Homeಅಂತರಾಷ್ಟ್ರೀಯಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಭಾರತೀಯ ಅಮೆರಿಕನ್ನರು ಮೋದಿಯನ್ನು ಬೆಂಬಲಿಸುತ್ತಾರೆ ಎಂದು ಸಮಿಕ್ಷೆ ಹೇಳಿದೆ

- Advertisement -
- Advertisement -

ಭಾರತೀಯ ಅಮೆರಿಕನ್ನರು ರಾಜಕೀಯ ವಿಷಯದ ಬಗ್ಗೆ ಅಮೆರಿಕದಲ್ಲಿ ಉದಾರವಾದಿ ದೃಷ್ಟಿಕೋನ ಹೊಂದಿದ್ದು, ಅದುವೆ ಭಾರತದ ವಿಷಯಕ್ಕೆ ಬಂದಾಗ ಸಂಪ್ರದಾಯವಾದಿಗಳಾಗಿ ಪರಿವರ್ತನೆ ಹೊಂದುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಉದಾಹರಣೆಗೆ, “ಹಿಂದೂಗಳು ಹಾಗೂ ಹಿಂದೂಯೇತರರು ’ಬಿಳಿ ಜನಾಂಗೀಯವಾದದ ಪ್ರಾಬಲ್ಯವು’ ಅಮೆರಿಕದಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಒಪ್ಪುತ್ತಾರೆ. ಆದರೆ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದದಿಂದ ಉಂಟಾಗುವ ಬೆದರಿಕೆಯ ಬಗ್ಗೆ ಅವರ ದೃಷ್ಟಿಕೋನ ಗಮನಾರ್ಹವಾಗಿ ಭಿನ್ನವಾಗಿದೆ” ಎಂದು ಸಮೀಕ್ಷೆಯು ಹೇಳಿದೆ.

ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್‌ನಲ್ಲಿ ಆನ್‌ಲೈನ್ ಮೂಲಕ ಈ ಸಮೀಕ್ಷೆ ನಡೆಸಿದೆ. ಸಮೀಕ್ಷೆಯು 1,200 ಭಾರತೀಯ ಅಮೆರಿಕನ್ ವಯಸ್ಕ ನಿವಾಸಿಗಳನ್ನು ಒಳಗೊಂಡಿದೆ. ಅಮೆರಿಕದಲ್ಲಿ 42 ಲಕ್ಷ ಭಾರತೀಯ ಅಮೆರಿಕನ್ನರಿದ್ದು, ಇದು ಎರಡನೇ ಅತಿದೊಡ್ಡ ವಲಸೆಗಾರ ಸಮುದಾಯವಾಗಿದೆ. ಇದರಲ್ಲಿ 38% ಜನರು ಇನ್ನೂ ಅಮೆರಿಕದ ಪ್ರಜೆಗಳಲ್ಲ.

ಇದನ್ನೂ ಓದಿ: ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಅಮೆರಿಕದಲ್ಲಿ ಬಿಳಿಜನಾಂಗೀಯವಾದವು ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ಹೇಳಿರುವ 73% ದಷ್ಟು ಜನರಲ್ಲಿ, ಅರ್ಧಕ್ಕಿಂತ ಕಡಿಮೆ ಜನರು ಹಿಂದೂ ಬಹುಸಂಖ್ಯಾತವಾದವು ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ನಂಬಿದ್ದಾರೆ. ಕೇವಲ 40% ಭಾರತೀಯ ಅಮೆರಿಕನ್‌ ಹಿಂದೂಗಳು, ಹಿಂದೂ ಬಹುಸಂಖ್ಯಾವಾದವು ಅಪಾಕಾರಿ ಎಂದು ನಂಬಿದ್ದಾರೆ. ಆದರೆ 67% ಹಿಂದೂಯೇತರ ಭಾರತೀಯ ಅಮೆರಿಕನ್ನರು ಹಿಂದೂ ಬಹುಸಂಖ್ಯಾತವಾದವು ಅಪಾಯ ಎಂದು ಹೇಳಿದ್ದಾರೆ.

ಭಾರತವು “ಸರಿಯಾದ ಹಾದಿಯಲ್ಲಿದೆ” ಎಂದು 36% ಜನರು ಒಪ್ಪಿಕೊಂಡಿದ್ದಾರೆ. ಆದರೆ 39% ಜನರು ಅದನ್ನು ಒಪ್ಪಿಕೊಂಡಿಲ್ಲ. ಅಮೆರಿಕದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರಿಗಿಂತ ಹೆಚ್ಚಾಗಿ, ವಿದೇಶದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರು ಭಾರತವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ಜನಸಂಖ್ಯೆಯ ಅತಿದೊಡ್ಡ ಭಾಗವಾದ 35% ಜನರು ತಮ್ಮನ್ನು “ಭಾರತ ಪರ” ಎಂದು ಗುರುತಿಸಿಕೊಂಡಿದ್ದಾರೆ ಆದರೆ ಪ್ರಸ್ತುತ ಸರ್ಕಾರದ ಕೆಲವು ನೀತಿಗಳನ್ನು ಟೀಕಿಸಿದ್ದಾರೆ. ಇನ್ನೂ 23% ಜನರು ಭಾರತದ ಪರವಾಗಿದ್ದರಾದರೂ ಅನೇಕ ರಾಜಕಾರಣವನ್ನು ಟೀಕಿಸಿದ್ದಾರೆ. 17% ಜನರು ಭಾರತ ಮತ್ತು ಪ್ರಸ್ತುತ ಸರ್ಕಾರದ ಬಗ್ಗೆ ಸಕಾರಾತ್ಮಕ ನಿಲುವನ್ನು ಹೊಂದಿದ್ದಾರೆ.

NRC-CAA ಯನ್ನು ಕ್ರಮವಾಗಿ 55% ಮತ್ತು 51% ರಷ್ಟು ಜನರು ಬೆಂಬಲಿಸಿದ್ದಾರೆ. ಆದರೆ, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲವನ್ನು ಬಳಸುವುದನ್ನು ಅವರು ವಿರೋಧಿಸಿದ್ದಾರೆ ಹಾಗೂ ಪತ್ರಕರ್ತರ ವಿರುದ್ಧ ಮತ್ತು ಮೋದಿ ಸರ್ಕಾರವನ್ನು ಟೀಕಿಸುವವರ ವಿರುದ್ದ ಮಾನಹಾನಿ ಮತ್ತು ದೇಶದ್ರೋಹ ಪ್ರಕರಣ ದಾಖಲಿಸುವುದನ್ನು ವಿರೋಧಿಸಿದ್ದಾರೆ.

ಅಮರಿಕದಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚು ಉದಾರವಾದಿಗಳಾಗಿದ್ದಾರೆ. ಉದಾಹರಣೆಗೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕೆಲವು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಹೇರಿದ ನಿಷೇಧವನ್ನು 60% ಜನರು ವಿರೋಧಿಸಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

40% ಜನರು ಭಾರತೀಯ ರಾಜಕೀಯ ಪಕ್ಷದಲ್ಲಿ ಯಾವುದೆ ಪಕ್ಷವನ್ನು ಆಯ್ಕೆ ಮಾಡಲಿಲ್ಲ, ಆದರೆ 33% ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದು, 12% ಜನರು ಕಾಂಗ್ರೆಸ್‌ ಪಕ್ಷವನ್ನು ಮತ್ತು 16% ಇತರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.

ಭಾರತ ಎದುರಿಸುತ್ತಿರುವ ದೊಡ್ಡ ಸವಾಲುಗಳ ಬಗ್ಗೆ, ಭ್ರಷ್ಟಾಚಾರವೆ ಅತೀ ದೊಡ್ಡ ಸಮಸ್ಯೆ ಎಂದು 18%  ಜನರು ಹೇಳಿದ್ದಾರೆ. ಆರ್ಥಿಕತೆ ಸಮಸ್ಯೆ 15%, ಧಾರ್ಮಿಕ ಬಹುಸಂಖ್ಯಾತವಾದ ಸಮಸ್ಯೆ 10%, ಆರೋಗ್ಯ ರಕ್ಷಣೆಯ ಸಮಸ್ಯೆ 8%, ಚೀನಾ 7%, ಭಯೋತ್ಪಾದನೆ 7%, ಜಾತಿ ತಾರತಮ್ಯ 6%, ಶಿಕ್ಷಣದ ಸಮಸ್ಯೆ 6%, ಆದಾಯ ಅಸಮಾನತೆ ಸಮಸ್ಯೆ 5%, ಹವಾಮಾನ ಬದಲಾವಣೆಯ ಸಮಸ್ಯೆ 4% ಮತ್ತು ಲಿಂಗಭೇದಭಾವದ ಸಮಸ್ಯೆ ಎಂದು 4% ಜನರು ಹೇಳಿದ್ದಾರೆ.

ಟ್ರಂಪ್‌ ಪಕ್ಷದಲ್ಲಿ ಮೋದಿ ಮತ್ತು ಬಿಜೆಪಿಯ ಬೆಂಬಲಿಗರ ನಡುವಿನ ಸಂಬಂಧವನ್ನು ಸಮೀಕ್ಷೆಯು ಕಂಡುಹಿಡಿದಿದೆ. ಅಮೆರಿಕನ್ ಭಾರತೀಯ ಹಿಂದೂಗಳಲ್ಲಿ 69% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇತರ ಸಮುದಾಯಗಳಲ್ಲಿ 20% ರಿಂದ 33% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇಂಜಿನಿಯರ್‌ ಅಲ್ಲದ 48% ಜನರಷ್ಟೇ ಮೋದಿಯನ್ನು ಬೆಂಬಲಿಸುತ್ತಾರೆ.

ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...