Homeಮುಖಪುಟಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಸುಶಾಂತ್ ಕೇಸ್: ನಕಲಿ ಸುದ್ದಿ ಪ್ರಸಾರ, ಆಜ್‌ ತಕ್ ವಾಹಿನಿಗೆ 1 ಲಕ್ಷ ರೂ. ದಂಡ

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್ ತಕ್ ಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. ದಂಡದ ಜೊತೆಗೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚನೆಯನ್ನೂ ಪ್ರಸಾರ ಮಾಡಬೇಕೆಂದು ಸೂಚಿಸಿದೆ.

ಸುಶಾಂತ್ ಅವರ ಮೃತದೇಹದ ಚಿತ್ರಗಳನ್ನು ಪ್ರಸಾರ ಮಾಡಿ ನಿಯಮಾವಳಿಗಳನ್ನು ಉಲ್ಲಂಘಿಸಿದ ‘ಇಂಡಿಯಾ ಟಿವಿ’ ನ್ಯೂಸ್ ಕೂಡ ಕ್ಷಮೆಯಾಚಿಸಬೇಕು ಎಂದು NBSA ಹೇಳಿದೆ. ‘ಝೀ ನ್ಯೂಸ್’ ಹಾಗೂ ‘ನ್ಯೂಸ್ 24’ಗೆ ಕೂಡ ಕೆಲವೊಂದು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ  ಕ್ಷಮೆಯಾಚಿಸಲು ಸೂಚಿಸಲಾಗಿದೆ.

ಎಬಿಪಿ ನ್ಯೂಸ್ ವಾಹಿನಿ ನಟನ ದೇಹದ ಕ್ಲೋಸ್ ಅಪ್ ಫೋಟೋಗಳನ್ನು ತೋರಿಸಿಲ್ಲ ಎಂದು ಪ್ರಾಧಿಕಾರ ಗಮನಿಸಿದ್ದರಿಂದ ಎಬಿಪಿಗೆ ಬರೀ ಎಚ್ಚರಿಕೆ ನೀಡಲಾಯಿತು.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

NBSA ತನ್ನ ಆದೇಶದಲ್ಲಿ, ಆಜ್ ತಕ್ ಕಾರ್ಯಕ್ರಮ ಪ್ರಸಾರದ ವೇಳೆ ಟ್ವೀಟ್‍ಗಳನ್ನು ತೋರಿಸುವ ಮುನ್ನ ವಾಹಿನಿಯು ಸೂಕ್ತ ಪರಾಮರ್ಶೆ ನಡೆಸಿಲ್ಲ ಎಂದು ಹೇಳಿದೆ. ಅದೇ ಕಾರ್ಯಕ್ರಮಗಳ ವಿಡಿಯೋಗಳನ್ನು  ವೆಬ್‌ಸೈಟ್‌ನಲ್ಲಿ, ಯೂಟ್ಯೂಬ್ ಅಥವಾ ಇತರ ಲಿಂಕ್‌ಗಳನ್ನು ಅಪ್ಲೋಡ್ ಮಾಡಲಾಗಿದ್ದರೆ ತಕ್ಷಣ ತೆಗೆದುಹಾಕಬೇಕು ಎಂದು ಸೂಚಿಸಿದೆ.

ಕ್ಷಮಾಯಾಚನೆಯ ಪಠ್ಯ ಹೇಗಿರಬೇಕು, ಯಾವ ದಿನ ಯಾವ ಸಮಯದಲ್ಲಿ ಈ ಕ್ಷಮಾಯಾಚನೆಯನ್ನು ಪ್ರಸಾರ ಮಾಡಬೇಕೆಂದು ಪ್ರಾಧಿಕಾರವೇ ನಿರ್ಣಯಿಸಲಿದ್ದು, ಸೂಚನೆಯನ್ನು ಪಾಲಿಸಿರುವ ಕುರಿತಂತೆ ಆಜ್ ತಕ್ ಸಿಡಿಯಲ್ಲಿ ಸೂಕ್ತ ಆಧಾರದೊಂದಿಗೆ ಪ್ರಸಾರವಾದ ಏಳು ದಿನಗಳೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಬೇಕಿದೆ.

“ಸುದ್ದಿಯನ್ನು ವರದಿ ಮಾಡುವುದು ಸುದ್ದಿ ವಾಹಿನಿಯ ಕರ್ತವ್ಯವಾಗಿದ್ದರೂ, ಅದು ಸಾರ್ವಜನಿಕ ಹಿತಾಸಕ್ತಿಯಾಗಿರಬಹುದು ಮತ್ತು ವರದಿಯಾಗುವ ವ್ಯಕ್ತಿಗಳು ಅಂತಹ ಮಾಧ್ಯಮ ವರದಿಗಳಿಂದ ನ್ಯಾಯ ಪಡೆಯಬಹುದು. ಆದರೆ ಸುದ್ದಿಯನ್ನು ಪ್ರಸ್ತುತಪಡಿಸುವಾಗ ಸತ್ತವರ ಗೌಪ್ಯತೆ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸತ್ತವರನ್ನು ಅನಗತ್ಯ ಮಾಧ್ಯಮ ಪ್ರಜ್ವಲಿಸುವಿಕೆಗೆ ಒಳಪಡಿಸಬಾರದು ಎಂಬುದು ಮುಖ್ಯ” ಎಂದು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಹೇಳಿದೆ.

ಆಜ್ ತಕ್ ಎಲ್ಲಾ ನಿಯಮಗಳನ್ನು ಮೀರಿತ್ತು. ಸುಶಾಂತ್ ಸಿಂಗ್ ಮನೆಯಲ್ಲಿ ತೀವ್ರ ದುಃಖದಲ್ಲಿರುವ ಅವರ ತಂದೆಯನ್ನು ಸಂದರ್ಶಿಸಲು ಪ್ರಯತ್ನಿಸಿದ್ದರು ಎಂದು ಪ್ರಾಧಿಕಾರ ತಿಳಿಸಿದೆ.

ಸೆಪ್ಟೆಂಬರ್ 3 ರಂದು, ಬಾಂಬೆ ಹೈಕೋರ್ಟ್ ಸುದ್ದಿ ಚಾನೆಲ್‌ಗಳಿಗೆ ಪ್ರಕರಣವನ್ನು ವರದಿ ಮಾಡುವಲ್ಲಿ ಸಂಯಮವನ್ನು ತೋರಿಸಬೇಕೆಂದು ಕೇಳಿತ್ತು. ಸೆಪ್ಟೆಂಬರ್ 11 ರಂದು ಈ ವಿಷಯ ಮತ್ತೆ ನ್ಯಾಯಾಲಯದ ಮುಂದೆ ಬಂದಾಗ, ಎಲೆಕ್ಟ್ರಾನಿಕ್ ಮಾಧ್ಯಮದ ಮೇಲೆ ರಾಜ್ಯದ ನಿಯಂತ್ರಣವಿಲ್ಲ ಎಂದು ನ್ಯಾಯಾಲಯ ಆಶ್ಚರ್ಯ ವ್ಯಕ್ತಪಡಿಸಿತು.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...