Homeಮುಖಪುಟಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್ ತಕ್ ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. ದಂಡದ ಜೊತೆಗೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚನೆಯನ್ನೂ ಪ್ರಸಾರ ಮಾಡಬೇಕೆಂದು ಸೂಚಿಸಿದೆ.

ಸುಶಾಂತ್ ಅವರ ಮೃತದೇಹದ ಚಿತ್ರಗಳನ್ನು ಪ್ರಸಾರ ಮಾಡಿ ನಿಯಮಾವಳಿಗಳನ್ನು ಉಲ್ಲಂಘಿಸಿದ ‘ಇಂಡಿಯಾ ಟಿವಿ’ ನ್ಯೂಸ್ ಕೂಡ ಕ್ಷಮೆಯಾಚಿಸಬೇಕು ಎಂದು NBSA ಹೇಳಿದೆ. ‘ಝೀ ನ್ಯೂಸ್’ ಹಾಗೂ ‘ನ್ಯೂಸ್ 24’ಗೆ ಕೂಡ ಕೆಲವೊಂದು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ  ಕ್ಷಮೆಯಾಚಿಸಲು ಸೂಚಿಸಲಾಗಿದೆ.

ಎಬಿಪಿ ನ್ಯೂಸ್ ವಾಹಿನಿ ನಟನ ದೇಹದ ಕ್ಲೋಸ್ ಅಪ್ ಫೋಟೋಗಳನ್ನು ತೋರಿಸಿಲ್ಲ ಎಂದು ಪ್ರಾಧಿಕಾರ ಗಮನಿಸಿದ್ದರಿಂದ ಎಬಿಪಿಗೆ ಬರೀ ಎಚ್ಚರಿಕೆ ನೀಡಲಾಯಿತು.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

NBSA ತನ್ನ ಆದೇಶದಲ್ಲಿ, ಆಜ್ ತಕ್ ಕಾರ್ಯಕ್ರಮ ಪ್ರಸಾರದ ವೇಳೆ ಟ್ವೀಟ್‍ಗಳನ್ನು ತೋರಿಸುವ ಮುನ್ನ ವಾಹಿನಿಯು ಸೂಕ್ತ ಪರಾಮರ್ಶೆ ನಡೆಸಿಲ್ಲ ಎಂದು ಹೇಳಿದೆ. ಅದೇ ಕಾರ್ಯಕ್ರಮಗಳ ವಿಡಿಯೋಗಳನ್ನು  ವೆಬ್‌ಸೈಟ್‌ನಲ್ಲಿ, ಯೂಟ್ಯೂಬ್ ಅಥವಾ ಇತರ ಲಿಂಕ್‌ಗಳನ್ನು ಅಪ್ಲೋಡ್ ಮಾಡಲಾಗಿದ್ದರೆ ತಕ್ಷಣ ತೆಗೆದುಹಾಕಬೇಕು ಎಂದು ಸೂಚಿಸಿದೆ.

ಕ್ಷಮಾಯಾಚನೆಯ ಪಠ್ಯ ಹೇಗಿರಬೇಕು, ಯಾವ ದಿನ ಯಾವ ಸಮಯದಲ್ಲಿ ಈ ಕ್ಷಮಾಯಾಚನೆಯನ್ನು ಪ್ರಸಾರ ಮಾಡಬೇಕೆಂದು ಪ್ರಾಧಿಕಾರವೇ ನಿರ್ಣಯಿಸಲಿದ್ದು, ಸೂಚನೆಯನ್ನು ಪಾಲಿಸಿರುವ ಕುರಿತಂತೆ ಆಜ್ ತಕ್ ಸಿಡಿಯಲ್ಲಿ ಸೂಕ್ತ ಆಧಾರದೊಂದಿಗೆ ಪ್ರಸಾರವಾದ ಏಳು ದಿನಗಳೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಬೇಕಿದೆ.

“ಸುದ್ದಿಯನ್ನು ವರದಿ ಮಾಡುವುದು ಸುದ್ದಿ ವಾಹಿನಿಯ ಕರ್ತವ್ಯವಾಗಿದ್ದರೂ, ಅದು ಸಾರ್ವಜನಿಕ ಹಿತಾಸಕ್ತಿಯಾಗಿರಬಹುದು ಮತ್ತು ವರದಿಯಾಗುವ ವ್ಯಕ್ತಿಗಳು ಅಂತಹ ಮಾಧ್ಯಮ ವರದಿಗಳಿಂದ ನ್ಯಾಯ ಪಡೆಯಬಹುದು. ಆದರೆ ಸುದ್ದಿಯನ್ನು ಪ್ರಸ್ತುತಪಡಿಸುವಾಗ ಸತ್ತವರ ಗೌಪ್ಯತೆ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸತ್ತವರನ್ನು ಅನಗತ್ಯ ಮಾಧ್ಯಮ ಪ್ರಜ್ವಲಿಸುವಿಕೆಗೆ ಒಳಪಡಿಸಬಾರದು ಎಂಬುದು ಮುಖ್ಯ” ಎಂದು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಹೇಳಿದೆ.

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

ಸೆಪ್ಟೆಂಬರ್ 3 ರಂದು, ಬಾಂಬೆ ಹೈಕೋರ್ಟ್ ಸುದ್ದಿ ಚಾನೆಲ್‌ಗಳಿಗೆ ಪ್ರಕರಣವನ್ನು ವರದಿ ಮಾಡುವಲ್ಲಿ ಸಂಯಮವನ್ನು ತೋರಿಸಬೇಕೆಂದು ಕೇಳಿತ್ತು. ಸೆಪ್ಟೆಂಬರ್ 11 ರಂದು ಈ ವಿಷಯ ಮತ್ತೆ ನ್ಯಾಯಾಲಯದ ಮುಂದೆ ಬಂದಾಗ, ಎಲೆಕ್ಟ್ರಾನಿಕ್ ಮಾಧ್ಯಮದ ಮೇಲೆ ರಾಜ್ಯದ ನಿಯಂತ್ರಣವಿಲ್ಲ ಎಂದು ನ್ಯಾಯಾಲಯ ಆಶ್ಚರ್ಯ ವ್ಯಕ್ತಪಡಿಸಿತು.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...