Homeಮುಖಪುಟಸುಶಾಂತ್ ಪ್ರಕರಣ: ಸುಳ್ಳು ಸುದ್ದಿ ಹರಡುತ್ತಿದ್ದ ದೆಹಲಿ ಮೂಲದ ವ್ಯಕ್ತಿ ಬಂಧನ

ಸುಶಾಂತ್ ಪ್ರಕರಣ: ಸುಳ್ಳು ಸುದ್ದಿ ಹರಡುತ್ತಿದ್ದ ದೆಹಲಿ ಮೂಲದ ವ್ಯಕ್ತಿ ಬಂಧನ

ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್‌ ಮೃತ ದಿಶಾ ಸಾಲಿಯನ್ ಸಾವಿನ ಕುರಿತು ಆರೋಪಿ ಅನೇಕ ಕೆಟ್ಟ, ಸುಳ್ಳು ಆರೋಪಗಳನ್ನು ಮಾಡಿದ್ದರು. ದಿಶಾ ಸಾವಿಗೂ ಮುನ್ನ ಅತ್ಯಾಚಾರಕ್ಕೆ ಒಳಗಾಗಿದ್ದರು ಎಂದಿದ್ದರು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ನಕಲಿ ಸುದ್ದಿ ಹರಡಿದ ಆರೋಪದ ದೆಹಲಿಯ ನಿವಾಸಿಯೊಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವಕೀಲರೆಂದು ಹೇಳಿಕೊಳ್ಳುವ ಈ ವ್ಯಕ್ತಿಯನ್ನು ಪೊಲೀಸರು ಮುಂಬೈಗೆ ಕರೆತಂದಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆರೋಪಿ ವಿಭೋರ್ ಆನಂದ್ ಅವರ ಟ್ವಿಟ್ಟರ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಸಾಮಾಜಿಕ ಮಾಧ್ಯಮದಲ್ಲಿ, ಸುಶಾಂತ್ ಮತ್ತು ಆತನ ಮಾಜಿ ಮ್ಯಾನೇಜರ್‌ ದಿಶಾ ಸಾಲಿಯನ್ ಅವರ ಸಾವಿನ ಪ್ರಕರಣಗಳಲ್ಲಿ ಹಲವಾರು ಸಂವೇದನಾಶೀಲ ಮತ್ತು ಮಾನಹಾನಿ ಮಾಡುವಂತಹ ನಕಲಿ ಆರೋಪಗಳನ್ನು ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈಗೆ ಕರೆತರಲಾಗಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಹಲವಾರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿಭೋರ್ ಆನಂದ್, ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್‌ ಮೃತ ದಿಶಾ ಸಾಲಿಯನ್ ಸಾವಿನ ಕುರಿತು ಅನೇಕ ಕೆಟ್ಟ, ಸುಳ್ಳು ಆರೋಪಗಳನ್ನು ಮಾಡಿದ್ದರು. ದಿಶಾ ಸಾವಿಗೂ ಮುನ್ನ ಅತ್ಯಾಚಾರಕ್ಕೆ ಒಳಗಾಗಿದ್ದರು ಎಂದು ಹಲವಾರು ಗಣ್ಯ ವ್ಯಕ್ತಿಗಳ ಹೆಸರುಗಳನ್ನು ಪ್ರಸ್ತಾಪ ಮಾಡಿದ್ದರು ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ದಿಶಾ ಸಾಲಿಯನ್ ಕಳೆದ ಜೂನ್ 8 ರಂದು ಮುಂಬೈನ ತಮ್ಮ ನಿವಾಸದ ಕಟ್ಟಡದ 14ನೇ ಮಹಡಿಯಿಮದ ಬಿದ್ದು ಸಾವನ್ನಪ್ಪಿದ್ದರು. ನಂತರ ಜೂನ್ 14ರಂದು ನಟ ಸುಶಾಂತ್ ಸಿಂಗ್ ರಜಪೂತ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದರು.

ಎನ್‌ಡಿಟಿವಿಗೆ  ಹೇಳಿಕೆ ನೀಡಿರುವ ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್‌ಸಿಂಗ್, “ಮುಂಬೈ ಪೊಲೀಸರು ಕೆಟ್ಟ ಕೆಲಸ ಮಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುಳ್ಳು ಆರೋಪಗಳು, ವದಂತಿಗಳು ಪ್ರಾರಂಭವಾಗಿತ್ತು. ನಾವು ಸಾಕಷ್ಟು ನಿಂದನೆಗಳನ್ನು ಎದುರಿಸಿದ್ದೇವೆ. ಆದರೆ ನಮ್ಮ ತನಿಖೆಯ ಬಗ್ಗೆ ನಮಗೆ ಯಾವಾಗಲೂ ಖಚಿತತೆ ಇತ್ತು” ಎಂದು ಹೇಳಿದ್ದಾರೆ.

ಕಳೆದ ತಿಂಗಳು ಮುಂಬೈ ಪೊಲೀಸರು ಪತ್ರಕರ್ತ ಎಂದು ಹೇಳಿಕೊಳ್ಳುತ್ತಿದ್ದ ಸಾಹೀಲ್ ಚೌಧರಿ ಅಲಿಯಾಸ್ ಪ್ರದೀಪ್ ಮೊಹಿಂದರ್ ಸಿಂಗ್ ಚೌಧರಿ ಎಂಬ ಮಾಡೆಲ್ ಮತ್ತು ಯೂಟ್ಯೂಬರ್ ಒಬ್ಬರನ್ನು ಬಂಧಿಸಿದ್ದರು. ಮಹಿಳೆಯರ ವಿರುದ್ಧ ನಿಂದನೀಯ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಆತನನ್ನು ಮಹಿಳೆಯೊಬ್ಬರ ದೂರಿನ ಆಧಾರದಲ್ಲಿ ಬಂಧಿಸಿದ್ದರು. ಸಾಹೀಲ್ ಚೌಧರಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ರಜಪೂತ್ ಅವರ ಸಾವಿನ ಕುರಿತು ಹಲವು ವಿಡಿಯೋಗಳನ್ನು ಬಿಟ್ಟಿದ್ದರು.

ಆರೋಪಿ ಚೌಧರಿ ತಾನು ಪತ್ರಕರ್ತನಲ್ಲ ಎಂದು ಒಪ್ಪಿಕೊಂಡಿದ್ದಾನೆ ಮತ್ತು ತನ್ನ ಯೂಟ್ಯೂಬ್ ಚಾನೆಲ್ ಮತ್ತು ಇನ್ಸ್‌ಸ್ಟ್ರಾಗ್ರಾಂ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಫಾಲೋವರ್ಸ್ ಹೆಚ್ಚಿಸಲು ವೀಡಿಯೊಗಳನ್ನು ಅಪ್ಲೋಡ್ ಮಾಡುತ್ತಿದ್ದರು ಎಂದು ಪೊಲೀ‌ಸರು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...