಸಿಗಳನ್ನು ಒಳಗೊಂಡಿದೆ. ಅಮೆರಿಕದಲ್ಲಿ 42 ಲಕ್ಷ ಭಾರತೀಯ ಅಮೆರಿಕನ್ನರಿದ್ದು, ಇದು ಎರಡನೇ ಅತಿದೊಡ್ಡ ವಲಸೆಗಾರ ಸಮುದಾಯವಾಗಿದೆ. ಇದರಲ್ಲಿ 38% ಜನರು ಇನ್ನೂ ಅಮೆರಿಕದ ಪ್ರಜೆಗಳಲ್ಲ.

ಇದನ್ನೂ ಓದಿ: ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಅಮೆರಿಕದಲ್ಲಿ ಬಿಳಿಜನಾಂಗೀಯವಾದವು ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ಹೇಳಿರುವ 73% ದಷ್ಟು ಜನರಲ್ಲಿ, ಅರ್ಧಕ್ಕಿಂತ ಕಡಿಮೆ ಜನರು ಹಿಂದೂ ಬಹುಸಂಖ್ಯಾತವಾದವು ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ನಂಬಿದ್ದಾರೆ. ಕೇವಲ 40% ಭಾರತೀಯ ಅಮೆರಿಕನ್‌ ಹಿಂದೂಗಳು, ಹಿಂದೂ ಬಹುಸಂಖ್ಯಾವಾದವು ಅಪಾಕಾರಿ ಎಂದು ನಂಬಿದ್ದಾರೆ. ಆದರೆ 67% ಹಿಂದೂಯೇತರ ಭಾರತೀಯ ಅಮೆರಿಕನ್ನರು ಹಿಂದೂ ಬಹುಸಂಖ್ಯಾತವಾದವು ಅಪಾಯ ಎಂದು ಹೇಳಿದ್ದಾರೆ.

ಭಾರತವು “ಸರಿಯಾದ ಹಾದಿಯಲ್ಲಿದೆ” ಎಂದು 36% ಜನರು ಒಪ್ಪಿಕೊಂಡಿದ್ದಾರೆ. ಆದರೆ 39% ಜನರು ಅದನ್ನು ಒಪ್ಪಿಕೊಂಡಿಲ್ಲ. ಅಮೆರಿಕದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರಿಗಿಂತ ಹೆಚ್ಚಾಗಿ, ವಿದೇಶದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರು ಭಾರತವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ಜನಸಂಖ್ಯೆಯ ಅತಿದೊಡ್ಡ ಭಾಗವಾದ 35% ಜನರು ತಮ್ಮನ್ನು “ಭಾರತ ಪರ” ಎಂದು ಗುರುತಿಸಿಕೊಂಡಿದ್ದಾರೆ ಆದರೆ ಪ್ರಸ್ತುತ ಸರ್ಕಾರದ ಕೆಲವು ನೀತಿಗಳನ್ನು ಟೀಕಿಸಿದ್ದಾರೆ. ಇನ್ನೂ 23% ಜನರು ಭಾರತದ ಪರವಾಗಿದ್ದರಾದರೂ ಅನೇಕ ರಾಜಕಾರಣವನ್ನು ಟೀಕಿಸಿದ್ದಾರೆ. 17% ಜನರು ಭಾರತ ಮತ್ತು ಪ್ರಸ್ತುತ ಸರ್ಕಾರದ ಬಗ್ಗೆ ಸಕಾರಾತ್ಮಕ ನಿಲುವನ್ನು ಹೊಂದಿದ್ದಾರೆ.

NRC-CAA ಯನ್ನು ಕ್ರಮವಾಗಿ 55% ಮತ್ತು 51% ರಷ್ಟು ಜನರು ಬೆಂಬಲಿಸಿದ್ದಾರೆ. ಆದರೆ, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲವನ್ನು ಬಳಸುವುದನ್ನು ಅವರು ವಿರೋಧಿಸಿದ್ದಾರೆ ಹಾಗೂ ಪತ್ರಕರ್ತರ ವಿರುದ್ಧ ಮತ್ತು ಮೋದಿ ಸರ್ಕಾರವನ್ನು ಟೀಕಿಸುವವರ ವಿರುದ್ದ ಮಾನಹಾನಿ ಮತ್ತು ದೇಶದ್ರೋಹ ಪ್ರಕರಣ ದಾಖಲಿಸುವುದನ್ನು ವಿರೋಧಿಸಿದ್ದಾರೆ.

ಅಮರಿಕದಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚು ಉದಾರವಾದಿಗಳಾಗಿದ್ದಾರೆ. ಉದಾಹರಣೆಗೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕೆಲವು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಹೇರಿದ ನಿಷೇಧವನ್ನು 60% ಜನರು ವಿರೋಧಿಸಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

40% ಜನರು ಭಾರತೀಯ ರಾಜಕೀಯ ಪಕ್ಷದಲ್ಲಿ ಯಾವುದೆ ಪಕ್ಷವನ್ನು ಆಯ್ಕೆ ಮಾಡಲಿಲ್ಲ, ಆದರೆ 33% ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದು, 12% ಜನರು ಕಾಂಗ್ರೆಸ್‌ ಪಕ್ಷವನ್ನು ಮತ್ತು 16% ಇತರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.

ಭಾರತ ಎದುರಿಸುತ್ತಿರುವ ದೊಡ್ಡ ಸವಾಲುಗಳ ಬಗ್ಗೆ, ಭ್ರಷ್ಟಾಚಾರವೆ ಅತೀ ದೊಡ್ಡ ಸಮಸ್ಯೆ ಎಂದು 18%  ಜನರು ಹೇಳಿದ್ದಾರೆ. ಆರ್ಥಿಕತೆ ಸಮಸ್ಯೆ 15%, ಧಾರ್ಮಿಕ ಬಹುಸಂಖ್ಯಾತವಾದ ಸಮಸ್ಯೆ 10%, ಆರೋಗ್ಯ ರಕ್ಷಣೆಯ ಸಮಸ್ಯೆ 8%, ಚೀನಾ 7%, ಭಯೋತ್ಪಾದನೆ 7%, ಜಾತಿ ತಾರತಮ್ಯ 6%, ಶಿಕ್ಷಣದ ಸಮಸ್ಯೆ 6%, ಆದಾಯ ಅಸಮಾನತೆ ಸಮಸ್ಯೆ 5%, ಹವಾಮಾನ ಬದಲಾವಣೆಯ ಸಮಸ್ಯೆ 4% ಮತ್ತು ಲಿಂಗಭೇದಭಾವದ ಸಮಸ್ಯೆ ಎಂದು 4% ಜನರು ಹೇಳಿದ್ದಾರೆ.

ಟ್ರಂಪ್‌ ಪಕ್ಷದಲ್ಲಿ ಮೋದಿ ಮತ್ತು ಬಿಜೆಪಿಯ ಬೆಂಬಲಿಗರ ನಡುವಿನ ಸಂಬಂಧವನ್ನು ಸಮೀಕ್ಷೆಯು ಕಂಡುಹಿಡಿದಿದೆ. ಅಮೆರಿಕನ್ ಭಾರತೀಯ ಹಿಂದೂಗಳಲ್ಲಿ 69% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇತರ ಸಮುದಾಯಗಳಲ್ಲಿ 20% ರಿಂದ 33% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇಂಜಿನಿಯರ್‌ ಅಲ್ಲದ 48% ಜನರಷ್ಟೇ ಮೋದಿಯನ್ನು ಬೆಂಬಲಿಸುತ್ತಾರೆ.

ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...