Homeಕರ್ನಾಟಕ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

- Advertisement -
- Advertisement -

ಕನ್ನಡದ ‘ಈದಿನ’ ಸುದ್ದಿ ಜಾಲತಾಣ ಮಾಡಿರುವ ಚುನಾವಣಾಪೂರ್ವ ಸಮೀಕ್ಷೆಯನ್ನು ರಾಜಕೀಯ ವಿಶ್ಲೇಷಕ ಮತ್ತು ಸಮೀಕ್ಷಾ ತಜ್ಞರಾದ ಪ್ರೊ.ಯೋಗೇಂದ್ರ ಯಾದವ್ ಹಂಚಿಕೊಂಡಿರುವುದು ಟ್ವೀಟ್‌ ವಾರ್‌ಗೆ ಕಾರಣವಾಗಿದೆ.

ಸುಮಾರು 41 ಸಾವಿರ ಜನರನ್ನು ಮಾತನಾಡಿಸಿ ಮಾಡಲಾಗಿದೆ ಎನ್ನಲಾಗಿರುವ ಸರ್ವೇಯು ಕಾಂಗ್ರೆಸ್‌ಗೆ ಸ್ಪಷ್ಟಬಹುಮತವನ್ನು ನೀಡಿದೆ.

132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದು ಸರ್ವೇ ಹೇಳಿದೆ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿದೆ.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿದೆ.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು ಎಂದು ಸಮೀಕ್ಷೆಯಿಂದ ಸಿಕ್ಕಿರುವ ಸಂಖ್ಯೆಗಳು ಹೇಳುತ್ತಿವೆ” ಎಂದು ‘ಈದಿನ’ ಸುದ್ದಿ ತಿಳಿಸಿದೆ.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿದೆ.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿದೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿದೆ. ಇದರ ವಿವರಗಳನ್ನು ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಕಾಂಗ್ರೆಸ್‌ ನಾಯಕರ ರಾಹುಲ್ ಗಾಂಧಿ ಮತ್ತು ಯೋಗೇಂದ್ರ ಯಾದವ್ ಅವರ ನಡುವಿನ ಸೌಹಾರ್ದತೆಯನ್ನು ಥಳುಕು ಹಾಕಿದ್ದಾರೆ. ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ರಾಹುಲ್ ಅವರು ಮಾಡಿದ ಭಾರತ್ ಜೋಡೋ ಯಾತ್ರೆಗೆ ಅನೇಕ ಕಾಂಗ್ರೆಸ್ಸೇತರರು ಬೆಂಬಲ ನೀಡಿದ್ದರು. ಅದರಲ್ಲಿ ಯೋಗೇಂದ್ರ ಯಾದವ್ ಕೂಡ ಒಬ್ಬರಾಗಿದ್ದು, ಸಂತೋಷ್ ಅವರು ತಮ್ಮ ಟ್ವೀಟ್‌ನಲ್ಲಿ ಅದನ್ನು ಪ್ರಸ್ತಾಪಿಸಿದ್ದಂತಿದೆ.

“ತನ್ನ ಯಜಮಾನರನ್ನು ಮೆಚ್ಚಿಸಲು ಪಾದಯಾತ್ರೆಗಳು ಮತ್ತು ಆಂದೋಲನಗಳ ನಡುವೆ ಸಮೀಕ್ಷೆಗಳಿಗೆ ಅವರು ಸಮಯ ಕಂಡುಕೊಂಡಿರುವುದು ನಿಜಕ್ಕೂ ಆಶ್ಚರ್ಯಕರ” ಎಂದು ಯೋಗೇಂದ್ರ ಅವರ ಹೆಸರನ್ನು ಟ್ಯಾಗ್ ಮಾಡಿ ಬಿ ಎಲ್ ಸಂತೊಷ್ ಟ್ವೀಟ್ ಮಾಡಿದ್ದಾರೆ.

ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯೋಗೇಂದ್ರ ಯಾದವ್‌, “ಸತ್ಯವನ್ನು ಸ್ವಾರಸ್ಯಕರವಾಗಿ ಕಾಣದವರು ಅಡುಗೆಯವರನ್ನೇ (ಈ ಸಂದರ್ಭದಲ್ಲಿ ಕಲ್ಪಿಸಿಕೊಂಡವರು) ದೂಷಿಸುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೆ ಶಾಸಕರನ್ನು ಖರೀದಿಸಿ ಬಹುಮತದ ಬೇಳೆ ಬೇಯಿಸಿಕೊಳ್ಳುತ್ತಿದ್ದ ಯಾರೋ ಒಬ್ಬರು ಸಮೀಕ್ಷೆಯಿಂದ ತೊಂದರೆಗೀಡಾಗಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿಯ ಆಂತರಿಕ ಸಮೀಕ್ಷೆಗಳಿಗೆ ಈದಿನ ಸಮೀಕ್ಷೆ ಅನುರಣಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...